ದತ್ತ ಪೀಠದಲ್ಲಿ ಮಾಂಸದೂಟ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಪ್ರತಿಕ್ರಿಯಿಸಿದರು.
ದತ್ತಪೀಠ ಅಪವಿತ್ರ ಮಾಡಿದ್ದಾರೆ. ಇದನ್ನು ಖಂಡಿಸುವ ಜೊತೆಗೆ ತೀವ್ರವಾಗಿ ವಿರೋಧಿಸುತ್ತೇನೆ ಎಂದು ಶ್ರೀರಾಮಸೇನೆ ಅಧ್ಯಕ್ಷ ಪ್ರಮೋದ್ ಮುತ್ತಾಲಿಕ್ ತಿಳಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಮುಜರಾಯಿ ಮತ್ತು ಪೊಲೀಸ್ ಇಲಾಖೆ ಕತ್ತೆ ಕಾಯುತ್ತಿದೆಯಾ..? ಅಲ್ಲಿ ಗೋ ಮಾಂಸದೂಟ ಮಾಡುತ್ತಾರೆ. ನಾವು ಹೋಮ, ಹವನ ಮಾಡುವ ಪವಿತ್ರ ಕ್ಷೇತ್ರ ಅದು. ಆ ಕ್ಷೇತ್ರ ಗಲೀಜು ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ.
ಅಲ್ಲಿ ಮಾಂಸದೂಟ ನಿಷೇಧ ಇದೆ. ಆದರೂ ಅಲ್ಲಿ ಮುಸ್ಲಿಂರು ಮಾಂಸದೂಟ ಮಾಡಿದ್ದಾರೆ. ಇದು ಅಕ್ಷಮ್ಯ ಅಪರಾಧವಾಗಿದ್ದು, ನಾನು ಅವರಿಗೆ ಬೈಯೊದಿಲ್ಲ.
ಮುಜರಾಯಿ ಮತ್ತು ಪೊಲೀಸ್ ಇಲಾಖೆ ಮೇಲೆ ಜಿಲ್ಲಾಧಿಕಾರಿ ತನಿಖೆ ಮಾಡಬೇಕು. ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಇನ್ನು ಶ್ರೀರಾಮ ಸೇನೆಯವರು ಆ ಪ್ರದೇಶದಲ್ಲಿ ಗೋಮೂತ್ರದಿಂದ ಶುದ್ಧೀಕರಣ ಮಾಡುತ್ತೇವೆ ಎಂದು ಹೇಳಿದ್ದಾರೆ.

ಕೂಡಲೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ನಾವು ನಾವು ಮುಸ್ಲಿಂರನ್ನು ಮೇಲೆ ಬಿಡೋದಿಲ್ಲ. ದತ್ತ ಪೀಠದಲ್ಲಿ ಅವರಿಗೆ ಪ್ರವೇಶ ಕೊಡೊದಿಲ್ಲ. ಈ ಎಚ್ಚರಿಕೆಯನ್ನು ಅಲ್ಲಿನ ಜಿಲ್ಲಾಧಿಕಾರಿಗೆ ಕೊಡುತ್ತೇನೆ. ಇದು ಹುಡುಗಾಟಿಕೆ ಅಲ್ಲ, ಅಲ್ಲಿ ತಪ್ಪು ಮಾಡಿದ ಮುಸ್ಲಿಂರ ಮೇಲೂ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಅಲ್ಲಿರೋ ಮುಲ್ಲಾ, ಮೌಲ್ವಿಗಳ ಮೇಲೂ ಕ್ರಮ ತೆಗೆದುಕೊಳ್ಳಬೇಕು. ಮುಜರಾಯಿ ಇಲಾಖೆ ಅಧಿಕಾರಿಗಳ ಮೇಲೂ ಕ್ರಮ ಆಗಬೇಕು. ಕ್ರಮ ತೆಗೆದುಕೊಂಡರೆ ಸರಿ, ಇಲ್ಲದೇ ಹೋದಲ್ಲಿ ನಾವು ಅವರ ಮೇಲೆ ಕೇಸ್ ಹಾಕುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.