ಗಲಭೆಗಳಿಂದ ಮಣಿಪುರ ರಾಜ್ಯದಲ್ಲಿ ನಿರ್ಬಂಧ ಹೇರಲಾಗಿದ್ದ ಅಂತರ್ಜಾಲ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಿ ಎಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ ಎಂದು ನ್ಯಾಯಾಲಯದ ಅಧಿಕೃತ ಮೂಲಗಳು ಶನಿವಾರ (ಆಗಸ್ಟ್ 12) ತಿಳಿಸಿವೆ.
ಮೇ 3 ರಂದು ಮಣಿಪುರದಲ್ಲಿ ಗಲಭೆ ಭುಗಿಲೆದ್ದ ಕಾರಣ ಮೊಬೈಲ್ ಅಂತರ್ಜಾಲ ಸೇವೆಗಳಿಗೆ ರಾಜ್ಯದಲ್ಲಿ ನಿರ್ಬಂಧ ಹೇರಲಾಗಿತ್ತು. ಅಂತರ್ಜಾಲವನ್ನು ಮರುಸ್ಥಾಪಿಸಲು ಕೋರಿ ಸಲ್ಲಿಸಿದ ವಿವಿಧ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಾಲಯ ಹೀಗೆ ಹೇಳಿದೆ.
ಮಣಿಪುರ ಹೈಕೋರ್ಟ್ನ ನ್ಯಾಯಮೂರ್ತಿಗಳಾದ ಅಹಂತೇಮ್ ಬಿಮೋಲ್ ಸಿಂಗ್ ಮತ್ತು ಎ. ಗುಣೇಶ್ವರ್ ಶರ್ಮಾ ಅವರ ವಿಭಾಗೀಯ ಪೀಠ ಅಂತರ್ಜಾಲ ಸೇವೆ ಮರುಸ್ಥಾಪನೆ ಕೋರಿ ಸಲ್ಲಿಕೆಯಾಗಿದ್ದ ವಿವಿಧ ಅರ್ಜಿಗಳ ವಿಚಾರಣೆಯನ್ನು ಶುಕ್ರವಾರ ನಡೆಸಿತು.
ಈ ಸುದ್ದಿ ಓದಿದ್ದೀರಾ? ಉತ್ತರಾಖಂಡ | ರುದ್ರಪ್ರಯಾಗದಲ್ಲಿ ಭೂಕುಸಿತ ; ಐವರು ಯಾತ್ರಾರ್ಥಿಗಳು ಸಾವು
ರಾಜ್ಯದಲ್ಲಿ ಅಂತರ್ಜಾಲ ಸೇವೆಯನ್ನು ಮರುಸ್ಥಾಪಿಸಲು ಕಾರ್ಯವಿಧಾನ ರೂಪಿಸಲು ಪೀಠ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಎಂದು ಹೈಕೋರ್ಟ್ನ ಅಧಿಕಾರಿಯೊಬ್ಬರು ಹೇಳಿದರು.
ಹಂತ ಹಂತವಾಗಿ ಜನರ ಮೊಬೈಲ್ ಸಂಖ್ಯೆಗಳ ಪಟ್ಟಿ ಮಾಡಿ ಅಂತರ್ಜಾಲ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮಣಿಪುರ ಹೈಕೋರ್ಟ್ ವಿಭಾಗೀಯ ಪೀಠ ಹೇಳಿದೆ.