Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ
No Result
View All Result
Pratidhvani
No Result
View All Result

ಫ್ರೀಡಂ ಪಾರ್ಕ್ ನಲ್ಲಿ ನಡೆಯುವ ಪ್ರತಿಭಟನೆಗಳಿಂದ ಮಹಾರಾಣಿ ‌ವಿವಿಯ 4 ಸಾವಿರ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಕುತ್ತು

ಕರ್ಣ

ಕರ್ಣ

July 21, 2022
Share on FacebookShare on Twitter

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಜನ ಸೇರಿ ಪ್ರತಿಭಟನೆ ಆಗ್ತಿದೆ ಅಂದ್ರೆ ಸರ್ಕಾರಕ್ಕೆ ಟೆನ್ಷನ್ ಶುರುವಾಗುತ್ತೆ. ನಗರದೆಲ್ಲಡೆ ಚೆಲ್ಲಾಪಿಲ್ಲಿಯಾಗಿ ನಡೀತಿದ್ದ ಪ್ರತಿಭಟನೆಯನ್ನು ತಂದು ಸರ್ಕಾರ ಫ್ರೀಡಂ ಪಾರ್ಕ್ ನಲ್ಲಿ ಹಾಕಿತ್ತು. ಇದು ಈಗ ಮತ್ತೊಂದು ಬಹುದೊಡ್ಡ ಸಮಸ್ಯೆಗೆ ಕಾರಣವಾಗಿದೆ. ಫ್ರೀಡಂ ಪಾರ್ಕ್ ಈಗ ಸಾವಿರಾರು ಮಕ್ಕಳ ಶಿಕ್ಷಣಕ್ಕೆ ಕೊಳ್ಳಿ ಇಡುತ್ತಿದೆ.

ಹೆಚ್ಚು ಓದಿದ ಸ್ಟೋರಿಗಳು

ದೇಶಪ್ರೇಮ ಅನ್ನುವುದು ಬರೀ ಹಿಂದಿಯಲ್ಲಿ ಮಾತ್ರ ಪ್ರಕಟವಾಗುವುದೇ? : ಕವಿರಾಜ್

ಸರ್ಕಾರ ನಡೀತಾ ಇಲ್ಲ ಎಂಬ ಮಾಧುಸ್ವಾಮಿ ಹೇಳಿಕೆಗೆ ಸಚಿವ ಶ್ರೀರಾಮುಲು ಅಸಮಾಧಾನ!

ಸ್ವತಂತ್ರ್ಯ ದಿನಾಚರಣೆ ಹಿನ್ನೆಲೆ ರಾಜ್ಯಾದ್ಯಂತ 81 ಕೈದಿಗಳ ಬಿಡುಗಡೆ!

ಫ್ರೀಡಂ ಪಾರ್ಕ್ ನಲ್ಲೂ ಪ್ರತಿಭಟನೆ, ಮೆರವಣಿಗೆ ಬ್ರೇಕ್ ಬೀಳುತ್ತಾ.!

ನಗರದ ಫ್ರೀಡಂ ಪಾರ್ಕ್ ಪ್ರತಿಭಟನೆಗಳ ಅಡ್ಡೆ. ಯಾವುದೇ ಪ್ರತಿಭಟನೆಗಳಿದ್ದರೂ ಅದನ್ನು ಫ್ರೀಡಂ ಪಾರ್ಕ್ ನಲ್ಲೇ ಮಾಡಬೇಕು. ಅದರ ಹೊರತಾಗಿ ಎಲ್ಲಿಯೂ ಪೊಲೀಸರು ಪ್ರತಿಭಟನೆಗೆ ಅನುಮತಿ ನೀಡುವಹಾಗಿಲ್ಲ. ಹೀಗಾಗಿ ತಿಂಗಳಿಗೆ ಸರಾಸರಿ 15 ರಿಂದ 20 ಪ್ರತಿಭಟನೆಗಳು ನಡೆಯುತ್ತದೆ ಇಲ್ಲಿ. ಇದೀಗ ಸಾಲು ಸಾಲು ಪ್ರತಿಭಟನೆಗಳು ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಕೊಳ್ಳಿ ಇಡುತ್ತಿದೆ‌. ಹೆಗ್ಗಿಲ್ಲದೆ ನಡೆಯುವ ಪ್ರತಿಭಟನೆಗಳಿಂದ ಅಕ್ಕಪಕ್ಕದಲ್ಲೇ ಇರುವ ಕಾಲೇಜಿನ ವಿದ್ಯಾರ್ಥಿನಿಯರಿಗೆ ಸೂಕ್ತವಾಗಿ ತರಗತಿಗಳು ನಡೆಯುತ್ತಿಲ್ಲ.

ಸರ್ಕಾರಕ್ಕೆ ಮನವಿ ಮಾಡಿ ಕೋರ್ಟ್ ಮೊರೆ ಹೋಗಲು ನಿರ್ಧರಿಸಿದ ಕಾಲೇಜಿನ ಆಡಳಿತ ಮಂಡಳಿ.!

ಫ್ರೀಡಂ ಪಾರ್ಕ್ ನಲ್ಲಿ ನಡೆಯುವ ಪ್ರತಿಭಟನೆ, ಮೆರವಣಿಗೆ ವಿರುದ್ಧ ವಿದ್ಯಾರ್ಥಿಗಳು ಹಾಗೂ ಕಾಲೇಜು ಆಡಳಿತ ಮಂಡಳಿ ಆಕ್ಷೇಪವನ್ನ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಗಳಿಂದ ದೊಡ್ಡ ಪ್ರಮಾಣದಲ್ಲಿ ಶಬ್ದವಾಗುತ್ತಿದ್ದು ಕಾಲೇಜು ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಪಾಠ ಕೇಳೋದಕ್ಕೆ ಆಗುತ್ತಿಲ್ಲ ಅನ್ನೋ ಆರೋಪವನ್ನು ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿಸಿ ಗೋಮತಿದೇವಿ ಹಾಗೂ ಪ್ರಾಧ್ಯಾಪಕ ಮಂಜುನಾಥ್ ಆರೋಪಿಸಿದ್ದಾರೆ. 

ಮಹಾರಾಣಿ ವಿಶ್ವವಿದ್ಯಾಲಯದ 4 ಸಾವಿರ ಮಕ್ಕಳಿಗೆ ಇದರಿಂದ ಸಮಸ್ಯೆ.!

ಬೆಂಗಳೂರಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ಮಾಡಬಾರದು, ಫ್ರೀಡಂ ಪಾರ್ಕಿನಲ್ಲಿ ಮಾತ್ರ ಅವಕಾಶ ಕೊಡಬೇಕು ಎಂದು ಹೈಕೋರ್ಟ್ ಆದೇಶವಿದೆ. ಅದನ್ನ ಸರ್ಕಾರವೂ ಪಾಲಿಸುತ್ತಾ ಬರುತ್ತಿದೆ. ಅದರೆ ಇದರಿಂದ ಫ್ರೀಡಂ ಪಾರ್ಕಿಗೆ ಹತ್ತಿರವೇ ಇರುವ ಮಹಾರಾಣಿ ವಿವಿಯ ಸುಮಾರು 4 ಸಾವಿರ ವಿದ್ಯಾರ್ಥಿನಿಯರಿಗೆ ಹಲವು ರೀತಿಯ ಸಮಸ್ಯೆಗಳಾಗುತ್ತಿವೆ. ಪ್ರತಿಭಟನೆಗೆ ಫ್ರೀಡಂ ಪಾರ್ಕಿನ ಪಾರ್ಕಿಂಗ್ ಜಾಗದಲ್ಲೂ ಅವಕಾಶ ಕೊಡುತ್ತಿರೋದ್ರಿಂದ ಮೈಕ್, ಸ್ಪೀಕರ್ ನಿಂದಾಗಿ ದೊಡ್ಡ ಪ್ರಮಾಣದಲ್ಲಿ ಶಬ್ದ ಮಾಲಿನ್ಯವಾಗುತ್ತಿದೆ. ಇದು ಅಕ್ಕಪಕ್ಕದಲೇ ಇರುವ ಕಾಲೇಜುಗಳ ವಿದ್ಯಾರ್ಥಿನಿಯರ ಶಿಕ್ಷಣಕ್ಕೆ ಕೊಳ್ಳಿ‌ ಇಡುತ್ತಿದೆ. ಆದಷ್ಟು ಬೇಗ ಇದಕ್ಕೊಂದು ಪರಿಹಾರ ಕಲ್ಪಿಸುವಂತೆ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ಇತಿಹಾಸ ಪ್ರಾಧ್ಯಾಪಕ ಮಂಜುನಾಥ್ ಮನವಿ ಮಾಡಿದ್ದಾರೆ. 

ಒಟ್ಟಾರೆ ಪ್ರತಿಭಟಿಸೋದು, ನ್ಯಾಯ ಕೇಳೋದು ಒಂದು ಕಡೆಯಾದ್ರೆ, ದಯವಿಟ್ಟು ನಮ್ಮ ವಿದ್ಯಾಭ್ಯಾಸಕ್ಕೆ ತೊಂದರೆ ಮಾಡಬೇಡಿ ಅನ್ನೋ ವಿದ್ಯಾರ್ಥಿಗಳು ಇನ್ನೊಂದು ಕಡೆ. ಸರ್ಕಾರ ಪ್ರತಿಭಟನೆ ಸ್ಥಳವನ್ನ ಸ್ಥಳಾಂತರ ಮಾಡುತ್ತಾ..!? ಅಥವಾ ಮೈಕ್, ಸ್ಪೀಕರ್ ರಹಿತ ಪ್ರತಿಭಟನೆಗೆ ಅವಕಾಶ ಮಾಡಿಕೊಡುವುದೊಂದೇ ಈಗಿರುವ ದಾರಿ. ಆದರೆ ಅಂತಿಮವಾಗಿ ಈ ಪ್ರಕರಣ ಏನಾಗುತ್ತೆ ಎಂಬುವುದನ್ನು ಕಾದುನೋಡಬೇಕಿದೆ.

RS 500
RS 1500

SCAN HERE

[elfsight_youtube_gallery id="4"]

don't miss it !

ಹರ್ ಘರ್ ತಿರಂಗಾ ಅಭಿಯಾನಕ್ಕೆ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಸಾಥ್‌
ದೇಶ

ಹರ್ ಘರ್ ತಿರಂಗಾ ಅಭಿಯಾನಕ್ಕೆ ಪ್ರಧಾನಿ ಮೋದಿ ತಾಯಿ ಹೀರಾಬೆನ್ ಸಾಥ್‌

by ಪ್ರತಿಧ್ವನಿ
August 13, 2022
ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ
ದೇಶ

ಹರ್ ಘರ್ ತಿರಂಗ ಅಭಿಯಾನ ಬಹಿಷ್ಕರಿಸಲು ಯತಿ ನರಸಿಂಹಾನಂದ್ ಕರೆ

by ಪ್ರತಿಧ್ವನಿ
August 13, 2022
ಬಿಜೆಪಿಯವರು ಬ್ರಿಟಿಷರಿಗೆ ಅಡುಗೆ ಮಾಡಿ ಹಾಕುತ್ತಿದ್ದವರು, ಈಗ ದೊಡ್ಡ ಮನುಷ್ಯರಾಗಿದ್ದಾರೆ : ರಮೇಶ್‌ ಕುಮಾರ್‌
ಕರ್ನಾಟಕ

ಬಿಜೆಪಿಯವರು ಬ್ರಿಟಿಷರಿಗೆ ಅಡುಗೆ ಮಾಡಿ ಹಾಕುತ್ತಿದ್ದವರು, ಈಗ ದೊಡ್ಡ ಮನುಷ್ಯರಾಗಿದ್ದಾರೆ : ರಮೇಶ್‌ ಕುಮಾರ್‌

by ಪ್ರತಿಧ್ವನಿ
August 14, 2022
ಈಜುಡುಗೆ ಧರಿಸಿ ಇನ್ಸ್ಟಗ್ರಾಮಿನಲ್ಲಿ ಫೋಟೋ ಹಾಕಿದ ಅಧ್ಯಾಪಕಿಯನ್ನು ಹೊರ ಹಾಕಿದ ಕಾಲೇಜು ಕ್ರಮ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ದೇಶ

ಈಜುಡುಗೆ ಧರಿಸಿ ಇನ್ಸ್ಟಗ್ರಾಮಿನಲ್ಲಿ ಫೋಟೋ ಹಾಕಿದ ಅಧ್ಯಾಪಕಿಯನ್ನು ಹೊರ ಹಾಕಿದ ಕಾಲೇಜು ಕ್ರಮ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ

by ಪ್ರತಿಧ್ವನಿ
August 14, 2022
ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್
ಕರ್ನಾಟಕ

ಈ ಭಾರೀ ಗಣೇಶೋತ್ಸವಕ್ಕೆ ಯಾವುದೇ ನಿರ್ಬಂಧವಿಲ್ಲ : ಆರ್ ಅಶೋಕ್

by ಪ್ರತಿಧ್ವನಿ
August 8, 2022
Next Post
ಬೆಂಗಳೂರಿನ ಮುಖ್ಯ ರಸ್ತೆಗಳ ಬೀದಿ ವ್ಯಾಪಾರಕ್ಕೆ ಬ್ರೇಕ್ : ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಶಾಕ್

ಬೆಂಗಳೂರಿನ ಮುಖ್ಯ ರಸ್ತೆಗಳ ಬೀದಿ ವ್ಯಾಪಾರಕ್ಕೆ ಬ್ರೇಕ್ : ಬಿಬಿಎಂಪಿಯಿಂದ ಬೀದಿ ಬದಿ ವ್ಯಾಪಾರಿಗಳಿಗೆ ಶಾಕ್

21 ಸಾವಿರ ಕೋಟಿ ಬಜೆಟ್ ಹಣವನ್ನು ಖರ್ಚು ಮಾಡದೇ ಉಳಿಸಿಕೊಂಡಿರುವ ರಾಜ್ಯ ಸರ್ಕಾರ! – ಇಲ್ಲಿದೆ ಸಂಪೂರ್ಣ ವರದಿ

12 ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರ ನೇಮಕಾತಿ ರದ್ದುಗೊಳಿಸಿದ ರಾಜ್ಯ ಸರ್ಕಾರ!

ರಾಷ್ಟ್ರಗೀತೆ ಹಾಡೋದನ್ನ ಪ್ರಮೋದ್ ಮುತಾಲಿಕ್ ನಿಂದ ಕಲಿಬೇಕಿಲ್ಲ – ಶಾಸಕ ಜಮೀರ್ ಅಹ್ಮದ್ ಖಾನ್

ನನಗೂ ಮುಖ್ಯಮಂತ್ರಿ ಆಗಬೇಕೆಂಬ ಆಸೆ ಇದೆ  : ಶಾಸಕ ಜಮೀರ್ ಅಹ್ಮದ್

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
    • ವ್ಯಕ್ತಿ ವಿಶೇಷ
  • ಫೀಚರ್ಸ್
  • ಸಿನಿಮಾ
  • ವಿಡಿಯೋ
    • ಮುಕ್ತ ಮಾತು
    • ಸಂದರ್ಶನ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಕ್ಯಾಂಪಸ್ ಕಾರ್ನರ್
    • ಕೃಷಿ
    • ಕಲೆ – ಸಾಹಿತ್ಯ
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist