ಮೈಸೂರು : ರಾಜ್ಯ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ವಿಚಾರವಾಗಿ ಮೈಸೂರಿನಲ್ಲಿ ಸಂಸದ ಪ್ರತಾಪ್ ಸಿಂಹ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್ನವರು ಎದೆ ಬಡಿದುಕೊಂಡು ಊರೂರಿಗೆ ತೆರಳಿ ಗ್ಯಾರಂಟಿ ಯೋಜನೆಗಳ ಬಗ್ಗೆ ತಮಟೆ ಬಾರಿಸಿದ್ದರು ಎಂದು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್ನವರು ಊರೂರಿಗೆ ತೆರಳಿ ವಿದ್ಯುತ್ ಫ್ರೀ ಎಂದಿದ್ದರು. ಕೆಎಸ್ಆರ್ಟಿಸಿ ಬಗ್ಗೆ ಇನ್ನೂ ಮಾಹಿತಿ ಬಂದಿಲ್ಲ. ಸ್ವಾತಂತ್ರ್ಯ ಪೂರ್ವದಲ್ಲಿ ತಲೆ ಮೇಲೆ ಟೋಪಿ ಹಾಕಿ ಕೊಂಡವರನ್ನು ಕಾಂಗ್ರೆಸ್ ನವರು ಎನ್ನುತ್ತಿದ್ದರು.ಈಗ ಕಾಂಗ್ರೆಸ್ ನವರನ್ನು ಜನರಿಗೆ ಟೋಪಿ ಹಾಕುವವರು ಎನ್ನುತ್ತಾರೆ.ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತ ಎಂದು ಹೇಳಿದ್ದಿರಿ.ಈಗ ಸರಾಸರಿ ತೆಗೆದು ಉಚಿತ ಕೊಡುತ್ತೇವೆ ಅಂತಾ ಹೇಳಿದ್ದರಿ. ಇದು ಮೋಸ ಅಲ್ವಾ? ಎಂದು ಪ್ರಶ್ನಿಸಿದ್ದಾರೆ.
ಯಾವುದು ಷರತ್ತು ಇಲ್ಲದೆ ಎಲ್ಲರಿಗೂ 200 ಯೂನಿಟ್ ವಿದ್ಯುತ್ ಉಚಿತವಾಗಿ ಕೊಡಲೇಬೇಕು.ಜನ್ಧನ್ ಖಾತೆ ಓಪನ್ ಆಗಿದೆ . ಇದಕ್ಕೆ ಆಧಾರ್ ಕಾರ್ಡ್ ಲಿಂಕ್ ಆಗಿದೆ. ಹೀಗಿದ್ದರೂ ಗೃಹಲಕ್ಷ್ಮೀ ಜಾರಿ ಯಾಕೆ ಆಗುತ್ತಿಲ್ಲ.. ? ಗೃಹ ಲಕ್ಷ್ಮೀ ಯೋಜನೆ ಮುಂದೂಡಲು ಕುಂಟು ನೆಪ ಹೇಳುತ್ತಿದ್ದಾರೆ. ಮನೆ ಯಜಮಾನಿ ಯಾರು ಅಂತಾ ಅವರೇ ತೀರ್ಮಾನ ಮಾಡಬೇಕಂತೆ . ಮನೆಯೊಳಗೆ ಅತ್ತೆ – ಸೊಸೆ ಕೂತು ಇದನ್ನು ತೀರ್ಮಾನ ಮಾಡಲು ಸಾಧ್ಯವೇ..? ಎಂದು ಪ್ರಶ್ನಿಸಿದ್ದಾರೆ.
ಹಿಂದೂಗಳ ಮನೆಯಲ್ಲಾದರೂ ಅತ್ತೆ – ಸೊಸೆ ನಡುವೆ ಯಜಮಾನಿ ಸ್ಥಾನಕ್ಕಾಗಿ ಪೈಪೋಟಿ ಇರುತ್ತೆ ಆದರೆ ಮುಸ್ಲಿಮರ ಮನೆಯಲ್ಲಿ ಎರಡು – ಮೂರು ಹೆಂಡತಿ ಇದ್ದರೆ ಅವರ ಮನೆಯಲ್ಲಿ ಯಾರು ಯಜಮಾನಿ ಎಂದು ತೀರ್ಮಾನಿಸುವುದು..? ಕಾಂಗ್ರೆಸ್ ಕುಟುಂಬ ಒಡೆಯುವ ಕೆಲಸ ಮಾಡ್ತಿದೆ. ನೀವು ಮನೆಯಲ್ಲಿ ಬೆಂಕಿ ಹಚ್ಚುತ್ತಿದ್ದೀರಿ ಎಂದಿದ್ದಾರೆ.