• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

40 ಕೋಟಿ ವೆಚ್ಚದ ಶಿವಾನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಬಗ್ಗೆ ಸಾರ್ವಜನಿಕರಿಂದ ಸಾಲು ಸಾಲು ದೂರು

ಕರ್ಣ by ಕರ್ಣ
August 25, 2022
in ಕರ್ನಾಟಕ
0
40 ಕೋಟಿ ವೆಚ್ಚದ ಶಿವಾನಂದ ಸರ್ಕಲ್ ಸ್ಟೀಲ್ ಬ್ರಿಡ್ಜ್ ಬಗ್ಗೆ ಸಾರ್ವಜನಿಕರಿಂದ ಸಾಲು ಸಾಲು ದೂರು
Share on WhatsAppShare on FacebookShare on Telegram

ಇದು ಹೊಸ ಫ್ಲೈ ಓವರ್ ಅಂತ ಹುಮ್ಮಸ್ಸಿನಿಂದ ಸೇತುವೆ ಹತ್ತುವ ಮುನ್ನ ಸ್ವಲ್ಪ ಯೋಚಿಸಿ. 40 ಕೋಟಿ ಖರ್ಚಿನಲ್ಲಿ ನಿರ್ಮಾಣವಾದ ಉಕ್ಕಿನ ಸೇತುವೆ ಬಗ್ಗೆ ಆರಂಭದಲ್ಲೇ ಸಾಲು ಸಾಲು ಕಂಪ್ಲೇಟ್ ಬಂದಿದೆ. ಘನ ವಾಹನಗಳು ಸೇತುವೆ ಮೇಲೆ ಹೋಗುವಾಗ ಎದೆ ಝಲ್ ಎನಿಸುವ ಶಬ್ಧ ಕೇಳಿಸುತ್ತಿದೆ. ಈ ಮೂಲಕ ಮತ್ತೊಮ್ಮೆ ಬಿಬಿಎಂಪಿ ಅಧಿಕಾರಿಗಳ ಮತ್ತೊಂದು ಮಹಾ ಯಡವಟ್ಟು ಕಾಮಗಾರಿ ಬಯಲಾಗಿದೆ.

ADVERTISEMENT

ನಗರದ ಶಿವಾನಂದ ಸರ್ಕಲ್ ನಲ್ಲಿರುವ ಸ್ಟೀಲ್ ಬ್ರಿಡ್ಜ್ ನಿರ್ಮಾಣದಲ್ಲಿ BBMP ಎಡವಟ್ಟು 

ಅದು ಸುಮಾರು 5 ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿ. ಕೋರ್ಟ್ ಕಟಕಟೆಯಲ್ಲಿ ಪ್ರಕರಣ ನಡೆಯುತ್ತಿತ್ತು. ಇತ್ತೀಚೆಗಷ್ಟೇ ಎಲ್ಲಾ ಇತ್ಯರ್ಥಗೊಂಡು ವಾಹನ ಓಡಾಟಕ್ಕೆ ಅವಕಾಶ ಮಾಡಿಕೊಡುವ ಪ್ರಸಂಗ ಎದುರಾಗಿತ್ತು. ಅಂತೆಯೇ ಪಾಲಿಕೆ ಕೂಡ ಕಾಮಗಾರಿ ಮುಗಿಸಿ ಟೆಸ್ಟಿಂಗ್ ಗೆ ಅಂತ ಫ್ಲೈ ಓವರ್ ಓಪನ್ ಮಾಡಿ ಕೊಟ್ಟಿತ್ತು. ಆದರೆ ಓಪನ್ ಆಗಿ ವಾರದಲ್ಲೇ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಸ್ಟೀಲ್ ಬ್ರಿಡ್ಜ್ ವಾಹನ ಓಡಾಟಕ್ಕೆ ಯೋಗ್ಯವಲ್ಲಾ ಎಂಬ ಆರೋಪ ಕೇಳಿ ಬಂದಿದೆ. ಹೌದು, ಶಿವಾನಂದ ಸರ್ಕಲ್ ನಲ್ಲಿರುವ ಉಕ್ಕಿನ ಸೇತುವೆಯ ಪ್ರಾಯೋಗಿಕ ಸಂಚಾರದಲ್ಲೇ ಬಿಬಿಎಂಪಿ ಎಡವಟ್ಟು ಮಾಡಿದೆ ಅಂತ ಸಾರ್ವಜನಿಕರು ಆರೋಪ ಹೊರೆಸಿದ್ದಾರೆ‌. ಆಗಸ್ಟ್ 15ರಂದು ವಾಹನಗಳ ಪ್ರಾಯೋಗಿಕ ಸಂಚಾರಕ್ಕೆ ಅವಕಾಶ ಮಾಡಿದ್ದ ಪಾಲಿಕೆ, ಸೇತುವೆಯ ಒಂದು ಬದಿಯ ರಸ್ತೆಯಲ್ಲಿ ವಾಹನಗಳ ಪ್ರಾಯೋಗಿಕ ಸಂಚಾರಕ್ಕೆ ಅವಕಾಶ ಕೊಟ್ಟಿದೆ. 

ಭಾರಿ ವಾಹನಗಳ ಸಂಚಾರದ ವೇಳೆ ಸ್ಟೀಲ್ ಬ್ರಿಡ್ಜ್ ಶೇಕ್ ಆಗುತ್ತಂತೆ

ಇದೀಗ ಪ್ರಾಯೋಗಿಕ ಸಂಚಾರದಲ್ಲೇ ಬಿಬಿಎಂಪಿ ಕಳಪೆ ಕಾಮಗಾರಿ ಬಟಾಬಯಲು. ಒಂದೇ ಸಮನೆ ವಾಹನ ಸಂಚಾರ ಮಾಡಿದ್ರೆ ಸಾಕು ಸ್ಟೀಲ್ ಬ್ರಿಡ್ಜ್ ಫುಲ್ ವೈಬ್ರೇಟ್ ಆಗ್ತಿದೆ. ಈ ಮೂಲಕ ಬಿಬಿಎಂಪಿ ಕಾಮಗಾರಿಯಲ್ಲಿ ಕಳಪೆ ಎಂಬುದಾಗಿ ಸಾಬೀತಾಗಿದೆ. ಈ ಬಗ್ಗೆ ಬಿಬಿಎಂಪಿ ಅಧಿಕಾರಿಗಳಿಗೆ ಸಾರ್ವಜನಿಕರಿಂದ ಸಾಲು ಸಾಲು ಕಂಪ್ಲೇಟ್ ನೀಡಿದ್ದಾರೆ. ಕೇವಲ ವೈಬ್ರೇಷನ್ ಅಲ್ಲ.. ರಸ್ತೆ ತುಂಬಾ ಉಬ್ಬು ನಿರ್ಮಾಣ ಎಂದು ಕಿಡಿ ಕಾರಿದ್ದಾರೆ. ಉಕ್ಕಿನ ಸೇತುವೆಯ ಪ್ರತಿ 20 ಮೀಟರ್ ಗೆ ಬ್ರಿಡ್ಜ್ ಜಾಯಿಂಟ್ ಇದೆ. ಇಲ್ಲಿ ಪಾಲಿಕೆ ಅವೈಜ್ಞಾನಿಕವಾಗಿ ಹಂಪ್ಸ್ ನಿರ್ಮಿಸಿದೆ ಎಂದು ಸಾರ್ವಜನಿಕ ವಲಯದಲ್ಲಿ ಆರೋಪ ಕೇಳಿ ಬಂದಿದೆ. ಆಸ್ಫಾಲ್ಟ್ ಮಾಡುವ ವೇಳೆ ರಸ್ತೆ ಉಬ್ಬಾಗಿರುವ ಬಗ್ಗೆ ಬಿಬಿಎಂಪಿ ಸ್ಪಷ್ಟೀಕರಣ ನೀಡಿದ್ದು, ವಾಹನ ಸಂಚಾರ ಶುರುವಾಗಿ ಕ್ರಮೇಣವಾಗಿ ಇದು ರಸ್ತೆಯ ಡಾಂಬರೀಕರಣಕ್ಕೆ ಸಮಕ್ಕೆ ತಗ್ಗಲಿದೆ ಎಂದು ಹೇಳಿದೆ.

ಈ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಚೀಫ್ ಇಂಜಿನಿಯರ್ ಲೋಕೇಶ್, ನಾವು ಪ್ರಾಯೋಗಿಕವಾಗಿ ಉಕ್ಕಿನ ಸೇತುವೆಯ ಒಂದು ರಸ್ತೆ ಓಪನ್ ಮಾಡಿದ್ದೇವೆ.‌ ರಸ್ತೆ ಉಬ್ಬು, ಶೇಕ್ ಮತ್ತು ವೈಬ್ರೇಷನ್ ಬಗ್ಗೆ ಸಾರ್ವಜನಿಕರು ಕಂಪ್ಲೇಟ್ ಮಾಡುತ್ತಿದ್ದಾರೆ. ರಸ್ತೆ ಉಬ್ಬು ನಿರ್ಮಾಣವಾಗಿಲ್ಲ, ಕ್ರಮೇಣ ಆಸ್ಫಾಲ್ಟಿಂಗ್ ತಗ್ಗಿ ರಸ್ತೆಗೆ ಸಮವಾಗಲಿದೆ. ಬ್ರಿಡ್ಜ್ ಶೇಕ್ ಆಗಿಲ್ಲ, ಘನ ವಾಹನಗಳು ಹೋಗುವಾಗ ವೈಬ್ರೇಷನ್ ಆಗುತ್ತಿದೆ. ಅದರ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ. ಇವೆಲ್ಲವನ್ನೂ ಪತ್ತೆ ಹಚ್ಚಲೆಂದೇ ನಾವು ಪ್ರಾಯೋಗಿಕ ಸಂಚಾರಕ್ಕೆ ಓಪನ್ ಮಾಡಿರುವುದು ಎಂದರು. ಪರ ವಿರೋಧಗಳ ನಡುವೆ ಇನ್ನೇನು ಸೆಪ್ಟೆಂಬರ್ ಮೊದಲ ವಾರದಲ್ಲಿ ಈ ಉಕ್ಕಿನ ಸೇತುವೆಯನ್ನು ಸಿಎಂ ಉದ್ಘಾಟನೆ ಸಾಧ್ಯತೆ ಇದೆ. ಆದರೆ ಟೆಸ್ಟಿಂಗ್ ವೇಳೆ ಸಾರ್ವಜನಿಕರಿಂದ ಇಂಥಾ ದೂರು, ಅಪವಾದಗಳು‌ ಕೇಳಿ ಬಂದಿರುವುದು ಆತಂಕಕ್ಕೆ ಕಾರಣವಾಗಿದೆ. 

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಜಪಾನ್; ಶಿಂಜೊ ಅಬೆ ಅಂತ್ಯೆಕ್ರಿಯೆಯಲ್ಲಿ ಪ್ರಧಾನಿ ಮೋದಿ ಭಾಗಿ

Next Post

ನೋಯ್ಡಾದ ಸೂಪರ್‌ ಟೆಕ್‌ ಕಟ್ಟಡ ಧ್ವಂಸಕ್ಕೆ 3700 ಕೆಜಿ ಸ್ಫೋಟಕ ಬಳಕೆ!

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ನೋಯ್ಡಾದ ಸೂಪರ್‌ ಟೆಕ್‌ ಕಟ್ಟಡ ಧ್ವಂಸಕ್ಕೆ 3700 ಕೆಜಿ ಸ್ಫೋಟಕ ಬಳಕೆ!

ನೋಯ್ಡಾದ ಸೂಪರ್‌ ಟೆಕ್‌ ಕಟ್ಟಡ ಧ್ವಂಸಕ್ಕೆ 3700 ಕೆಜಿ ಸ್ಫೋಟಕ ಬಳಕೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada