ಇನ್ನೇನು ಕೆಲವೇ ದಿನಗಳಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ(karntaka assembly election 2023) ನಡೆಯಲಿದೆ. ಈಗಾಗಲೇ ಪಕ್ಷದ ನಾಯಕರು, ಮುಖಂಡರು ಅಖಾಡಕ್ಕಿಳಿದು, ಭರ್ಜರಿ ಮತ ಪ್ರಚಾರ ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸಹ ಚುನಾವಣಾ(election) ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದು, ಅವರ ಮೊದಲ ದಿನದ ಮತಬೇಟೆ ಭರ್ಜರಿಯಾಗಿ ನೆರವೇರಿದೆ. ಇಂದು 4 ಜಿಲ್ಲೆಗಳಲ್ಲಿ ಮೋದಿ ಮತಯಾಚಿಸಲಿದ್ದಾರೆ. ಕಾಂಗ್ರೆಸ್(Congress), ಜೆಡಿಎಸ್ಗೆ(JDS) ಶಾಕ್ ಮೇಲೆ ಶಾಕ್ ಕೊಡಲು ಮೋದಿ ಸಜ್ಜಾಗಿದ್ದಾರೆ. ಇನ್ನು ಮತ್ತೊಂದೆಡೆ ಇಂದು ಕೋಲಾರದಲ್ಲಿ ಪ್ರಧಾನಿ ಮೋದಿ ಪ್ರಚಾರ ನಡೆಸಲಿದ್ದು ಬೆಂಗಳೂರು-ಚೆನ್ನೈ(bangalore-chennai) ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಸಂಚಾರ ಬದಲಾವಣೆ ಮಾಡಲಾಗಿದೆ. ಕೋಲಾರದ ಹಲವು ಮಾರ್ಗಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ.
ಬೆಳಗ್ಗೆ 11 ಗಂಟೆಗೆ ಕೋಲಾರದಲ್ಲಿ ಮೋದಿ ಪ್ರಚಾರ ನಡೆಸಲಿದ್ದು, ಬಳಿಕ ಮಧ್ಯಾಹ್ನ 2ಗಂಟೆ ಜೆಡಿಎಸ್ ಭದ್ರಕೋಟೆ, ಮಾಜಿ ಸಿಎಂ ಕುಮಾರಸ್ವಾಮಿ(HD kumaraswamy) ಅವರ ಕ್ಷೇತ್ರ ಚನ್ನಪಟ್ಟಣದಲ್ಲಿ ಮೋದಿ ಪ್ರಚಾರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3.30ಕ್ಕೆ ಹಾಸನ ಜಿಲ್ಲೆ(hasan) ಬೇಲೂರಿನಲ್ಲಿ ಮೋದಿ ಮತ್ತೊಂದು ಪ್ರಚಾರ ಸಭೆ ನಡೆಸಲಿದ್ದಾರೆ. ಸಂಜೆ 5.45ಕ್ಕೆ ಮೈಸೂರಿನಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ವಿದ್ಯಾಪೀಠ ವೃತ್ತದಿಂದ ಶುರುವಾಗುವ ಮೋದಿ ಅವರ ರೋಡ್ ಶೋ, ಬನ್ನಿಮಂಟಪ ರಸ್ತೆ LIC ವೃತ್ತದವರೆಗೆ(LIC circle) ನಡೆಯಲಿದೆ. 45 ನಿಮಿಷ ಈ ರೋಡ್ಶೋ ನಡೆಯಲಿದೆ.