• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಸರಕಾರ ಮತ್ತು ಆಡಳಿತದ ಗಾಂಧಿ ತತ್ವಗಳ ಪ್ರಚಾರಕ್ಕೆ ಆದ್ಯತೆ: ಸಚಿವ ಸಂತೋಷ ಲಾಡ್

ಪ್ರತಿಧ್ವನಿ by ಪ್ರತಿಧ್ವನಿ
April 21, 2025
in ಕರ್ನಾಟಕ, ರಾಜಕೀಯ
0
ಸರಕಾರ ಮತ್ತು ಆಡಳಿತದ  ಗಾಂಧಿ ತತ್ವಗಳ ಪ್ರಚಾರಕ್ಕೆ ಆದ್ಯತೆ: ಸಚಿವ ಸಂತೋಷ ಲಾಡ್
Share on WhatsAppShare on FacebookShare on Telegram

ಧಾರವಾಡದಲ್ಲಿ ನೂತನ ಗಾಂಧಿ ಭವನ ಲೋಕಾರ್ಪಣೆ

ADVERTISEMENT

ಧಾರವಾಡ ಏ.21: ಮಹಾತ್ಮ ಗಾಂಧೀಜಿ ಅವರು ಬದುಕಿದ ರೀತಿ, ಹೋರಾಟದ ಗತಿ ಮತ್ತು ಅವರು ಬೋಧಿಸಿ, ಪಾಲಿಸಿದ ತತ್ವ, ಜೀವನ ಸಂದೇಶಗಳು ಇಂದಿನ ಸರಕಾರಗಳ ಮತ್ತು ಆಡಳಿತದ ಮೂಲ ತತ್ವಗಳಾಗಿವೆ ಎಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರು ಹೇಳಿದರು.

ಧಾರವಾಡ ಕುಮಾರೇಶ್ವರ ನಗರದ ವ್ಯಾಪ್ತಿಯ ಧಾರವಾಡ ಹೊಸ ಕೇಂದ್ರ ಬಸ್ ನಿಲ್ದಾಣ ಹತ್ತಿರದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ನೂತನವಾಗಿ ನಿರ್ಮಿಸಿರುವ ಗಾಂಧಿ ಭವನವನ್ನು ಲೋಕಾರ್ಪಣೆಗೊಳಿಸಿ, ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುದ್ದ, ಬಸವ, ಗಾಂಧಿ, ಅಂಬೇಡ್ಕರ ಅವರ ತತ್ವ ಸಿದ್ದಾಂತ, ಜೀವನ ಸಂದೇಶಗಳನ್ನು ಜನಸಾಮಾನ್ಯರಿಗೆ, ವಿಶೇಷವಾಗಿ ವಿದ್ಯಾರ್ಥಿಗಳಿಗೆ ಮತ್ತು ಯುವ ಸಮುದಾಯಕ್ಕೆ ನಿರಂತರವಾಗಿ ತಲುಪಿಸಲು ವಿವಿಧ ಕಾರ್ಯಕ್ರಮ, ಯೋಜನೆಗಳನ್ನು ಜಾರಿಗೊಳಿಸಿದ್ದಾರೆ ಎಂದು ಹೇಳಿದರು.

ಗಾಂಧೀಜಿ ಅವರನ್ನು ಜನಸಾಮಾನ್ಯರಿಗೆ, ವಿದ್ಯಾರ್ಥಿಗಳಿಗೆ, ಯುವ ಸಮೂಹಕ್ಕೆ ಪರಿಣಾಮಕಾರಿಗೆ ಪರಿಚಯಿಸಲು, ಅವರ ಜೀವನ ಸಂದೇಶಗಳನ್ನು ತಲುಪಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರವು, ಪ್ರತಿ ಜಿಲ್ಲೆಯಲ್ಲಿ ಗಾಂಧಿ ಭವನ ನಿರ್ಮಿಸಲು ತಿರ್ಮಾನಿಸಿ, ನಮ್ಮ ಸರಕಾರದ 2016-17 ನೇ ಸಾಲಿನ ಬಜೆಟ್‍ದಲ್ಲಿ ಮುಖ್ಯ ಮಂತ್ರಿಗಳು ಗಾಂಧಿ ಭವನ ನಿರ್ಮಾಣದ ಕುರಿತು ಘೋಷಿಸಿದ್ದರು.

ಗಾಂಧಿ ಭವನ ನಿರ್ಮಾಣಕ್ಕಾಗಿ ಪ್ರತಿ ಜಿಲ್ಲೆಗೆ ಉಚಿತವಾಗಿ ಅಗತ್ಯ ನಿವೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದ್ದರು. ವಾರ್ತಾ ಇಲಾಖೆಯಿಂದ ಗಾಂಧಿ ಭವನ ನಿರ್ಮಿಸಲು ರೂ. 3 ಕೋಟಿ ಅನುದಾನ ಸಹ ಬಿಡುಗಡೆ ಮಾಡಲಾಗಿತ್ತು. ಅದರಂತೆ ಧಾರವಾಡ ಗಾಂಧಿ ಭವನ ಅತೀ ಸುಂದರವಾಗಿ ರೂಪುಗೊಂಡಿದೆ ಎಂದು ಸಚಿವರು ತಿಳಿಸಿದರು.

ಗಾಂಧಿಭವನವನ್ನು ಗಾಂಧಿ ತತ್ವಗಳ ಪ್ರಚಾರ ಕೇಂದ್ರವಾಗಿ ರೂಪಿಸಲು ಕ್ರಮವಹಿಸಲಾಗುವುದು. ಇದೊಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸದ ಸ್ಥಳವಾಗಿ, ವಿಚಾರ ಸಂಕಿರಣ, ಗಾಂಧಿ ಕಾರ್ಯಕ್ರಮಗಳಿಗೆ ನೀಡುವ ಕುರಿತು ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ಕ್ರಮವಹಿಸಲಿದೆ. ಭವನದ ನಿರ್ವಹಣೆ ಹೊಣೆಯನ್ನು ಮಹಾನಗರಪಾಲಿಕೆ ಅಥವಾ ಇತರ ಏಜನ್ಸಿಗಳಿಗೆ ವಹಿಸುವ ಕುರಿತು ಸಮಿತಿ ಚರ್ಚಿಸಲಿದೆ ಎಂದು ಸಚಿವ ಸಂತೋಷ ಲಾಡ್ ಅವರು ತಿಳಿಸಿದರು.

ಗಾಂಧಿಭವನದಲ್ಲಿನ ಗೋಡೆ ಚಿತ್ರಗಳು, ಚಿತ್ರಪಟಗಳು, ಗಾಂಧೀಜಿ ಅವರ ದಂಡಿಯಾತ್ರೆ ಪ್ರತಿಮೆಗಳು ಸೇರಿದಂತೆ ವಿವಿಧ ಆಕೃತಿಗಳು ಸುಂದರವಾಗಿ ರೂಪಿತವಾಗಿವೆ. ಗಾಂಧಿಭವನಕ್ಕೆ ಭೇಟಿ ನೀಡುವ ಪ್ರತಿಯೊಬ್ಬರಿಗೆ ಇಲ್ಲಿನ ಮಾಹಿತಿಗಳು ಗಾಂಧಿಯವರನ್ನು ಆತ್ಮೀಯವಾಗಿ ಪರಿಚಯಿಸುತ್ತವೆ ಎಂದು ಸಚಿವರು ಹೇಳಿದರು.

ಶಾಸಕ ಎನ್.ಎಚ್.ಕೋನರಡ್ಡಿ , ಜಿಲ್ಲಾಧಿಕಾರಿ ದಿವ್ಯ ಪ್ರಭು,ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಟಾನನ ಪ್ರಾಧಿಕಾರದ ಅಧ್ಯಕ್ಷ ಎಸ್.ಆರ್.ಪಾಟೀಲ, ಮತ್ತಿತರರು ಉಪಸ್ಥಿತರಿದ್ದರು.

Tags: ex minister santosh ladformer minister santosh ladlabor minister santhosh ladLabour MInisterlabour minister santosh ladMinisterMinister Santhosh Ladminister santosh ladminister santosh lad munirathnaminister santosh lad on modiminister santosh lad tribute spandanasanthosh ladSantosh Ladsantosh lad interviewsantosh lad latest newssantosh lad ministersantosh lad mlasantosh lad news
Previous Post

ಅಸಮಾನತೆಯನ್ನು ಬೇರು ಸಹಿತ ಕಿತ್ತು ಹಾಕುವ ದಿಕ್ಕಿನಲ್ಲಿ ಕರ್ತವ್ಯ ನಿರ್ವಹಿಸೋಣ: ಸಿ.ಎಂ ಸಿದ್ದರಾಮಯ್ಯ ಕರೆ

Next Post

ಕ್ಯಾಥೋಲಿಕರ ಧಾರ್ಮಿಕ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ ನಿಧನ.. ಮುಂದೇನು..?! 

Related Posts

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ
ಕರ್ನಾಟಕ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

by ಪ್ರತಿಧ್ವನಿ
March 4, 2026
0

ಬೆಂಗಳೂರು: ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಪರೀಕ್ಷಾ ಪ್ರಾಧಿಕಾರ (BEA) ಸಂಯುಕ್ತವಾಗಿ, Rajiv Gandhi University of Health Sciences (RGUHS) ಸಮನ್ವಯದಲ್ಲಿ...

Read moreDetails
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
Next Post
ಕ್ಯಾಥೋಲಿಕರ ಧಾರ್ಮಿಕ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ ನಿಧನ.. ಮುಂದೇನು..?! 

ಕ್ಯಾಥೋಲಿಕರ ಧಾರ್ಮಿಕ ಮುಖ್ಯಸ್ಥ ಪೋಪ್ ಫ್ರಾನ್ಸಿಸ್ ನಿಧನ.. ಮುಂದೇನು..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada