• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಯಾಗುವ ದೊಡ್ಡ ಸುಳಿವು: ಮೂವರು ಗಾಂಧಿಗಳೊಂದಿಗೆ ಚರ್ಚೆ?

ಪ್ರತಿಧ್ವನಿ by ಪ್ರತಿಧ್ವನಿ
July 14, 2021
in ದೇಶ, ರಾಜಕೀಯ
0
ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರ್ಪಡೆಯಾಗುವ ದೊಡ್ಡ ಸುಳಿವು: ಮೂವರು ಗಾಂಧಿಗಳೊಂದಿಗೆ ಚರ್ಚೆ?
Share on WhatsAppShare on FacebookShare on Telegram

ಪ್ರಶಾಂತ್ ಕಿಶೋರ್ ಅವರು ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರೊಂದಿಗೆ ಚರ್ಚೆ ನಡೆಸಿದ ಒಂದು ದಿನದ ನಂತರ, ಚುನಾವಣಾ ಚಾಣಾಕ್ಷ್ಯ ಅಂತಲೇ ಹೆಸರಾಗಿರುವ ಪ್ರಶಾಂತ್ ಭಾರತದ ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೇಸ್ ಸೇರಬಹುದು ಎಂದು ಮೂಲಗಳು ಸೂಚಿಸಿವೆ.

ADVERTISEMENT

ಮೂವರೂ ಗಾಂಧಿಗಳು ಮಂಗಳವಾರ ರಾಹುಲ್ ಗಾಂಧಿ ಅವರ ನಿವಾಸದಲ್ಲಿ ಪ್ರಶಾಂತ್ ಕಿಶೋರ್ ಅವರೊಂದಿಗೆ ಚರ್ಚೆಯ ಭಾಗವಾಗಿದ್ದರು.

ಈ ಸಭೆಯು ಪಂಜಾಬ್ / ಉತ್ತರ ಪ್ರದೇಶದ ಚುನಾವಣೆಗಳ ಬಗ್ಗೆ ಚರ್ಚೆಯಾಗಿದೆ ಎನ್ನಲಾಗಿದ್ದು 2024 ರ ಲೋಕಸಭಾ ಚುನಾವಣೆಗೆ ಏನಾದರೂ ದೊಡ್ಡದಾದ ಪ್ಲಾನ್ ಸಿದ್ಧಪಡಿಸುವಲ್ಲಿ ಪ್ರಶಾಂತ್ ಕಿಶೋರ್ ಮಹತ್ವದ ಪಾತ್ರವನ್ನು ವಹಿಸಬಹುದು ಎಂಬ ಸೂಚನೆ ಇದೆ ಎಂದು ಎನ್.ಡಿ.ಟಿ.ವಿ ವರದಿ ಮಾಡಿದೆ.

ಏಪ್ರಿಲ್-ಮೇ ತಿಂಗಳಲ್ಲಿ ಬಂಗಾಳ ಮತ್ತು ತಮಿಳುನಾಡು ಚುನಾವಣೆಗಳನ್ನು ತನ್ನ ಪ್ರಭಾವಶಾಲಿ ಮತದಾನದ ಗೆಲುವಿಗೆ ಸೇರಿಸಿದ ಕಿಶೋರ್, ಈ ಹಿಂದೆ ತಾನು ಈ ಕೆಲಸದಲ್ಲಿ ಮುಂದುವರಿಯಲು ಬಯಸುವುದಿಲ್ಲ ಮತ್ತು “ಈ ಜಾಗವನ್ನು ತ್ಯಜಿಸುತ್ತಿದ್ದೇನೆ” ಎಂದು ಹೇಳಿದ್ದರು.

“ನಾನು ಈಗ ಏನು ಮಾಡುತ್ತಿದ್ದೇನೊ ಅದನ್ನು ಮುಂದುವರಿಸಲು ನಾನು ಬಯಸುವುದಿಲ್ಲ. ನಾನು ಸಾಕಷ್ಟು ಕೆಲಸ ಮಾಡಿದ್ದೇನೆ. ವಿರಾಮ ತೆಗೆದುಕೊಂಡು ಜೀವನದಲ್ಲಿ ಬೇರೆ ಏನಾದರೂ ಮಾಡುವ ಸಮಯ ಇದು. ನಾನು ಈ ಜಾಗವನ್ನು ತ್ಯಜಿಸಲು ಬಯಸುತ್ತೇನೆ” ಎಂದು ಮೇ ತಿಂಗಳಲ್ಲಿ ಪ್ರಶಾಂತ್ ಕಿಶೋರ್ ಖಾಸಗಿ ವಾಹಿನಿಯ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದರು. ರಾಜ್ಯ ಚುನಾವಣಾ ಫಲಿತಾಂಶದ ಒಂದು ದಿನದ ನಂತರ ತನ್ನ ಗ್ರಾಹಕರಾದ ಬಂಗಾಳದ ಮಮತಾ ಬ್ಯಾನರ್ಜಿ ಮತ್ತು ಮತ್ತು ತಮಿಳುನಾಡಿನ ಎಂ.ಕೆ.ಸ್ಟಾಲಿನ್ ಅವರಿಗೆ ದೊಡ್ಡ ಗೆಲುವು ಕಂಡವು.

ಮತ್ತೆ ರಾಜಕೀಯಕ್ಕೆ ಸೇರುತ್ತಾರೆಯೇ ಎಂಬ ಬಗ್ಗೆ ಮಾತನಾಡಿದ ಅವರು, “ನಾನು ವಿಫಲ ರಾಜಕಾರಣಿ, ನಾನು ಹಿಂತಿರುಗಿ ನಾನು ಏನು ಮಾಡಬೇಕು ಎಂದು ನೋಡಬೇಕು.” ತಮ್ಮ ಕುಟುಂಬದೊಂದಿಗೆ ಅಸ್ಸಾಂಗೆ ಹೋಗಿ “ಚಹಾ ತೋಟಗಾರಿಕೆ” ಮಾಡುವ ಬಗ್ಗೆ ಮಾತನಾಡಿದ್ದರು.

ಈ ಕೆಲಸದಲ್ಲಿ ಮುಂದುವರಿಯಲು ಬಯಸುವುದಿಲ್ಲ ಮತ್ತು “ಈ ಜಾಗವನ್ನು ತ್ಯಜಿಸುತ್ತಿದ್ದೇನೆ” ಎಂದು ಹೇಳಿದ ನಂತರ ನಿತೀಶ್ ಕುಮಾರ್ ಅವರ ಜನತಾದಳ ಯುನೈಟೆಡ್ ಜೊತೆಗಿನ ರಾಜಕೀಯದ ಮಾತುಕತೆಗೆ ಕಾರಣವಾಗಿ ದೊಡ್ಡ ಚರ್ಚೆಗೆ ಗ್ರಾಸವಾಗಿತ್ತು. ಈಗ ಕಾಂಗ್ರೇಸ್ ನಾಯಕರೊಂದಿಗಿನ ಈ ಚರ್ಚೆ ಪ್ರಶಾಂತ್ ಕಿಶೋರ್ ಮತ್ತೆ ರಾಜಕೀಯದಲ್ಲಿ ಸಂಕ್ರಿಯರಾಗುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ.

Tags: Prashant KishorPriyanka Gandhi VadraRahul GandhiSonia Gandhi
Previous Post

ಕನ್ನಡವನ್ನು ಕಡ್ಡಾಯವಾಗಿ ಪ್ರಥಮ ಇಲ್ಲವೇ ದ್ವಿತೀಯ ಭಾಷೆಯನ್ನಾಗಿ ಕಲಿಸುವುದು ಕಡ್ಡಾಯ: ಸುರೇಶ್ ಕುಮಾರ್

Next Post

ರಾಜ್ಯದಲ್ಲಿ ಲಸಿಕೆ ಕೊರತೆ; ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?: ಸಿದ್ದರಾಮಯ್ಯ ಪ್ರಶ್ನೆ

Related Posts

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”
Top Story

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

by ಪ್ರತಿಧ್ವನಿ
March 4, 2026
0

ಮಾಗಡಿ :  ತಾಲೂಕಿನ ಜನರಿಗೆ ಕಾವೇರಿ, ಹೇಮಾವತಿ ಹಾಗೂ ಎತ್ತಿನಹೊಳೆಯಿಂದಲೂ ನೀರು ಬರುತ್ತಿದ್ದು, ನೀರಿನ ಅದೃಷ್ಟವಿದೆ. ಇದಕ್ಕೆ ಅಗತ್ಯವಿರುವ ಟೆಂಡರ್ ಗಳನ್ನು ಈಗಾಗಲೇ ಕರೆಯಲಾಗಿದೆ” ಎಂದು ಜಲಸಂಪನ್ಮೂಲ...

Read moreDetails
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
Next Post
‘ಮೊದಲು ನರೇಂದ್ರ ಮೋದಿಯವರನ್ನು ಪ್ರಧಾನಿ ಪಟ್ಟದಿಂದ ಕಿತ್ತುಹಾಕಬೇಕು’ – ಸಿದ್ದರಾಮಯ್ಯ

ರಾಜ್ಯದಲ್ಲಿ ಲಸಿಕೆ ಕೊರತೆ; ಮೋದಿಯವರ ಲಸಿಕೋತ್ಸವ ಜಾಹೀರಾತಿಗಷ್ಟೇ ಸೀಮಿತವಾಯಿತೇ?: ಸಿದ್ದರಾಮಯ್ಯ ಪ್ರಶ್ನೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada