ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ಕೇವಲ 2 ದಿನಗಳು ಬಾಕಿ ಉಳಿದಿದೆ. ಇಂದು ಸಂಜೆ ಆರು ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಹೀಗಾಗಿ ಸಂಜೆ ಐದು ಗಂಟೆ ಬಳಿಕ ಯಾವುದೇ ಸಭೆ, ಸಮಾರಂಭಗಳಿಗೆ ಅವಕಾಶ ಇಲ್ಲದ ಕಾರಣ ಅಭ್ಯರ್ಥಿಗಳು ಕೊನೆ ಹಂತದ ಕಸರತ್ತನ್ನು ನಡೆಸುತ್ತಿದ್ದಾರೆ.
ನಾಳೆಯಿಂದ ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ನಡೆಸಲಿದ್ದಾರೆ. ಇನ್ನು ಚುನಾವಣಾ ನೀತಿ ಸಂಹಿತೆಯಂತೆ ಇಂದು ಸಂಜೆ ಐದು ಗಂಟೆಯಿಂದ ಪಬ್, ಬಾರ್ ಹಾಗೂ ಎಂಆರ್ಪಿ ಮಳಿಗೆಗಳು ಬಂದ್ ಇರಲಿವೆ.
ಇಂದು ಸಂಜೆ ಐದು ಗಂಟೆಯಿಂದ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವವವರೆಗೂ ಮದ್ಯದಂಗಡಿಗಳಿಗೆ ಬೀಗ ಹಾಕಬೇಕೆಂದು ಎಲ್ಲಾ ಬಾರ್ ಮಾಲೀಕರಿಗೆ ಚುನಾವಣಾ ಆಯೋಗ ಸೂಚನೆ ನೀಡಿದೆ.