• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಹೊಸ ಐಟಿ ನಿಯಮಗಳು ಅಸಂವಿಧಾನಿಕ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ವಾಟ್ಸಾಪ್

Any Mind by Any Mind
May 26, 2021
in ದೇಶ
0
ಹೊಸ ಐಟಿ ನಿಯಮಗಳು ಅಸಂವಿಧಾನಿಕ: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ವಾಟ್ಸಾಪ್
Share on WhatsAppShare on FacebookShare on Telegram

ಶಿವಕುಮಾರ್‌ ಎ

ADVERTISEMENT

ಇಂದಿನಿಂದ (ಮೇ ೨೬) ಜಾರಿಗೆ ಬರಲಿರುವ ಹೊಸ ಐಟಿ ನಿಯಮಗಳನ್ನು ಪ್ರಶ್ನಿಸಿ ಫೇಸ್ಬುಕ್ ಒಡೆತನದ ವಾಟ್ಸಾಪ್ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದೆ. ವಾಟ್ಸಾಪ್ ಬಳಕೆದಾರರ ಖಾಸಗಿತನಕ್ಕೆ ಧಕ್ಕೆ ತರುವುದರಿಂದ ಈ ನಿಯಮಗಳು ಅಸಂವಿಧಾನಿಕ ಎಂದು ವಾಟ್ಸಾಪ್ ತನ್ನ ಅರ್ಜಿಯಲ್ಲಿ ತಿಳಿಸಿದೆ. 

ಮಾಹಿತಿಯ ಮೂಲವನ್ನು ಕಂಡುಹಿಡಿಯಲು ಈ ಹೊಸ ನೀತಿಯು ಸಾಮಾಜಿಕ ಜಾಲತಾಣಗಳಿಗೆ ಸೂಚಿಸಿದೆ. ಒಂದು ವೇಳೆ ಈ ನೀತಿಗಳನ್ನು ಸೋಶಿಯಲ್ ಮೀಡಿಯಾ ಕಂಪೆನಿಗಳು ಒಪ್ಪಿಲ್ಲವಾದರೆ ಅವುಗಳ ಸೇವೆಯನ್ನು ತಡೆ ಹಿಡಿಯುವುದಾಗಿ ಕೇಂದ್ರ ಎಚ್ಚರಿಕೆಯನ್ನೂ ನೀಡಿತ್ತು. ಆದರೆ, ಸುದ್ದಿಯ ಮೂಲವನ್ನು ಪತ್ತೆ ಹಚ್ಚುವುದು ಸಂವಿಧಾನದ ಪ್ರಕಾರ ಪ್ರಜೆಗಳಿಗೆ ನೀಡಲಾಗಿರುವ ಖಾಸಗಿತನದ ಹಕ್ಕನ್ನು ಕಿತ್ತುಕೊಂಡ ಹಾಗೆ ಎಂದು ವಾಟ್ಸಾಪ್ ಅಭಿಪ್ರಾಯಪಟ್ಟಿದೆ. 

ಇನ್ನು ಈ ಹೊಸ ನೀತಿಯನ್ನು ಜಾರಿಗೆ ತರಲು ಪ್ರಾಯೋಗಿಕವಾದಂತಹ ಅಡತಡೆಗಳು ಕೂಡಾ ಇರುವ ಕಾರಣ ಈ ನೀತಿಯನ್ನು ಒಪ್ಪಲು ಸಾಧ್ಯವಿಲ್ಲ ಎಂದು ವಾಟ್ಸಾಪ್ ಹೇಳಿದೆ. ವಾಟ್ಸಾಪ್ ನಲ್ಲಿ ಕಳುಹಿಸಲಾಗುವ ಸಂದೇಶಗಳು End-to-end encrypted ಆಗಿರುವ ಕಾರಣ, ಅದರ ಮೂಲವನ್ನು ಪತ್ತೆಹಚ್ಚಲು ಸಾಧ್ಯವಿಲ್ಲ. ಒಂದು ವೇಳೆ ಸಂದೇಶಗಳ ಮೂಲವನ್ನು ಪತ್ತೆ ಹಚ್ಚಬೇಕಾದರೆ, ಸಂದೇಶ ಕಳುಹಿಸುವವರು ಹಾಗೂ ಅದನ್ನು ಸ್ವೀಕರಿಸುವವರ ಖಾಸಗಿತನಕ್ಕೂ ಧಕ್ಕೆ ಉಂಟಾಗುವುದು ಎಂದು ಹೇಳಿದೆ. 

ಸಾಮಾಜಿಕ ಜಾಲತಾಣಗಳು ಬಂದಾಗುವ ಸಾಧ್ಯತೆ? ಹೊಸ ನಿಯಮ ಪಾಲನೆಯ ಗಡುವು ಇಂದಿಗೆ ಮುಕ್ತಾಯ!

೨೦೧೭ರ ಜಸ್ಟೀಸ್ ಕೆ ಪುಟ್ಟಸ್ವಾಮಿ ಮತ್ತು ಭಾರತ ಸರ್ಕಾರದ ನಡುವಿನ ಪ್ರಕರಣದ ತೀರ್ಪನ್ನು ವಾಟ್ಸಾಪ್ ತನ್ನ ಅರ್ಜಿಲ್ಲಿ ಉಲ್ಲೇಖಿಸಿದೆ. ಈ ಪ್ರಕರಣದ ತೀರ್ಪು ನೀಡುವಾಗ ಸುಪ್ರಿಂಕೋರ್ಟ್ ಖಾಸಗಿತನ ಮೂಲಭೂತ ಹಕ್ಕು ಎಂದು ಪರಿಗಣಿಸಿತ್ತು. ಯಾವುದೇ ಮೂಲವನ್ನು ಪತ್ತೆ ಹಚ್ಚುವುದು ಸಂವಿಧಾನ ಬಾಃಇರವಾದ ಕೆಲಸ ಎಂದು ಹೇಳಿತ್ತು. ಈ ತೀರ್ಪಿನ ಆಧಾರದ ಮೇಲೆ ಈಗ ವಾಟ್ಸಾಪ್ ವಾದ ಮಂಡಿಸಲಿದೆ. 

ಈ ಕುರಿತಾಗಿ ಮಾತನಾಡಿರುವ ವಾಟ್ಸಾಪ್ ವಕ್ತಾರರು, ಪ್ರತಿ ಸಂದೇಶವನ್ನು ಟ್ರೇಸ್ ಮಾಡುವುದು ಎಂದರೆ ಪ್ರತಿ ಸಂದೇಶದ ಬೆರಳಚ್ಚುಗಳನ್ನು ಸಂಗ್ರಹಿಸಿದಂತೆ. ಇದು ವಾಟ್ಸಾಪ್’ನ End-to-end encryption ಅನ್ನು ಒಡೆದು ಹಾಕುವುದಷ್ಟೇ  ಅಲ್ಲದೇ, ಬಳಕೆದಾರರ ಖಾಸಗಿತನಕ್ಕೂ ಧಕ್ಕೆ ತರುತ್ತದೆ, ಎಂದಿದ್ದಾರೆ. 

“ಪ್ರಪಂಚದಾದ್ಯಂತ ಖಾಸಗಿತನಕ್ಕೆ ಒತ್ತು ನಿಡುವ ಸಂಸ್ಥೆಗಳೊಂದಿಗೆ ನಾವು ಭಾಗಿಯಾಗಿದ್ದೇವೆ. ಇದರೊಂದಿಗೆ, ಈಗ ಭಾರತದಲ್ಲಿ ಎದುರಾಗಿರುವ ಸಮಸ್ಯೆಗೆ ಪ್ರಾಯೋಗಿಕವಾದ ಪರಿಹಾರ ಪಡೆಯಲು ಸರ್ಕಾರದೊಂದಿಗೆ ಮಾತುಕತೆ ನಡೆಸುತ್ತೇವೆ. ಇದರೊಂದಿಗೆ ಅಗತ್ಯವಿರುವ ಕಾನೂನಾತ್ಮ ದಾಖಲೆಗಳನ್ನು ಕುಡಾ ಒದಗಿಸುತ್ತೇವೆ,” ಎಂದು ಅವರು ಹೇಳಿದ್ದಾರೆ. 

ಭಾರತದಲ್ಲಿ ಪ್ರಶ್ನೆಯಾಗಿಯೇ ಉಳಿದ ಖಾಸಗಿತನ ವಿಚಾರ: 

ಈ ಹಿಂದೆ ಆಧಾರ್’ಗೆ ಸಂಬಂಧಪಟ್ಟಂತೆ ಖಾಸಗಿತನದ ವಿಚಾರ ಚರ್ಚೆಗೆ ಒಳಪಟ್ಟಿತ್ತು. ಈ ಸಂದರ್ಭದಲ್ಲಿಯೂ ಯಾವ ವಿಚಾರಗಳು ವ್ಯಕ್ತಿಯ ಖಾಸಗಿತನಕ್ಕೆ ಧಕ್ಕೆ ಉಂಟು ಮಾಡುತ್ತವೆ ಎಂಬ ಕುರಿತು ಸ್ಪಷ್ಟವಾದ ನಿರ್ಧಾರವನ್ನು ತಾಳಲು ಸಾಧ್ಯವಾಗಿರಲಿಲ್ಲ. 

ಈಗ ತಂತ್ರಜ್ಞಾನ ಅಭಿವೃದ್ದಿ ಹೊಂದುತ್ತಾ ಹೋದ ಹಾಗೆ ಜನರು ಖಾಸಗಿತನ ಅಪಾಯದಲ್ಲಿದೆ. ಇಂತಹ ಸಂದರ್ಭದಲ್ಲಿ ನಾವು ಇನ್ನೊಬ್ಬರಿಗೆ ಕಳುಹಿಸುವ ಸಂದೇಶಗಳನ್ನು ಸರ್ಕಾರ ಓದಬಹುದು ಎಂಬ ನಿಯಮ ಜಾರಿಗೆ ಬಂದರೆ, ಖಾಸಗಿತನ ಎಲ್ಲಿ ಉಳಿಯಿತು ಎಂಬ ಪ್ರಶ್ನೆ ಉದ್ಭವವಾಗುತ್ತದೆ.

ವಾಟ್ಸಾಪ್ ಸಂದೇಶಗಳ ಮುಲವನ್ನು ಕಂಡುಹಿಡಿಯಲು ಇರುವ ಮಾನದಂಡಗಳೇನು? ಇದರಿಂದ ಸಂದೇಶ ಕಳುಹಿಸಿದ ಹಾಗು ಅದನ್ನು ಸ್ವೀಕರಿಸಿದ ವ್ಯಕ್ತಿಗಳ ಸಂದೇಶಗಳು ಎಷ್ಟರ ಮಟ್ಟಿಗೆ ಬಹಿರಂಗವಾಗುತ್ತದೆ? ಯಾವ ರೀತಿಯ ಸಂದೇಶಗಳನ್ನು ಸರ್ಕಾರ ಪಡೆಯಬಹುದು? ವಾಟ್ಸಾಪ್ ಹೇಳಿದ ಹಾಗೆ, ಒಂದು ಸಂದೇಶದ ಮೂಲವನ್ನು ಹುಡುಕುತ್ತಾ ಹೋದರೆ, ಆ ಸಂದೇಶ ಸ್ವೀಕರಿಸಿದ ಪ್ರತಿಯೊಬ್ಬರ ಖಾಸಗಿತನಕ್ಕೂ ಧಕ್ಕೆ ಉಂಟಾಗುವುದೇ? ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳಬೇಕಿದೆ. 

ಇದಕ್ಕು ಮಿಗಿಲಾಗಿ, ಒಬ್ಬರು ಇನ್ನೊಬ್ಬರಿಗೆ ವೈಯಕ್ತಿಕವಾಗಿ ಕಳುಹಿಸುವ ಸಂದೇಶಗಳು ಖಾಸಗಿ ಅಲ್ಲದೇ ಹೋದರೆ, ಯಾವ ವಿಚಾರಗಳು ಖಾಸಗಿತನದ ಅಡಿಯಲ್ಲಿ ಬರುತ್ತವೆ ಎಂಬುದನ್ನಾದರೂ ಸ್ಪಷ್ಟಪಡಿಸಬೇಕಿದೆ. 

ಸಾಮಾಜಿಕ ಜಾಲತಾಣ ನಿಯಂತ್ರಿಸುವ ಸೋಗಿನಲ್ಲಿ ತಮ್ಮ ಅಜೆಂಡಾವನ್ನು ಪ್ರತಿಪಾದಿಸುವ ಕೆಲಸಕ್ಕೆ ಸರ್ಕಾರ ಕೈ ಹಾಕಿರುವಂತೆ ಗೋಚರಿಸುತ್ತಿದೆ. ಈಗಾಗಲೇ ಸರ್ಕಾರದ ವಿರುದ್ದ ದನಿ ಎತ್ತಿದವರನ್ನು ಕರಾಳ ಯುಎಪಿಎ ಕಾಯ್ದೆಯಡಿಯಲ್ಲಿ ವರ್ಷಾನುಗಟ್ಟಲೆ ಬಂಧಿಸಿ ಜೈಲಿನಲ್ಲಿ ಕೊಳೆಸುವ ಪ್ರಯತ್ನಗಳು ನಡೆಯುತ್ತಲೇ ಇರುವ ಬೆನ್ನಲ್ಲೇ, ಜನರ ವಾಕ್ ಸ್ವಾತಂತ್ರ್ಯವನ್ನು ಕೂಡಾ ಕಸಿದುಕೊಳ್ಳುವ ದುರಾಲೋಚನೆಯೂ ಇದರ ಹಿಂದೆ ಅಡಗಿರಬಹುದು. 

ಸಾಮಾನ್ಯ ಜನರಿಗೆ ತಮ್ಮ ನೊವನ್ನು ಹಾಗೂ ಆಕ್ರೋಶವನ್ನು ಹೊರಹಾಕಲು ಸಾಮಾಜಿಕ ಜಾಲತಾಣಗಳು ವೇದಿಕೆಯನ್ನು ಕಲ್ಪಿಸಿವೆ. ಇದರೊಂದಿಗೆ ಸುಳ್ಳು ಸುದ್ದಿಗಳ ಹಾವಳಿಯೂ ಕೂಡಾ ಸಾಮಾಜಿಕ ಜಾಲತಾಣಗಳನ್ನು ಇನ್ನಿಲ್ಲದಂತೆ ಬಾಧಿಸಿವೆ. ಕರೋನಾ ಸಂಕಷ್ಟದಲ್ಲಿ ವ್ಯಾಕ್ಸಿನ್ ಕುರಿತಾಗಿ ಹುಟ್ಟಿಕೊಮಡಿರುವ ಸುಳ್ಳು ಸುದ್ದಿಗಲ ನಿಯಂತ್ರಣ ನಿಜಕ್ಕೂ ಕಠಿಣ. ಹೀಗೆಂದ ಮಾತ್ರಕ್ಕೆ, ಪ್ರತಿಯೊಬ್ಬ ವ್ಯಕ್ತಿಯ ಖಾಸಗಿತನವನ್ನು ಅಪಾಯಕ್ಕೆ ತಳ್ಳುವಂತಹ ನಿಯಮಗಳು ಜನರ ಬದುಕನ್ನು ಮತ್ತಷ್ಟು ದುಸ್ತರಗೊಳಿಸಲಿವೆ. 

ಸಾಂವಿಧಾನಿಕವಾಗಿ ಭಾರತದ ಪ್ರಜೆಗಳಿಗೆ ಲಭಿಸಿರುವಂತಹ ಖಾಸಗಿತನದ ಹಕ್ಕು, ಈಗ ಅಪಾಯದಲ್ಲಿರುವುದಂತೂ ನಿಜ. ಇದರೊಂದಿಗೆ ಸ್ವತಂತ್ರ ಮಾಧ್ಯಮಗಳನ್ನು ಕೂಡಾ ನಿಯಂತ್ರಿಸಲು ಈ ಹೊಸ ಐಟಿ ಕಾಯ್ದೆಯ ಮೂಲಕ ಪ್ರಯತ್ನಿಸಲಾಗುತ್ತಿದೆ. ಇದರ ವಿರುದ್ದ ಪ್ರತಿಧ್ವನಿಯೂ ಸೇರಿದಂತೆ ಹಲವು ಸ್ವತಂತ್ರ ಮಾಧ್ಯಮಗಳು ನ್ಯಾಯಾಲಯದ ಮೆಟ್ಟಿಲೇರಿವೆ. ಖಾಸಗಿತನದ ಜತೆಗೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕೂಡಾ ಹತ್ತಿಕ್ಕುವ ಸರ್ಕಾರದ ಯೋಜನೆಗೆ ನ್ಯಾಯಾಲಯದ ತೀರ್ಪು ಯಾವ ರಿತಿ ಇರಬಹುದು ಎಂಬುದನ್ನು ಕಾದುನೋಡಬೇಕಿದೆ. 

Previous Post

ಅಲೋಪತಿ ವಿರುದ್ಧ ಅಪಪ್ರಚಾರ: ಬಾಬಾ ರಾಮ್‌ದೇವ್‌ಗೆ ₹ 1000 ಕೋಟಿ ಮಾನಹಾನಿ ನೋಟಿಸ್‌ ನೀಡಿದ IMA

Next Post

ಪಿಎಂ ಕೇರ್ಸ್‌ ನಿಧಿಯಡಿ ದೋಷ ಪೂರಿತ ವೆಂಟಿಲೇಟರ್​ ಪೂರೈಕೆ –ಬಾಂಬೆ ಹೈಕೋರ್ಟ್‌ ಗರಂ

Related Posts

Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
0

ಹಾಸನ ಜಿಲ್ಲೆಯ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆ ರಾಜ್ಯದಲ್ಲಿ ಮೂರು ಸಾವಿರ ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಕೃಷಿ ಫೀಡರ್ ಗಳನ್ನು ಸೌರೀಕರಣಗೊಳಿಸಿ ರೈತರ...

Read moreDetails

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025
Next Post
ಪಿಎಂ ಕೇರ್ಸ್‌ ನಿಧಿಯಡಿ ದೋಷ ಪೂರಿತ ವೆಂಟಿಲೇಟರ್​ ಪೂರೈಕೆ –ಬಾಂಬೆ ಹೈಕೋರ್ಟ್‌ ಗರಂ

ಪಿಎಂ ಕೇರ್ಸ್‌ ನಿಧಿಯಡಿ ದೋಷ ಪೂರಿತ ವೆಂಟಿಲೇಟರ್​ ಪೂರೈಕೆ –ಬಾಂಬೆ ಹೈಕೋರ್ಟ್‌ ಗರಂ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada