ಚಿತ್ರದುರ್ಗ ಜಿಲ್ಲೆಯ ಬಸವಕೇಂದ್ರ ಮುರುಘಾಮಠದಿಂದ ನೀಡುವ ಪ್ರತಿಷ್ಠಿತ 2021ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು, ಕರ್ನಾಟಕ ರತ್ನ ಡಾ.ಪುನೀತ್ ರಾಜ್ ಕುಮಾರ್ ಗೆ ನೀಡಲಿದ್ದಾರೆ.
ಹೌದು, ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರವಾಗಿ ಬಸವಶ್ರೀ ಪ್ರಶಸ್ತಿ ನೀಡಲಿದ್ದು, ಇಂದು ಬಸವ ಜಯಂತಿ ಪ್ರಯುಕ್ತ, ಚಿತ್ರದುರ್ಗದ ಅನುಭವ ಮಂಟಪದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ಕಾರ್ಯಕ್ರಮವು ಡಾ.ಶಿವಮೂರ್ತಿ ಮುರುಘಾ ಶರಣರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ಮಾಜಿ ಸಿಎಂ ಸಿದ್ಧರಾಮಯ್ಯ, ಕೃಷಿ ಸಚಿವ ಬಿ.ಸಿ ಪಾಟೀಲ್, ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ನಟ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮುರುಘಮಠವು ಪುನೀತ್ ರಾಜ್ ಕುಮಾರ್ ಗೆ ಬಸವಶ್ರೀ ಪ್ರಶಸ್ತಿಯನ್ನು, ರಾಜ್ ಕುಟಂಬವು ಸ್ವೀಕರಿಸಲಿದೆ.