• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಟ್ಟಿ ಚಿನ್ನದ ಗಣಿಯಲ್ಲಿ ಉತ್ಪಾದನೆ ಕುಸಿತ: ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ರೂ. ನಷ್ಟ?

ಪ್ರತಿಧ್ವನಿ by ಪ್ರತಿಧ್ವನಿ
January 30, 2026
in Top Story, ಕರ್ನಾಟಕ, ರಾಜಕೀಯ
0
ಹಟ್ಟಿ ಚಿನ್ನದ ಗಣಿಯಲ್ಲಿ ಉತ್ಪಾದನೆ ಕುಸಿತ: ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ರೂ. ನಷ್ಟ?
Share on WhatsAppShare on FacebookShare on Telegram

ಭಾರತದ ಏಕೈಕ ಸಕ್ರಿಯ ಹಾಗೂ ಪ್ರಮುಖ ಚಿನ್ನದ ಗಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ರಾಜ್ಯ ಸರ್ಕಾರ ಸ್ವಾಮ್ಯದ ‘ಹಟ್ಟಿ ಚಿನ್ನದ ಗಣಿ’ (HGML) ಇದೀಗ ಗಂಭೀರ ಸಂಕಷ್ಟದ ಸುಳಿಯಲ್ಲಿ ಸಿಲುಕಿದೆ. ಕಳೆದ ವರ್ಷ ನಿಗದಿತ ಗುರಿಗಿಂತಲೂ ಅಧಿಕ ಚಿನ್ನ ಉತ್ಪಾದಿಸಿ ಗಮನ ಸೆಳೆದಿದ್ದ ಈ ಸಂಸ್ಥೆ, 2025ರ ಡಿಸೆಂಬರ್ ಅಂತ್ಯದ ವೇಳೆಗೆ ತನ್ನ ಗುರಿ ಸಾಧಿಸಲು ವಿಫಲವಾಗಿದೆ. ಬರೋಬ್ಬರಿ 285 ಕೆ.ಜಿ. ಚಿನ್ನದ ಉತ್ಪಾದನಾ ಕೊರತೆ ಕಂಡುಬಂದಿದ್ದು, ಇದನ್ನು ಗಣಿ ಇತಿಹಾಸದ ಪ್ರಮುಖ ಹಿನ್ನಡೆ ಎಂದು ವಿಶ್ಲೇಷಿಸಲಾಗುತ್ತಿದೆ.

ADVERTISEMENT
Session: ಯತ್ನಾಳ್ ಸರ್ ನಿಮ್ದು ಯಾವ ಪಕ್ಷ ಅಂತ ಕಾಲೆಳೆದ ಗೋಪಾಲಕೃಷ್ಣಗೆ ಮಸ್ತ್ ಕೌಂಟರ್  #pratidhvani

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಈ ಸಂದರ್ಭದಲ್ಲಿ ಉತ್ಪಾದನೆ ಕುಸಿತ ಕಂಡಿರುವುದು ಕೇವಲ ಕಂಪನಿಗೆ ಮಾತ್ರವಲ್ಲದೆ, ರಾಜ್ಯದ ಬೊಕ್ಕಸಕ್ಕೂ ಪರೋಕ್ಷವಾಗಿ ಹೊಡೆತ ನೀಡುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.


ಗುರಿಗಿಂತ ಬಹಳ ಕಡಿಮೆ ಉತ್ಪಾದನೆ

ರಾಜ್ಯ ಸರ್ಕಾರದ ಸ್ವಾಮ್ಯದ ಹಟ್ಟಿ ಚಿನ್ನದ ಗಣಿ ಕಂಪನಿಯು 2025ರ ಡಿಸೆಂಬರ್ ಅಂತ್ಯದ ವೇಳೆಗೆ 1,187 ಕೆ.ಜಿ. ಚಿನ್ನ ಉತ್ಪಾದನೆ ಮಾಡುವ ಗುರಿ ಹೊಂದಿತ್ತು. ಆದರೆ ವಾಸ್ತವದಲ್ಲಿ ಕೇವಲ 900–901 ಕೆ.ಜಿ. ಮಾತ್ರ ಚಿನ್ನ ಉತ್ಪಾದನೆಯಾಗಿದೆ. ಇದರೊಂದಿಗೆ ಗುರಿಗಿಂತ ಸುಮಾರು 285 ಕೆ.ಜಿ. ಚಿನ್ನದ ಕೊರತೆ ಉಂಟಾಗಿದೆ ಎಂದು ಕಂಪನಿಯ ಆಂತರಿಕ ದಾಖಲೆಗಳು ಸ್ಪಷ್ಟಪಡಿಸುತ್ತವೆ.

ಅದಿರು ತೆಗೆಯುವಲ್ಲಿಯೂ ಹಿನ್ನಡೆ

ಚಿನ್ನ ಉತ್ಪಾದನೆ ಕುಸಿತಕ್ಕೆ ಅಯಸ್ಕ ಉತ್ಪಾದನೆಯಲ್ಲಿನ ಭಾರೀ ಹಿನ್ನಡೆಯೇ ಪ್ರಮುಖ ಕಾರಣವಾಗಿದೆ. 2025–26ನೇ ಸಾಲಿನ ಮೊದಲ 9 ತಿಂಗಳ ಅವಧಿಯಲ್ಲಿ 5 ಲಕ್ಷ 70 ಸಾವಿರ ಟನ್ ಅದಿರು ತೆಗೆಯುವ ಗುರಿ ಇಟ್ಟಿದ್ದರೆ, ವಾಸ್ತವದಲ್ಲಿ 4,39,434 ಟನ್ ಮಾತ್ರ ಅದಿರನ್ನು (ಅಯಸ್ಕ) ಹೊರತೆಗೆಯಲಾಗಿದೆ. ಇದರಿಂದ 1,30,566 ಟನ್ ಅದಿರು ಕೊರತೆ ಉಂಟಾಗಿದೆ.

Police : 4 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ  #pratidhvani

ಗಣಿಯ ಆಧುನೀಕರಣದ ಭಾಗವಾಗಿ ಆರಂಭಿಸಲಾದ ‘ನ್ಯೂ ಸರ್ಕ್ಯುಲರ್ ಶಾಫ್ಟ್’ ಮೂಲಕ ದಿನಕ್ಕೆ 3,000 ಟನ್ ಅಯಸ್ಕ ಸಂಸ್ಕರಣೆ ಮಾಡಿ, ವರ್ಷಕ್ಕೆ 3 ಟನ್ ಚಿನ್ನ ಉತ್ಪಾದನೆ ಮಾಡುವ ಗುರಿ ಇಡಲಾಗಿತ್ತು. ಆದರೆ ಈ ಮಹತ್ವಾಕಾಂಕ್ಷಿ ಯೋಜನೆಯಿಂದಲೂ ನಿರೀಕ್ಷಿತ ಮಟ್ಟದ ಉತ್ಪಾದನೆ ಸಾಧ್ಯವಾಗಿಲ್ಲ. ತಾಂತ್ರಿಕ ದೋಷಗಳು, ಸಮರ್ಪಕ ಯೋಜನೆಯ ಕೊರತೆ ಹಾಗೂ ಆಡಳಿತಾತ್ಮಕ ವೈಫಲ್ಯವೇ ಇದಕ್ಕೆ ಕಾರಣ ಎಂಬ ಆರೋಪಗಳು ಕೇಳಿಬರುತ್ತಿವೆ.

ಕುಸಿತಕ್ಕೆ ಕಾರಣವೇನು?

ಅಯಸ್ಕದ ಲಭ್ಯತೆ ಮತ್ತು ಗುಣಮಟ್ಟದಲ್ಲಿ ವ್ಯತ್ಯಾಸ, ನ್ಯೂ ಸರ್ಕ್ಯುಲರ್ ಶಾಫ್ಟ್ ಯೋಜನೆಯಿಂದ ನಿರೀಕ್ಷಿತ ಫಲಿತಾಂಶ ಲಭ್ಯವಾಗದಿರುವುದು, ತಾಂತ್ರಿಕ ಮತ್ತು ಆಡಳಿತಾತ್ಮಕ ನಿರ್ವಹಣೆಯ ಕೊರತೆ ಹಾಗೂ ಸಮರ್ಪಕ ಮುಂಚಿತ ಯೋಜನೆ ಹಾಗೂ ಮೇಲ್ವಿಚಾರಣೆಯ ಅಭಾವ ಚಿನ್ನದ ಉತ್ಪಾದನೆ ಕೊರತೆಗೆ ಕಾರಣ ಎಂದು ವಿಶ್ಲೇಷಿಸಲಾಗಿದೆ. ಅದಾಗ್ಯೂ, ಈ ಕೊರತೆಗೆ ಅಧಿಕೃತ ಕಾರಣ ಏನು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿಲ್ಲ.

ರಾಜ್ಯ ಮತ್ತು ದೇಶದ ಮೇಲೆ ಪರಿಣಾಮ

ಚಿನ್ನದ ಬೆಲೆ ಏರಿಕೆಯ ನಡುವೆಯೂ ಉತ್ಪಾದನೆ ಕುಸಿತಗೊಂಡಿರುವುದು ರಾಜ್ಯ ಸರ್ಕಾರದ ಆದಾಯದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಹಟ್ಟಿ ಚಿನ್ನದ ಗಣಿ ರಾಜ್ಯದ ಪ್ರಮುಖ ಸಾರ್ವಜನಿಕ ವಲಯದ ಸಂಸ್ಥೆಯಾಗಿರುವುದರಿಂದ, ಇದರ ಲಾಭಾಂಶ ರಾಜ್ಯ ಬೊಕ್ಕಸಕ್ಕೆ ಮಹತ್ವದ ಆದಾಯ ಮೂಲವಾಗಿದೆ. ಉತ್ಪಾದನೆ ನಿರಂತರವಾಗಿ ಇಳಿಕೆಯಾಗಿದರೆ, ರಾಜ್ಯದ ಹಣಕಾಸು ಸ್ಥಿತಿಗೂ ಹೊಡೆತ ಬೀಳುವ ಆತಂಕವಿದೆ.

Karnataka Legislative Council Session : ಪರಿಷತ್ ನಲ್ಲಿ  ನಿಲ್ಲದ ವಾಕ್ಸಮರ #pratidhvani #siddaramaiah

ಗಣಿ ಕಾರ್ಮಿಕರ ಭವಿಷ್ಯ ಅತಂತ್ರ?

ಇದಲ್ಲದೆ, ಈ ಗಣಿಯ ಮೇಲೆ ಅವಲಂಬಿತ ಸಾವಿರಾರು ಕಾರ್ಮಿಕರು ಹಾಗೂ ಕುಟುಂಬಗಳ ಜೀವನೋಪಾಯಕ್ಕೂ ಅಪಾಯ ಎದುರಾಗುವ ಸಾಧ್ಯತೆ ಇದೆ. ಚಿನ್ನದ ಗಣಿಯ ಮೇಲೆ ಅವಲಂಬಿತ ಸಾವಿರಾರು ಕುಟುಂಬಗಳ ಮೇಲೆ ಉತ್ಪಾದನಾ ಕುಸಿತದ ಪರಿಣಾಮ ಬೀರಿದೆ. ಕಾರ್ಮಿಕರ ಬೋನಸ್, ಪ್ರೋತ್ಸಾಹಧನ ಹಾಗೂ ವಿವಿಧ ಕಲ್ಯಾಣ ಯೋಜನೆಗಳು ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಈ ಕುರಿತು ಗಣಿಯ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದರೂ ಸ್ಪಷ್ಟ ಪ್ರತಿಕ್ರಿಯೆ ಲಭ್ಯವಾಗಿಲ್ಲ.

Tags: GoldGold Pricehatti gold mineHGMLKarnatakaPoliticsState Government
Previous Post

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ಪೆಕ್ಟರ್

Next Post

ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಆತ್ಮಹತ್ಯೆ

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
Next Post
ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಆತ್ಮಹತ್ಯೆ

ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಆತ್ಮಹತ್ಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada