ಪ್ರವಾದಿ ವಿರುದ್ಧ ಬಿಜೆಪಿ ಉಚ್ಛಾಟಿತ ನಾಯಕಿ ನೂಪುರ್ ಶರ್ಮ ನೀಡಿದ ಹೇಳಿಕೆ ಪ್ರಚೋದನೆ ಮಾಡುವ ಉದ್ದೇಶ ಹೊಂದಿದ್ದು, ಆಕೆ ಟಿವಿಯಲ್ಲಿ ಕ್ಷಮೆ ಕೇಳಲೇಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ತಮ್ಮ ಮೇಲಿನ ಎಲ್ಲಾ ದೂರುಗಳನ್ನು ಒಂದೇ ಕಡೆ ವರ್ಗ ಮಾಡುವಂತೆ ನೂಪುರ್ ಶರ್ಮ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಪ್ರವಾದಿಗಳ ವಿರುದ್ಧ ಮಾಡಿರುವ ಹೇಳಿಕೆ ಒಂದು ಕೀಳು ಮಟ್ಟದ ಪ್ರಚಾರ ಪಡೆಯುವ ಉದ್ದೇಶ ಹೊಂದಿರಬೇಕು ಅಥವಾ ನೀಚ ಕೆಲಸದ ಉದ್ದೇಶ ಹೊಂದಿರಬೇಕು ಎಂದು ತರಾಟೆಗೆ ತೆಗೆದುಕೊಂಡಿದೆ.
ಇದೇ ವೇಳೆ ನೂಪುರ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್, ಈ ರೀತಿಯ ಹೇಳಿಕೆ ದೇಶದ ಏಕತೆಗೆ ಭಂಗ ಉಂಟು ಮಾಡುತ್ತದೆ ಎಂದು ಆತಂಕ ವ್ಯಕ್ತಪಡಿಸಿದೆ.