• Home
  • About Us
  • ಕರ್ನಾಟಕ
Sunday, January 18, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ದೇಶ

ಪಂಜಾಬ್ ಸಿಎಂ ರಾಜೀನಾಮೆ: ಹಳೆಯ ಬಿಕ್ಕಟ್ಟಿನ ಅಂತ್ಯವೋ? ಹೊಸ ಬಿಕ್ಕಟ್ಟಿನ ಆರಂಭವೋ?

Shivakumar A by Shivakumar A
September 19, 2021
in ದೇಶ, ರಾಜಕೀಯ
0
ಪಂಜಾಬ್ ಸಿಎಂ ರಾಜೀನಾಮೆ: ಹಳೆಯ ಬಿಕ್ಕಟ್ಟಿನ ಅಂತ್ಯವೋ? ಹೊಸ ಬಿಕ್ಕಟ್ಟಿನ ಆರಂಭವೋ?
Share on WhatsAppShare on FacebookShare on Telegram

ಪಂಜಾಬ್ ಕಾಂಗ್ರೆಸ್’ನಲ್ಲಿ ಈವರೆಗೆ ಸುಪ್ತವಾಗಿದ್ದ ಜ್ವಾಲಾಮುಖಿ ಒಮ್ಮೆಗೆ ಸ್ಫೋಟವಾಗಿದೆ. ಅತ್ಯಂತ ಹಿರಿಯ ಹಾಗೂ ಅನುಭವಿ ರಾಜಕಾರಣಿ ತನಗಾದ ‘ಅಪಮಾನ’ದಿಂದಾಗಿ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕಳೆದ ವಾರದವರೆಗೆ ಮುಂದಿನ ಚುನಾವಣೆಯೂ ಅಮರಿಂದರ್ ಸಿಂಗ್ ನೇತೃತ್ವದಲ್ಲಿ ನಡೆಯಲಿದೆ ಎಂದು ಹೇಳಿದ್ದ ಕಾಂಗ್ರೆಸ್, ಈಗ ಹೊಸ ಸಿಎಂನ ಹುಡುಕಾಟದಲ್ಲಿದೆ. ಈ ಬೆಳವಣಿಗೆಯ ನೇರ ಪರಿಣಾಮ ಮುಂದಿನ ಫೆಬ್ರುವರಿಯಲ್ಲಿ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಗೊಚರಿಸಲಿದೆ.

ADVERTISEMENT

ಕಳೆದ ಸುಮಾರು ಒಂದು ವರ್ಷದಿಂದ ಪಂಜಾಬ್ ಕಾಂಗ್ರೆಸ್’ನಲ್ಲಿ ಭಿನ್ನಮತ ಹೊಗೆಯಾಡುತಲಿತ್ತು. ಚುನಾವಣೆಗೆ ಇನ್ನು ಕೇವಲ ಒಂದೇ ವರ್ಷ ಇದೆ ಎಂದಾಗ ಈ ಭಿನ್ನಮತ ಕೈಮೀರಿ ಹೋಗುವ ಪರಿಸ್ಥಿತಿ ಎದುರಾಗಿತ್ತು. ಅದರಲ್ಲೂ ಪಂಜಾಬ್ ಕಾಂಗ್ರೆಸ್’ನ ಇಬ್ಬರು ಹಿರಿಯ ನಾಯಕರಾದ ನವಜೋತ್ ಸಿಂಗ್ ಸಿಧು ಹಾಗೂ ಅಮರೀಂದರ್ ಸಿಂಗ್ ಹಾವು-ಮುಂಗುಸಿಗಳಂತೆ ಬಹಿರಂಗವಾಗಿ ಕಚ್ಚಾಡಲು ಆರಂಭಿಸಿದ್ದು ಪಕ್ಷದ ವರ್ಚಸ್ಸಿಗೆ ತೀವ್ರವಾದ ಧಕ್ಕೆ ಉಂಟುಮಾಡಿದೆ.

ಕೃಷಿ ಕಾಯ್ದೆಗಳ ವಿರುದ್ದ ನಡೆಯುತ್ತಿರುವ ಆಂದೋಲನದಿಂದಾಗಿ ಸಂಪುರ್ಣ ಪಂಜಾಬ್’ನಲ್ಲಿ ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದೆ. ಅಧಿಕಾರದಲ್ಲಿದ್ದುಕೊಂಡು ಈ ಅವಕಾಶವನ್ನು ವಿನಿಯೋಗಿಸಲು ಕಾಂಗ್ರೆಸ್ ಬಳಿ ಸಮಯವೇ ಇಲ್ಲವಾಗಿದೆ. ಪ್ರತಿ ಬಾರಿಯೂ ಪಕ್ಷದಲ್ಲಿನ ಭಿನ್ನಮತವನ್ನು ಶಮನ ಮಾಡುವತ್ತಲೇ ಕಾಂಗ್ರೆಸ್ ತನ್ನ ಗಮನ ಕೇಂದ್ರೀಕರಿಸಿದ್ದು, ಈಗ 52  ವರ್ಷಗಳಿಂದ ರಾಜ್ಯದಲ್ಲಿ ಪಕ್ಷವನ್ನು ಕಟ್ಟಿಕೊಂಡು ಬಂದಂತಹ ಮುತ್ಸದ್ದಿ ರಾಜಕಾರಣಿಯನ್ನು ಕಾಂಗ್ರೆಸ್ ಕಳೆದುಕೊಳ್ಳುವ ಭಯದಲ್ಲಿದೆ.

ಪಂಜಾಬ್: ಮುಖ್ಯಮಂತ್ರಿ ಸ್ಥಾನಕ್ಕೆ ʼಕ್ಯಾಪ್ಟನ್ ಅಮರೀಂದರ್ ಸಿಂಗ್ʼ ರಾಜೀನಾಮೆ

ಇದೇ ಸಂದರ್ಭದಲ್ಲಿ ಆಮ್ ಆದ್ಮಿ ಪಾರ್ಟಿ ಪಂಜಾಬಿನಲ್ಲಿ ಸದ್ದಿಲ್ಲದೇ ತನ್ನ ನೆಲೆಯನ್ನು ವಿಸ್ತರಿಸುತ್ತಾ ಹೊರಟಿದೆ. ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ಆಮ್ ಆದ್ಮಿ ಪಕ್ಷ ಪಂಜಾಬ್’ನಲ್ಲಿ ಬಹುಮತ ಪಡೆಯುವ ಎಲ್ಲಾ ಸಾಧ್ಯತೆಗಳೂ ಇವೆ. ಕಾಂಗ್ರೆಸ್ ಈಗಾಗಲೇ ತನ್ನ ಬಹುಪಾಲು ಸಮಯವನ್ನು ಆಂತರಿಕ ಬಿಕ್ಕಟ್ಟು ಬಗೆಹರಿಸುವಲ್ಲಿ ಕಳೆದಿದೆ. ಇದು ಆಪ್ ಪಾಲಿಗೆ ವರದಾನವಾಗಿ ಪರಿಣಮಿಸಿದೆ.

ಮುಂದೆ ಬರಲಿರುವ ಹೊಸ ಮುಖ್ಯಮಂತ್ರಿಗೆ ರಾಜ್ಯದ ಆಡಳಿತವನ್ನು ಮುನ್ನಡೆಸುವುದಷ್ಟೇ ಅಲ್ಲದೇ, ಮುಂಬರುವ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ವರ್ಚಸ್ಸು ಇರಬೇಕಾಗಿದೆ. ಈಗಾಗಲೇ ಸಿಎಂ ಸ್ಥಾನದ ಆಫರ್ ಅನ್ನು ಹಿರಿಯ ರಾಜಕಾರಣಿ ಅಂಬಿಕಾ ಸೋನಿ ಅವರು ತಿರಸ್ಕರಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿ ಒಬ್ಬ ಸಿಖ್ ವ್ಯಕ್ತಿಯಾಗಿರಬೇಕು ಎಂದು ಅವರು ಹೇಳಿದ್ದಾರೆ. ಬಹುತೇಕ, ಭಾನುವಾರ ಸಂಜೆಯ ವೇಳೆಗೆ ಅಥವಾ ಸೋಮವಾರ ಮಧ್ಯಾಹ್ನದ ವೇಳೆಗೆ ಪಂಜಾಬ್’ನ ಹೊಸ ಮುಖ್ಯಮಂತ್ರಿಯ ಹೆಸರು ಘೋಷಣೆಯಾಗಲಿದೆ.

ಇನ್ನೊಂದೆಡೆ, ಕ್ಯಾ. ಅಮರೀಂದರ್ ಸಿಂಗ್ ಅವರು ತಮ್ಮ ಮುಂದಿನ ನಡೆಯ ಕುರಿತು ಯಾವುದೇ ಸುಳಿವು ಬಿಟ್ಟುಕೊಟ್ಟಿಲ್ಲ. ಹೊಸ ಪಕ್ಷವನ್ನು ಸ್ಥಾಪಿಸುವುದರ ಕುರಿತು ಮಾತನಾಡಿರುವ ಅವರು, ಅವಕಾಶಗಳು ಯಾವಾಗಲೂ ತೆರೆದುಕೊಂಡಿರುತ್ತವೆ. ಸೂಕ್ತ ಸಮಯ ಬಂದಾಗ ಅವುಗಳನ್ನು ಬಳಸಿಕೊಳ್ಳುತ್ತೇನೆ. ಈ ಕ್ಷಣಕ್ಕೆ ನಾನು ಕಾಂಗ್ರೆಸ್’ನಲ್ಲಿಯೇ ಇದ್ದೇನೆ. ನನ್ನ 52 ವರ್ಷಗಳ ರಾಜಕೀಯ ಪಯಣದಲ್ಲಿ ನನಗೆ ಬೆಂಬಲ ನೀಡಿದವರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇನೆ, ಎಂದು ಹೇಳಿದ್ದಾರೆ.

ಇತ್ತೀಚಿನ ರಾಜಕೀಯ ಘಟನೆಗಳಿಂದ ತಮ್ಮ ಮನಸ್ಸಿಗೆ ಆಗಿರುವ ನೋವನ್ನು ಸೂಕ್ಷ್ಮವಾಗಿ ಹೇಳಿಕೊಂಡಿರುವ ಸಿಂಗ್, ಯಾವುದೇ ಕ್ಷಣದಲ್ಲಿ ಕಾಂಗ್ರೆಸ್ ತೊರೆಯುವ ಸಾಧ್ಯತೆಗಳಿವೆ ಎಂದು ಪರೋಕ್ಷವಾಗಿ ಹೇಳಿದ್ದಾರೆ.

ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷದ ಬೆಳವಣಿಗೆಗೆ ಅಮರೀಂದರ್ ಸಿಂಗ್ ಅವರ ಆಡಳಿತವೇ ಕಾರಣ ಎಂಬ ಚರ್ಚೆ ಪಂಜಾಬ್’ನಲ್ಲಿ ನಡೆಯುತ್ತಿದೆ. ಇದೇ ಅವರ ರಾಜೀನಾಮೆಗೂ ಕಾರಣವಾಯಿತು. ಸಿಂಗ್ ಬಣ ಈ ಅಪವಾದವನ್ನು ತಳ್ಳಿ ಹಾಕುತ್ತಾ ಬಂದಿದ್ದು, ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲೇಬೇಕೆಂದು ಪುಕಾರು ಹಬ್ಬಿಸಲಾಗುತ್ತಿದೆ ಎಂದು ಆರೋಪಿಸಿತ್ತು.

ಅಮರೀಂದರ್ ಸಿಂಗ್ ಅವರ ಮುಂದಿನ ನಡೆ ಪಂಜಾಬ್’ನಲ್ಲಿ ಕಾಂಗ್ರೆಸ್ ಭವಿಷ್ಯದ ಮೇಲೆ ತೀವ್ರವಾದ ಪರಿಣಾಮ ಬೀರಲಿದೆ. ರಾಜ್ಯ ಕಾಂಗ್ರೆಸ್’ನ ಸಲಹೆಗಾರರಾಗಿ ಸಿಂಗ್ ಮುಂದುವರೆಯಲು ಬಯಸಿದರೆ ಅದು ಕಾಂಗ್ರೆಸ್ ಪಾಲಿಗೆ ವರವಾಗಲಿದೆ. ಒಂದು ವೇಳೆ ಅವರು ಕಾಂಗ್ರೆಸ್ ತೊರೆಯುವ ನಿರ್ಧಾರ ಕೈಗೊಂಡರೆ ಅದು ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಾಲಿಗೆ ಕೊಡಲಿ ಏಟಾಗಲಿದೆ.

ಹಲವು ತಿಂಗಳ ರಾಜಕೀಯ ಹಗ್ಗ ಜಗ್ಗಾಟದ ಬಳಿಕ ಪಂಜಾಬ್’ನಲ್ಲಿ ನಾಯಕತ್ವ ಬದಲಾವಣೆಯ ಪ್ರಹಸನಕ್ಕೆ ತಾರ್ಕಿಕ ಅಂತ್ಯ ಲಭಿಸಿದೆ. ಈ ಬೆಳವಣಿಗೆಗಳ ಪರಿಣಾಮವಾಗಿ, ಪಿಪಿಸಿಸಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹಾಗೂ ಕಾಂಗ್ರೆಸ್ ಪಕ್ಷದ ಬಳಿ ಮುಂದಿನ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕಾದ ಅನಿವಾರ್ಯತೆ ಒದಗಿ ಬಂದಿದೆ. ಇಲ್ಲವಾದರೆ, ಕಾಂಗ್ರೆಸ್ ಸರ್ಕಾರದ ಪತನದ ಖಳನಾಯಕರೆಂಬ ಅಪಕೀರ್ತಿ ನವಜೋತ್ ಸಿಂಗ್ ಸಿಧು ಹಾಗೂ ಅವರನ್ನು ಬೆಂಬಲಿಸಿದ ಶಾಸಕರಿಗೆ ಮೆತ್ತಿಕೊಳ್ಳಲಿದೆ.

Tags: Congress Partyಅಮರಿಂದರ್ ಸಿಂಗ್ಕಾಂಗ್ರೆಸ್ನವಜೋತ್ ಸಿಂಗ್ ಸಿಧುಪಂಜಾಬ್ಸಿಎಂ ರಾಜೀನಾಮೆ
Previous Post

ಕೋವಿಡ್ ಲಸಿಕೆ ಪಡೆದುಕೊಂಡವರ ರೋಗ ನಿರೋಧಕ ಶಕ್ತಿ ಗಮನಾರ್ಹ ಏರಿಕೆ: ಅಧ್ಯಯನ

Next Post

ಅಧಿಕಾರಿಗಳ ವಾಕ್ ಸ್ವಾತಂತ್ರ್ಯಕ್ಕೆ ಸರ್ಕಾರದಿಂದ ಕಡಿವಾಣ: ಅಧಿಕಾರಿಗಳು ಭಾವ ಶೂನ್ಯರಾಗಬೇಕೆಂಬುದು ಬಿಜೆಪಿ ಉದ್ದೇಶವೇ.!?

Related Posts

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
0

ಪಶ್ಚಿಮ ಬಂಗಾಳ: ಭಾರತೀಯ ರೈಲ್ವೆ ಇತಿಹಾಸದಲ್ಲಿ ಇಂದು ಮತ್ತೊಂದು ಮಹತ್ವದ ದಿನವಾಗಿದೆ. ಇಂದು ಪಶ್ಚಿಮ ಬಂಗಾಳದ ಮಾಲ್ಡಾಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ(Narendra Modi) ಭಾರತದ...

Read moreDetails
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

January 17, 2026
ಸಿಎಂ ತವರು ಜಿಲ್ಲೆಯಲ್ಲೇ  ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

ಸಿಎಂ ತವರು ಜಿಲ್ಲೆಯಲ್ಲೇ ಫ್ಲೆಕ್ಸ್ ಗಲಾಟೆ: ಕುಮಾರಸ್ವಾಮಿ ಬ್ಯಾನರ್ ಕಿತ್ತೆಸೆದು ವ್ಯಕ್ತಿ ಆಕ್ರೋಶ

January 17, 2026
ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

ಬಾಲಿವುಡ್ & ಕೋಮುವಾದ: ಎ.ಆರ್ ರೆಹಮಾನ್ ಸ್ಫೋಟಕ ಹೇಳಿಕೆ

January 17, 2026
Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

Bheemanna Khandre: ಶತಾಯುಷಿ ಭೀಮಣ್ಣ ಖಂಡ್ರೆ‌ ನಿಧನ: ಸಿಎಂ ಸಿದ್ದರಾಮಯ್ಯ ಸಂತಾಪ

January 17, 2026
Next Post
ಅಧಿಕಾರಿಗಳ ವಾಕ್ ಸ್ವಾತಂತ್ರ್ಯಕ್ಕೆ ಸರ್ಕಾರದಿಂದ ಕಡಿವಾಣ: ಅಧಿಕಾರಿಗಳು ಭಾವ ಶೂನ್ಯರಾಗಬೇಕೆಂಬುದು ಬಿಜೆಪಿ ಉದ್ದೇಶವೇ.!?

ಅಧಿಕಾರಿಗಳ ವಾಕ್ ಸ್ವಾತಂತ್ರ್ಯಕ್ಕೆ ಸರ್ಕಾರದಿಂದ ಕಡಿವಾಣ: ಅಧಿಕಾರಿಗಳು ಭಾವ ಶೂನ್ಯರಾಗಬೇಕೆಂಬುದು ಬಿಜೆಪಿ ಉದ್ದೇಶವೇ.!?

Please login to join discussion

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!
Top Story

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

by ಪ್ರತಿಧ್ವನಿ
January 18, 2026
BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ
Top Story

BBK 12: ಬಿಗ್‌ ಬಾಸ್‌ ಇತಿಹಾಸದಲ್ಲೇ ಅಪರೂಪದ ದಾಖಲೆಗಳ ಸರದಾರನಾದ ಗಿಲ್ಲಿ ನಟ

by ಪ್ರತಿಧ್ವನಿ
January 17, 2026
Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
Top Story

Vande Bharat Express: ಭಾರತದ ಮೊದಲ ವಂದೇ ಭಾರತ್ ಸ್ಲೀಪರ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

by ಪ್ರತಿಧ್ವನಿ
January 17, 2026
BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?
Top Story

BBK 12: ಇಂದು ಬಿಗ್‌ ಬಾಸ್‌ ಫಿನಾಲೆ ದಿಢೀರ್‌ ರದ್ದು: ಕಾರಣವೇನು?

by ಪ್ರತಿಧ್ವನಿ
January 17, 2026
ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್
Top Story

ಕಲ್ಟ್ ಸಿನಿಮಾದ ಫ್ಲೆಕ್ಸ್ ವಿಚಾರಕ್ಕೆ ಪೌರಾಯುಕ್ತೆಗೆ ನಿಂದನೆ: ಕ್ಷಮೆ ಕೇಳಿದ ನಟ ಝೈದ್ ಖಾನ್

by ಪ್ರತಿಧ್ವನಿ
January 17, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

Daily Horoscope: ಇಂದು ಅಪರೂಪದ ಅದೃಷ್ಟ ಸಿಗುವ ರಾಶಿಗಳಿವು..!

January 18, 2026
25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

25 ಲಕ್ಷ ರೂ.ಲಂಚ: ಅಬಕಾರಿ ಡಿಸಿಯೇ ಟ್ರ್ಯಾಪ್

January 17, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada