ಬಿಟ್ ಕಾಯಿನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪಗಳು ನಡೆಯುತ್ತಲೇ ಇವೆ. ಈ ಕುರಿತು ಪೇಪರ್ ಟೈಗರ್ ಎಂಬ ಪ್ರಿಯಾಂಕ್ ಖರ್ಗೆ ಮಾತಿಗೆ ತಿರುಗೇಟು ನೀಡಿಎಉವ ಪ್ರತಾಪ್ ಸಿಂಹ, ನಾನು ಪತ್ರಿಕೋದ್ಯಮದಿಂದ ಬಂದವನು, ನನ್ನನ್ನು ಪೇಪರ್ ಟೈಗರ್ ಟೀಕಿಸಿರುವ ಎಂದರೆ ಬೇಜಾರಿಲ್ಲ. ಆದರೆ ಪ್ರಿಯಾಕ ಖರ್ಗೆ ರಾಜೀವ್ ಗಾಂಧಿ ಅವರ ಹೆಣ್ಣು ಮಗಳ ಹೆಸರಿಟ್ಟುಕೊಂಡಿದ್ದಾರೆ ಎಂದಯ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ, ಪ್ರಿಯಾಂಕ್ ಖರ್ಗೆ ಹೆಸರಿನಲ್ಲಿ ಗಂಡೋ-ಹೆಣ್ಣೋ ಎಂಬ ಬಗ್ಗೆ ಸ್ಪಷ್ಟತೆಯಿಲ್ಲ,ಪ್ರಿಯಾಂಕ್ ಖರ್ಗೆಗೆ ಅವರ ಹೆಸರಿನಲ್ಲೇ ಸ್ವಂತಿಕೆ ಇಲ್ಲ. ಸ್ವಂತಿಕೆ ಇಲ್ಲದ ಮರಿ ಖರ್ಗೆ ಗೆಲುವಿಗಾಗಿ ಮಲ್ಲಿಕಾರ್ಜುನ ಖರ್ಗೆ ಅವರು ಸೋಲಿಲ್ಲದ ಸರದಾರ ಎಂಬ ಪಟ್ಟ ಕಳೆದುಕೊಂಡರು. ಮರಿ ಖರ್ಗೆ ಬಾಯಲ್ಲಿ ಭ್ರಷ್ಟಾಚಾರದ ಮಾತು ಕೇಳಿ ಬರ್ತಿದೆ. ಇದು ಭೂತದ ಬಾಯಲ್ಲಿ ಭಗವದ್ಗೀತೆ ಕೇಳಿದಂತೆ ಆಗುತ್ತಿದೆ ಎಂದು ಟೀಕಿಸಿದರು.
![](https://pratidhvani.com/wp-content/uploads/2021/11/FotoJet-48-1-1024x576.jpg)
ಕಾಂಗ್ರೆಸ್ ಪಕ್ಷ ಏನೆಲ್ಲಾ ಅಪಪ್ರಚಾರ ಮಾಡಿದರೂ ಮುಖ್ಯಮಂತ್ರಿ ಬದಲಾವಣೆ ಆಗುವುದಿಲ್ಲ. 2023ರ ಚುನಾವಣೆಯನ್ನು ನಾವು ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲೇ ಎದುರಿಸುತ್ತೇವೆ. ಈ ಮಾತನ್ನು ಕೇಂದ್ರ ಸಚಿವ ಅಮಿತ್ ಷಾ ಅವರು ಸಹ ಹೇಳಿದ್ದಾರೆ. ನಾವು ಬಸವರಾಜ ಬೊಮ್ಮಾಯಿಯವರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ನೀವು ಯಾರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೀರಾ ಹೇಳಿ ಕಾಂಗ್ರೆಸ್ಸಿಗರೆ? ಸಿದ್ದರಾಮಯ್ಯ ನೇತೃತ್ವದಲ್ಲಿ ಎದುರಿಸುತ್ತೀರೋ ಅಥವಾ ಡಿ ಕೆ ಶಿವಕುಮಾರ್ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೀರೋ ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದರು.