• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾರ್ಮಿಕರ ಕನಿಷ್ಠ ಪಿಂಚಣಿ ₹3000ಕ್ಕೆ ಏರಿಕೆ ಪ್ರಸ್ತಾಪ

Any Mind by Any Mind
November 9, 2021
in ಕರ್ನಾಟಕ
0
ಕಾರ್ಮಿಕರ ಕನಿಷ್ಠ ಪಿಂಚಣಿ ₹3000ಕ್ಕೆ ಏರಿಕೆ ಪ್ರಸ್ತಾಪ
Share on WhatsAppShare on FacebookShare on Telegram

ನಿವೃತ್ತ ಕಾರ್ಮಿಕರು ಬಹು ದಿನಗಳಿಂದ ನಿರೀಕ್ಷಿಸುತ್ತಿದ್ದ ಕನಿಷ್ಠ ಪಿಂಚಿಣಿ ಮೊತ್ತ ಹೆಚ್ಚಳದ ಬೇಡಿಕೆಯನ್ನು ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ಒ) ಈಡೇರಿಸುವ ಕಾಲ ಸಮೀಪಿಸಿದೆ.

ADVERTISEMENT

ನವೆಂಬರ್ ತಿಂಗಳ ಅಂತ್ಯದಲ್ಲಿ ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆಯ ಕೇಂದ್ರೀಯ ವಿಶ್ವಸ್ಥ ಮಂಡಳಿ ಸಭೆಯು ನಡೆಯಲಿದ್ದು, ಕನಿಷ್ಠ ಪಿಂಚಿಣಿ ಹೆಚ್ಚಳ ಮಾಡುವ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ. ಕನಿಷ್ಠ ಪಿಂಚಿಣಿ ಹೆಚ್ಚಳ ಮಾಡುವುದಕ್ಕೆ ಇಪಿಎಫ್ಒ ಮತ್ತು ಕೇಂದ್ರ ಸರ್ಕಾರ ಈಗಾಗಲೇ ಒಪ್ಪಿಗೆ ನೀಡಿವೆ. ಆದರೆ, ಹೆಚ್ಚಳದ ಪ್ರಮಾಣ ಎಷ್ಟಿರಬೇಕೆಂಬುದರ ಬಗ್ಗೆ ಎದ್ದಿರುವ ತಕರಾರು ಬಗೆಹರಿದಿಲ್ಲ.

ಕೇಂದ್ರೀಯ ಕಾರ್ಮಿಕ ಸಂಘಟನೆಗಳು ಕನಿಷ್ಠ ಪಿಂಚಿಣಿ ಮೊತ್ತವನ್ನು 6000 ರುಪಾಯಿಗಳಿಗೆ ಏರಿಸಬೇಕು ಎಂಬ ಬೇಡಿಕೆ ಮುಂದಿಟ್ಟಿವೆ. ಕೇಂದ್ರ ಸರ್ಕಾರ ಮತ್ತು ಇಪಿಎಫ್ಒ ಕಾರ್ಮಿಕ ಸಂಘಟನೆಗಳ ಬೇಡಿಕೆಯನ್ನು ಪುರಸ್ಕರಿಸಿಲ್ಲ. ಈ ಪ್ರಮಾಣದಲ್ಲಿ ಕನಿಷ್ಠ ಪಿಂಚಿಣಿ ಮೊತ್ತ ಹೆಚ್ಚಿಸಿದರೆ, ದೀರ್ಘಕಾಲದಲ್ಲಿ ಇಪಿಎಫ್ಒ ತೀವ್ರ ಆರ್ಥಿಕ ಸಂಕಷ್ಟ ಎದುರಿಸಬೇಕಾಗುತ್ತದೆ ಎಂಬ ಕಾರಣ ಮುಂದೊಡ್ಡಲಾಗಿದೆ.

ಪ್ರಸ್ತುತ ಕನಿಷ್ಠ ಪಿಂಚಿಣಿ 1000 ರುಪಾಯಿಗಳಿದೆ. ಇಷ್ಟು ಅತ್ಯಲ್ಪ ಪ್ರಮಾಣದಲ್ಲಿ ಪಿಂಚಣಿ ಪಡೆದು ಜೀವನ ಸಾಗಿಸುವುದಾರೂ ಹೇಗೆ ಎಂಬ ಪ್ರಶ್ನೆಯನ್ನು ಕಾರ್ಮಿಕ ಸಂಘಟನೆಗಳ ನಾಯಕರು ಪ್ರತಿ ಸಭೆಯಲ್ಲೂ ಎತ್ತುತ್ತಲೇ ಬಂದಿದ್ದಾರೆ. ಪ್ರಸ್ತುತ ಪೆಟ್ರೋಲ್, ಡಿಸೇಲ್, ಅಡಿಗೆ ಅನಿಲ ಮತ್ತು ನಿತ್ಯಬಳಕೆಯ ದಿನಸಿ ಮತ್ತಿತರ ವಸ್ತುಗಳ ಬೆಲೆಗಳು ತೀವ್ರವಾಗಿ ಏರಿರುವುದರಿಂದ ಕೇವಲ 1000 ರುಪಾಯಿಗಳಲ್ಲಿ ಪಿಂಚಿಣಿಯನ್ನೇ ನಂಬಿಕೊಂಡವರು ಜೀವನ ನಡೆಸುವುದು ಕಷ್ಟ ಎಂಬುದು ಇಪಿಎಫ್ಒ ಮತ್ತು ಕೇಂದ್ರ ಸರ್ಕಾರಕ್ಕೂ ಅರಿವಾದಂತಿದೆ.

ಆದರೆ, 6000 ರುಪಾಯಿಗಳ ಬೇಡಿಕೆಯನ್ನು ಈಡೇರಿಸುವುದು ಸಾಧ್ಯವೆ ಇಲ್ಲ ಎಂಬುದು ಇಪಿಎಫ್ಒ ಪ್ರತಿಪಾದಿಸಿರುವ ಇಪಿಎಫ್ಒ ಕನಿಷ್ಠ ಪಿಂಚಣಿ ಮೊತ್ತವನ್ನು 3000 ರುಪಾಯಿಗೆ ನಿಗದಿ ಮಾಡಲು ಒಪ್ಪಬಹುದು ಎಂದು ಬ್ಯುಸಿನೆಸ್ ಲೈನ್ ವರದಿ ಮಾಡಿದೆ. ವರದಿಯ ಪ್ರಕಾರ, ಕಾರ್ಮಿಕರಿಗಾಗಿ ಇರು ಸಂಸದೀಯ ಸ್ಥಾಯಿ ಸಮಿತಿಯು ಈಗಾಗಲೇ ಕನಿಷ್ಠ ಪಿಂಚಣಿಯನ್ನು 3000ಕ್ಕೆ ಹೆಚ್ಚಳ ಮಾಡುವಂತೆ ಶಿಫಾರಸು ಮಾಡಿದೆ. ಆದರೆ, ಕೇಂದ್ರ ಸರ್ಕಾರವು ಈ ನಿಟ್ಟಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವಲ್ಲಿ ವಿನಾಕಾರಣ ವಿಳಂಬ ಮಾಡುತ್ತಿದೆ ಎಂಬುದು ಕಾರ್ಮಿಕ ಸಂಘಟನೆಗಳ ನಾಯಕರ ಆರೋಪ.

ಏನೇ ಆದರೂ ತಿಂಗಳಾಂತ್ಯದ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಹೊರಬರಲಿದೆ. ಕನಿಷ್ಠ ಪಿಂಚಿಣಿ ಮೊತ್ತವು 3000 ರುಪಾಯಿಗೆ ಏರಲಿದೆ.

ಸಾಮಾನ್ಯವಾಗಿ ಸರ್ಕಾರಿ ಸೇವೆಯಲ್ಲಿರುವವರು ನಿವೃತ್ತರಾದಾಗ, ಅವರ ಸೇವೆಯ ಕೊನೆ ತಿಂಗಳಲ್ಲಿ ಪಡೆದ ವೇತನದ ಅರ್ಧದಷ್ಟು ಮೊತ್ತವನ್ನು ಪಿಂಚಣಿ ಮೊತ್ತವಾಗಿ ನಿಗದಿ ಮಾಡಲಾಗುತ್ತದೆ. ಆದರೆ, ಕಾರ್ಮಿಕರಿಗೆ ಉದ್ಯೋಗದಾತರು ಪಾವತಿಸುವ ಶೇ.12ರಷ್ಟು ಭವಿಷ್ಯ ನಿಧಿ ಮೊತ್ತದ ಪೈಕಿ ಕಡಿತ ಮಾಡಿ ಸಂಗ್ರಹಿಸಲಾಗುವ ಶೇ.3.5ರಷ್ಟು ಮೊತ್ತದ ಠೇವಣಿ ಮೇಲಿನ ಬಡ್ಡಿಯನ್ನು ಮಾಸಿಕ ಪಿಂಚಿಣಿಯಾಗಿ ನೀಡಲಾಗುತ್ತದೆ. ಹೀಗಾಗಿ ಬಹುತೇಕ ಸಂದರ್ಭಗಳಲ್ಲಿ ಮತ್ತು ಹೆಚ್ಚಿನ ವರ್ಷಗಳ ಕಾಲ ಸೇವೆ ಸಲ್ಲಿಸದ ಹಾಗೂ ಸೇವೆ ಸಲ್ಲಿಸಿಯು ಭವಿಷ್ಯ ನಿಧಿ ವ್ಯಾಪ್ತಿಗೆ ತಡವಾಗಿ ಬರುವ ಕಾರ್ಮಿಕರು ನಿವೃತ್ತರಾದಾಗ ಉಳಿಯುವ ಠೇವಣಿ ಅತ್ಯಲ್ಪ ಇರುತ್ತದೆ. ಹೀಗಾಗಿ ಪಿಂಚಿಣಿ ಮೊತ್ತವೂ ಅತ್ಯಲ್ಪ ಮೊತ್ತದ್ದಾಗಿರುತ್ತದೆ. ಈ ಕಾರಣಕ್ಕಾಗಿ ಕನಿಷ್ಠ ಪಿಂಚಿಣಿ ನಿಗದಿ ಮಾಡುವಂತೆ ಕಾರ್ಮಿಕ ಸಂಘಟನೆಗಳು ಹೋರಾಟ ಮಾಡಿದ್ದವು. 1000 ರುಪಾಯಿ ನಿಗದಿ ಮಾಡಿ ಹಲವು ವರ್ಷಗಳೇ ಕಳೆದಿವೆ. ಇದನ್ನು ಪರಿಷ್ಕರಿಸುವಂತೆ ಸತತ ಹೋರಾಟ ನಡೆಸಲಾಗಿದೆ. ಸಂಸದೀಯ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದ ನಂತರವು ಪರಿಷ್ಕೃತ ಪಿಂಚಿಣಿ ಜಾರಿಯಾಗಿಲ್ಲ. ತಿಂಗಳಾಂತ್ಯದ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ. ಬಹುತೇಕ ಏಪ್ರಿಲ್ 2022ರಿಂದ ಕಾರ್ಮಿಕರಿಗೆ ಕನಿಷ್ಠ ಪಿಂಚಿಣಿ ಮೊತ್ತವು 3000 ರುಪಾಯಿ ಲಭ್ಯವಾಗಬಹುದು.

ಇದೇ ಸಭೆಯಲ್ಲಿ ಮತ್ತೆರಡು ಪ್ರಮುಖ ವಿಷಯಗಳು ಚರ್ಚೆಗೆ ಬರಲಿವೆ. ಇಪಿಎಫ್ಒ ನಿಧಿಯಲ್ಲಿರುವ ನಗದನ್ನು ಕಾರ್ಪೋರೆಟ್ ಬಾಂಡ್ ಗಳಲ್ಲಿ ಹೂಡಿಕೆ ಮಾಡುವುದು ಮತ್ತು 2021-22ನೇ ಸಾಲಿಗೆ ಭವಿಷ್ಯ ನಿಧಿ ಮೇಲಿನ ಬಡ್ಡಿ ಪ್ರಮಾಣ ನಿಗದಿ ಮಾಡುವ ಬಗ್ಗೆ ಚರ್ಚೆ ಆಗಲಿದೆ. ಇದುವರೆಗೆ ಇಪಿಎಫ್ಒ ಕಾರ್ಮಿಕರ ಭವಿಷ್ಯ ನಿಧಿ ಮೊತ್ತವನ್ನು ನೇರವಾಗಿ ಷೇರು ಪೇಟೆಯಲ್ಲಿ ಹೂಡಿಕೆ ಮಾಡುತ್ತಿದೆ. ಜತೆಗೆ ಮ್ಯೂಚುವಲ್ ಫಂಡ್ ಗಳಲ್ಲೂ ಹೂಡಿಕೆ ಮಾಡುತ್ತಿದೆ. ಆದರೆ, ಕಾರ್ಪೊರೆಟ್ ಬಾಂಡ್ ಗಳಲ್ಲಿ ಹೂಡಿಕೆಗೆ ಇನ್ನೂ ಅನುಮತಿ ದಕ್ಕಿಲ್ಲ.

ನೇರವಾಗಿ ಷೇರುಪೇಟೆಯಲ್ಲಿನ ಹೂಡಿಕೆ, ಮ್ಯೂಚುವಲ್ ಫಂಡ್ ಗಳ ಮೇಲಿನ ಹೂಡಿಕೆ ಮೇಲೆ ಇಪಿಎಫ್ಒ ಉತ್ತಮ ಲಾಭ ಪಡೆದಿದೆ. ಆದರೆ, ಈ ಲಾಭದ ಪ್ರಮಾಣವು ನಿಶ್ಛಿತವಲ್ಲ. ಹೀಗಾಗಿ ಕಾರ್ಪೊರೆಡ್ ಬಾಂಡ್ ಗಳ ಮೇಲೆ ಹೂಡಿಕೆ ಮಾಡುವ ಬಗ್ಗೆ ಚಿಂತಿಸಿದೆ. ಕಾರ್ಪೊರೆಟ್ ಬಾಂಡ್ ಗಳ ಮೇಲಿನ ಹೂಡಿಕೆ ಮೇಲೆ ಪೂರ್ವನಿರ್ಧಾರಿತ ಬಡ್ಡಿದರ/ಲಾಭಾಂಶವನ್ನು ನೀಡಲಾಗುತ್ತದೆ.

ಪ್ರಸಕ್ತ ವಿತ್ತೀಯ ವರ್ಷದಲ್ಲಿ ಭವಿಷ್ಯ ನಿಧಿ ಮೇಲೆ ನೀಡುವ ಬಡ್ಡಿದರ ಕುರಿತಂತೆ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. 2020-21 ವಿತ್ತೀಯ ವರ್ಷದಲ್ಲಿ ಶೇ.8.5ರಷ್ಟು ಬಡ್ಡಿದರ ನಿಗದಿ ಮಾಡಲಾಗಿದೆ. ಪ್ರಸಕ್ತ ವರ್ಷದಲ್ಲಿ ಈ ಬಡ್ಡಿದರವನ್ನು ಹೆಚ್ಚಿಸಬೇಕು ಎಂಬುದು ಕಾರ್ಮಿಕ ಸಂಘಟನೆಗಳ ಬೇಡಿಕೆಯಾಗಿದೆ. ಸರ್ಕಾರ ಬಡ್ಡಿದರವನ್ನು ಶೇ.8.25 ಅಥವಾ ಶೇ.8ಕ್ಕೆ ತಗ್ಗಿಸುವ ಇರಾದೆ ಹೊಂದಿದೆ.

Tags: Employee provident fundEmployees
Previous Post

2020ರಲ್ಲಿ ಆತ್ಮಹತ್ಯೆಗೆ ಶರಣಾದ 11,716 ಉದ್ಯಮಿಗಳು ; ಕರ್ನಾಟಕದಲ್ಲಿ ಅತೀ ಹೆಚ್ಚು!

Next Post

ಕಸ್ಟಡಿಯಲ್ಲಿ ಪೊಲೀಸರ ದೌರ್ಜನ್ಯದ ವಿರುದ್ದ ಚಾಟಿ ಬೀಸಿದ ದೆಹಲಿ ಹೈಕೋರ್ಟ್

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

ಬೆಂಗಳೂರು ಅಭಿವೃದ್ಧಿಗೆ ದೆಹಲಿಯಲ್ಲಿ ದೌಡಾಯಿಸಿದ ಡಿ.ಕೆ. ಶಿವಕುಮಾರ್; ಸಾವಿರಕ್ಕೂ ಹೆಚ್ಚು ಯೋಜನೆಗಳಿಗೆ ಕೇಂದ್ರದ ಗಮನ

April 26, 2026
ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

ಅನ್ನ-ನೀರಿಗೆ ಭವಿಷ್ಯದಲ್ಲಿ ಸಂಕಷ್ಟ ಎಚ್ಚರಿಕೆ: ಹವಾಮಾನ ಬದಲಾವಣೆಯ ಕುರಿತು ಕೋಡಿಮಠ ಶ್ರೀಗಳ ಭವಿಷ್ಯವಾಣಿ

April 25, 2026
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಕಸ್ಟಡಿಯಲ್ಲಿ ಪೊಲೀಸರ ದೌರ್ಜನ್ಯದ ವಿರುದ್ದ ಚಾಟಿ ಬೀಸಿದ ದೆಹಲಿ ಹೈಕೋರ್ಟ್

ಕಸ್ಟಡಿಯಲ್ಲಿ ಪೊಲೀಸರ ದೌರ್ಜನ್ಯದ ವಿರುದ್ದ ಚಾಟಿ ಬೀಸಿದ ದೆಹಲಿ ಹೈಕೋರ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada