• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

DK Shivakumar: ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯಕ್ಕೆ ಸಿದ್ಧತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
June 28, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

“ಸಣ್ಣ ಕೈಗಾರಿಕೆಗಳಿಗಾಗಿ ಪ್ರತ್ಯೇಕ ಸಚಿವಾಲಯ ರಚಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದು, ನಾವು ಅದಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್(DK Shivakumar) ಅವರು ತಿಳಿಸಿದರು.

ADVERTISEMENT

ದಾಬಸ್ ಪೇಟೆಯ (Dabaspete) ಕೈಗಾರಿಕಾ ಪ್ರದೇಶದಲ್ಲಿ ಶನಿವಾರ ನಡೆದ ಕಾಸಿಯಾ ಶ್ರೇಷ್ಠತಾ ಮತ್ತು ನಾವೀನ್ಯತಾ ಕೇಂದ್ರ ಮತ್ತು ವಸ್ತು ಪ್ರದರ್ಶನಾ ಕೇಂದ್ರ ಕಟ್ಟಡಗಳ ಉದ್ಘಾಟನಾ ಸಮಾರಂಭದಲ್ಲಿ ಹಾಗೂ ನಂತರ ಮಾಧ್ಯಮಗಳ ಜೊತೆ ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಾತನಾಡಿದರು.

“ಕೆಐಎಡಿಬಿ (KIDB) ವತಿಯಿಂದ ಶೇ.20 ರಷ್ಟು ಅನುದಾನ ಸಣ್ಣ ಕೈಗಾರಿಕೆಗಳಿಗೆ ನೀಡಬೇಕು ಎಂಬ ಕಾನೂನಿದೆ. ಈ ವಿಚಾರವಾಗಿ ಎಂ.ಬಿ ಪಾಟೀಲ್ (MB Patil) ಅವರ ಬಳಿ ಹಾಗೂ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡುತ್ತೇನೆ. ಸಣ್ಣ ಕೈಗಾರಿಕೆಗಳಿಗೆ ನಾವು ಒತ್ತು ನೀಡಬೇಕು. ಕಾರ್ಮಿಕರ ವಿಚಾರವನ್ನು ಅವರು ಪ್ರಸ್ತಾಪಿಸಿದ್ದಾರೆ. ಅದನ್ನು ಚರ್ಚೆ ಮಾಡುತ್ತೇವೆ” ಎಂದು ಭರವಸೆ ನೀಡಿದರು.

“ಜೊತೆಗೂಡುವುದು ಆರಂಭ, ಜೊತೆಗೂಡಿ ಚರ್ಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಯಶಸ್ಸು. ನೀವೆಲ್ಲರೂ ಸೇರಿ ಒಟ್ಟಾಗಿ ಕೆಲಸ ಮಾಡುತ್ತಿರುವುದರಿಂದ ಕಾಸಿಯಾ ಸಂಸ್ಥೆ ಮುಂದಿನ ಪೀಳಿಗೆಗೆ ಕೌಶಲ್ಯಾಭಿವೃದ್ಧಿ ಕೆಲಸವನ್ನು ಮಾಡುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಮಾಡದ ಕೆಲಸವನ್ನು ಕಾಸಿಯಾ ಸಂಸ್ಥೆ ಮಾಡುತ್ತಿದ್ದು, ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದರು.

ನಿಮ್ಮ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತದೆ

ನನಗೆ ಸಣ್ಣ ಕೈಗಾರಿಕಾ ವಲಯದ ಪರಿಸ್ಥಿತಿಯ ಬಗ್ಗೆ ಅರಿವಿದೆ. ಈ ವಲಯ ಎಷ್ಟು ಉದ್ಯೋಗ ಸೃಷ್ಟಿಸುತ್ತದೆ, ಎಷ್ಟು ಶ್ರಮಿಸುತ್ತದೆ ಎಂದು ನಾನು ನೋಡಿದ್ದೇನೆ. ನೀವು ಬೃಹತ್ ಕೈಗಾರಿಕೆಗಳಿಗಿಂತ ಹೆಚ್ಚು ಒತ್ತಡವನ್ನು ಸರ್ಕಾರಗಳ ಮೇಲೆ ಹಾಕಬೇಕು. ಆಗ ಮಾತ್ರ ನಿಮಗೆ ಹೆಚ್ಚು ಯಶಸ್ಸು ಸಿಗಲು ಸಾಧ್ಯ. ಕೇಂದ್ರ ಸರ್ಕಾರ ದೊಡ್ಡ ಯೋಜನೆ ಘೋಷಣೆ ಮಾಡುತ್ತದೆ. ಗ್ಯಾರಂಟಿ ಇಲ್ಲದೆ ಸಾಲ ಸೌಲಭ್ಯ ನೀಡಬೇಕು ಎಂದು ಹೇಳುತ್ತದೆ. ಆದರೆ ಬ್ಯಾಂಕಿನವರು ನಿಮಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಹಳೇ ಉದ್ಯಮಿಗಳಿಗೆ ಸಹಕಾರ ನೀಡುವಂತೆ ಹೊಸಬರಿಗೆ ಸಹಕಾರ ನೀಡುವುದಿಲ್ಲ” ಎಂದು ತಿಳಿಸಿದರು.

“ಇತ್ತೀಚೆಗೆ ನೀವು ನಿಮ್ಮ ಕಾರ್ಮಿಕರ ಸಮಸ್ಯೆ ಬಗ್ಗೆ ನನ್ನ ಬಳಿ ಚರ್ಚೆ ಮಾಡಿದ್ದೀರಿ. ನಾನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿ ಕಾರ್ಮಿಕ ಸಚಿವರಿಗೆ ಅಗತ್ಯ ಸೂಚನೆ ನೀಡಿದ್ದೇವೆ. ನಿಮ್ಮ ನಿಯೋಗ ಸಚಿವರನ್ನು ಭೇಟಿ ಮಾಡಿ ನಿಮ್ಮ ಪರಿಸ್ಥಿತಿಯನ್ನು ವಿವರಿಸಿ. ನೀವು ಬೇರೆ ರಾಜ್ಯಗಳಿಗೆ ಸ್ಥಳಾಂತರಗೊಳ್ಳಲು ಹೇಗೆಲ್ಲಾ ಅವಕಾಶವಿದೆ ಎಂದು ನಮ್ಮ ನಾಯಕರುಗಳಿಗೆ ಹೇಳಿ. ನಮ್ಮ ಕೆಲವು ರಾಜಕಾರಣಿಗಳಿಗೆ ಇಂತಹ ವಿಚಾರಗಳು ಅರ್ಥವಾಗುವುದಿಲ್ಲ. ಕೇವಲ ಐಟಿ ಬಿಟಿಯನ್ನು ಮಾತ್ರ ಲೆಕ್ಕಹಾಕುತ್ತಾರೆ” ಎಂದರು.

“ನಿಮ್ಮೆಲ್ಲರಿಗೂ ಶುಭವಾಗಲಿ. ಸಣ್ಣ ಕೈಗಾರಿಕೆಗಳಿಗೆ ಹೆಚ್ಚು ಶಕ್ತಿ ತುಂಬಬೇಕಿದೆ. ನಮ್ಮ ನೀತಿಗಳು ಕೈಗಾರಿಕೆಗಳಿಗೆ ಉದಾರವಾಗಿರಬೇಕು, ಆಕರ್ಷಣೀಯವಾಗಿರಬೇಕು. ಬೇರೆ ರಾಜ್ಯಗಳಲ್ಲಿ ಹೆಚ್ಚು ಆಕರ್ಷಕವಾದ ನೀತಿ ರೂಪಿಸುತ್ತಾರೆ. ಆದರೆ ಅಲ್ಲಿ ಗುಣಮಟ್ಟದ ಮಾನವ ಸಂಪನ್ಮೂಲಗಳಿಲ್ಲ. ದೊಡ್ಡ ದೊಡ್ಡ ಸಂಸ್ಥೆಗಳ ಮುಖ್ಯಸ್ಥರು ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದಾರೆ. ನಾನು ಮೊನ್ನೆ ಗುಬ್ಬಿಗೆ ಹೋಗಿ ಅಲ್ಲಿ ನಿರ್ಮಿಸಲಾಗಿರುವ 10.47 ಕಿ.ಮೀ ಉದ್ದದ ಮೇಲ್ಗಾಲುವೆಯನ್ನು ವೀಕ್ಷಣೆ ಮಾಡಿದೆ. ಸುಮಾರು 40 ಮೀ. ಎತ್ತರದ ಮೇಲ್ಗಾಲುವೆ ಇದಾಗಿದೆ. ವಿಶ್ವಮಟ್ಟದ ಯೋಜನೆ ಮಾಡುವ ಇಂಜಿನಿಯರ್ ಗಳು ನಮ್ಮಲ್ಲಿ ಇದ್ದಾರೆ” ಎಂದರು.

“ನಿಮ್ಮ ಕ್ಷೇತ್ರಕ್ಕೆ ಅಗತ್ಯವಿರುವ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರವನ್ನು ಆರಂಭಿಸುತ್ತಿದ್ದು, ನಿಮಗೆ ನಮ್ಮ ಪ್ರೋತ್ಸಾಹ ಇದ್ದೇ ಇರುತ್ತದೆ. ಈ ಸರ್ಕಾರ ನಿಮ್ಮ ಜೊತೆಗೆ ಇದೆ ಎಂದು ಹೇಳಲು ನಾನು ಇಲ್ಲಿಗೆ ಬಂದಿದ್ದೇನೆ. ಕಾಸಿಯಾ ಆಡಳಿತ ಮಂಡಳಿ ಅತ್ಯುತ್ತಮವಾಗಿ ಕೆಲಸ ಮಾಡುತ್ತಿದ್ದು, ಇದನ್ನು ಹೀಗೆ ಮುಂದುವರಿಸಿಕೊಂಡು ಹೋಗಿ” ಎಂದು ತಿಳಿಸಿದರು.

ಪವರ್ ಶೇರಿಂಗ್ ವಿಚಾರ ಚರ್ಚೆ ಇಲ್ಲ

ಗೃಹಸಚಿವರು ಮಧ್ಯರಾತ್ರಿ ನಿಮ್ಮನ್ನು ಭೇಟಿ ಮಾಡಿದ್ದು, ಪವರ್ ಶೇರಿಂಗ್ ಬಗ್ಗೆ ಚರ್ಚೆ ಮಾಡಲಾಯಿತೇ ಎಂದು ಮಾಧ್ಯಮಗಳು ಕೇಳಿದಾಗ, “ಅವರು ಬಂದು ಭೇಟಿ ಮಾಡಿದ್ದು ನಿಜ, ಆದರೆ ಬೇರೆ ವಿಚಾರ ಚರ್ಚೆ ಮಾಡಿದೆವು. ಇಲ್ಲಿ ಪವರ್ ಶೇರಿಂಗ್ ವಿಚಾರ ಚರ್ಚೆ ಇಲ್ಲ. ನಾವೆಲ್ಲರೂ ಸೇರಿ ಒಟ್ಟಾಗಿ ಶಿಸ್ತಿನಿಂದ ಕೆಲಸ ಮಾಡಬೇಕು. ಇದರ ಹೊರತಾಗಿ ಬೇರೆ ಯಾವುದೇ ವಿಚಾರವಿಲ್ಲ” ಎಂದು ಹೇಳಿದರು.

Tags: congress dk shivakumarDabaspeteDCM DK ShivakumarDK Shivakumardk shivakumar 2025dk shivakumar bengalurudk shivakumar cmdk shivakumar congressdk shivakumar dcmdk shivakumar falldk shivakumar interviewdk shivakumar latest newsdk shivakumar livedk shivakumar memesdk shivakumar newsdk shivakumar next cmdk shivakumar rallydk shivakumar sondk shivakumar speechdk shivakumar supportdk shivakumar today newsdk shivakumar updatesdk shivakumar videosDr G ParaDr G ParameshwarKaaiasiddaramaiahSrinivas
Previous Post

CM Siddaramaiah: ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ಆರ್.ಎಸ್.ಎಸ್. ಗೆ ನಂಬಿಕೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಡಿಕೆ ಶಿವಕುಮಾರ್. ಕೆಜೆ ಜಾರ್ಜ್ ಗೆ ಮಾಡ್ತಾರೆ .. ಬಿಡಿ

Related Posts

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?
ಇದೀಗ

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

by ಪ್ರತಿಧ್ವನಿ
January 18, 2026
0

ಬೆಂಗಳೂರು : ಬಿಗ್‌ ಬಾಸ್‌ ಸೀಸನ್‌ 12ರ ಗ್ರ್ಯಾಂಡ್‌ ಫಿನಾಲೆಗೆ ಕ್ಷಣಗಣನೆ ಶುರುವಾಗಿದ್ದು, ವಿನ್ನರ್‌ ಯಾರಾಗಲಿದ್ದಾರೆ ಎಂಬುವುದು ಎಲ್ಲರಲ್ಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಈಗಾಗಲೇ ಸ್ಪರ್ಧಿಗಳ ಅಭಿಮಾನಿಗಳು...

Read moreDetails
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊನೆಗೂ ಕ್ರಿಕೆಟ್ ಪಂದ್ಯಕ್ಕೆ ಅನುಮತಿ

January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
Next Post

ಡಿಕೆ ಶಿವಕುಮಾರ್. ಕೆಜೆ ಜಾರ್ಜ್ ಗೆ ಮಾಡ್ತಾರೆ .. ಬಿಡಿ

Recent News

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ
Top Story

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

by ನಾ ದಿವಾಕರ
January 18, 2026
Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

BBK12; ಕುತೂಹಲ ಘಟ್ಟಕ್ಕೆ BIGG BOSS ಫಿನಾಲೆ : ಗಿಲ್ಲಿ, ರಕ್ಷಿತಾ ಪಡೆದ ಮತಗಳೆಷ್ಟು..?

January 18, 2026
ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

ಕತೆಯಲ್ಲ ಕಥನವಲ್ಲ ದುರಂತ ವಾಸ್ತವ

January 18, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada