• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 8, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ

ಪ್ರತಿಧ್ವನಿ by ಪ್ರತಿಧ್ವನಿ
August 8, 2026
in Top Story, ರಾಜಕೀಯ
0
ಕರ್ನಾಟಕದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸಿದ್ಧತೆ; ಜನವರಿಯೊಳಗೆ ಪಕ್ಷ ಘೋಷಣೆ: ಚೇತನ್ ಅಹಿಂಸಾ
Share on WhatsAppShare on FacebookShare on Telegram

ಸ್ಯಾಂಡಲ್‌ವುಡ್ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ ಅವರು ಕರ್ನಾಟಕದಲ್ಲಿ ಹೊಸ ಪ್ರಾದೇಶಿಕ ರಾಜಕೀಯ ಪಕ್ಷ ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಸಮಾನ ಮನಸ್ಕರು ಹಾಗೂ ವಿವಿಧ ಜನಪರ ಸಂಘಟನೆಗಳನ್ನು ಒಗ್ಗೂಡಿಸಿ ಪರ್ಯಾಯ ರಾಜಕೀಯ ಶಕ್ತಿಯನ್ನು ರೂಪಿಸುವ ನಿಟ್ಟಿನಲ್ಲಿ ಸಿದ್ಧತೆಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಚೇತನ್, ಕರ್ನಾಟಕದಲ್ಲಿ ಪರ್ಯಾಯ ರಾಜಕೀಯ ಚಳವಳಿಯ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಮುಂಬರುವ ಜನವರಿಯೊಳಗೆ ನೂತನ ಪ್ರಾದೇಶಿಕ ಪಕ್ಷಕ್ಕೆ ಚಾಲನೆ ನೀಡುವ ಉದ್ದೇಶ ಹೊಂದಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಪೂರ್ವಭಾವಿ ಸಿದ್ಧತೆಗಳನ್ನು ಆರಂಭಿಸಲಾಗಿದೆ ಎಂದು ಹೇಳಿದರು.

ADVERTISEMENT
DK Shivakumar ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಕೇಂದ್ರ ಸಚಿವ Kumaraswamy..! | JDS | Pratidhvani

ರಾಜ್ಯಾದ್ಯಂತ ಪ್ರವಾಸ ಕೈಗೊಂಡು ವಿವಿಧ ಜನಪರ ಸಂಘಟನೆಗಳು, ರೈತರು, ದಲಿತರು, ಕಾರ್ಮಿಕರು ಹಾಗೂ ಪ್ರಗತಿಪರ ಸಂಘಟನೆಗಳೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ಹಲವು ಸಂಘಟನೆಗಳು ಪ್ರತ್ಯೇಕವಾಗಿ ತಮ್ಮದೇ ಆದ ವಿಚಾರಗಳಿಗಾಗಿ ಹೋರಾಟ ನಡೆಸುತ್ತಿವೆ. ಈ ಎಲ್ಲಾ ಜನಪರ ಧ್ವನಿಗಳನ್ನು ಒಂದೇ ವೇದಿಕೆಯಡಿ ತರಲು ಸಮಾನ ಮನಸ್ಕರು ಒಗ್ಗೂಡಿ ರಾಜಕೀಯ ಪಕ್ಷ ಕಟ್ಟುವ ಅಗತ್ಯವಿದೆ ಎಂದು ಚೇತನ್ ಅಭಿಪ್ರಾಯಪಟ್ಟರು.

Lakshmana Savadi on MLA's Upset: ಕಾಂಗ್ರೆಸ್ ಶಾಸಕರ ಅಸಮಾಧಾನದ ಬಗ್ಗೆ ಸಚಿವ ಲಕ್ಷ್ಮಣ ಸವದಿ ರಿಯಾಕ್ಷನ್

ಇತರ ಪರ್ಯಾಯ ರಾಜಕೀಯ ಪ್ರಯತ್ನಗಳ ಕುರಿತು ಪ್ರತಿಕ್ರಿಯಿಸಿದ ಅವರು, ನಟ ಉಪೇಂದ್ರ ಅವರ ‘ಪ್ರಜಾಕೀಯ’ ಪರಿಕಲ್ಪನೆ ಹಾಗೂ ಸಿದ್ಧಾಂತವಿಲ್ಲದ ಜಾತಿ ಆಧಾರಿತ ರಾಜಕೀಯ ಪಕ್ಷಗಳು ತಮ್ಮ ನಿಲುವಿಗೆ ಹೊಂದಿಕೆಯಾಗುವುದಿಲ್ಲ ಎಂದು ಹೇಳಿದರು.

ಪ್ರಸ್ತುತ ರಾಜಕೀಯ ಪಕ್ಷಗಳು ನಾಯಕರ ವೈಯಕ್ತಿಕ ಲಾಭ ಮತ್ತು ಸ್ವಾರ್ಥಕ್ಕೆ ಹೆಚ್ಚು ಆದ್ಯತೆ ನೀಡುತ್ತಿವೆ ಎಂದು ಟೀಕಿಸಿದ ಅವರು, ತಮಿಳುನಾಡಿನ ನಟ ವಿಜಯ್ ಅವರ ‘ಟೀವಿಕೆ’ ಪಕ್ಷದ ಪ್ರಭಾವವೂ ಬಹುತೇಕ ಸ್ಟಾರ್‌ಡಮ್ ಆಧಾರಿತವಾಗಿದೆ ಎಂದು ಅಭಿಪ್ರಾಯಪಟ್ಟರು.

Lakshmana Savadi on MLA's Upset: ಕಾಂಗ್ರೆಸ್ ಶಾಸಕರ ಅಸಮಾಧಾನದ ಬಗ್ಗೆ ಸಚಿವ ಲಕ್ಷ್ಮಣ ಸವದಿ ರಿಯಾಕ್ಷನ್

ಚಲನಚಿತ್ರ ಕ್ಷೇತ್ರದ ಜನಪ್ರಿಯತೆಯನ್ನು ಆಧರಿಸಿ ರಾಜಕೀಯಕ್ಕೆ ಪ್ರವೇಶಿಸುವ ಪ್ರವೃತ್ತಿಯನ್ನು ಚೇತನ್ ಟೀಕಿಸಿದರು. ನಾಯಕರು ಕೇವಲ ಸಿನಿಮಾ ಪರದೆಯ ಮೇಲಿನ ಜನಪ್ರಿಯತೆಯನ್ನು ಅವಲಂಬಿಸದೆ, ಜನರ ನಡುವೆ ಬೆರೆತು ಅವರ ನೈಜ ಸಮಸ್ಯೆಗಳನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.

ತಮಿಳುನಾಡು ಮುಖ್ಯಮಂತ್ರಿ ಹಾಗೂ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಂತಹ ನಾಯಕರು ಜನರ ನಡುವೆ ಕೆಲಸ ಮಾಡಿದಾಗ ಮಾತ್ರ ಬಡವರು ಎದುರಿಸುತ್ತಿರುವ ನೈಜ ಸಮಸ್ಯೆಗಳನ್ನು ಅರಿಯಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.ಮುಂದಿನ ದಿನಗಳಲ್ಲಿ ಹಲವು ಅಡಚಣೆಗಳು ಎದುರಾದರೂ ಅವುಗಳನ್ನು ಮೆಟ್ಟಿ ನಿಂತು ಜನಪರ ಹೋರಾಟವನ್ನು ಮುಂದುವರಿಸುವುದಾಗಿ ಚೇತನ್ ಅಹಿಂಸಾ ಹೇಳಿದ್ದಾರೆ.

Tags: #AlternativePolitics#KannadaNews#KarnatakaPoliticalNews#KarnatakaPoliticalUpdate#KarnatakaPolitics#NewPoliticalParty#PeoplePolitics#PoliticalMovement#politicalnews#PragathiparaPolitics#RegionalPartyChetanchetanahimsakarnatakanewsMangaluru
Previous Post

*ಕ್ಲೀನ್ ಅಪ್ ಬೆಂಗಳೂರಿಗೆ ಆಂದೋಲನದ ರೂಪ ನೀಡಿದ ಬೆಸ್ಕಾಂ*

Related Posts

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್
Top Story

ಬೆಂಗಳೂರು ಟ್ರಾಫಿಕ್‌ಗೆ AI ಅಸ್ತ್ರ; ಜಾಮ್ ನಿಯಂತ್ರಣಕ್ಕೆ ಪೊಲೀಸರ ಹೊಸ ಮಾಸ್ಟರ್ ಪ್ಲ್ಯಾನ್

by ಪ್ರತಿಧ್ವನಿ
August 8, 2026
0

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಟ್ರಾಫಿಕ್ ಜಾಮ್ ಸಮಸ್ಯೆಗೆ ಕಡಿವಾಣ ಹಾಕಲು ನಗರ ಪೊಲೀಸರು ಇದೀಗ ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೊರೆ...

Read moreDetails
ಗೃಹ ಜ್ಯೋತಿ ಪರಿಷ್ಕರಣೆ: ಫಲಾನುಭವಿಗಳ ಆತಂಕಕ್ಕೆ ಬ್ರೇಕ್‌ ಹಾಕಿದ ಸಚಿವ ಕೆ.ಜೆ ಜಾರ್ಜ್

ಕೆಪಿಟಿಸಿಎಲ್‌ನ ‘ಡಾರ್ಕ್ ಫೈಬರ್’ ವಾಣಿಜ್ಯ ಬಳಕೆಗೆ: ₹130 ಕೋಟಿ ಹೆಚ್ಚುವರಿ ಆದಾಯದ ನಿರೀಕ್ಷೆ

August 8, 2026
ತಮಿಳುನಾಡು ಜನ ಮಾತ್ರ ರೈತರಾ? ಕರ್ನಾಟಕದವರು ರೈತರಲ್ಲವೇ?-ಹೆಚ್.ಡಿ ಕುಮಾರಸ್ವಾಮಿ

ಖಾತೆ ಹಂಚಿಕೆ ವಿಳಂಬ ಕಾಂಗ್ರೆಸ್ ದಿವಾಳಿತನ ತೋರುತ್ತದೆ: ಹೆಚ್.ಡಿ ಕುಮಾರಸ್ವಾಮಿ

August 8, 2026
ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

ಶಿವಗಂಗೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ದಿಢೀರ್‌ ನಾಪತ್ತೆ: ಶೋಧ ಕಾರ್ಯ ಚುರುಕು

August 8, 2026
SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

SIR ಪ್ರಕ್ರಿಯೆ: ನ್ಯಾಯಾಂಗದ ತೀರ್ಪು ಮತ್ತು ವಿಶ್ಲೇಷಣೆ-ಭಾಗ 3

August 8, 2026
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada