ನಾಗಮಂಗಲದಲ್ಲಿ ಇಸ್ಲಾಂ ಧರ್ಮಕ್ಕೆ ಮತಾಂತರವಾದರೆ ಮದುವೆಯಾಗುವುದಾಗಿ ನಂಬಿಸಿ 13 ವರ್ಷದ ಬಾಲಕಿಯನ್ನು ವಿವಾಹಿತ ಮುಸ್ಲಿಂ ಯುವಕ ಅತ್ಯಾಚಾರ ಎಸಗಿರುವ ಕುರಿತು ಪ್ರತಿಕ್ರಿಯಿಸಿರುವ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಲವ್ ಜಿಹಾದ್ ವಿರುದ್ದ ಮೊದಲು ದ್ನನಿ ಎತ್ತಿದವನೇ ನಾನು ಎಂದಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಮುತಾಲಿಕ್ ಲವ್ ಜಿಹಾದ್ ನಿಯಂತ್ರಣಕ್ಕೆ ಪ್ರತ್ಯೇಕ ಕಾಯ್ದೆಯ ಅವಶ್ಯಕತೆಯಿದೆ. ಬಿಜೆಪಿ ಸರಕಾರದ ಮುಖ್ಯಮಂತ್ರಿಗೆ ವಿಶೇಷವಾಗಿ ಮನವಿ ಮಾಡುತ್ತಿದ್ದೇನೆ ರಾಜ್ಯದಲ್ಲಿ ಲವ್ ಜಿಹಾದ್ ದಿನೇ ದಿನೇ ಹೆಚ್ಚಾಗ್ತಿದೆ 3 ಸಾವಿರ ಹೆಣ್ಮಕ್ಕಳನ್ನ ಲವ್ ಜಿಹಾದ್ ನಿಂದ ನಾವು ಪಾರು ಮಾಡಿದ್ದೇವೆ ಹಿಂದೂ ಹೆಣ್ಣು ಮಕ್ಕಳು ಪ್ರೀತಿ ಮಾಡಬೇಕಾದರೆ ಅಬ್ದುಲ್ಲಾ-ಅಶೋಕ್ ವ್ಯತ್ಯಾಸ ಅರಿತು ಪ್ರೀತಿ ಮಾಡಬೇಕು ಎಂದು ಹೇಳಿದ್ದಾರೆ.
ಇಲ್ಲವಾದರೆ ದೆಹಲಿಯಲ್ಲಿ ನಡೆದಂತೆ ಹಿಂದೂ ಹೆಣ್ಣು ಮಕ್ಕಳು ತುಂಡು ತುಂಡಾಗಿ ಬಲಿಯಾಗುತ್ತಾರೆ ನಿಮ್ಮ ಜತೆಗೆ ಹಿಂದೂ ಧರ್ಮವನ್ನೂ ಬಲಿ ಕೊಡಬೇಡಿ ಲವ್ ಜಿಹಾದ ನಿಯಂತ್ರಣವಾಗಬೇಕಾದರೆ ಪ್ರತ್ಯೇಕ ಕಾನೂನು ರೂಪಿಸಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.