• Home
  • About Us
  • ಕರ್ನಾಟಕ
Wednesday, November 19, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್

ಪ್ರತಿಧ್ವನಿ by ಪ್ರತಿಧ್ವನಿ
August 20, 2025
in Top Story, ಕರ್ನಾಟಕ, ರಾಜಕೀಯ
0
ವೃತ್ತಿಪರತೆ-ಕರ್ತವ್ಯ ನಿಷ್ಠೆ ನನ್ನನ್ನು ಕೈ ಹಿಡಿದು ನಡೆಸಿವೆ: ಕೆ.ವಿ.ಪ್ರಭಾಕರ್
Share on WhatsAppShare on FacebookShare on Telegram

ಈ ಸನ್ಮಾನ ಸಮಾಜವಾದದ ಆಲದ ಮರ ಸಿದ್ದರಾಮಯ್ಯ ಅವರಿಗೆ ಅರ್ಪಣೆ: ಧನ್ಯತೆ ಅರ್ಪಿಸಿದ ಕೆವಿಪಿ

ADVERTISEMENT

ನನ್ನ ಪಾಲಿಗೆ ಒದಗಿ ಬಂದದ್ದನ್ನೆಲ್ಲಾ ಒಪ್ಪಿಕೊಳ್ಳುತ್ತಾ ಹೋದೆ: ಕೆವಿಪಿ

ಪತ್ರಕರ್ತ ಸಮುದಾಯದ ನೆರಳಲ್ಲೇ ಅರಳಿದವನು ನಾನು: ಕೆವಿಪಿ

ಬೆಂಗಳೂರು ಆ 19: ಪತ್ರಕರ್ತನಾಗಿ ಸಮಾಜವನ್ನು ಬಿಡಿ-ಬಿಡಿಯಾಗಿ ನೋಡುತ್ತಿದ್ದ ನಾನು ಸಮಾಜವಾದದ ಆಲದ ಮರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗರಡಿಯಲ್ಲಿ ಇಡಿ ಇಡಿಯಾಗಿ ಗ್ರಹಿಸುವುದನ್ನು ಕಲಿತೆ. ಹೀಗಾಗಿ ಇಲ್ಲಿ ನನಗೆ ಸಲ್ಲುವ ಎಲ್ಲಾ ಸನ್ಮಾನ, ಗೌರವಗಳನ್ನು ನಾನು ಆಲದ ಮರಕ್ಕೇ ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು.

K N Jagadish Kumar : ಹುಚ್ಚ ಅಂತಾರೆ ಬಿಜೆಪಿ ಶಾಸಕ ವಿಶ್ವನಾಥ್‌..ನೀವು ನಿಜವಾಗ್ಲು ಹುಚ್ಚನಾ...! #podcast #mla

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗಾಂಧಿ ಭವನದಲ್ಲಿ ಆಯೋಜಿಸಿದ್ದ “ಪ್ರಭಾಭಿನಂದನಂ” ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.

ಹಿಂದುಳಿದ ಕೆಳ ಮಧ್ಯಮ ವರ್ಗದ ಕುಟುಂಬದಿಂದ ಬಂದ ನನಗೆ ಬದುಕಿನ ಆಯ್ಕೆಗಳೇ ಇರಲಿಲ್ಲ. ಹೀಗಾಗಿ ನನ್ನ ಪಾಲಿಗೆ ಒದಗಿ ಬಂದಿದ್ದನ್ನು ಪ್ರಾಮಾಣಿಕವಾಗಿ ಒಪ್ಪಿಕೊಳ್ಳುತ್ತಾ, ಬಂದದ್ದೆಲ್ಲವನ್ನೂ ಬಂದ ಹಾಗೆಯೇ ಸ್ವೀಕರಿಸುತ್ತಾ ಮುಂದೆ ಸಾಗಿ ಈಗ ನಿಮ್ಮ ಮುಂದೆ ಧನ್ಯತೆಯಿಂದ ನಿಂತಿದ್ದೇನೆ. ನಾನು ಸಾಗಿಬಂದ ಹಾದಿಯನ್ನು ಹಿಂದಿರುಗಿ ನೋಡಿದಾಗ ವೃತ್ತಿಪರತೆ ಮತ್ತು ಕರ್ತವ್ಯ ಪ್ರಜ್ಞೆ ಇಲ್ಲಿಯವರೆಗೂ ನನ್ನನ್ನು ಬೆರಳಿಡಿದು ನಡೆಸಿದೆ ಎಂದು ಭಾವಿಸುತ್ತೇನೆ.

ನಾನು ಕನ್ನಡ ಪ್ರಭ ಬಿಟ್ಟು 2013 ರಲ್ಲಿ ಮುಖ್ಯಮಂತ್ರಿಗಳ ನೆರಳಿಗೆ ಬಂದೆ. ಪತ್ರಿಕಾ ವೃತ್ತಿಯ ಸಾಧ್ಯತೆಗಳನ್ನೆಲ್ಲಾ ಇಲ್ಲಿ ಪ್ರಯೋಗಿಸತ್ತಾ ಹೋದೆ. ಆದರೆ, ಪತ್ರಿಕಾ ಕಚೇರಿಯಲ್ಲಿ ಇದ್ದ ಸಮಯದ ಮಿತಿ ಇಲ್ಲದೆ ಇಲ್ಲಿ ಕೆಲಸ ಮಾಡುವ ಅನಿವಾರ್ಯತೆ ಇತ್ತು. ಈ ಸಂದರ್ಭದಲ್ಲಿ ಇಡೀ ರಾಜ್ಯದ ಪತ್ರಕರ್ತ ಸಮುದಾಯ ನನ್ನ ಸಹಕಾರ ನೀಡಿದ್ದಕ್ಕೆ ಕೃತಜ್ಞತೆ ಅರ್ಪಿಸುತ್ತೇನೆ ಎಂದರು.

ನಾನು ಮುಖ್ಯಮಂತ್ರಿಗಳ ಮಾಧ್ಯಮ‌ ಸಂಯೋಜಕ ಆಗಿದ್ದ ಸಂದರ್ಭದಲ್ಲಿ, ಮಾಧ್ಯಮ‌ ಸಲಹೆಗಾರರಾಗಿದ್ದ ದಿನೇಶ್ ಅಮೀನ್ ಮಟ್ಟು ಅವರು ಕೆಲಸ ಕಲಿಯಲು ಕೊಟ್ಟ ಅವಕಾಶ, ನೀಡಿದ ಪ್ರೋತ್ಸಾಹ ನನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿತು. ಈ ಆತ್ಮವಿಶ್ವಾಸ ಒಂದು ಸಂಗತಿಯನ್ನು ಹಲವು ಕೋನಗಳಿಂದ ಅರ್ಥ ಮಾಡಿಕೊಳ್ಳುವುದನ್ನು ಕಲಿಸಿತು. ಬಿಡುವಿಲ್ಲದ ಪ್ರಯಾಣ, ನಿದ್ದೆ ಇಲ್ಲದ ರಾತ್ರಿಗಳು, ಮನೆ-ಮಕ್ಕಳಿಗೆ ಸಮಯ ಕೊಡಲು ಸಾಧ್ಯವಿಲ್ಲದಾದಾಗ, ರಾಜಕಾರಣ/ಒಳ ರಾಜಕಾರಣ ಕೆಲವೊಮ್ಮೆ ನನ್ನ ಆತ್ಮವಿಶ್ವಾಸವನ್ನು ಅಲ್ಲಾಡಿಸಿ ಪತ್ರಿಕೆ ಕೆಲಸ ಬಿಟ್ಟು ತಪ್ಪು ಮಾಡಿದ್ನಾ ಅಂತಲೂ ಅನ್ನಿಸಿದ್ದಿದೆ. ಇಂಥಾ ಘಳಿಗೆಗಳಲ್ಲಿ ಮಾನ್ಯ ಮುಖ್ಯಮಂತ್ರಿಗಳೇ ದಿನಕ್ಕೆ 16-18 ಗಂಟೆ ಕೆಲಸ ಮಾಡುವಾಗ ಅದರ ಮುಂದೆ ನನ್ನದೇನು ಎಂದುಕೊಂಡು ಮತ್ತೆ ಚಾರ್ಜ್ ಆಗುತ್ತಿದ್ದೆ ಎನ್ನುವುದನ್ನು ಕೆವಿಪಿ ನೆನಪು ಮಾಡಿಕೊಂಡೆ ಎಂದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಬಳಿಕ ಶಿವಾನಂದ ತಗಡೂರು ಅವರು ಪತ್ರಕರ್ತ ಸಮುದಾಯದ ರಾಶಿ ರಾಶಿ ಸಮಸ್ಯೆಗಳನ್ನು ಪ್ರತೀ ದಿನ ನನ್ನ ಬಳಿಗೆ ತರುತ್ತಿದ್ದರು. ಸರ್ಕಾರದಿಂದ, ಇಲಾಖೆಯಿಂದ ಆಗಬೇಕಾದ ಮತ್ತು ಬಾಕಿ ಇರುವ ಕೆಲಸಗಳ ಬಗ್ಗೆ ಕ್ರಿಯಾಶೀಲ ಒತ್ತಡ ಹೇರುತ್ತಿದ್ದರು. ಅದನ್ನೆಲ್ಲಾ ನಾನು ಆಯುಕ್ತರಾದ ಹೇಮಂತ್ ನಿಂಬಾಳ್ಕರ್ ಮತ್ತು ಕಾರ್ಯದರ್ಶಿಗಳಾದ ಕಾವೇರಿ ಮೇಡಂ ಅವರ ಮುಂದಿಡುತ್ತಿದ್ದೆ. ಇವರಿಬ್ಬರೂ ಅತ್ಯಂತ ಸಹೃದಯತೆಯಿಂದ ಸಹಕಾರ ನೀಡಿದರು. ಆಡಳಿತಾತ್ಮಕ ಮತ್ತು ತಾಂತ್ರಿಕ ಅಡೆತಡೆಗಳನ್ನು ನನ್ನೊಂದಿಗೆ ಚರ್ಚಿಸಿ ಸಕಾರಾತ್ಮಕ ಪರಿಹಾರ ಕಂಡುಕೊಳ್ಳಲು ಒಂದು ತಂಡವಾಗಿ ಕೆಲಸ ಮಾಡಿದೆವು. ಇದರ ಒಟ್ಟು ರಿಣಾಮದಲ್ಲಿ ಗ್ರಾಮೀಣ ಪತ್ರಕರ್ತರ ಉಚಿತ ಬಸ್ ಪಾಸ್, ಆರೋಗ್ಯ ಸಂಜೀವಿನಿ, ಮಾಸಾಶನದ ಹೆಚ್ಚಳ ಸೇರಿ ಹಲವು ಅನುಕೂಲಗಳು ಪತ್ರಕರ್ತ ಸಮುದಾಯದ ಅಂಗೈ ತಲುಪುವಂತಾಯಿತು. ಹೀಗಾಗಿ ಇವತ್ತಿನ ಈ ಸನ್ಮಾನ ಮತ್ತು ಗೌರವದಲ್ಲಿ ಅವರದ್ದೂ ದೊಡ್ಡ ಪಾಲು ಇದೆ ಧನ್ಯತೆ ಅರ್ಪಿಸಿದರು.

Internal reservation: SC ಒಳ ಮೀಸಲಾತಿಯಲ್ಲಿ ಈ ಸಮುದಾಯಕ್ಕೆ ದೊಡ್ಡ ಅನ್ಯಾಯ..! #siddaramaiah #sc #st

ಹೀಗೆ ನನಗೆ ನೆರಳಾದವರು, ಜೊತೆ ನಿಂತವರ ಪಾಲಿನ ಗೌರವಗಳನ್ನು ಅರ್ಪಿಸಿದ ಬಳಿಕವೂ ಇವತ್ತಿನ ಈ ಸನ್ಮಾನದ ಭಾರ ನನ್ನ ಮೇಲೆ ಸದಾ ಇರುತ್ತದೆ. ಇದು ನನ್ನ ಹೊಣೆಗಾರಿಕೆಯನ್ನು ಹೆಚ್ಚಿಸಿದೆ. ಪತ್ರಕರ್ತರು ತಮ್ಮ ವೃತ್ತಿಪರ ಅಗತ್ಯಗಳಿಗಾಗಿ ಪ್ರತಿಭಟನೆ ಮಾಡುವ ಅಗತ್ಯವೇ ಬಾರದಂತೆ ನಾನು ಕೆಲಸ ಮಾಡಬೇಕು ಎಂದು ಮಾಧ್ಯಮ ಸಲಹೆಗಾರ ಆದ ದಿನವೇ ನಿರ್ಧರಿಸಿದ್ದೆ.
ಪತ್ರಕರ್ತ ಸಮುದಾಯದ ಹಿತಕ್ಕಾಗಿ ಶ್ರಮಿಸುತ್ತಾ ಈ ಭಾರವನ್ನು ನಾನು ಇಳಿಸಿಕೊಳ್ಳಲು ಪ್ರಯತ್ನಿಸುತ್ತೇನೆ ಎಂದರು.

ಇಲ್ಲಿಯವರೆಗೂ ನಾನು ನಡೆದು ಬಂದಿದ್ದೇನೆ. ನನ್ನ ಮುಂದಿನ ನಡೆಯಲ್ಲೂ ನೀವೆಲ್ಲಾ ನನ್ನ ಜೊತೆಗಿರುತ್ತೀರಿ ಎಂದು ನಂಬಿದ್ದೇನೆ. ಈ ಭರವಸೆಯೊಂದಿಗೆ ನನ್ನ ಧನ್ಯತೆಯ ಮಾತುಗಳನ್ನು ಮುಗಿಸುತ್ತೇನೆ.

ವಿಧಾನಸೌಧದ ನನ್ನ ಕಚೇರಿ ಕೊಠಡಿ ಸಂಖ್ಯೆ 204 ಪತ್ರಕರ್ತರಿಗಾಗಿ ಸದಾ ತೆರೆದಿರುತ್ತದೆ ಎಂದು ವಿವರಿಸಿದರು.

ಹಿರಿಯ ಲೇಖಕ, ಪತ್ರಕರ್ತ ಜಿ.ಎನ್.ಮೋಹನ್ ಅವರು ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರೂ ಸನ್ಮಾನಿತರಾದರು. KUWJ ರಾಜ್ಯ ಮತ್ತು ಎಲ್ಲಾ ಜಿಲ್ಲೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಾಳ್ಮೆ ಕಲಿತಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯರಿಂದ

ಪತ್ರಿಕಾ ವೃತ್ತಿಯೇ ನನ್ನ ಪ್ರಪಂಚ. ಪತ್ರಕರ್ತರೇ ನನ್ನ ಒಡನಾಡಿಗಳು. ತಾಳ್ಮೆ, ಸಹನೆಯ ಪಾಸ್ ವರ್ಡ್ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾನು ಇವರಿಂದ ಸಹನೆಯನ್ನು ಕಲಿತೆ ಎಂದರು.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪುನರ್ವಸತಿ ಕಾರ್ಯಕರ್ತರ ಗೌರವಧನ ಹೆಚ್ಚಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Next Post

DK Shivakumar: ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಾಕುತ್ತಿದ್ದೇವೆ..!!

Related Posts

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
0

"ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಅನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. (Deputy Chief...

Read moreDetails

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

November 18, 2025

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

November 18, 2025

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

November 18, 2025
Next Post

DK Shivakumar: ಕಾಂಗ್ರೆಸ್ ಯೋಜನೆಗಳಿಂದ ಬಡವರ ಜೇಬಿಗೆ 1 ಲಕ್ಷ ಕೋಟಿ ಹಾಕುತ್ತಿದ್ದೇವೆ..!!

Recent News

Top Story

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
November 18, 2025
Top Story

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

by ಪ್ರತಿಧ್ವನಿ
November 18, 2025
Top Story

KJ George: ಹೈಟೆಕ್ ಬಸ್ ನಿಲ್ದಾಣದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ ಸಚಿವ ಕೆ.ಜೆ. ಜಾರ್ಜ್..!!

by ಪ್ರತಿಧ್ವನಿ
November 18, 2025
Top Story

ಬಾಗೇಪಲ್ಲಿ ತಾಲೂಕಿನ 24 ಕೆರೆಗಳಿಗೆ ಹೆಚ್ ಎನ್ ವ್ಯಾಲಿ ನೀರು ಹರಿಸುವ ಕಾರ್ಯ ಲೋಕಾರ್ಪಣೆ. ಸಚಿವ ಎನ್ ಎಸ್ ಭೋಸರಾಜು

by ಪ್ರತಿಧ್ವನಿ
November 18, 2025
Top Story

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
November 18, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಮೇಕೆದಾಟು ಯೋಜನೆಗೆ ಹೊಸದಾಗಿ ಡಿಪಿಆರ್ ಸಲ್ಲಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

November 18, 2025

HD Kumarswamy: ರೂರ್ಕೆಲಾ ಉಕ್ಕು ಸ್ಥಾವರ; ₹9,000 ಕೋಟಿ ವೆಚ್ಚದ ಬೃಹತ್ ಆಧುನೀಕರಣ, ವಿಸ್ತರಣೆಗೆ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ

November 18, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada