
ಮುಂಬೈ: ಸಿಂಧುದುರ್ಗದಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ಕುಸಿದು ಬಿದ್ದಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಿದ್ದಾರೆ.
ಮಹಾರಾಷ್ಟ್ರದ ಪಾಲ್ಘರ್ನಲ್ಲಿ 76 ಸಾವಿರ ಕೋಟಿ ರೂಪಾಯಿ ವೆಚ್ಚದ ವಾಧವನ್ ಬಂದರು ಯೋಜನೆಯ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದು ನಾನು ನನ್ನ ಹೃದಯದ ಭಾವನೆಗಳನ್ನು ವ್ಯಕ್ತಪಡಿಸಲು ಬಯಸುತ್ತೇನೆ.
2013ರಲ್ಲಿ ಬಿಜೆಪಿ ನನ್ನನ್ನು ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಿದಾಗ ನಾನು ಮಾಡಿದ ಮೊದಲ ಕೆಲಸವೆಂದರೆ ರಾಯಗಢ ಕೋಟೆಗೆ ಹೋಗಿ ಛತ್ರಪತಿ ಶಿವಾಜಿ ಮಹಾರಾಜರ ಸಮಾಧಿಯ ಮುಂದೆ ಕುಳಿತು ಪ್ರಾರ್ಥಿಸಿ ಅವರ ಆಶೀರ್ವಾದ ಪಡೆದೆ ಎಂದರು.
#WATCH | Palghar, Maharashtra: PM Narendra Modi speaks on the Chhatrapati Shivaji Maharaj's statue collapse incident in Malvan
— ANI (@ANI) August 30, 2024
He says, "Those who consider Chhatrapati Shivaji Maharaj as their deity and have been deeply hurt, I bow my head and apologise to them. Our values are… pic.twitter.com/oLaDLDaWbI
ನನಗೆ ಮತ್ತು ನನ್ನ ಎಲ್ಲಾ ಸಹೋದ್ಯೋಗಿಗಳಿಗೆ ಛತ್ರಪತಿ ಶಿವಾಜಿ ಮಹಾರಾಜ್ ಎಂಬುದು ಕೇವಲ ಹೆಸರಲ್ಲ, ಛತ್ರಪತಿ ಶಿವಾಜಿ ಮಹಾರಾಜರು ನಮ್ಮ ಆರಾಧ್ಯ ದೈವ. ಇಂದು ನಾನು ನನ್ನ ಪ್ರೀತಿಯ ದೇವರ ಪಾದಗಳಿಗೆ ತಲೆಬಾಗಿ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದರು.
ಪ್ರತಿಮೆ ಕುಸಿತ: ಮಹಾರಾಷ್ಟ್ರದ ಸಿಂಧುದುರ್ಗದಲ್ಲಿ ಆಗಸ್ಟ್ 26 ರಂದು ಛತ್ರಪತಿ ಶಿವಾಜಿ ಮಹಾರಾಜರ 35 ಅಡಿ ಎತ್ತರದ ಪ್ರತಿಮೆ ಬಿದ್ದ ನಂತರ ಬಿಜೆಪಿ ಸರ್ಕಾರದ ವಿರುದ್ಧ ಭಾರೀ ಟೀಕೆ ವ್ಯಕ್ತವಾಯಿತು. ವಿವಾದ ತಾರಕಕ್ಕೇರುತ್ತಿದ್ದಂತೆ ರಾಜ್ಯದ ಉಪ ಮುಖ್ಯಮಂತ್ರಿ ಹಾಗೂ ಎನ್ಸಿಪಿ ನಾಯಕ ಅಜಿತ್ ಪವಾರ್ ಕ್ಷಮೆಯಾಚಿಸಿದ್ದಾರೆ. ಈ ಸಂಬಂಧ ಸಿಂಧುದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.