ಮೈಸೂರು : ರಾಮಮಂದಿರ (Ramamandira) ಉದ್ಟಾಟನೆಯಾಗಿದೆ, ಜನರು ಬಹಳ ಸಂತೋಷವಾಗಿದ್ದಾರೆ. ರಾಮ ಭಾರತೀಯರ ಆರಾಧ್ಯದೈವ, ಭಾರತೀಯತ ಅಸ್ಮೀತೆ. ಮೋದಿ 500 ವರ್ಷಗಳ ಸಮಸ್ಯೆಯನ್ನ ಬಗೆಹರಿಸಿದ್ದಾರೆ ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ (Hvishwanath) ಹೇಳಿದರು.

ಜನರ ಕಷ್ಟಗಳಿಗೆ ಮೋದಿ (Modi) ಇವಾಗಲಾದರು ಸ್ಪಂದಿಸಬೇಕು.ಚುನಾವಣೆಗೂ ಮುನ್ನ ಪ್ರತಿಯೊಬ್ಬರಿಗೆ 15 ಲಕ್ಷ ಕೊಡುತ್ತೇನೆ ಅಂದಿದ್ರಿ.ಆದಷ್ಟು ಬೇಗ ಹಣವನ್ನ ಹಾಕಿ.ಜನರು ಸಾಕಷ್ಟು ಕಷ್ಟದಲ್ಲಿದ್ದಾರೆ. ಎಲ್ಲಾ ವಸ್ತುಗಳಿಗೆ ಜಿಎಸ್ ಟಿ ಕಟ್ಟುತ್ತಿದ್ದಾರೆ.ಅತಿ ಹೆಚ್ಚು ಜಿಎಸ್ ಟಿ ಕಟ್ಟುತ್ತಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು.ನೀರವ್ ಮೋದಿ ಅವರಿಂದ ದೇಶಕ್ಕೆ ಲಕ್ಷಾಂತರ ಕೋಟಿ ನಷ್ಟವಾಗಿದೆ.ಅವರನ್ನ ಬಂಧಿಸಿ ಕರೆತರುತ್ತೇನೆ ಅಂದ್ರು.ಅದು ಸಹ ಸಾಧ್ಯವಾಗಿಲ್ಲ ಎಂದು ಮಾತಿನಲ್ಲೇ ಕುಟುಕಿದರು
