• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಲಖೀಂಪುರ ಖೇರಿಯತ್ತ ಹೊರಟ ಪ್ರಿಯಾಂಕ, ಅಖಿಲೇಶ್ ಯಾದವ್ ಬಂಧನ

Shivakumar A by Shivakumar A
October 4, 2021
in ದೇಶ, ರಾಜಕೀಯ
0
ಲಖೀಂಪುರ ಖೇರಿಯತ್ತ ಹೊರಟ ಪ್ರಿಯಾಂಕ, ಅಖಿಲೇಶ್ ಯಾದವ್ ಬಂಧನ
Share on WhatsAppShare on FacebookShare on Telegram

ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾರವು ದೊಡ್ಡ ಮಟ್ಟದ ರಾಜಕೀಯ ಬೆಳವಣಿಗೆಗಳಿಗೆ ವೇದಿಕೆಯಾಗಿದೆ. ಕಾಂಗ್ರೆಸ್, ಸಮಾಜವಾದಿ ಪಕ್ಷ, ಆಮ್ ಆದ್ಮಿ ಪಕ್ಷದ ನಾಯಕರು ಘಟನೆ ನಡೆದ ಸ್ಥಳಕ್ಕೆ ತಲುಪದಂತೆ ಅವರ ಮನೆಯ ಸುತ್ತ ಪೊಲೀಸ್ ಪಹರೆ ಹಾಕಲಾಗಿದೆ. ಇದರ ನಡುವೆಯೂ, ಪೊಲೀಸರ ಕಣ್ತಪ್ಪಿಸಿ ಲಖೀಂಪುರ ಖೇರಿಯೆಡೆಗೆ ಪ್ರಯಾಣ ಬೆಳೆಸಿದ್ದ ಪ್ರಿಯಾಂಕ ಗಾಂಧಿಯನ್ನು ಪೊಲೀಸರು ಬಂಧಿಸಿದ್ದಾರೆ. 

ADVERTISEMENT

ಭಾನುವಾರ ಕೇಂದ್ರ ಸರ್ಕಾರದ ಗೃಹ ಇಲಾಖೆಯ ರಾಜ್ಯ ಸಚಿವರಾದ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾ ಅವರಿದ್ದ ತಂಡವು ನಾಲ್ವರು ರೈತರನ್ನು ಹತ್ಯೆಗೈದಿತ್ತು. ಇದೇ ವೇಳೆ ರೈತರ ಮೇಲೆ ಗುಂಡಿನ ದಾಳಿ ಕೂಡಾ ನಡೆಸಲಾಗಿತ್ತು, ಎಂದು ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರು ಆರೋಪಿಸಿದ್ದರು. 

ಈ ಘಟನೆ ನಡೆದ ಬೆನ್ನಲ್ಲೇ ರಾಜಕೀಯ ನಾಯಕರು ಲಖೀಂಪುರ ಖೇರಿಯನ್ನು ತಲುಪದಂತೆ ಉತ್ತರ ಪ್ರದೇಶ ಸರ್ಕಾರ ಮುನ್ನಚ್ಚರಿಕೆ ವಹಿಸಿತ್ತು. ಇದರ ಹೊರತಾಗಿಯೂ ಹಲವು ನಾಯಕರು ಘಟನಾ ಸ್ಥಳದತ್ತ ಧಾವಿಸಲು ಆರಂಭಿಸಿದರು. 

ಪ್ರಿಯಾಂಕ ಗಾಂಧಿಯ ಲಕ್ನೋ ನಿವಾಸದ ಸುತ್ತ ಬಿಗಿ ಬಂದೋಬಸ್ತ್ ಇದ್ದರೂ, ಪೊಲೀಸರ ಕಣ್ತಪ್ಪಿಸಿ ಪ್ರಿಯಾಂಕ ಗಾಂಧಿ ಎರಡು ಕಿ.ಮೀ. ದೂರ ನಡೆದೇ ಕ್ರಮಿಸಿದ್ದಾರೆ. ಅಲ್ಲಿಂದ ಕಾರು ಹತ್ತಿ ಲಖೀಂಪುರ ಖೇರಿಯತ್ತ ಪ್ರಯಾಣ ಬೆಳೆಸಿದ್ದಾರೆ. ಕೂಡಲೇ ವಿಷಯವನ್ನು ಅರಿತ ಉತ್ತರ ಪ್ರದೇಶ ಪೊಲೀಸರು, ಪ್ರಿಯಾಂಕ ಗಾಂಧಿ ಸೀತಾಪುರ ಗಡಿ ದಾಟುವ ಮುನ್ನವೇ ಅವರನ್ನು ತಡೆದಿದ್ದಾರೆ. 

ಮೃತರ ಕುಟುಂಬಸ್ಥರನ್ನು ಭೇಟಿಯಾಗಲು ಹೊರಟ ಪ್ರಿಯಾಂಕ ಗಾಂಧೀಯನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆಂದು ಯುವ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಶ್ರೀನಿವಾಸ್ ಬಿ ವಿ ಅವರು ಆರೋಪಿಸಿದ್ದಾರೆ. ಇದೇ ವೇಳೆ ತಮ್ಮ ಬಂಧನಕ್ಕೆ ವಾರಂಟ್ ತೋರಿಸಿ ಎಂದು ಪ್ರಿಯಾಂಕ ಗಾಂಧಿ ಮಹಿಳಾ ಕಾನ್ಸಟೇಬಲ್ ಜತೆ ವಾಗ್ವಾದ ನಡೆಸಿರುವ ವೀಡಿಯೋ ಕೂಡಾ ಬಹಿರಂಗವಾಗಿದೆ. 

जब सत्ता ही असुर बन जाये,
तो 'दुर्गा' को जन्म लेना पड़ता है

Proud of my leader @priyankagandhi pic.twitter.com/MFoaSC0jEB

— Srinivas BV (@srinivasiyc) October 4, 2021

“ನನ್ನ ಮನೆ ಬಿಟ್ಟು ಹೊರಗೆ ಬಂದು ಯಾವುದೇ ಅಪರಾಧವೆಸಗಿಲ್ಲ. ಮೃತರ ಕುಟುಂಬಸ್ಥರನ್ನು ಭೇಟಿಯಾಗಿ ಅವರ ದುಖವನ್ನು ಹಂಚಿಕೊಳ್ಳವೇಕೆಂದಿದ್ದೇನೆ. ಇದರಲ್ಲಿ ಏನು ತಪ್ಪಿದೆ? ಏನಾದರೂ ತಪ್ಪಿದ್ದರೆ, ನಿಮ್ಮ ಬಳಿ ವಾರಂಟ್ ಇರಬೇಕಿತ್ತು. ನನ್ನನ್ನು ನನ್ನ ಕಾರನ್ನು ಯಾವುದೇ ಕಾರಣವಿಲ್ಲದೇ ಏಕೆ ತಡೆಯುತ್ತಿದ್ದೀರಾ?” ಎಂದು ಪ್ರಿಯಾಂಕ ಪ್ರಶ್ನಿಸಿದ್ದಾರೆ. 

ಇದೇ ವೇಳೆ ಪ್ರಿಯಾಂಕ ಗಾಂಧಿ ಜತೆಗಿದ್ದ ಇತರ ಕಾಂಗ್ರೆಸ್ ಸದಸ್ಯರು ಸ್ಥಳದಲ್ಲಿಯೇ ಧರಣಿ ಕೈಗೊಂಡಿದ್ದಾರೆ. ಪ್ರಿಯಾಂಕ ಗಾಂಧಿಯನ್ನು ತಕ್ಷಣವೇ ಬಿಡುಗಡೆಗೊಳಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ. 

ಛತ್ತೀಸ್ ಘಡ ಸಿಎಂ ಭೂಪೇಶ್ ಬಾಘೇಲ್ ಹಾಗೂ ಪಂಜಾಬ್ ಡಿಸಿಎಂ ಸುಖ್ಜಿಂದರ್ ರಾಂಧವಾ ಅವರನ್ನು ಲಕ್ನೋ ಏರ್ಪೋರ್ಟ್’ನಿಂದ ಹೊರ ಬರಲು ಬಿಡದಂತೆ ಉತ್ತರ ಪ್ರದೇಶದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವನೀಶ್ ಅವಸ್ಥಿ ಆದೇಶ ಹೊರಡಿಸಿದ್ದಾರೆ. ಲಖೀಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಿಂದ ತೊಂದರೆಗೆ ಒಳಗಾದವರ ಭೇಟಿಗೆ ಬರುವುದಾಗಿ ಇಬ್ಬರೂ ನಾಯಕರು ಭಾನುವಾರ ಹೇಳಿದ್ದರು. 

ಬಿ ಎಸ್ ಪಿ ಪ್ರಧಾನ ಕಾರ್ಯದರ್ಶಿ ಎಸ್ ಸಿ ಮಿಶ್ರಾ ಅವರು ಕೂಡಾ ಭಾನುವಾರ ರಾತ್ರಿಯೇ ಘಟನಾ ಸ್ಥಳಕ್ಕೆ ಹೊರಡಲು ಅನುವಾಗಿದ್ದರು. ಆದರೆ, ಅವರನ್ನು ಕೂಡಾ ಲಕ್ನೋದಲ್ಲಿಯೇ ತಡೆದು ನಿಲ್ಲಿಸಲಾಗಿದೆ. 

ಅಖಿಲೇಶ್ ಯಾದವ್ ಪ್ರತಿಭಟನೆ, ಬಂಧನ

ಲಖೀಂಪುರ ಖೇರಿಗೆ ಹೋಗಲು ಅನುಮತಿ ನೀಡದೇ ತಮ್ಮ ಮನೆಯ ಸುತ್ತ ಪೊಲೀಸರನ್ನು ನಿಯೋಜಿಸಿದ್ದರ ವಿರುದ್ದ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ತಮ್ಮ ನಿವಾಸದ ಮುಂದೆಯೇ ಪ್ರತಿಭಟನೆ ಆರಂಭಿಸಿದ್ದರು. “ರೈತರ ವಿರುದ್ದ ಸರ್ಕಾರ ನಡೆಸುತ್ತಿರುವ ದೌರ್ಜನ್ಯ ಬ್ರಿಟಿಷರ ದೌರ್ಜನ್ಯಕ್ಕಿಂತಲೂ ಕ್ರೂರವಾಗಿದೆ. ಅಜಯ್ ಮಿಶ್ರಾ ಹಾಗೂ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ರಾಜಿನಾಮೆ ನೀಡಲೇಬೇಕು,” ಎಂದು ಅವರು ಆಗ್ರಹಿಸಿದ್ದರು.

ಇದರೊಂದಿಗೆ, ಮೃತ ರೈತರ ಕುಟುಂಬಗಳಿಗೆ ರೂ. ಎರಡು ಕೋಟಿ ಪರಿಹಾರ ನೀಡಬೇಕು ಹಾಗೂ ಸರ್ಕಾರಿ ನೌಕರಿ ನೀಡಬೇಕು ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದ್ದಾರೆ. 

ಪ್ರತಿಭಟನೆ ಮುಂದುವರೆಯುತ್ತಿದ್ದಂತೆಯೇ ನೂರಾರು ಜನ ಪಕ್ಷದ ಕಾರ್ಯಕರ್ತರು ಅಖಿಲೇಶ್ ಯಾದವ್ ನಿವಾಸದ ಮುಂದೆ ಜಮಾಯಿಸಲು ಆರಂಭಿಸಿದರು. ಪರಿಸ್ಥಿತಿ ಕೈಮೀರಿ ಹೋಗುತ್ತಿದ್ದಂತೆಯೇ ಪೊಲೀಸರು ಅಖಿಲೇಶ್ ಯಾದವ್ ಅವರನ್ನು ಬಂಧಿಸಿದ್ದಾರೆ. 

ಆರೋಪ ನಿರಾಕರಿಸಿದ ಅಜಯ್ ಮಿಶ್ರಾ: 

ಹಿಂಸಾಚಾರದಲ್ಲಿ ತಮ್ಮ ಮಗನ ಪಾಲ್ಗೊಳ್ಳುವಿಕೆಯನ್ನು ಕೇಂದ್ರ ಸಚಿವ ಅಜಯ್ ಮಿಶ್ರಾ ನಿರಾಕರಿಸಿದ್ದಾರೆ.“ನನ್ನ ಮಗ ಅಲ್ಲಿದ್ದಿದ್ದರೆ ಜೀವಂತವಾಗಿ ಹೊರ ಬರುತ್ತಿರಲಿಲ್ಲ. ಘಟನಾಸ್ಥಳದಲ್ಲಿದ್ದ ಕೆಲವು ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತರ ಮೇಲೆ ದಾಳಿ ನಡೆಸಿದ್ದಾರೆ. ಅವರೇ ಕಾರುಗಳಿಗೆ ಬೆಂಕಿ ಹಚ್ಚಿ ದಾಂಧಲೆ ನಡೆಸಿದ್ದಾರೆ,” ಎಂದು ಅಜಯ್ ಮಿಶ್ರಾ ಹೇಳಿದ್ದಾರೆ. 

ಮೊಬೈಲ್ ಸೇವೆ ಬಂದ್: 

ಹಿಂಸಾಚಾರ ನಡೆದ ಸ್ಥಳಗಳಲ್ಲಿ ಸರ್ಕಾರವು ಮೊಬೈಲ್ ಸೇವೆಯನ್ನು ರದ್ದುಗೊಳಿಸಿದೆ. ಇದರೊಂದಿಗೆ CrPCಯ ಸೆಕ್ಷನ್ 144ನ್ನು ಜಾರಿಗೊಳಿಸಿದೆ. ನಾಲ್ವರಿಂಗಿತ ಹೆಚ್ಚಿನ ಜನರು ಒಂದೆಡೆ ಸೇರುವ ಹಾಗಿಲ್ಲ ಎಂದು ಷರತ್ತು ವಿಧಿಸಿದೆ. 

Tags: BJPCongress PartyCovid 19ಅಖಿಲೇಶ್ ಯಾದವ್ಉತ್ತರ ಪ್ರದೇಶಕೋವಿಡ್-19ನರೇಂದ್ರ ಮೋದಿಪ್ರಿಯಾಂಕಬಿಜೆಪಿಲಖೀಂಪುರ ಖೇರಿ
Previous Post

ರೈತರ ಮೇಲೆ ಹಿಂಸಾಚಾರ:ನೈತಿಕ ಹೊಣೆ ಹೊತ್ತು ಉ.ಪ್ರ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಜಿನಾಮೆ ನೀಡಲಿ-ಡಿಕೆಶಿ

Next Post

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸತ್ತಿದೆ; ಸರ್ವಾಧಿಕಾರಿ, ಹಿಟ್ಲರ್ ಮನಸ್ಥಿತಿಯ ಸರ್ಕಾರದ ಕ್ರೌರ್ಯ ಮಿತಿ ಮೀರಿದೆ – ಡಿಕೆಶಿ ಆಕ್ರೋಶ

Related Posts

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ
Serial

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

by ಪ್ರತಿಧ್ವನಿ
October 13, 2025
0

ಸಾಮಾಜಿಕ  ಅನ್ಯಾಯ ದೌರ್ಜನ್ಯ ತಾರತಮ್ಯಗಳಿಗೆ ಸ್ಪಂದಿಸುವುದು ನಾಗರಿಕತೆಯ ಲಕ್ಷಣ ನಾ ದಿವಾಕರ  ಜಗತ್ತಿನ ಇತಿಹಾಸದಲ್ಲಿ ಸಂಭವಿಸಿರುವ ಬಹುತೇಕ ವಿಪ್ಲವಗಳಲ್ಲಿ ಪ್ರಧಾನ ಪಾತ್ರ ವಹಿಸಿರುವುದು ಆಯಾ ಸಮಾಜಗಳಲ್ಲಿ ಕ್ರಿಯಾಶೀಲವಾಗಿ,...

Read moreDetails

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025
Next Post
ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸತ್ತಿದೆ; ಸರ್ವಾಧಿಕಾರಿ, ಹಿಟ್ಲರ್ ಮನಸ್ಥಿತಿಯ ಸರ್ಕಾರದ ಕ್ರೌರ್ಯ ಮಿತಿ ಮೀರಿದೆ – ಡಿಕೆಶಿ ಆಕ್ರೋಶ

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಸತ್ತಿದೆ; ಸರ್ವಾಧಿಕಾರಿ, ಹಿಟ್ಲರ್ ಮನಸ್ಥಿತಿಯ ಸರ್ಕಾರದ ಕ್ರೌರ್ಯ ಮಿತಿ ಮೀರಿದೆ - ಡಿಕೆಶಿ ಆಕ್ರೋಶ

Please login to join discussion

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

ನಾಗರಿಕ ಸಮಾಜ ಮತ್ತು ಸಾಮಾಜಿಕ ಪ್ರಜ್ಞೆ

October 13, 2025

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada