• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರತಿಧ್ವನಿ by ಪ್ರತಿಧ್ವನಿ
January 21, 2025
in Top Story, ಕರ್ನಾಟಕ, ದೇಶ, ರಾಜಕೀಯ
0
ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT


ಜನರಲ್ಲಿ ಮಹಾತ್ಮಾ ಗಾಂಧೀಜಿ,ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

1924 ರ ಇಸವಿಯಲ್ಲಿ ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ಕಾಂಗ್ರೆಸ್ ಅಧಿವೇಶನ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು.

ಸಮಾವೇಶ ಯಶಸ್ವಿಯಾಗಲಿದೆ
ಗಾಂಧೀಜಿಯವರು ಡಿಸೆಂಬರ್ 26, 1924 ರಲ್ಲಿ ಕಾಂಗ್ರೆಸ್ ಬೆಳಗಾವಿಯಲ್ಲಿಯೇ ಕಾಂಗ್ರೆಸ್ ಅಧ್ಯಕ್ಷರಾದರು. ಅಧಿವೇಶ ನಡೆದು ಒಂದು ಶತಮಾನವಾಗಿರುವ ಹಿನ್ನೆಲೆಯಲ್ಲಿ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಎಲ್ಲಾ ಸಿದ್ಧತೆಗಳು ನಡೆದಿದ್ದು, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೀವಾಲ ಅವರೊಂದಿಗೆ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಕಳೆದ ನಾಲ್ಕೈದು ದಿನಗಳಿಂದ ಇಲ್ಲೇ ಇದ್ದು ಅಚ್ಚುಕಟ್ಟಾಗಿ ಸಿದ್ಧತೆಗಳನ್ನು ಕೈಗೊಂಡಿದ್ದಾರೆ. ನಾಳೆಯೂ ಸಮಾವೇಶ ಯಶಸ್ವಿಯಾಗಿ ನಡೆಯಲಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಜನ ಇಲ್ಲಿ ಸೇರಲಿದ್ದಾರೆ. ಬೆಳಗಾವಿಯಲ್ಲಿ ಇದು ಐತಿಹಾಸಿಕ ಸಮಾವೇಶವಾಗಲಿದೆ ಎಂದರು.

Siddaramaiah : ಲಕ್ಷ್ಮಿ ಹೆಬ್ಬಳ್ಕರ್ ನೋಡಲು ಆಸ್ಪತ್ರೆಗೆ ಓಡೋಡಿ ಬಂದ ಸಿಎಂ ಸಿದ್ದರಾಮಯ್ಯ #pratidhvani

ಶತಮಾನೋತ್ಸವದ ಸ್ಮರಣಾರ್ಥ ಸಮಾವೇಶ

ಬೆಳಗಾವಿಗೆ ಕೊಡುಗೆ ಘೋಷಣೆ ಮಾಡುವ ಸಮಾವೇಶ ಅಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಇದು ನೂರು ವರ್ಷಗಳ ಹಿಂದೆ ನಡೆದಿದ್ದ ಅಧಿವೇಶನದ ಜ್ಞಾಪಕಾರ್ಥವಾಗಿ ನಡೆಯುತ್ತಿರುವ ಕಾರ್ಯಕ್ರಮ ಎಂದರು.

ಬೆಳಗಾವಿಯಲ್ಲಿ ನಾಳೆ ಒಂದು ಗಂಟೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯಲಿದ್ದು, ಈ ಸಮಾವೇಶ ಕಳೆದ ಡಿಸೆಂಬರ್ 27 ರಂದು ನಡೆಯಬೇಕಿತ್ತು. ಮಾಜಿ ಪ್ರಧಾನಿ ಮನ್ ಮೋಹನ್ ಸಿಂಗ್ ಅವರು ನಿಧನರಾದ ಹಿನ್ನೆಲೆಯಲ್ಲಿ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು ಎಂದು ವಿವರಿಸಿದರು.

ಪ್ರಹ್ಲಾದ್ ಜೋಶಿಗೆ ಇತಿಹಾಸದ ಬಗ್ಗೆ ತಿಳಿದಿಲ್ಲ
ಕಾಂಗ್ರೆಸ್ ನವರು ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದು, ಅಧಿವೇಶನ ನಡೆಸಲು ಹಕ್ಕಿಲ್ಲ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ, ಪ್ರಹ್ಲಾದ್ ಜೋಶಿ ಅವರಿಗೆ ಇತಿಹಾಸ ಗೊತ್ತಿಲ್ಲ. ಗೋಲ್ವಾಲ್ಕರ್, ಹಾಗೂ ಸಾವರ್ಕರ್ ಸಂವಿಧಾನ ಜಾರಿಯಾದಾಗ ಏನು ಮಾತನಾಡಿದ್ದರು ಎಂದು ತಿಳಿದಿದೆಯೇ ಅವರಿಗೆ ಎಂದು ಪ್ರಶ್ನಿಸಿದರು.

ಪಕ್ಷದ ವತಿಯಿಂದ ಸಮಾವೇಶ
ಸಮಾವೇಶವನ್ನು ಪಕ್ಷದ ವತಿಯಿಂದ ಕೈಗೊಂಡಿದ್ದು, ಪ್ರತಿಮೆ ಅನಾವರಣವನ್ನು ಸರ್ಕಾರ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಗಳು ಸ್ಪಷ್ಟಪಡಿಸಿದರು.

ಯತ್ನಾಳ್ ಇತಿಹಾಸ ಓದಿಕೊಂಡಿಲ್ಲ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಗೋಡ್ಸೆ ಹತ್ಯೆಯಲ್ಲಿ ನೆಹರೂ ಅವರ ಪಾತ್ರವಿದೆ ಎಂದಿರುವ ಬಗ್ಗೆ ಮಾತನಾಡಿ ಅವರಿಗೆ ಇತಿಹಾಸ ತಿಳಿದಿಲ್ಲ ಹಾಗೂ ಅದನ್ನು ಓದಿಯೂ ಇಲ್ಲ ಎಂದರು. ಅದಕ್ಕಾಗಿಯೇ ಅಂಬೇಡ್ಕರ್ ಅವರು ಇತಿಹಾಸ ಗೊತ್ತಿಲ್ಲದವರು ಭವಿಷ್ಯವನ್ನು ಸೃಷ್ಟಿಸಲಾರರು ಎಂದು ಹೇಳಿದ್ದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಹಾತ್ಮಾ ಗಾಂಧಿ ಅವರನ್ನು ಗೋಡ್ಸೆ ಕೊಂದಿದ್ದು, ಆತನ ಜೊತೆ ಸಾವರ್ಕರ್ ಕೂಡ ಶಾಮೀಲಾಗಿರುವ ಬಗ್ಗೆ ಪ್ರಕರಣವಿತ್ತು ಎಂದು ಮುಖ್ಯಮಂತ್ರಿಗಳು ತಿಳಿಸಿದರು .

Tags: Constitutioneditorial analysis of the hindufinance minister arun jaitleyfinance minister arun jaitley budgetinside the life of president droupadi murmusave the constitutionsiddaramaiahthe crisis in karnatakathe hinduthe hindu analysisthe hindu current affairs todaythe hindu dailythe hindu editorial discussionthe hindu news analysisthe hindu newspaper todaythe politics of cultural despairwhy hate is fueling politics
Previous Post

ಕಾರ್ಮಿಕ ಇಲಾಖೆ ಕಲಬುರಗಿ ವಿಭಾಗದ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಸಂತೋಷ್‌ ಲಾಡ್‌ ಸೂಚನೆ

Next Post

ಪ್ರಯಾಗರಾಜ್ ನಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ! 3  ದಿನ ಕುಂಭಮೇಳದಲ್ಲಿ ಭಾಗವಹಿಸಲಿರುವ ಸುಧಾ ಮೂರ್ತಿ ! 

Related Posts

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?
Top Story

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಉಪಚುನಾವಣೆಯ ಬಳಿಕ ಇದೀಗ ಮತ್ತೆ ಸಂಪುಟ ವಿಸ್ತರಣೆಯ ಕೂಗು ಜೋರಾಗಿದೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರಗಳಲ್ಲಿ ರಂಗ ಪ್ರವೇಶ ಮಾಡಿದ...

Read moreDetails
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

April 12, 2026
Next Post
ಪ್ರಯಾಗರಾಜ್ ನಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ! 3  ದಿನ ಕುಂಭಮೇಳದಲ್ಲಿ ಭಾಗವಹಿಸಲಿರುವ ಸುಧಾ ಮೂರ್ತಿ ! 

ಪ್ರಯಾಗರಾಜ್ ನಲ್ಲಿ ಇನ್ಫೋಸಿಸ್ ಫೌಂಡೇಷನ್ ಮುಖ್ಯಸ್ಥೆ ! 3  ದಿನ ಕುಂಭಮೇಳದಲ್ಲಿ ಭಾಗವಹಿಸಲಿರುವ ಸುಧಾ ಮೂರ್ತಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada