ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಖ್ಯಾತ ಕ್ರಿಕೆಟಿಗ ರೋಹಿತ್ ಶರ್ಮಾ(Rohit Sharma) ಅವರಿಗೆ ದೇಶದ ಪ್ರತಿಷ್ಠಿತ ಗೌರವ ಲಭಿಸಿದೆ. ಅವರ ಕ್ರೀಡಾ ಕ್ಷೇತ್ರದ ಅದ್ಭುತ ಸಾಧನೆ ಮತ್ತು ಕೊಡುಗೆಯನ್ನು ಪರಿಗಣಿಸಿ ಭಾರತ ಸರ್ಕಾರವು ಅವರಿಗೆ ದೇಶದ ನಾಲ್ಕನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮಶ್ರೀ ನೀಡಿ ಗೌರವಿಸಿದೆ.

ನಿನ್ನೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu )ಅವರು ರೋಹಿತ್ ಶರ್ಮಾಗೆ ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ದೇಶದ ಅತ್ಯುನ್ನತ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿರುವ ರೋಹಿತ್ ಶರ್ಮಾಗೆ ದೇಶದ ಗಣ್ಯರು, ಕ್ರಿಕೆಟ್ ದಿಗ್ಗಜರು ಹಾಗೂ ಅಪಾರ ಅಭಿಮಾನಿಗಳು ಶುಭ ಕೋರಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿರುವ ರೋಹಿತ್ ಶರ್ಮಾ ಈ ಖುಷಿ ಹಂಚಿಕೊಂಡಿದ್ದು, 19 ವರ್ಷಗಳ ಭಾರತದ ಕ್ಯಾಪ್ನೊಂದಿಗೆ ಪ್ರಾರಂಭವಾದ ಕಥೆಗೆ ಇಂದು ಮತ್ತೊಂದು ಹೆಮ್ಮೆಯ ಅಧ್ಯಾಯವನ್ನು ಸೇರಿಸಲಾಗಿದೆ ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ಇನ್ನು ದೇಶದ ಕಲೆ, ಸಾಹಿತ್ಯ, ಕ್ರೀಡೆ, ಸಮಾಜ ಸೇವೆ, ವೈದ್ಯಕೀಯ ಹಾಗೂ ಸಾರ್ವಜನಿಕ ವ್ಯವಹಾರಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಪ್ರತಿಮ ಸೇವೆ ಸಲ್ಲಿಸಿದ ದೇಶದ ಒಟ್ಟು ಸಾಧಕರಿಗೆ ನಿನ್ನೆ ನಡೆದ ಭವ್ಯ ಸಮಾರಂಭದಲ್ಲಿ ಪದ್ಮ ಪ್ರಶಸ್ತಿಗಳನ್ನು ನೀಡಿ ಪುರಸ್ಕರಿಸಲಾಯಿತು. ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.






