ಕೊಡಗಿನ ಜನ ಟಿಪ್ಪು ಸುಲ್ತಾನ್ಗೆ ಹೆದರಲಿಲ್ಲ, ಸಿದ್ದು ಸುಲ್ತಾನ್ಗೆ ಹೆದರುತ್ತಾರೆ ಎಂಬ ಪ್ರತಾಪ್ಸಿಂಹ ಹೇಳಿಕೆ ಪ್ರತಿಕ್ರಿಯಿಸಿದ ಯತೀಂದ್ರ ಸಿದ್ದರಾಮಯ್ಯ, ಪ್ರಚೋದನಾಕಾರಿ ಹೇಳಿಕೆ ಕೊಟ್ಟು ಇಲ್ಲದಿರುವ ವಿವಾದ ಸೃಷ್ಟಿಸುವುದೇ ಪ್ರತಾಪ್ ಸಿಂಹ ಕೆಲಸ ಎಂದು ಹೇಳಿದ್ಧಾರೆ.
ಚಾಮರಾಜನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೊಡಗಿನ ಜನ ಧೈರ್ಯವಂತರು, ವೀರರು ಹಾಗೂ ಒಳ್ಳೆಯ ಜನ. ಅಂತಹವರನ್ನು ಬಿಜೆಪಿಯವರು ಹೇಡಿಗಳಾಗಿ ಕಲ್ಲೆಸೆಯುವ ಮಟ್ಟಕ್ಕೆ ತಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
RSS ಸಂಚಾಲಕ ಹಾಗೂ ಬಿಜೆಪಿ ಕಾರ್ಯಕರ್ತನ ಮೂಲಕ ಮೊಟ್ಟೆ ಎಸೆಸಿದ್ದಾರೆ. ಕೊನೆಗೆ ಆತ ಕಾಂಗ್ರೆಸ್ ಕಾರ್ಯಕರ್ತ ಅಂತ ಸುಳ್ಳು ಹೇಳಿ ಬಿಜೆಪಿಯವರು ಹೇಡಿತನ ತೋರಿಸುತ್ತಿದ್ದಾರೆ. ಬಿಜೆಪಿಯವರ ಹಾಗೂ ಹಿಂದುತ್ವವಾದಿ ಸಂಘಟನೆಗಳ ಇತಿಹಾಸ ಗಮನಿಸಿದಾಗ ಹಿಂಸಾಚಾರದಲ್ಲಿ ತೊಡಗಿರುವುದು ಕಂಡುಬಂದಿದೆ. ಅವರು ಏನು ಮಾಡಲು ಹೇಸುವವರಲ್ಲ. ನಾವು ಯಾವುದಕ್ಕೂ ಹೆದರುವುದಿಲ್ಲ, ನಮ್ಮ ಹೋರಾಟ ಮುಂದುವರಿಸುತ್ತೇವೆ ಸಿದ್ದರಾಮಯ್ಯ ಹತ್ಯೆಯ ಸಂಚಿನ ಕುರಿತು ಮಾತನಾಡಿದರು.