ಚಿತ್ರದುರ್ಗ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಮತ್ತು ಗ್ಯಾಂಗ್ ಈಗಾಗಲೇ ಪೊಲೀಸರ ಅತಿಥಿಯಾಗಿದ್ದಾರೆ. ಇಡೀ ರಾಜ್ಯವೇ ಈ ಘಟನೆಯನ್ನು ಖಂಡಿಸಿದೆ. ಪೊಲೀಸರು ಪ್ರಾಮಾಣಿಕ ತನಿಖೆ ಕೈಗೊಂಡು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಮಾಡಬೇಕು ಎಂದು ಹಲವರು ಆಗ್ರಹಿಸುತ್ತಿದ್ದಾರೆ. ಈ ನಿಟ್ಟಿನಲ್ಲಿಯೇ ಪೊಲೀಸರು ದರ್ಶನ್ ಗೆ ಖೆಡ್ಡಾ ತೋಡುತ್ತಿದ್ದಾರೆ.
![](https://pratidhvani.com/wp-content/uploads/2024/06/110943197-1024x576.webp)
ಮುಂದಿನ ದಿನಗಳಲ್ಲಿ 17 ಜನ ಆರೋಪಿಗಳು ಉಲ್ಟಾ ಹೊಡೆದು ಪ್ರಕರಣದ ದಿಕ್ಕು ತಪ್ಪಿಸಬಾರದು ಎಂಬ ಕಾರಣಕ್ಕೆ ಸಿಆರ್ ಪಿಸಿ 164 ಹೇಳಿಕೆ ದಾಖಲಿಸಿಕೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಪ್ರಕರಣದಲ್ಲಿ ತಪ್ಪು ಮಾಡಿರುವ ಆರೋಪಿಗಳಿಗೆ ಶಿಕ್ಷೆಯಾಗಬೇಕು ಎಂಬ ಕಾರಣಕ್ಕೆ ಅಲ್ಲದೇ, ಮುಂದೆ ನ್ಯಾಯಾಲಯದ ವಿಚಾರಣೆ ವೇಳೆ ಉಲ್ಟಾ ಹೊಡೆಯಬಾರದು ಎಂದು ಆರೋಪಿಗಳಿಂದ ಸಿಆರ್ ಪಿಸಿ 164 ಹೇಳಿಕೆ ದಾಖಲಿಸಿಕೊಳ್ಳಲು ಸಿದ್ಧತೆ ನಡೆಸಲಾಗುತ್ತಿದೆ.
![](https://pratidhvani.com/wp-content/uploads/2024/06/IMG_8184-2.jpeg)
ನಗರ ಪೊಲೀಸ್ ಆಯುಕ್ತರಿಂದಲೂ ತನಿಖಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎನ್ನಲಾಗುತ್ತಿದೆ. ಇಂದು ಹಲವು ಆರೋಪಿಗಳನ್ನು ನ್ಯಾಯಾಧೀಶರ ಬಳಿ ಕರೆದೊಯ್ದು 164 ಹೇಳಿಕೆ ದಾಖಲು ಮಾಡುವ ಸಾಧ್ಯತೆ ಇದೆ. ಸಿಆರ್ ಪಿಸಿ 164 ಹೇಳಿಕೆ ದಾಖಲು ಮಾಡಿದರೆ, ನ್ಯಾಯಾಲಯದ ವಿಚಾರಣೆ ವೇಳೆ ಉಲ್ಟಾ ಹೊಡೆಯಲು ಆಗಲ್ಲ. ಹೀಗಾಗಿ ಭವಿಷ್ಯದಲ್ಲಿ ದರ್ಶನ್ ಗೆ ದೊಡ್ಡ ಸಂಕಷ್ಟ ಎದುರಾಗುವುದುರಲ್ಲಿ ಸಂದೇಹವೇ ಇಲ್ಲ ಎನ್ನಲಾಗುತ್ತಿದೆ.
ಕೊಲೆ ಪ್ರಕರಣದ ಪ್ರಮುಖ ಆರೋಪಿ ಪವನ್ ಮನೆಯಲ್ಲಿ ಇಂದು ಮಹಜರು ನಡೆಯಿತು. ಬನಶಂಕರಿ 6 ನೇ ಹಂತದಲ್ಲಿರುವ ಪವನ್ ಮನೆಯಲ್ಲಿ ಮಹಜರು ನಡೆಯಿತು. ಇಬ್ಬರು ಆರೋಪಿಗಳನ್ನು ಕರೆದುಕೊಂಡು ಪೊಲೀಸರು ಆಗಮಿಸಿದ್ದರು.