ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಅಂಬರೀಶ್ರವರ ಸ್ಮಾರಕ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಆಕ್ಷೇಪ ವ್ಯಕ್ತಪಡಿಸಿದ್ದ ನಟ ಚೇತನ್ ಅಹಿಂಸಾ ವಿರುದ್ಧ ಕ್ರಮಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮುಂದಾಗಿದೆ. ಅಂಬರೀಶ್ ಸ್ಮಾರಕ ಉದ್ಘಾಟನೆ ಬಳಿಕ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿದ್ದ ಚೇತನ್ ಅಹಿಂಸಾ, ಅಂಬರೀಶ್ ಯಾರ ಬಳಿಯೂ ಕೈಚಾಚಿರಲಿಲ್ಲ. ಆದ್ರೆ ಅಂಬರೀಶ್ ಅವರ ಸ್ಮಾರಕಕ್ಕೆ ಸುಮಲತಾ ಅವರು ಸರ್ಕಾರದ ಮುಂದೆ ಕೈಚಾಚಿ, ಎರಡು ಎಕರೆ ಜಾಗ ಮತ್ತು 12 ಕೋಟಿ ರೂಪಾಯಿ ಹಣ ಪಡೆದಿದ್ದಾರೆ ಅಂತ ಹೇಳಿದ್ರು.
ಚೇತನ್ ಅಂಹಿಸಾ ಹೇಳಿಕೆ ಖಂಡಿಸಿ, ಇಂದು ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ ಹರೀಶ್ ಹಾಗೂ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಪತ್ರಿಕಾಗೋಷ್ಠಿ ನಡೆಸಿದ್ರು. ನಟ ಚೇತನ್ ಅಹಿಂಸಾ ಪದೇ ಪದೇ ಚಿತ್ರರಂಗಕ್ಕೆ ಮುಜುಗರ ಆಗುವಂತಹ ಹೇಳಿಕೆ ಕೊಡ್ತಾರೆ. ನಮ್ಮ ಚಿತ್ರರಂಗದಲ್ಲೇ ಇದ್ದು, ಚಿತ್ರರಂಗದ ಬಗ್ಗೆ ಅವಹೇಳನಕಾರಿ ಹೇಳಿಕೆ ಚೇತನ್ ಅಹಿಂಸಾ ಕೊಡ್ತಿದ್ದಾರೆ. ಅವರ ವಿರುದ್ಧ ಅಸಹಕಾರ ಕ್ರಮಕ್ಕೆ ಮುಂದಾಗುವ ಬಗ್ಗೆ ಚರ್ಚೆ ನಡೆಸಿದ್ದೇವೆ ಅಂತ ಅಂತ ಭಾ.ಮ ಹರೀಶ್ ಹೇಳಿದ್ರು.
ಸುದ್ದಿಗೋಷ್ಠಿಯಲ್ಲಿ ಮಾತ್ನಾಡಿದ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ.ಹರೀಶ್, ಕಳೆದ ಮಾರ್ಚ್ 27ರಂದು ಅಂಬರೀಶ್ರವರ ಸ್ಮಾರಕ ಉದ್ಘಾಟನೆ ಮಾಡಿದ್ವಿ. ಜೊತೆಗೆ ರೇಸ್ಕೋರ್ಸ್ ರಸ್ತೆಗೆ ಅಂಬರೀಶ್ ಹೆಸರಿಟ್ಟಿದ್ದೀವಿ. ಆದ್ರೆ ಈ ವಿಚಾರವಾಗಿ ನಟ ಚೇತನ್ ಅಹಿಂಸಾ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಂಬರೀಶ್ ಕುಟುಂಬ ಸೇರಿದಂತೆ ಚಿತ್ರರಂಗದ ಯಾರೂ ಸಹ ಅಂಬರೀಶ್ ಅವರ ಸ್ಮಾರಕ ನಿರ್ಮಿಸುವಂತೆ ಒತ್ತಾಯ ಮಾಡಿಲ್ಲ ಅಂತ ಹೇಳಿದ್ರು.