• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ದಿಲ್ಲಿ ಡಿಸಿಎಂ ಸಿಸೋಡಿಯಾರನ್ನು ಬಂಧಿಸಲು ಒತ್ತಡ – ಸಿಬಿಐ ಅಧಿಕಾರಿ ಆತ್ಮಹತ್ಯೆ? ಸಿಬಿಐ ಹೇಳಿದ್ದೇನು?

ಫೈಝ್ by ಫೈಝ್
September 9, 2022
in ದೇಶ, ರಾಜಕೀಯ
0
ದಿಲ್ಲಿ ಡಿಸಿಎಂ ಸಿಸೋಡಿಯಾರನ್ನು ಬಂಧಿಸಲು ಒತ್ತಡ – ಸಿಬಿಐ ಅಧಿಕಾರಿ ಆತ್ಮಹತ್ಯೆ? ಸಿಬಿಐ ಹೇಳಿದ್ದೇನು?
Share on WhatsAppShare on FacebookShare on Telegram

ತನ್ನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸುವಂತೆ ಒತ್ತಡ ಹೇರಿದ್ದರಿಂದ ಸಿಬಿಐ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಆರೋಪಿಸಿರುವುದು ರಾಷ್ಟ್ರ ರಾಜಕಾರಣದಲ್ಲಿ ಸಾಕಷ್ಟು ಸಂಚಲನಕ್ಕೆ ಕಾರಣವಾಗಿದೆ. ಕೇಂದ್ರೀಯ ತನಿಖಾ ಸಂಸ್ಥೆಗಳಿಂದ ಪ್ರತಿಪಕ್ಷ ನಾಯಕರನ್ನು ಸದೆ ಬಡಿಯಲಾಗುತ್ತಿದೆ ಎಂಬ ಕೇಂದ್ರ ಸರ್ಕಾರ ಮೇಲಿರುವ ಆರೋಪಗಳ ಹಿನ್ನೆಲೆಯಲ್ಲಿ ಸಿಸೋಡಿಯಾ ಅವರ ಆರೋಪವು ಗಂಭೀರವೆಂದೆನಿಸಿದೆ. ಅದಾಗ್ಯೂ ಸಿಸೋಡಿಯಾ ಆರೋಪವನ್ನು ಸಿಬಿಐ ನಿರಾಕರಿಸಿದೆ.

ADVERTISEMENT

ಆತ್ಮಹತ್ಯೆ ಮಾಡಿಕೊಂಡಿರುವ ಸಿಬಿಐ ಅಧಿಕಾರಿಯ ಮೇಲೆ ನನ್ನ ವಿರುದ್ಧ ತಪ್ಪು ಪ್ರಕರಣ ದಾಖಲಿಸಿ ಬಂಧಿಸುವಂತೆ ಒತ್ತಡ ಹೇರಲಾಗಿದೆ, ಒತ್ತಡ ತಾಳಲಾರದೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಿಸೋಡಿಯಾ ಆರೋಪಿಸಿದ್ದಾರೆ.

ಸಿಬಿಐ ಅಧಿಕಾರಿ ಸಾವಿನ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮನೀಶ್ ಸಿಸೋಡಿಯಾ, “ಎರಡು ದಿನಗಳ ಹಿಂದೆ ಸಿಬಿಐ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಅದರ ಸಂಪೂರ್ಣ ಸುದ್ದಿಯನ್ನು ಮಾಧ್ಯಮಗಳೂ ತೋರಿಸಿದ್ದವು. ಆತ್ಮಹತ್ಯೆ ಮಾಡಿಕೊಂಡ ಸಿಬಿಐ ಅಧಿಕಾರಿ ಜಿತೇಂದ್ರ ಕುಮಾರ್ ಎಂದು ತಿಳಿದು ಬಂದಿದೆ. ಉಪ ಕಾನೂನು ಸಲಹೆಗಾರರಾಗಿದ್ದ ಅವರು ಸಿಬಿಐನ ಭ್ರಷ್ಟಾಚಾರ ನಿಗ್ರಹ ಶಾಖೆಯಲ್ಲಿ ಕಾನೂನು ಸಲಹೆಗಾರರಾಗಿದ್ದರು. ಕಾನೂನು ವಿಷಯಗಳನ್ನು ಅನುಮೋದಿಸುವುದು, ತಿರಸ್ಕರಿಸುವುದು, ಎಲ್ಲಾ ಕಾನೂನುಬದ್ಧತೆಯನ್ನು ನೋಡುವುದು ಅವರ ಕೆಲಸವಾಗಿತ್ತು. ಅಲ್ಲದೆ, ನನ್ನ ವಿರುದ್ಧ ದಾಖಲಾಗಿರುವ ಅಬಕಾರಿ ಪ್ರಕರಣದಲ್ಲಿ, ಕಾನೂನು ವಿಷಯವನ್ನೂ ಅವರೇ ನೋಡಿಕೊಳ್ಳುತ್ತಿದ್ದರು. ನನ್ನ ವಿರುದ್ಧ ತಪ್ಪು ಪ್ರಕರಣ ದಾಖಲಿಸಿ ಬಂಧಿಸಲು ಕಾನೂನು ಅನುಮತಿ ನೀಡುವಂತೆ ಒತ್ತಡ ಹೇರಲಾಗಿತ್ತು. ಆದರೆ, ಅವರು ಅನುಮೋದನೆ ನೀಡಲಿಲ್ಲ. ಅವರ ಮೇಲೆ ವಿಪರೀತ ಒತ್ತಡವಿದ್ದು, ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಅತ್ಯಂತ ದುಃಖಕರ ಘಟನೆ’ ಎಂದು ಸಿಸೋಡಿಯಾ ಗಂಭೀರ ಆರೋಪ ಹೊರಿಸಿದ್ದರು.

ಸಿಸೋಡಿಯಾ ಆರೋಪಕ್ಕೆ ಸಿಬಿಐಯೇ ಪ್ರತಿಕ್ರಿಯೆ ನೀಡಿದ್ದು, ಮನೀಶ್ ಸಿಸೋಡಿಯಾ ಅವರ ಚೇಷ್ಟೆಯ ಮತ್ತು ತಪ್ಪುದಾರಿಗೆಳೆಯುವ ಹೇಳಿಕೆಯನ್ನು ನಿರಾಕರಿಸುವುದಾಗಿ ತನಿಖಾ ಸಂಸ್ಥೆ ಹೇಳಿದೆ. ಆತ್ಮಹತ್ಯೆ ಮಾಡಿಕೊಂಡ ಸಿಬಿಐ ಅಧಿಕಾರಿ ದಿವಂಗತ ಜಿತೇಂದ್ರ ಕುಮಾರ್ ಅವರು ಅಬಕಾರಿ ಪ್ರಕರಣದ ತನಿಖೆಯಲ್ಲಿ ಯಾವುದೇ ರೀತಿಯಲ್ಲಿ ಭಾಗಿಯಾಗಿಲ್ಲ ಎಂದು ಸಿಬಿಐ ಹೇಳಿದೆ.

ದಿಲ್ಲಿ ಅಬಕಾರಿ ನೀತಿ ಪ್ರಕರಣದ ಪ್ರಸ್ತುತ ತನಿಖೆಯಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಸಿಸೋಡಿಯಾ ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ ಸಿಬಿಐ ಅಧಿಕಾರಿ ಸಾವಿನ ಬಗ್ಗೆ ತನಿಖೆ ನಡೆಸುತ್ತಿರುವ ದಿಲ್ಲಿ ಪೊಲೀಸರ ಹೇಳಿಕೆಯನ್ನು ಉಲ್ಲೇಖಿಸಿದೆ. ಮೃತ ಅಧಿಕಾರಿಯು ತನ್ನ ‘ಆತ್ಮಹತ್ಯೆ ಟಿಪ್ಪಣಿ’ಯಲ್ಲಿ ತನ್ನ ಸಾವಿಗೆ ಯಾರನ್ನೂ ಹೊಣೆಗಾರರನ್ನಾಗಿ ಮಾಡಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಅಬಕಾರಿ ನೀತಿ ವಿಷಯದ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಯಾವೊಬ್ಬ ಆರೋಪಿಗೂ ಕ್ಲೀನ್ ಚಿಟ್ ನೀಡಿಲ್ಲ. ಸಿಸೋಡಿಯಾ ಅವರ ಚೇಷ್ಟೆಯ ಮತ್ತು ದಾರಿತಪ್ಪಿಸುವ ಹೇಳಿಕೆಯು ದಿಲ್ಲಿ ಅಬಕಾರಿ ನೀತಿ ಪ್ರಕರಣದ ಪ್ರಸ್ತುತ ತನಿಖೆಯಿಂದ ಗಮನವನ್ನು ಬೇರೆಡೆಗೆ ಸೆಳೆಯುವ ಪ್ರಯತ್ನವಾಗಿದೆ ಮತ್ತು ಅಧಿಕಾರಿಯ ಸಾವಿನ ತನಿಖೆಯ ಪ್ರಕ್ರಿಯೆಯಲ್ಲಿ ಹಸ್ತಕ್ಷೇಪಕ್ಕೆ ಸಮಾನವಾಗಿದೆ ಎಂದು ಸಿಬಿಐ ಹೇಳಿದೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಹಿಜಾಬ್‌ ಗೆ ಸಿಖ್ಖರ ಪೇಟ, ಕತ್ತಿ ಹೋಲಿಸಬೇಡಿ: ಸುಪ್ರೀಂಕೋರ್ಟ್‌

Next Post

ಸತತ ಮಳೆಗೆ ಬೆಂಗಳೂರಿನ ರಸ್ತೆಗಳಲ್ಲಿ ಬೃಹತ್ ಗುಂಡಿಗಳ ಕಾರುಬಾರು; ಒಂದೇ ಕಡೆ ಹತ್ತಾರು ರಸ್ತೆ ಗುಂಡಿಗಳು

Related Posts

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ
ದೇಶ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

by ಪ್ರತಿಧ್ವನಿ
January 28, 2026
0

ನವದೆಹಲಿ: ವಿಶ್ವದ ಎರಡನೆಯ ಅತಿದೊಡ್ಡ ಆರ್ಥಿಕತೆಯಾಗಿರುವ ಐರೋಪ್ಯ ಒಕ್ಕೂಟದೊಂದಿಗೆ, ವಿಶ್ವದ ನಾಲ್ಕನೆಯ ಅತಿ ದೊಡ್ಡ ಆರ್ಥಿಕ ಶಕ್ತಿಯಾದ ಭಾರತ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದೆ. ಈ...

Read moreDetails
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

ಟ್ರಂಪ್‌ಗೆ ಸೆಡ್ಡು ಹೊಡೆದ ಭಾರತ : ಯುರೋಪ್‌ ಒಕ್ಕೂಟದೊಂದಿಗೆ ಮೋದಿಯ ಒಪ್ಪಂದಗಳೇನು..?

January 27, 2026
U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

U-19 World Cup : ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವೈಭವ್‌ ಸೂರ್ಯವಂಶಿ : ಅರ್ಧ ಶತಕ ಪೊರೈಸಿದ 14ರ ಹರೆಯದ ಪೋರ..!

January 27, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

January 27, 2026
Next Post
ಸತತ ಮಳೆಗೆ ಬೆಂಗಳೂರಿನ ರಸ್ತೆಗಳಲ್ಲಿ ಬೃಹತ್ ಗುಂಡಿಗಳ ಕಾರುಬಾರು; ಒಂದೇ ಕಡೆ ಹತ್ತಾರು ರಸ್ತೆ ಗುಂಡಿಗಳು

ಸತತ ಮಳೆಗೆ ಬೆಂಗಳೂರಿನ ರಸ್ತೆಗಳಲ್ಲಿ ಬೃಹತ್ ಗುಂಡಿಗಳ ಕಾರುಬಾರು; ಒಂದೇ ಕಡೆ ಹತ್ತಾರು ರಸ್ತೆ ಗುಂಡಿಗಳು

Please login to join discussion

Recent News

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್
Top Story

ಇನ್ನುಂದೆ ಗ್ರಾಮ ಪಂಚಾಯತಿ ಕಚೇರಿಗಳಿಗೆ ಮಹಾತ್ಮ ಗಾಂಧಿ ಹೆಸರು: ಡಿಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
January 27, 2026
400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?
Top Story

400 ಕೋಟಿ ರೂ ದರೋಡೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌: ಮಹಾರಾಷ್ಟ್ರದಲ್ಲಿ ಚಾಲಕರ ಬಂಧನ..?

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada