• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ

ನಾನು ರಾಮ್ ಅವರು ಈ ಸಿನಿಮಾಗೆ ಹಾಕಿರುವ ಎಫರ್ಟ್ ನೋಡಿದ್ರೆ ಈ ಬಾರಿ ಅವರಿಗೆ ನ್ಯಾಷನಲ್ ಅವಾರ್ಡ್ ಕೊಡಬೇಕು :‌ ನಟ ಶಿವರಾಜ್‌ ಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
May 26, 2026
in Top Story, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ಸಿನಿಮಾ
0
ಬೆಂಗಳೂರಿನಲ್ಲಿ ‘ಪೆದ್ದಿ’ ಪ್ರಮೋಷನ್..ರಾಮ್ ಚರಣ್ ಗೆ ರಾಷ್ಟ್ರಪ್ರಶಸ್ತಿ ಕೊಡ್ಬೇಕು ಎಂದ ಶಿವಣ್ಣ
Share on WhatsAppShare on FacebookShare on Telegram

ಬೆಂಗಳೂರು : ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹು ನಿರೀಕ್ಷಿತ ಪೆದ್ದಿ ಸಿನಿಮಾದ ಪ್ರಚಾರ ಜೋರಾಗಿದೆ. ಮುಂಬೈನಲ್ಲಿ ಅದ್ದೂರಿಯಾಗಿ ಟ್ರೇಲರ್ ಲಾಂಚ್ ಮಾಡಿದ್ದ ಚಿತ್ರತಂಡ ನಿನ್ನೆ ಬೆಂಗಳೂರಿನಲ್ಲಿ ಸಿನಿಮಾದ ಪ್ರಚಾರ ನಡೆಸಿದೆ. ನಗರದ ಖಾಸಗಿ ಹೋಟೆಲ್ ನಲ್ಲಿ ಸುದ್ದಿ ಗೋಷ್ಟಿ ನಡೆಯಿತು. ನಟ ರಾಮ್ ಚರಣ್ ತೇಜಾಗೆ ನಟಿ ಜಾಹ್ನವಿ ಕಪೂರ್ ಹಾಗೂ ಈ ಚಿತ್ರದಲ್ಲಿ ವಿಶೇಷ ಪಾತ್ರ ಮಾಡಿರುವ ಶಿವರಾಜ್ ಕುಮಾರ್ ಸಾಥ್ ನೀಡಿದರು.

ADVERTISEMENT
Kichcha Sudeeep : ಕಿಚ್ಚ ನಿರ್ದೇಶನದ ಚಿತ್ರ ಯಾವುದು ಗೊತ್ತಾ..? #sandalwood #kichchasudeep #kichcha

ನಟ ರಾಮ್ ಚರಣ್ ತೇಜಾ ಮಾತನಾಡಿ, ಪೆದ್ದಿ ಸಿನಿಮಾದಲ್ಲಿ ಶಿವಣ್ಣ ಸಾರ್ ನನ್ನ ಗುರು ಪಾತ್ರ ಮಾಡಿದ್ದಾರೆ. ಅವರು ಈ ಪಾತ್ರ ಮಾಡಿದ್ದು ನನಗೆ ಬಹಳ ಖುಷಿಯಾಯಿತು. ಯಾಕೆಂದರೆ ಅವರು ಬಿಟ್ಟು ಬೇರೆಯವರು ಮಾಡಿದ್ರೆ ಅಷ್ಟು ಚೆನ್ನಾಗಿ ಇರ್ತಾ ಇರಲಿಲ್ಲ. ಇವತ್ತು ಈ ಕಾರ್ಯಕ್ರಮಕ್ಕೆ ಶಿವಣ್ಣ ಸರ್ ಬಂದಿರೋದಿಕ್ಕೆ ನನಗೆ ಬಹಳ ಸಂತೋಷ ಆಗುತ್ತಿದೆ. ಅಷ್ಟೇ ಅಲ್ಲದೆ ನಮ್ಮ ಚಿತ್ರದ ನಿರ್ದೇಶಕ ಬುಚ್ಚಬಾಬು, ಜಾಹ್ನವಿ ಕಪೂರ್, ಜಗಪತಿ ಬಾಬು, ಬೊಮ್ಮನ್ ಇರಾನಿ ಸೇರಿದಂತೆ ಸಾಕಷ್ಟು ಕಲಾವಿದರು ಇದ್ದಾರೆ. ಈ ಚಿತ್ರವನ್ನ ಇದೇ ಜೂನ್ 4ಕ್ಕೆ ರಿಲೀಸ್ ಆಗುತ್ತಿದೆ ಅಂತಾ ರಾಮ್ ಚರಣ್ ತೇಜಾ ಅಭಿಮಾನಿಗಳಿಗೆ ಮನವಿ ಮಾಡಿಕೊಂಡರು.

ಬಳಿಕ ಮಾತನಾಡಿದ ಶಿವರಾಜ್ ಕುಮಾರ್, ಚಿರಂಜೀವಿ ಸರ್ ಕುಟುಂಬಕ್ಕೂ ನಮ್ಮ ಕುಟುಂಬಕ್ಕೂ ಅವಿನಾಭಾವ ಸಂಬಂಧ. ನನಗೆ ಡೈರೆಕ್ಟರ್ ಬುಚ್ಚಿಬಾಬು ಪೆದ್ದಿ ಚಿತ್ರದಲ್ಲಿ ನೀವು ಅಭಿನಯಿಸಬೇಕು ಅಂದಾಗ ನಾನು ಕಥೆ ಕೇಳಿದೆ ಒಪ್ಪಿಕೊಂಡೆ.ಯಾಕೆಂದರೆ ಒಂದು ಚಿರಂಜೀವಿ ಸಾರ್ ಫ್ಯಾಮಿಲಿ ಜೊತೆ ಇರುವ ಬಾಂಡಿಂಗ್ ಮತ್ತೊಂದು ರಾಮ್ ಚರಣ್ ತೇಜಾ ಮೇಲೆ‌ ಇರುವ ಪ್ರೀತಿಗೆ. ನಾನು ರಾಮ್ ಅವರು ಈ ಸಿನಿಮಾಗೆ ಹಾಕಿರುವ ಎಫರ್ಟ್ ನೋಡಿದ್ರೆ ಈ ಬಾರಿ ಅವರಿಗೆ ನ್ಯಾಷನಲ್ ಅವಾರ್ಡ್ ಕೊಡಬೇಕು. ಯಾಕೆಂದರೆ ಅಷ್ಟು ಚೆನ್ನಾಗಿ ಈ ಸಿನಿಮಾ ಬಂದಿದೆ ಅದಕ್ಕೆ ನಾನು ಗ್ಯಾರಂಟಿ. ಇಲ್ಲಿ ಅಷ್ಟೇ ಅಲ್ಲಾ ರಾಮ್ ಚರಣ್ ತೇಜಾ ನನ್ನ ಸಹೋದರ ಇದ್ದ ಹಾಗೇ ಪುನೀತ್ ನಂತರ ರಾಮ್ ಚರಣ್ ತೇಜಾ ನನ್ನ ಬ್ರದರ್ ಆಗಿದ್ದಾರೆ. ಅದು ನನಗೆ ತುಂಬಾನೇ ಖುಷಿ ಕೊಡುತ್ತೆ ಅಂತಾ ಶಿವರಾಜ್ ಕುಮಾರ್ ಮೆಚ್ಚುಗೆಯ ಮಾತುಗಳನ್ನ ಹಾಡಿದರು.

ಇದನ್ನೂ ಓದಿ : ಒಂದೆಡೆ ಸಿದ್ದರಾಮಯ್ಯ ಬಣ, ಮತ್ತೊಂದೆಡೆ ಡಿಕೆಶಿ ಕಸರತ್ತು; ದೆಹಲಿ ದಂಗಲ್ ಶುರು!

ನಟಿ ಜಾಹ್ನವಿ ಕಪೂರ್ ಕನ್ನಡದಲ್ಲಿ ಮಾತನಾಡುತ್ತಾ, ಈ ಚಿತ್ರ ವಿಭಿನ್ನವಾದ ಚಿತ್ರ, ಅದರಲ್ಲೂ ರಾಮ್ ಚರಣ್ ತೇಜಾ ಸಾರ್ ಜೊತೆ ವರ್ಕ್ ಮಾಡಿದ್ದು ಒಳ್ಳೆ ಅನುಭವ, ನನಗೆ ಬೆಂಗಳೂರು ಅಂದ್ರೆ ಇಷ್ಟ ಅಂದ್ರು. ಇನ್ನು ರಾಮ್ ಚರಣ್ ಸಾರ್ ಒಂದು ಸಿನಿಮಾದಲ್ಲಿ ಡ್ಯಾನ್ಸ್ ಮಾಡಿದ್ರೆ ಸಾಕು ಒಂದೇ ಸಿನಿಮಾದಲ್ಲಿ ಸಣ್ಣ ಆಗ್ತೀರಾ ಅಂತಾ ರಾಮ್ ಚರಣ್ ತೇಜಾ ಡ್ಯಾನ್ಸ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಚಿತ್ರದಲ್ಲಿ ಶಿವಣ್ಣನ ಗೌರನಾಯ್ಡು ಪಾತ್ರ ಮಾಡಿದ್ದು, ರಾಮ್ ಚರಣ್ ಪಾತ್ರದ ಗುರುವಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ರಾಮ್‌ ಚರಣ್‌ ಕುಸ್ತಿ ಪಟುವಾಗಿದ್ದು, ರಾಮ್ ಚರಣ್ಗೆ ಕುಸ್ತಿ ಹೇಳಿಕೊಡುವ ಗುರುವಾಗಿ ಶಿವರಾಜ್ ಕುಮಾರ್ ಅಭಿನಯಿಸಿದ್ದಾರೆ.

ರಾಮ್ ಚರಣ್ ತೇಜಾ ಪಾತ್ರಕ್ಕೆ ಮಾಡಿಕೊಂಡಿರುವ ಮೇಕ್ ಓವರ್ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ರಾಮ್ ಚರಣ್ ಜೋಡಿಯಾಗಿ ಜಾಹ್ನವಿ ಕಪೂರ್‌ ನಾಯಕಿಯಾಗಿದ್ದರೆ, ಜಗಪತಿ ಬಾಬು, ಬೊಮನ್ ಇರಾನಿ, ಶಿವರಾಜ್ ಕುಮಾರ್ ಸೇರಿದಂತೆ ದೊಡ್ಡ ತಾರ ಬಳಗ ಈ ಚಿತ್ರದಲ್ಲಿದ್ದು,ಎಆರ್‌ ರೆಹಮಾನ್‌ ಸಂಗೀತ ಇದೆ. ಜೂನ್ 4ಕ್ಕೆ ವಿಶ್ವದಾದ್ಯಂತ ಪೆದ್ದಿ ಸಿನಿಮಾ ಬಿಡುಗಡೆಗೆ ಆಗಲಿದೆ.

Tags: A R RehamanActor ChiranjeeviActor Dr shivarajkumaractor puneeth rajkumarbooman Iranijhanvi Kapoorkannada moviesPeddi CinemaPeddi cinema ReleasrSandalwood CinemaTelugu Actor RamcharanTelugu Movies
Previous Post

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

Next Post

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

Related Posts

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”
Top Story

“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಸಚಿವ ಸಂಪುಟ ವಿಸ್ತರಣೆಯ ಹಿನ್ನೆಲೆಯಲ್ಲಿ ಇಡೀ ರಾಜ್ಯ ಸರ್ಕಾರವೇ ನವದೆಹಲಿಗೆ ಶಿಫ್ಟ್‌ ಆಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ...

Read moreDetails
ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

ದೆಹಲಿಯಲ್ಲಿ ಹೈ ವೋಲ್ಟೇಜ್‌ ಸಭೆಯಲ್ಲಿ ಡಿಕೆ, ಸಿದ್ದು ಚರ್ಚಿಸಿದ್ದೇನು..?

May 26, 2026
ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

May 26, 2026
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಮರಾಠಿ ಭಾಷೆಗೆ ರಿಮೇಕ್‌ ಆದ ಕನ್ನಡದ ‘ಸು ಫ್ರಮ್‌ ಸೋ’

May 25, 2026
Next Post
“ಸರ್ಕಾರದಲ್ಲಿ ‘ಕುರ್ಚಿ’ಗಾಗಿ ಕಚ್ಚಾಟ, ದೆಹಲಿ ‘ಹೈಕಮಾಂಡ್’ ಮುಂದೆ ಸಾಷ್ಟಾಂಗ ನಮಸ್ಕಾರ!”

"ಸರ್ಕಾರದಲ್ಲಿ 'ಕುರ್ಚಿ'ಗಾಗಿ ಕಚ್ಚಾಟ, ದೆಹಲಿ 'ಹೈಕಮಾಂಡ್' ಮುಂದೆ ಸಾಷ್ಟಾಂಗ ನಮಸ್ಕಾರ!"

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada