ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರವಾಗಿ ಸಂತ್ರಸ್ತೆಯರು ಪೊಲೀಸರು ಹಾಗೂ ಎಸ್ಐಟಿ ಮುಂದೆ ಬಂದು ದೈರ್ಯವಾಗಿ ಹೇಳಿಕೆ ನೀಡಬಹುದು. ಸಂತ್ರಸ್ತೆಯರಿಗೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwa) ಭರವಸೆ ನೀಡಿದ್ದಾರೆ.
![](https://pratidhvani.com/wp-content/uploads/2024/05/prajwal-revanna6-1714740300-2-1024x576.jpg)
ಸದಾಶಿವನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮಧ್ಯ ರಾತ್ರಿ ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದಿದ್ದಾರೆ. ಅವರ ವಿರುದ್ಧ ಬಂಧನದ ವಾರಂಟ್ ಇತ್ತು. ಈಗ ಅವರ ಬಂಧನವಾಗಿದೆ.ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಅವರು ತನಿಖೆಗೆ ಸಹಕಾರ ಕೊಡಬೇಕು ಎಂದು ಹೇಳಿದ್ದಾರೆ.
![](https://pratidhvani.com/wp-content/uploads/2024/05/prajwal-revanna-arrests.jpg)
ಪ್ರಜ್ವಲ್ ಹೊರ ದೇಶದಲ್ಲಿದ್ದರು. ರಾಜತಾಂತ್ರಿಕ ಪಾಸ್ಪೋರ್ಟ್ ರದ್ದಾಗುತ್ತೆ ಎಂಬ ಕಾರಣಕ್ಕೆ ಅವರೇ ಬಂದಿದ್ದಾರೆ. ದೇಶದಲ್ಲಿಯೇ ಇದ್ದಿದ್ದರೆ ಇಷ್ಟು ಹೊತ್ತಿಗೆ ಬಂಧನವಾಗಿರುತ್ತಿತ್ತು ಎಂದು ಹೇಳಿದ್ದಾರೆ.