ಬೆಂಗಳೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ನೋಂದಣಿ ಮತ್ತು ಕಾರ್ಯವಿಧಾನದ ಬಗ್ಗೆ ಸುಧೀರ್ಘ ಉಪನ್ಯಾಸ ನೀಡಿದ್ದ ಮೋಹನ್ ಭಾಗವತ್ಗೆ ಸಚಿವ ಪ್ರಿಯಾಂಕ್ ಖರ್ಗೆ ಕೆಲವು ಪ್ರಶ್ನೆಗಳನ್ನ ಇಟ್ಟಿದ್ದಾರೆ.
ತನ್ನ ಸ್ವಯಂ ಸೇವಕರು ನೀಡುವ ದೇಣಿಗೆಗಳಿಂದ ಆರ್ ಎಸ್ಎಸ್ ಕಾರ್ಯನಿರ್ವಹಿಸುತ್ತದೆ ಎಂಬ ಮೋಹನ್ ಭಾಗವತ್ ಅವರ ಹೇಳಿಕೆ ಉಲ್ಲೇಖಿಸಿ ಪ್ರಿಯಾಂಕ್ ಖರ್ಗೆ RSS ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ.

ಆರ್ಎಸ್ಎಸ್ ತನ್ನ ಸ್ವಯಂಸೇವಕರು ನೀಡುವ ದೇಣಿಗೆ ಮೂಲಕ ಕಾರ್ಯನಿರ್ವಹಿಸುತ್ತದೆ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಆದರೂ ಈ ಬಗ್ಗೆ ಹಲವಾರು ಕಾನೂನುಬದ್ಧ ಪ್ರಶ್ನೆಗಳು ಉದ್ಭವಿಸುತ್ತವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಹಾಗೆ RSS ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ 11 ಪ್ರಶ್ನೆಗಳನ್ನು ಕೇಳಿದ್ದಾರೆ. ಆ ಪ್ರಶ್ನೆಗಳು ಕೆಳಕಂಡಂತಿವೆ.

1.ಈ ಸ್ವಯಂ ಸೇವಕರು ಯಾರು, ಹೇಗೆ ಗುರುತಿಸಲಾಗುತ್ತದೆ?
2.ನೀಡಲಾದ ದೇಣಿಗೆಗಳ ಪ್ರಮಾಣ ಮತ್ತು ಸ್ವರೂಪ ಏನು?
3.ಈ ಕೊಡುಗೆಗಳನ್ನು ಯಾವ ಕಾರ್ಯವಿಧಾನಗಳು ಅಥವಾ ಯಾವ ಮಾರ್ಗಗಳ ಮೂಲಕ ಸ್ವೀಕರಿಸಲಾಗುತ್ತೆ?
4.ಆರ್ಎಸ್ಎಸ್ ಪಾರದರ್ಶಕವಾಗಿ ಕಾರ್ಯನಿರ್ವಹಿಸುತ್ತಿದ್ದರೆ ತನ್ನದೇ ಆದ ನೋಂದಾಯಿತ ಗುರುತಿನಡಿಯಲ್ಲಿ ಸಂಸ್ಥೆಗೆ ನೇರವಾಗಿ ದೇಣಿಗೆಗಳನ್ನು ಯಾಕೆ ನೀಡಲಾಗುವುದಿಲ್ಲ?
5.ನೋಂದಾಯಿತ ಘಟಕವಾಗದೆ ಆರ್ಎಸ್ಎಸ್ ಸಂಘಟನೆ ತನ್ನ ಹಣಕಾಸು, ಸಾಂಸ್ಥಿಕ ರಚನೆ ಹೇಗೆ ಉಳಿಸಿಕೊಳ್ಳುತ್ತೆ?
6.ಪೂರ್ಣ ಸಮಯದ ಪ್ರಚಾರಕರಿಗೆ ಯಾರು ವೇತನ ನೀಡ್ತಾರೆ ಸಂಸ್ಥೆಯ ದಿನನಿತ್ಯದ ಕಾರ್ಯಾಚರಣೆಯ ವೆಚ್ಚ ಹೇಗೆ ಪೂರೈಸುತ್ತಾರೆ?
7.ದೊಡ್ಡ ಪ್ರಮಾಣದ ಕಾರ್ಯಕ್ರಮಗಳು, ಅಭಿಯಾನಗಳು, ಪ್ರಚಾರ ಚಟುವಟಿಕೆಗಳಿಗೆ ಹೇಗೆ ಹಣಕಾಸು ಒದಗಿಸಲಾಗುತ್ತೆ?
8.ಸ್ವಯಂಸೇವಕರು ‘ಸ್ಥಳೀಯ ಕಚೇರಿಗಳಿಂದ’ ಸಮವಸ್ತ್ರ ಅಥವಾ ವಸ್ತುಗಳನ್ನು ಖರೀದಿಸಿದಾಗ ಈ ಹಣ ಎಲ್ಲಿ ಲೆಕ್ಕಹಾಕಲಾಗುತ್ತೆ?
9.ಸ್ಥಳೀಯ ಕಚೇರಿಗಳು ಮತ್ತು ಇತರ ಮೂಲಸೌಕರ್ಯಗಳನ್ನು ನಿರ್ವಹಿಸುವ ವೆಚ್ಚವನ್ನು ಯಾರು ಭರಿಸುತ್ತಾರೆ?
10.ರಾಷ್ಟ್ರೀಯ ಮಟ್ಟದಲ್ಲಿ ವ್ಯಾಪಕವಾದ ಪ್ರಭಾವ ಮತ್ತು ಉಪಸ್ಥಿತಿಯ ಹೊರತಾಗಿಯೂ ನೋಂದಣಿಯಾಗಿಲ್ಲ ಯಾಕೆ?
11.ಭಾರತದಲ್ಲಿರುವ ಪ್ರತಿಯೊಂದು ಧಾರ್ಮಿಕ ಅಥವಾ ದತ್ತಿ ಸಂಸ್ಥೆಯು ಆರ್ಥಿಕ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕಾದಾಗ ಆರ್ಎಸ್ಎಸ್ಗೆ ಇದೇ ರೀತಿಯ ಹೊಣೆಗಾರಿಕೆ ಕಾರ್ಯವಿಧಾನಗಳ ಅನುಪಸ್ಥಿತಿಯನ್ನ ಸಮರ್ಥಿಸುವ ಅಂಶ ಯಾವುದು.?
ಹೀಗೆ RSS ವಿರುದ್ಧ ಕಿಡಿ ಕಾರಿರುವ ಸಚಿವ ಪ್ರಿಯಾಂಕ್ ಖರ್ಗೆ, 11 ಪ್ರಶ್ನೆಗಳನ್ನು ನೇರವಾಗಿ ಮೋಹನ್ ಭಗವತ್ ರವರಿಗೆ ಕೇಳಿದ್ದಾರೆ .ಪ್ರಿಯಾಂಕ್ ಗಾಂಧಿ ಪ್ರಶ್ನಾವಳಿಗೆ ಬಿಜೆಪಿ ಮತ್ತು ಸಂಘದ ನಾಯಕರು ಯಾವ ಉತ್ತರ ನೀಡುತ್ತಾರೆ ಕಾದು ನೋಡಬೇಕಿದೆ.


