• Home
  • About Us
  • ಕರ್ನಾಟಕ
Tuesday, November 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಪ್ರಚೋದನಕಾರಿ ಹೇಳಿಕೆ ; ನಟ ಚೇತನ್​ ಅಹಿಂಸಾ OCI ರದ್ದು..!

Any Mind by Any Mind
April 15, 2023
in Top Story, ಇದೀಗ, ಕರ್ನಾಟಕ, ದೇಶ
0
ಪ್ರಚೋದನಕಾರಿ ಹೇಳಿಕೆ ; ನಟ ಚೇತನ್​ ಅಹಿಂಸಾ OCI ರದ್ದು..!
Share on WhatsAppShare on FacebookShare on Telegram

ಬೆಂಗಳೂರು: ಏ .15 :  ಹೈಕೋರ್ಟ್​ ಮುಖ್ಯ ನ್ಯಾಯಮೂರ್ತಿಗಳ ಹೆಸರನ್ನು ಉಲ್ಲೇಖಿಸಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ನಟ ಚೇತನ್​ ಅವರ ಭಾರತದ ಸಾಗರೋತ್ತರ ನಾಗರೀಕ ವೀಸಾ(OCI) ಕೇಂದ್ರ ಗೃಹ ಸಚಿವಾಲಯ ರದ್ದು ಪಡಿಸಿದೆ. ಈ ಸಂಬಂಧ ಚೇತನ್​ ಅವರಿಗೆ ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ(FRRO)ವತಿಯಿಂದ ಪತ್ರವನ್ನು ಕಳುಹಿಸಲಾಗಿದ್ದು 15 ದಿನದೊಳಗೆ OCI ಕಾರ್ಡ್​ ಅನನ್ಉ ಹಿಂತಿರುಗಿಸುವಂತೆ ಸೂಚಿಸಿದೆ.

ADVERTISEMENT

ಕಳೆದ ವರ್ಷ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದ್ದ ಹಿಜಾಬ್​ ವಿಚಾರದ ಕುರಿತು ವಿಚಾರಣೆ ನಡೆಸಿದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ನಟ ಚೇತನ್​ ಅವಹೇಳನಕಾರಿ ಪೋಸ್ಟ್​ ಒಂದನ್ನು ಹಾಕಿದ್ದರು. 21ನೇ ಶತಮಾನದಲ್ಲಿ ನ್ಯಾಯಮೂರ್ತಿ ಒಬ್ಬರ ಸ್ತ್ರೀ ದ್ವೇಷ ನಾಚಿಕೆಗೇಡಿನ ಸಂಗತಿ. ಅಂದು ಅಸಹ್ಯಕರ ಹೇಳಿಕೆ ನೀಡಿದವರು ಇಂದು ವಿದ್ಯಾ ಸಂಸ್ಥೆಗಳಲ್ಲಿ ಹಿಜಾಬ್​ ಬೇಕೇ, ಬೇಡವೇ ಎಂಬುದರ ಕುರಿತು ಪರಿಶೀಲನೆ ನಡೆಸುತ್ತಿದ್ದಾರೆ. ಅವರಿಗೆ ಈ ವಿಚಾರದ ಬಗ್ಗೆ ಸ್ಪಷ್ಟತೆಯ ಅವಶ್ಯಕತೆಯಿದೆ ಎಂದು ತಮ್ಮ ಪೋಸ್ಟ್​ನಲ್ಲಿ ಉಲ್ಲೇಖಿಸಿದ್ದರು. ಈ ಸಂಬಂಧ ಶೇಷಾದ್ರಿಪುರಂ ಪೊಲೀಸ್​ ಠಾಣೆಯಲ್ಲಿ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಚೇತನ್​ರನ್ನು ಬಂಧಿಸಿದ್ದರು.

​ನೋಟಿಸ್​ ಜಾರಿ

ನಟ ಚೇತನ್​ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ FRRO ಅಧಿಕಾರಿಗಳು ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡುವಂತೆ ಶೋಕಾಸ್​ ನೋಟಿಸ್​ ಜಾರಿ ಮಾಡಿದ್ದರು. ನಿಮ್ಮ OCI ವೀಸಾವನ್ನು ಏಕೆ ರದ್ದು ಮಾಡಲು ಕೇಂದ್ರ ಸರ್ಕಾರಕ್ಕೆ ಏಕೆ ಮನವಿ ಸಲ್ಲಿಸಬಾರದು ಎಂಬುದರ ಕುರಿತು ಕಾರಣ ಕೇಳಿತ್ತು. ಇದಕ್ಕೆ ಉತ್ತರಿಸಿದ್ದ ಚೇತನ್​ ನಾನು ಸಾಮಾಜಿಕ ಹೋರಾಟ ಹಾಗೂ ಸಿನಿಮಾ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದು ಭಾರತೀಯ ಯುವತಿಯನ್ನು ವಿವಾಹ ಆಗಿದ್ದೇನೆ ಎಂದು ನೋಟಿಸ್​ಗೆ ಉತ್ತರಿಸಿದ್ದರು. ಇದಾದ ಬಳಿಕ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಬರಹ ಪ್ರಕಟಿಸಿದ ಆರೋಪದ ಮೇಲೆ ನಟ ಚೇತನ್​ರನ್ನು ಮಾರ್ಚ್​ 21ರಂದು ಬಂಧಿಸಲಾಗಿತ್ತು.

ನನ್ನ ವೀಸಾವನ್ನು ರದ್ದುಗೊಳಿಸಿದೆ

ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್​ ನಿನ್ನೆ ಅಂಬೇಡ್ಕರ್ ಜಯಂತಿಯಂದು ಕೇಂದ್ರ ಗೃಹ ಸಚಿವಾಲಯವು ಭಾರತದಲ್ಲಿ ಉಳಿಯಲು ನನ್ನ ವೀಸಾವನ್ನು ರದ್ದುಗೊಳಿಸಿದೆ ಎಂದು ಕಿಡಿಕಾರಿದ್ದಾರೆ. OCI ರದ್ದುಪಡಿಸಿದ ಕುರಿತು ಕೇಂದ್ರ ಸರ್ಕಾರ ಮಾರ್ಚ್​ 28ರಂದು ಆದೇಶ ಹೊರಡಿಸಿತ್ತು. ಇದಾದ ಬಳಿಕ FRRO ಚೇತನ್​ ಅವರಿಗೆ ಏಪ್ರಿಲ್​ 14ರಂದು ನೋಟಿಸ್​ ಜಾರಿ ಮಾಡಿತ್ತು. OCI ಕಾರ್ಡ್​ ಹಿಂತಿದುಗಿಸಿದ ನಂತರ ಚೇತನ್​ ಅವರು ದೇಶ ತೊರೆಯಬೇಕು. ವಾಪಸ್​ ದೇಶದೊಳಗೆ ಬರಬೇಕೆಂದರೆ ಅವರು ಪುನಃ ವಿಸಾಗಾಗಿ ಅರ್ಜಿ ಹಾಕಬೇಕು ಅದು ದೊರೆತ ನಂತರವೇ ಅವರು ಬರಬಹುದು ಎಂದು FRRO ಅಧಿಕಾರಿಗಳು ತಿಳಿಸಿದ್ದಾರೆ.

OCI ರದ್ದು ಪ್ರಶ್ನಿಸಿ ಹೈಕೋರ್ಟ್​ನಲ್ಲಿ ಅರ್ಜಿ

ನ್ಯಾಯಾಧೀಶರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ಧಾರೆಂದು ಆರೋಪಿಸಿ OCIರದ್ದು ಮಾಡಿರುವ ಕುರಿತು ನಟ, ಸಾಮಾಜಿಕ ಹೋರಾಟಗಾರ ಚೇತನ್​ ಅಹಿಂಸಾ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ತಮ್ಮ ವಕೀಲರ ಜೊತೆ ಮಾತುಕತೆ ನಡೆಸಿದ್ದು ಹೈಕೋರ್ಟ್​ನಲ್ಲಿ ಮೊಕದ್ದಮೆ ಹೂಡಲು ಸಿದ್ದತೆ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ. ಕಾನೂನು ಬದ್ಧವಾದ ಸೂಕ್ತ ಕಾರಣ ನೀಡದೆ ನನ್ನ OCI ವೀಸಾವನ್ನು ರದ್ದು ಮಾಡಲಾಗಿದೆ. ಈ ಬಗ್ಗ ಏಪ್ರಿಲ್​ 14ರಂದು ವೀಸಾ ರದ್ಧತಿಯ ಆದೇಶ ಪ್ರತಿ ನನ್ನ ಕೈ ಸೇರಿದೆ. ಈ ಕುರಿತು ನಾನು ನನ್ನ ವಕೀಲರ ಜೊತೆ ಚರ್ಚೆ ನಡೆಸಿದ್ದು ಹೈಕೋರ್ಟ್​ನಲ್ಲಿ ರದ್ಧತಿ ಪ್ರಶ್ನಿಸಿ ಅರ್ಜಿ ಸಲ್ಲಿಸುತ್ತೇನೆ. ಇದಕ್ಕಾಗಿ ಅಗತ್ಯ ತಯಾರಿಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ಧಾರೆ.

ಕಾನೂನಿನ ಮೂಲಕ ಉತ್ತರಿಸುತ್ತೇನೆ

ಕಳೆದ 18 ವರ್ಷಗಳಿಂದ ನಾನು ಭಾರತದಲ್ಲೇ ಇದ್ದೇನೆ. 12 ವರ್ಷಗಳಿಂದ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ ನನ್ನನು ಸೈದ್ದಾಂತಿಕವಾಗಿ ಸೋಲಿಸಲು ಆಗದೇ ಇರುವವರು ಅನ್ಯ ಮಾರ್ಗಗಳ ಮೂಲಕ ಈ ರೀತಿ ಮಾಡುತ್ತಿದ್ದಾರೆ. ಅಂತವರಿಗೆ ಕಾನೂನಿನ ಮೂಲಕ ಉತ್ತರ ಕೊಡುತ್ತೇನೆ ಎಂದು ತಿಳಿಸಿದ್ಧಾರೆ. ನನ್ನ ವಿರುದ್ಧ ನ್ಯಾಯಾಲಯದಲ್ಲಿ ನಾಲ್ಕು ಪ್ರಕರಣಗಳು ದಾಖಲಾಗಿದೆ. ಇದರಲ್ಲಿ 3 ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು 1 ಪ್ರಕರಣದ ವಿರುದ್ಧ ತಡೆಯಾಜ್ಞೆ ಇದೆ. ಆದರೆ ಯಾವ ಪ್ರಕರಣಗಳು ಸಹ ಸಾಬೀತಾಗಿಲ್ಲ. ಇಂತಹ ಸಮಯದಲ್ಲಿ ಈ ರೀತಿ ಮಾಡಿರುವುದು ನ್ಯಾಯಸಮ್ಮತವಲ್ಲ ಎಂದು ಕಿಡಿಕಾರಿದ್ಧಾರೆ.

Previous Post

ಬಿಜೆಪಿ ಟಿಕೆಟ್ ವಂಚಿತ ಹೂಡಿ ವಿಜಯ ಕುಮಾರ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಕೆ..!

Next Post

ಹಿಜಾಬ್‌, ಹಲಾಲ್‌ ವಿವಾದ ಅನಗತ್ಯ, ನನ್ನ ಬೆಂಬಲವಿಲ್ಲ: ಬಿಎಸ್‌ವೈ ಅಚ್ಚರಿ ಹೇಳಿಕೆ

Related Posts

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
0

ಡಾ.ರಾಜ್ ಪರದೆ ಮೇಲೆ ಮಾತ್ರವಲ್ಲ, ನಿಜ ಜೀವನದಲ್ಲೂ ಅದೇ ಮೌಲ್ಯಗಳನ್ನು ಪಾಲಿಸಿದರು: ಸಿ.ಎಂ ಸಿದ್ದರಾಮಯ್ಯ ಅಪಾರ ಮೆಚ್ಚುಗೆ ಸಿನಿಮಾ ತಾರೆಯರು ಪರದೆ ಮೇಲೆ ಕಾಣುವಷ್ಟೇ ಮೌಲ್ಯಯುತವಾಗಿ ನಿಜ...

Read moreDetails

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

ಅಪ್ಪಂದಿರು ಅಧಿಕಾರದಿಂದ ಇಳಿದರೆ ಆ ಪುತ್ರರ ಸ್ಥಿತಿ ತುಂಬಾ ಬದಲಾಗಲಿದೆ- ಲೆಹರ್ ಸಿಂಗ್

November 3, 2025

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

November 3, 2025

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

November 3, 2025
Next Post
ಹಿಜಾಬ್‌, ಹಲಾಲ್‌ ವಿವಾದ ಅನಗತ್ಯ, ನನ್ನ ಬೆಂಬಲವಿಲ್ಲ: ಬಿಎಸ್‌ವೈ ಅಚ್ಚರಿ ಹೇಳಿಕೆ

ಹಿಜಾಬ್‌, ಹಲಾಲ್‌ ವಿವಾದ ಅನಗತ್ಯ, ನನ್ನ ಬೆಂಬಲವಿಲ್ಲ: ಬಿಎಸ್‌ವೈ ಅಚ್ಚರಿ ಹೇಳಿಕೆ

Please login to join discussion

Recent News

Top Story

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

by ಪ್ರತಿಧ್ವನಿ
November 3, 2025
Top Story

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

by ಪ್ರತಿಧ್ವನಿ
November 3, 2025
Top Story

CM Siddaramaiah: ಬಿಹಾರ ವಿಧಾನಸಭಾ ಚುನಾವಣೆ: ಪ್ರತಿಪಕ್ಷಗಳ ಮಹಾ ಮೈತ್ರಿಕೂಟ ಗೆಲ್ಲುವ ಭರವಸೆಯಿದೆ..

by ಪ್ರತಿಧ್ವನಿ
November 3, 2025
Top Story

Minister KJ George: ಜಾಗ ನೀಡಿದರೆ ಹೆಚ್ಚುವರಿ ವಿದ್ಯುತ್ ಉಪಕೇಂದ್ರ ಸ್ಥಾಪನೆ..!!

by ಪ್ರತಿಧ್ವನಿ
November 3, 2025
Top Story

CM Siddaramaiah: ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು..!!

by ಪ್ರತಿಧ್ವನಿ
November 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ, ಒಳ್ಳೆ ಸಿನಿಮಾ ಮಾಡಿ ಸಬ್ಸಿಡಿ ಪಡೆಯಿರಿ..!!

November 3, 2025

Darshan Case: ನಮ್ಮ ಮೇಲಿರುವ ಆರೋಪಗಳೆಲ್ಲಾ ಸುಳ್ಳೆಂದ ದರ್ಶನ್ ಗ್ಯಾಂಗ್‌..!!‌

November 3, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada