• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, June 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ: ಪ್ರಕಾಶ್ ರಾಜ್‌ ಸಾಥ್

ಪ್ರತಿಧ್ವನಿ by ಪ್ರತಿಧ್ವನಿ
June 15, 2026
in ಕರ್ನಾಟಕ
0
ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ; ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ: ಪ್ರಕಾಶ್ ರಾಜ್‌ ಸಾಥ್
Share on WhatsAppShare on FacebookShare on Telegram

ಬೆಂಗಳೂರು: ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ Dharmendra Pradhan ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಭಾನುವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.ಮಳೆಯ ನಡುವೆಯೂ ನಡೆದ ಪ್ರತಿಭಟನೆಯಲ್ಲಿ ನೂರಾರು ವಿದ್ಯಾರ್ಥಿಗಳು ಹಾಗೂ ಯುವಕರು ಭಾಗವಹಿಸಿ, ಕೇಂದ್ರ ಸರ್ಕಾರ ಮತ್ತು ಶಿಕ್ಷಣ ಸಚಿವರ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನಾಕಾರರು ವಿವಿಧ ಭಿತ್ತಿಪತ್ರಗಳನ್ನು ಪ್ರದರ್ಶಿಸಿ, ನೀಟ್‌ ಪರೀಕ್ಷಾ ವ್ಯವಸ್ಥೆಯಲ್ಲಿನ ಲೋಪಗಳು ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿದರು.

ADVERTISEMENT

ಸುಮಾರು ಮೂರೂವರೆ ಗಂಟೆಗಳ ಕಾಲ ನಡೆದ ಪ್ರತಿಭಟನೆಯಲ್ಲಿ ಕೆಲವರು ಮಳೆಯ ನಡುವೆ ಕೊಡೆ ಹಿಡಿದು ಭಾಷಣ ಆಲಿಸಿದರೆ, ಇನ್ನೂ ಕೆಲವರು ಮರಗಳ ಕೆಳಗೆ ಆಶ್ರಯ ಪಡೆದು ಹೋರಾಟದಲ್ಲಿ ಭಾಗಿಯಾದರು. ಕ್ರಾಂತಿಗೀತೆಗಳ ಮೂಲಕ ಪ್ರತಿಭಟನಾಕಾರರನ್ನು ಹುರಿದುಂಬಿಸಲಾಯಿತು.ಪ್ರತಿಭಟನಾಕಾರರು ಮಾತನಾಡಿ, ಕೇಂದ್ರ ಶಿಕ್ಷಣ ಇಲಾಖೆಯ ವೈಫಲ್ಯದಿಂದ ಲಕ್ಷಾಂತರ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವುದು ದುಃಖಕರ ಬೆಳವಣಿಗೆ ಎಂದು ಆರೋಪಿಸಿದರು. ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಫಲಿತಾಂಶಗಳಲ್ಲಿನ ಗೊಂದಲಗಳಿಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಮಾತನಾಡಿ, ನಿರುದ್ಯೋಗ ಮತ್ತು ಶಿಕ್ಷಣ ಕ್ಷೇತ್ರದ ಸಮಸ್ಯೆಗಳಿಂದ ಯುವಜನತೆ ತತ್ತರಿಸಿದ್ದು, ಕೋಮು ರಾಜಕೀಯದ ಬದಲಾಗಿ ಜನಪರ ವಿಚಾರಗಳಿಗೆ ಆದ್ಯತೆ ನೀಡಬೇಕಿದೆ ಎಂದು ಹೇಳಿದರು. ಪ್ರಶ್ನೆ ಮಾಡುವವರನ್ನು ರಾಷ್ಟ್ರವಿರೋಧಿಗಳೆಂದು ಬಿಂಬಿಸುವ ಪ್ರವೃತ್ತಿಯನ್ನು ಅವರು ಟೀಕಿಸಿದರು.ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ನಟ Prakash Raj ಮಾತನಾಡಿ, ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಾಜಕೀಯ ಮತ್ತು ಸಾರ್ವಜನಿಕ ಚರ್ಚೆಗಳಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು. ನೀಟ್‌ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಬಗ್ಗೆ ಪ್ರಧಾನಿ ಮೌನ ವಹಿಸಿರುವುದನ್ನು ಪ್ರಶ್ನಿಸಿದ ಅವರು, ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಅಗತ್ಯ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಹೋರಾಟಗಾರ Sonam Wangchuk, ಸಿಜೆಪಿ ಮುಖಂಡರಾದ ಸೌರವ್ ದಾಸ್, ರಾಹುಲ್ ಟಿ.ಎಸ್., ವನ್ಯಜೀವಿ ಛಾಯಾಗ್ರಾಹಕರಾದ ಕೃಪಾಕರ್ ಮತ್ತು ಸೇನಾನಿ, ಲೇಖಕ Nagesh Hegde ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

 

Tags: #bengaluru#DharmendraPradhan#EducationSystem#indianews#NEETPaperLeak#StudentProtest#YouthProtestCJPNEETPrakashRajpratidavani
Previous Post

‘ರಾಮಾಯಣ ಓದಿದ್ದೀಯಾ?’ ಎಂದು ಭಗವಾನ್‌ಗೆ ಕಾಂಗ್ರೆಸ್ ನಾಯಕ ಉಗ್ರಪ್ಪ ಪ್ರಶ್ನೆ

Next Post

ಪರಿಚಯದಲ್ಲಿ ಸಾಹಿಲ್, ಬಳಿಕ ಮತಾಂತರ ಒತ್ತಡ? ಮೀರತ್‌ನಲ್ಲಿ ಯುವತಿಯ ಸ್ಫೋಟಕ ಆರೋಪ

Related Posts

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..
Top Story

ಅಖಿಲ ಭಾರತ ವೀರಶೈವ ಮಹಾಸಭೆಯ “ಮಹಾಪ್ರಧಾನ ಕಾರ್ಯದರ್ಶಿಯಾಗಿ S.S ಗಣೇಶ್ ನೇಮಕ..

by ಪ್ರತಿಧ್ವನಿ
June 16, 2026
0

ಬೆಂಗಳೂರು : ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾಪ್ರಧಾನ ಕಾರ್ಯದರ್ಶಿಯಾಗಿ ಎಸ್‌.ಎಸ್. ಗಣೇಶ್ ಅವರನ್ನು ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಸಚಿವ ಈಶ್ವರ್‌ ಖಂಡ್ರೆ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ....

Read moreDetails
ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

ಪಕ್ಷದ ಹೈಕಮಾಂಡ್‌ ಮೆಚ್ಚಿಸಿ, ಇನ್ನಷ್ಟು ಉನ್ನತ ಹುದ್ದೆಗಳಿಗೆ ಪ್ರಯತ್ನ ಹಾಸ್ಯಾಸ್ಪದ : ಪ್ರಿಯಾಂಕ್‌ ಖರ್ಗೆಗೆ ಬೊಮ್ಮಾಯಿ ಟಾಂಗ್..!

June 16, 2026
ಬಿಡದಿ ಟೌನ್ ಶಿಪ್ ನಿರ್ಮಾಣ ಯೋಜನೆ ಬಿಜೆಪಿ-ಜೆಡಿಎಸ್‌ ಕೂಸು, ನಮ್ಮದಲ್ಲ: ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್

ಬಿಡದಿ ಟೌನ್ ಶಿಪ್ ನಿರ್ಮಾಣ ಯೋಜನೆ ಬಿಜೆಪಿ-ಜೆಡಿಎಸ್‌ ಕೂಸು, ನಮ್ಮದಲ್ಲ: ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್

June 16, 2026
ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯ: ಕರ್ನಾಟಕಕ್ಕೆ ರಾಷ್ಟ್ರೀಯ ಪ್ರಶಸ್ತಿ

ಅತ್ಯಧಿಕ ಪವನ ವಿದ್ಯುತ್‌ ಸಾಮರ್ಥ್ಯ: ಕರ್ನಾಟಕಕ್ಕೆ ರಾಷ್ಟ್ರೀಯ ಪ್ರಶಸ್ತಿ

June 16, 2026
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: ದಾವಣಗೆರೆಯಲ್ಲಿ ಕಂತೆ ಕಂತೆ ನೋಟು..ಚಿನ್ನ..!

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: ದಾವಣಗೆರೆಯಲ್ಲಿ ಕಂತೆ ಕಂತೆ ನೋಟು..ಚಿನ್ನ..!

June 16, 2026
Next Post
‘ರಾಮಾಯಣ ಓದಿದ್ದೀಯಾ?’ ಎಂದು ಭಗವಾನ್‌ಗೆ ಕಾಂಗ್ರೆಸ್ ನಾಯಕ ಉಗ್ರಪ್ಪ ಪ್ರಶ್ನೆ

ಪರಿಚಯದಲ್ಲಿ ಸಾಹಿಲ್, ಬಳಿಕ ಮತಾಂತರ ಒತ್ತಡ? ಮೀರತ್‌ನಲ್ಲಿ ಯುವತಿಯ ಸ್ಫೋಟಕ ಆರೋಪ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada