• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಟ್ಟಿ ಚಿನ್ನದ ಗಣಿಯಲ್ಲಿ ಉತ್ಪಾದನೆ ಕುಸಿತ: ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ರೂ. ನಷ್ಟ?

ಪ್ರತಿಧ್ವನಿ by ಪ್ರತಿಧ್ವನಿ
January 30, 2026
in Top Story, ಕರ್ನಾಟಕ, ರಾಜಕೀಯ
0
ಹಟ್ಟಿ ಚಿನ್ನದ ಗಣಿಯಲ್ಲಿ ಉತ್ಪಾದನೆ ಕುಸಿತ: ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ರೂ. ನಷ್ಟ?
Share on WhatsAppShare on FacebookShare on Telegram

ಭಾರತದ ಏಕೈಕ ಸಕ್ರಿಯ ಹಾಗೂ ಪ್ರಮುಖ ಚಿನ್ನದ ಗಣಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ರಾಜ್ಯ ಸರ್ಕಾರ ಸ್ವಾಮ್ಯದ ‘ಹಟ್ಟಿ ಚಿನ್ನದ ಗಣಿ’ (HGML) ಇದೀಗ ಗಂಭೀರ ಸಂಕಷ್ಟದ ಸುಳಿಯಲ್ಲಿ ಸಿಲುಕಿದೆ. ಕಳೆದ ವರ್ಷ ನಿಗದಿತ ಗುರಿಗಿಂತಲೂ ಅಧಿಕ ಚಿನ್ನ ಉತ್ಪಾದಿಸಿ ಗಮನ ಸೆಳೆದಿದ್ದ ಈ ಸಂಸ್ಥೆ, 2025ರ ಡಿಸೆಂಬರ್ ಅಂತ್ಯದ ವೇಳೆಗೆ ತನ್ನ ಗುರಿ ಸಾಧಿಸಲು ವಿಫಲವಾಗಿದೆ. ಬರೋಬ್ಬರಿ 285 ಕೆ.ಜಿ. ಚಿನ್ನದ ಉತ್ಪಾದನಾ ಕೊರತೆ ಕಂಡುಬಂದಿದ್ದು, ಇದನ್ನು ಗಣಿ ಇತಿಹಾಸದ ಪ್ರಮುಖ ಹಿನ್ನಡೆ ಎಂದು ವಿಶ್ಲೇಷಿಸಲಾಗುತ್ತಿದೆ.

ADVERTISEMENT
Session: ಯತ್ನಾಳ್ ಸರ್ ನಿಮ್ದು ಯಾವ ಪಕ್ಷ ಅಂತ ಕಾಲೆಳೆದ ಗೋಪಾಲಕೃಷ್ಣಗೆ ಮಸ್ತ್ ಕೌಂಟರ್  #pratidhvani

ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಗಗನಕ್ಕೇರುತ್ತಿರುವ ಈ ಸಂದರ್ಭದಲ್ಲಿ ಉತ್ಪಾದನೆ ಕುಸಿತ ಕಂಡಿರುವುದು ಕೇವಲ ಕಂಪನಿಗೆ ಮಾತ್ರವಲ್ಲದೆ, ರಾಜ್ಯದ ಬೊಕ್ಕಸಕ್ಕೂ ಪರೋಕ್ಷವಾಗಿ ಹೊಡೆತ ನೀಡುವ ಸಾಧ್ಯತೆ ಇದೆ ಎಂಬ ಆತಂಕ ವ್ಯಕ್ತವಾಗಿದೆ.


ಗುರಿಗಿಂತ ಬಹಳ ಕಡಿಮೆ ಉತ್ಪಾದನೆ

ರಾಜ್ಯ ಸರ್ಕಾರದ ಸ್ವಾಮ್ಯದ ಹಟ್ಟಿ ಚಿನ್ನದ ಗಣಿ ಕಂಪನಿಯು 2025ರ ಡಿಸೆಂಬರ್ ಅಂತ್ಯದ ವೇಳೆಗೆ 1,187 ಕೆ.ಜಿ. ಚಿನ್ನ ಉತ್ಪಾದನೆ ಮಾಡುವ ಗುರಿ ಹೊಂದಿತ್ತು. ಆದರೆ ವಾಸ್ತವದಲ್ಲಿ ಕೇವಲ 900–901 ಕೆ.ಜಿ. ಮಾತ್ರ ಚಿನ್ನ ಉತ್ಪಾದನೆಯಾಗಿದೆ. ಇದರೊಂದಿಗೆ ಗುರಿಗಿಂತ ಸುಮಾರು 285 ಕೆ.ಜಿ. ಚಿನ್ನದ ಕೊರತೆ ಉಂಟಾಗಿದೆ ಎಂದು ಕಂಪನಿಯ ಆಂತರಿಕ ದಾಖಲೆಗಳು ಸ್ಪಷ್ಟಪಡಿಸುತ್ತವೆ.

ಅದಿರು ತೆಗೆಯುವಲ್ಲಿಯೂ ಹಿನ್ನಡೆ

ಚಿನ್ನ ಉತ್ಪಾದನೆ ಕುಸಿತಕ್ಕೆ ಅಯಸ್ಕ ಉತ್ಪಾದನೆಯಲ್ಲಿನ ಭಾರೀ ಹಿನ್ನಡೆಯೇ ಪ್ರಮುಖ ಕಾರಣವಾಗಿದೆ. 2025–26ನೇ ಸಾಲಿನ ಮೊದಲ 9 ತಿಂಗಳ ಅವಧಿಯಲ್ಲಿ 5 ಲಕ್ಷ 70 ಸಾವಿರ ಟನ್ ಅದಿರು ತೆಗೆಯುವ ಗುರಿ ಇಟ್ಟಿದ್ದರೆ, ವಾಸ್ತವದಲ್ಲಿ 4,39,434 ಟನ್ ಮಾತ್ರ ಅದಿರನ್ನು (ಅಯಸ್ಕ) ಹೊರತೆಗೆಯಲಾಗಿದೆ. ಇದರಿಂದ 1,30,566 ಟನ್ ಅದಿರು ಕೊರತೆ ಉಂಟಾಗಿದೆ.

Police : 4 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತ ಕೈಗೆ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ  #pratidhvani

ಗಣಿಯ ಆಧುನೀಕರಣದ ಭಾಗವಾಗಿ ಆರಂಭಿಸಲಾದ ‘ನ್ಯೂ ಸರ್ಕ್ಯುಲರ್ ಶಾಫ್ಟ್’ ಮೂಲಕ ದಿನಕ್ಕೆ 3,000 ಟನ್ ಅಯಸ್ಕ ಸಂಸ್ಕರಣೆ ಮಾಡಿ, ವರ್ಷಕ್ಕೆ 3 ಟನ್ ಚಿನ್ನ ಉತ್ಪಾದನೆ ಮಾಡುವ ಗುರಿ ಇಡಲಾಗಿತ್ತು. ಆದರೆ ಈ ಮಹತ್ವಾಕಾಂಕ್ಷಿ ಯೋಜನೆಯಿಂದಲೂ ನಿರೀಕ್ಷಿತ ಮಟ್ಟದ ಉತ್ಪಾದನೆ ಸಾಧ್ಯವಾಗಿಲ್ಲ. ತಾಂತ್ರಿಕ ದೋಷಗಳು, ಸಮರ್ಪಕ ಯೋಜನೆಯ ಕೊರತೆ ಹಾಗೂ ಆಡಳಿತಾತ್ಮಕ ವೈಫಲ್ಯವೇ ಇದಕ್ಕೆ ಕಾರಣ ಎಂಬ ಆರೋಪಗಳು ಕೇಳಿಬರುತ್ತಿವೆ.

ಕುಸಿತಕ್ಕೆ ಕಾರಣವೇನು?

ಅಯಸ್ಕದ ಲಭ್ಯತೆ ಮತ್ತು ಗುಣಮಟ್ಟದಲ್ಲಿ ವ್ಯತ್ಯಾಸ, ನ್ಯೂ ಸರ್ಕ್ಯುಲರ್ ಶಾಫ್ಟ್ ಯೋಜನೆಯಿಂದ ನಿರೀಕ್ಷಿತ ಫಲಿತಾಂಶ ಲಭ್ಯವಾಗದಿರುವುದು, ತಾಂತ್ರಿಕ ಮತ್ತು ಆಡಳಿತಾತ್ಮಕ ನಿರ್ವಹಣೆಯ ಕೊರತೆ ಹಾಗೂ ಸಮರ್ಪಕ ಮುಂಚಿತ ಯೋಜನೆ ಹಾಗೂ ಮೇಲ್ವಿಚಾರಣೆಯ ಅಭಾವ ಚಿನ್ನದ ಉತ್ಪಾದನೆ ಕೊರತೆಗೆ ಕಾರಣ ಎಂದು ವಿಶ್ಲೇಷಿಸಲಾಗಿದೆ. ಅದಾಗ್ಯೂ, ಈ ಕೊರತೆಗೆ ಅಧಿಕೃತ ಕಾರಣ ಏನು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಅಧಿಕೃತ ಮಾಹಿತಿ ನೀಡಿಲ್ಲ.

ರಾಜ್ಯ ಮತ್ತು ದೇಶದ ಮೇಲೆ ಪರಿಣಾಮ

ಚಿನ್ನದ ಬೆಲೆ ಏರಿಕೆಯ ನಡುವೆಯೂ ಉತ್ಪಾದನೆ ಕುಸಿತಗೊಂಡಿರುವುದು ರಾಜ್ಯ ಸರ್ಕಾರದ ಆದಾಯದ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಹಟ್ಟಿ ಚಿನ್ನದ ಗಣಿ ರಾಜ್ಯದ ಪ್ರಮುಖ ಸಾರ್ವಜನಿಕ ವಲಯದ ಸಂಸ್ಥೆಯಾಗಿರುವುದರಿಂದ, ಇದರ ಲಾಭಾಂಶ ರಾಜ್ಯ ಬೊಕ್ಕಸಕ್ಕೆ ಮಹತ್ವದ ಆದಾಯ ಮೂಲವಾಗಿದೆ. ಉತ್ಪಾದನೆ ನಿರಂತರವಾಗಿ ಇಳಿಕೆಯಾಗಿದರೆ, ರಾಜ್ಯದ ಹಣಕಾಸು ಸ್ಥಿತಿಗೂ ಹೊಡೆತ ಬೀಳುವ ಆತಂಕವಿದೆ.

Karnataka Legislative Council Session : ಪರಿಷತ್ ನಲ್ಲಿ  ನಿಲ್ಲದ ವಾಕ್ಸಮರ #pratidhvani #siddaramaiah

ಗಣಿ ಕಾರ್ಮಿಕರ ಭವಿಷ್ಯ ಅತಂತ್ರ?

ಇದಲ್ಲದೆ, ಈ ಗಣಿಯ ಮೇಲೆ ಅವಲಂಬಿತ ಸಾವಿರಾರು ಕಾರ್ಮಿಕರು ಹಾಗೂ ಕುಟುಂಬಗಳ ಜೀವನೋಪಾಯಕ್ಕೂ ಅಪಾಯ ಎದುರಾಗುವ ಸಾಧ್ಯತೆ ಇದೆ. ಚಿನ್ನದ ಗಣಿಯ ಮೇಲೆ ಅವಲಂಬಿತ ಸಾವಿರಾರು ಕುಟುಂಬಗಳ ಮೇಲೆ ಉತ್ಪಾದನಾ ಕುಸಿತದ ಪರಿಣಾಮ ಬೀರಿದೆ. ಕಾರ್ಮಿಕರ ಬೋನಸ್, ಪ್ರೋತ್ಸಾಹಧನ ಹಾಗೂ ವಿವಿಧ ಕಲ್ಯಾಣ ಯೋಜನೆಗಳು ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಈ ಕುರಿತು ಗಣಿಯ ಉನ್ನತ ಅಧಿಕಾರಿಗಳನ್ನು ಸಂಪರ್ಕಿಸಿದರೂ ಸ್ಪಷ್ಟ ಪ್ರತಿಕ್ರಿಯೆ ಲಭ್ಯವಾಗಿಲ್ಲ.

Tags: GoldGold Pricehatti gold mineHGMLKarnatakaPoliticsState Government
Previous Post

ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಇನ್ಸ್ಪೆಕ್ಟರ್

Next Post

ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಆತ್ಮಹತ್ಯೆ

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಸಿಎಂ ಬದಲಾವಣೆ ಸದ್ಯಕ್ಕಿಲ್ಲ: ಸುರ್ಜೇವಾಲಾ ಸ್ಪಷ್ಟನೆ!

May 27, 2026
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
Next Post
ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಆತ್ಮಹತ್ಯೆ

ಗುಂಡು ಹಾರಿಸಿಕೊಂಡು ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಆತ್ಮಹತ್ಯೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada