• Home
  • About Us
  • ಕರ್ನಾಟಕ
Thursday, June 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರಧಾನಿ ನರೇಂದ್ರ ಮೋದಿ ಧ್ಯಾನ ಪ್ರಚಾರವೇ..? ಕಾಂಗ್ರೆಸ್‌ ಹೇಳ್ತಿರೋದೇನು..?

ಪ್ರತಿಧ್ವನಿ by ಪ್ರತಿಧ್ವನಿ
May 30, 2024
in Top Story, ಇದೀಗ, ದೇಶ, ರಾಜಕೀಯ
0
ಪ್ರಧಾನಿ ನರೇಂದ್ರ ಮೋದಿ ಧ್ಯಾನ ಪ್ರಚಾರವೇ..? ಕಾಂಗ್ರೆಸ್‌ ಹೇಳ್ತಿರೋದೇನು..?
Share on WhatsAppShare on FacebookShare on Telegram

ದೇಶದಲ್ಲಿ ಲೋಕಸಭಾ ಚುನಾವಣೆ(Lokasabha Election) ಮುಕ್ತಾಯದ ಘಟ್ಟ ತಲುಪಿದೆ. ಜೂನ್‌ 1ರಂದು ನಡೆಯುವ ಮತದಾನಕ್ಕೆ ಇಂದು ಬಹಿರಂಗ ಪ್ರಚಾರಕ್ಕೆ ಕಡೇ ದಿನ. ಇಂದು ಸಂಜೆ ದೇಶಾದ್ಯಂತ ಲೋಕಸಭೆ ಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಇಂದಿನ ಪ್ರಚಾರ ಮುಗಿಸಿ ಪ್ರಧಾನಿ ನರೇಂದ್ರ ಮೋದಿ(Narendra Modi) ಕನ್ಯಾಕುಮಾರಿಯಲ್ಲಿ 3 ದಿನ ಧ್ಯಾನ ಮಾಡುವ ಕಾರ್ಯಕ್ರಮಕ್ಕೆ ಹೊರಡಲಿದ್ದಾರೆ. ಈ ನಡುವೆ ಪ್ರಧಾನಿ ಮೌನ ವ್ರತ ಮಾಡ್ತಿರೋದು ನೀತಿ ಸಂಹಿತೆ ಉಲ್ಲಂಘನೆ ಎಂದಿರುವ ಕಾಂಗ್ರೆಸ್‌‌ ನೇತೃತ್ವದ INDIA ಒಕ್ಕೂಟ ಚುನಾವಣಾ ಆಯೋಗದ ಮೊರೆ ಹೋಗಿದೆ..

ADVERTISEMENT

ಬರೋಬ್ಬರಿ 2 ತಿಂಗಳ ಕಾಲ ನಡೆದ ಚುನಾವಣಾ ಸಮರದಲ್ಲಿ ಇಂದು ಬಹಿರಂಗ ಪ್ರಚಾರಕ್ಕೆ ತೆರೆ ಬೀಳುತ್ತಿದೆ. ಇಡೀ ದೇಶದಲ್ಲಿ ಲೋಕಸಭೆ ಚುನಾವಣೆ ಅಬ್ಬರ.. ಘಟಾನುಘಟಿ ನಾಯಕರು(Leaders) ಜನರ ಮನಸ್ಸು ಗೆಲ್ಲಲು ಮಾಡಿದ ಪ್ರಚಾರದ ವೈಖರಿ, ಸಾಕಷ್ಟು ಗಮನ ಸೆಳೆದಿತ್ತು. ಇದೀಗ ಎಲ್ಲಾ ನಾಯಕರು ಸಾರ್ವಜನಿಕ ಪ್ರಚಾರ ಮುಗಿಸಿ ವಿಶ್ರಾಂತಿಗೆ ತೆರಳುವ ವೇಳೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕನ್ಯಾಕುಮಾರಿಯಲ್ಲಿ(Kanyakumari) ವಾಸ್ತವ್ಯ ಹೂಡ್ತಿದ್ದು ಜೂನ್‌ ಒಂದರ ತನಕ ಧ್ಯಾನಕ್ಕೆ ಶರಣಾಗ್ತಿದ್ದಾರೆ. ಮತದಾನದ ಕೊನೇ ಹಂತ ಮುಗಿಯೋವರೆಗೂ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡಲಿದ್ದಾರೆ. ತಮಿಳುನಾಡಿನ(Tamilnadu) ಕನ್ಯಾಕುಮಾರಿಯ ವಿವೇಕಾನಂದ ರಾಕ್‌ ಸ್ಮಾರಕದ ಧ್ಯಾನ ಮಂಟಪದಲ್ಲಿ ಹಗಲು ರಾತ್ರಿ ಧ್ಯಾನ ಮಾಡಲಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಸ್ಥಳದಲ್ಲಿ ಈಗಾಗಲೇ 2 ಸಾವಿರ ಭದ್ರತಾ ಸಿಬ್ಬಂದಿ, ಎಸ್‌ಪಿಜಿ(SPG), ಎನ್‌ಎಸ್‌ಜಿ ಪಡೆಗಳನ್ನೂ ನಿಯೋಜನೆ ಮಾಡಲಾಗಿದೆ. ಪ್ರವಾಸಿಗರನ್ನು ನಿಷೇಧ ಮಾಡಲಾಗಿದೆ. ಚುನಾವಣಾ ಬಹಿರಂಗ ಪ್ರಚಾರ ಅಂತ್ಯವಾದ ಬಳಿಕ ನರೇಂದ್ರ ಮೋದಿ ಧ್ಯಾನಕ್ಕೆ ತೆರಳ್ತಿರೋದು ಕೂಡ ಪ್ರಚಾರ ಎಂದು ಕಾಂಗ್ರೆಸ್‌(Congress) ಆರೋಪ ಮಾಡಿದೆ. ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಿದ್ದು, ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯ ಮಾಡಿದೆ. ಪ್ರಧಾನಿ ಚುನಾವಣಾ ಪ್ರಚಾರಕ್ಕಾಗಿಯೇ ಧ್ಯಾನ ಮಾಡ್ತಿದ್ದಾರೆ ಎಂದು ಚುನಾವಣಾ ಆಯೋಗಕ್ಕೂ ಕಾಂಗ್ರೆಸ್‌‌ ನೇತೃತ್ವದ ಇಂಡಿಯಾ ಒಕ್ಕೂಟದ ನಾಯಕರು ದೂರು ನೀಡಿದ್ದಾರೆ.

ಈ ಬಗ್ಗೆ ಎಐಸಿಸಿ(APCC) ನಾಯಕ ಅಭಿಷೇಕ್‌ ಮನುಸಿಂಘ್ವಿ ಮಾತನಾಡಿ, ಮೇ 30ರ ಸಂಜೆಯಿಂದ ಮೋದಿ ಮೌನವ್ರತ ಘೋಷಿಸಿದ್ದಾರೆ. ಮೌನ ಅವಧಿಯಲ್ಲಿ ಪ್ರತ್ಯಕ್ಷ ಹಾಗು ಪರೋಕ್ಷವಾಗಿ ಪ್ರಚಾರ ಮಾಡುವಂತಿಲ್ಲ. ಇದು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಎಂಬುದು ಗೊತ್ತಿದೆ. ಅದಕ್ಕೆ ಕ್ರಮ ಕೈಗೊಳ್ಳಬೇಕು ಅಂತ ಆಯೋಗಕ್ಕೆ ದೂರು ಕೊಟ್ಟಿದ್ದೇವೆ. ಬಿಜೆಪಿಯ ಅಧಿಕೃತ ಸಾಮಾಜಿಕ ಮಾಧ್ಯಮಗಳನ್ನ ನಿಷೇಧಿಸಬೇಕು ಎಂದಿದ್ದಾರೆ. ಇನ್ನು ಧ್ಯಾನಕ್ಕೆ(Meditation) ಹೋಗುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಕ್ಯಾಮೆರಾಗಳು(Camera) ಯಾಕೆ ಬೇಕು..? ಮೌನವ್ರತ ಆಚರಿಸೋ ಮೋದಿಯವರಿಗೆ ಪ್ರಚಾರ ಯಾಕೆ ಬೇಕು ಅಂತಾನೂ ಮಮತಾ ಬ್ಯಾನರ್ಜಿ(Banerji) ಪ್ರಶ್ನೆ ಮಾಡಿದ್ದಾರೆ. 

ಎಐಸಿಸಿ ನಾಯಕ ರಾಹುಲ್‌ ಗಾಂಧಿ ಮಾತನಾಡಿ, ಇಂದು ಸಂವಿಧಾನ ಉಳಿಸುವ ಹೋರಾಟ ನಡೆಯುತ್ತಿದೆ. ಒಂದು ಕಡೆ ಸಂವಿಧಾನವನ್ನು ರಕ್ಷಿಸುವ ಭಾರತದ ಮೈತ್ರಿ ಇದೆ. ಮತ್ತೊಂದೆಡೆ, ಬಿಜೆಪಿ-RSS ಸಂವಿಧಾನ ರದ್ದು ಬಯಸುತ್ತಿವೆ. ಇಲ್ಲಿನ ಧರ್ಮ, ಜಾತಿಗೆ ಗೌರವ ಸಿಕ್ಕರೆ ಅದಕ್ಕೆ ಸಂವಿಧಾನ ಕಾರಣ ಎಂದಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ನರೇಂದ್ರ ಮೋದಿ ಕಪ್ಪುಹಣ ವಾಪಸ್ ತರುತ್ತೇವೆ. ಎಲ್ಲರಿಗೂ 15-15 ಲಕ್ಷ ರೂಪಾಯಿ ಕೊಟ್ಟು ಬಿಡ್ತೀನಿ ಎಂದಿದ್ದರು. ಯುವಕರಿಗೆ 2 ಕೋಟಿ ಉದ್ಯೋಗ (Employment) ಒದಗಿಸುತ್ತೇವೆ. ರೈತರ ಆದಾಯವನ್ನು ದ್ವಿಗುಣಗೊಳಿಸುತ್ತೇನೆ ಎಂದಿದ್ದರು. ಆದರೆ ಮೋದಿ ಹಾಗೆ ಏನನ್ನೂ ಮಾಡಲಿಲ್ಲ. ಯಾಕಂದ್ರೆ ನರೇಂದ್ರ ಮೋದಿ ‘ಸುಳ್ಳಿನ ಪ್ರಭು’ ಎಂದಿದ್ದಾರೆ.

Tags: Congress Partyಕಾಂಗ್ರೆಸ್ನಮೋನರೇಂದ್ರ ಮೋದಿಬಿಜೆಪಿಮೋದಿ ಧ್ಯಾನ
Previous Post

BJP ಅಧಿಕಾರಕ್ಕೆ ಬರಲ್ಲ ಎನ್ನುತ್ತಿದೆ ‘ಸಟ್ಟಾ ಬಜಾರ್‌’ ಅಂಕಿ ಅಂಶ..!

Next Post

ಭಾರತ, ಪಾಕ್ ಪಂದ್ಯಕ್ಕೆ ಬೆದರಿಕೆ ಕರೆ; ಹೈ ಅಲರ್ಟ್

Related Posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
0

ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿಯಿರುವ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರ ಹುದ್ದೆಗೆ ಸಂಜಯ್ ಬಿ.ಭಟ್ ನಿವೃತ್ತ ಸರ್ಕಾರಿ ಅಭಿಯೋಜಕರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ...

Read moreDetails
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

June 19, 2025
Next Post
ಭಾರತ, ಪಾಕ್ ಪಂದ್ಯಕ್ಕೆ ಬೆದರಿಕೆ ಕರೆ; ಹೈ ಅಲರ್ಟ್

ಭಾರತ, ಪಾಕ್ ಪಂದ್ಯಕ್ಕೆ ಬೆದರಿಕೆ ಕರೆ; ಹೈ ಅಲರ್ಟ್

Please login to join discussion

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

by ಪ್ರತಿಧ್ವನಿ
June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ
Top Story

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

by ಪ್ರತಿಧ್ವನಿ
June 19, 2025
ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ
Top Story

ರಾಜ್ಯದ ಹಸಿರು ಇಂಧನ ಭವಿಷ್ಯಕ್ಕಿದೆ ಸ್ಪಷ್ಟ ಗುರಿ: ಟಿ.ಡಿ.ರಾಜೇಗೌಡ

by ಪ್ರತಿಧ್ವನಿ
June 19, 2025
ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್
Top Story

ರಾಹುಲ್ ಗಾಂಧಿಗೆ ಜನ್ಮದಿನದ ಶುಭ ಕೋರಿದ ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 19, 2025
ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !
Top Story

ಭಾರತ V/S ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನೇ..!ಡೊನಾಲ್ಡ್ ಟ್ರಂಪ್ !

by Chetan
June 19, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ರಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

June 19, 2025
ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

ಬಮೂಲ್ ಅಧ್ಯಕ್ಷರಾಗಿ ಡಿ.ಕೆ. ಸುರೇಶ್ ಅವಿರೋಧ ಆಯ್ಕೆ

June 19, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada