• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, February 6, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪುಟ್ ಫಾತ್ ಮತ್ತು ರಸ್ತೆ ಒತ್ತುವರಿಗಳನ್ನು ತೆರವುಗೊಳಿಸಿ- ಜಿಲ್ಲಾಧಿಕಾರಿ ಗೋವಿಂದರೆಡ್ಡಿ..!

ಪ್ರತಿಧ್ವನಿ by ಪ್ರತಿಧ್ವನಿ
June 29, 2024
in Top Story, ಅಂಕಣ, ಅಭಿಮತ, ಇದೀಗ, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೀದರ ನಗರ ಹಾಗೂ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ(Bidar city and in all taluks of the district) ಒತ್ತುವರಿಯಾದ ಪುಟ್ ಫಾತ್ ಹಾಗೂ ರಸ್ತೆ ಒತ್ತುವರಿಗಳನ್ನು ತೆರವುಗೊಳಿಸಿ ಇದರಿಂದ ಸಾರ್ವಜನಿಕರಿಗೆ ತಿರುಗಾಡಲು ತೊಂದರೆಯಾಗುತ್ತಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು
ಅವರು ಶುಕ್ರವಾರ ಸಂಜೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದರು.

ADVERTISEMENT

ಈಗಾಗಲೇ ಬೀದರ ನಗರದ ಮುಖ್ಯ ರಸ್ತೆಗಳು ಹಾಗೂ ಪುಟ್ ಫಾತಗಳಲ್ಲಿ ಒತ್ತುವರಿಯಾದ ಜಾಗಗಳನ್ನು ತೆರವುಗೊಳಿಸುತ್ತಿದ್ದು ಅದರಂತೆ ಜಿಲ್ಲೆಯ ಎಲ್ಲಾ ತಾಲ್ಲೂಕಿನಲ್ಲಿ ಈ ಕೆಲಸ ಮಾಡಬೇಕು ಆಯಾ ತಾಲ್ಲೂಕಿನ ತಹಶಿಲ್ದಾರರು. ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಟೀಂ ರೀತಿಯಲ್ಲಿ ಕೆಲಸ ಮಾಡಬೇಕೆಂದು ಹೇಳಿದರು.
ಒಂದು ದಿನ ಮುಂಚಿತವಾಗಿ ಜನರಿಗೆ ಮಾಹಿತಿ ನೀಡಲು ಪತ್ರಿಕೆಯಲ್ಲಿ ಪ್ರಟಕಣೆ ಹಾಗೂ ಸ್ಥಳೀಯವಾಗಿ ಡಂಗೂರ ಸಾರಿ ಮಾಹಿತಿ ನೀಡಬೇಕು.

ಕೆಲವೊಂದು ಸರ್ಕಲಗಳಲ್ಲಿ ವಾಹನಗಳು ಸಂಚರಿಸುವಾಗ ಬಹಳಷ್ಟು ಟ್ರಾಫಿಕ್ ಸಮಸ್ಯೆಗಳಾಗುತ್ತಿದೆ. ಅನಧಿಕೃತ ಶೆಡ್ ತೆಗೆಯುವ ಸಂದರ್ಭದಲ್ಲಿ ಕೆಲ ಕಡೆ ಕರೆಂಟ್ ಸಂಪರ್ಕ ಇರುತ್ತದೆ ಹಾಗಾಗಿ ಜೊತೆಯಲ್ಲಿ ಲೈನಮೇನರನ್ನು ಕರೆದುಕೊಂಡು ಹೋಗಬೇಕೆಂದು ಹೇಳಿದರು.
ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೇ ಕೆಲವೊಂದು ದೊಡ್ಡ ಹೋಬಳಿ ಮಟ್ಟದ ರಸ್ತೆಯಲ್ಲಿಯು ಸಹ ಒತ್ತುವರಿಗಳಾಗಿದ್ದು ಅವುಗಳನ್ನು ತೆರವುಗೊಳಿಸಿ.

ಸಣ್ಣ ಪುಟ್ಟ ವ್ಯಾಪಾರ ಮಾಡುವವರು ತಳ್ಳು ಬಂಡಿಯಲ್ಲಿ ವ್ಯಾಪಾರ ಮಾಡಲಿ ಅದಕ್ಕೆ ನಮ್ಮ ಅಭ್ಯಂತರ ಇಲ್ಲ ಆದರೆ ಸಾರ್ವಜನಿಕ ರಸ್ತೆ ಮತ್ತು ಪುಟ್ ಫಾತಗಳ ಮೇಲೆ ಶೆಡಗಳನ್ನು ನಿರ್ಮಿಸಿ ವ್ಯಾಪಾರ ಮಾಡುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುವದರ ಜೊತೆಗೆ ಟ್ರಾಫಿಕ್ ಸಮಸ್ಯೆಗಳಾಗುತ್ತಿವೆ ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್.(District Superintendent of Police Channabasavanna S.L.) ಅವರು ಮಾತನಾಡಿ, ಪುಟ್ ಫಾತಗಳ ಮೇಲೆ ಪರ್ಮನೆಂಟ್ ಶೆಡಗಳನ್ನು ಹಾಕಿದಾಗ ಜನರು ರಸ್ತೆಯಲ್ಲಿ ಬರುತ್ತಾರೆ ಇದರಿಂದ ಅಪಘಾತಗಳು (Accidents) ಹೆಚ್ಚಾಗುತ್ತವೆ. ತಳ್ಳುಗಾಡಿಗಳಲ್ಲಿ ತರಕಾರಿ ಮತ್ತು ಹಣ್ಣುಗಳ ವ್ಯಾಪಾರ ಮಾಡುವವರಿಗೆ ಒಂದು ಜಾಗ ನಿಗದಿಪಡಿಸಿ ಟ್ರಾಫಿಕ್ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು ಅವರು ತಮ್ಮ ವ್ಯಾಪಾರ ಮುಗಿದ ನಂತರ ಮತ್ತೆ ಸಂಜೆ ತಮ್ಮ ತಳ್ಳುಗಾಡಿಗಳನ್ನು ತೆಗೆದುಕೊಂಡು ಹೋಗಬೇಕು ಅಲ್ಲೆ ಬಿಡುವ ಹಾಗಿಲ್ಲ ಎಂದು ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ(Zilla Panchayat Chief Executive Officer Dr. Girish Badole) ಅವರು ಮಾತನಾಡಿ ದೊಡ್ಡ- ದೊಡ್ಡ ಪಂಚಾಯತಿ ವ್ಯಾಪ್ತಿಯಲ್ಲಿಯ ಹಳ್ಳಿಗಳ ರಸ್ತೆಯಲ್ಲಿ ಒತ್ತುವರಿಯಾಗಿದ್ದರೆ ಅವುಗಳ ತೆರವುಗೊಳಿಸಲು ಪಿ.ಡಿ.ಓ(PDO) ಗಳಿಗೆ ಮಾಹಿತಿ ನೀಡಿ. ಸಾರ್ವಜನಿಕ ಸ್ಥಳಗಳ ಒತ್ತುವರಿಯಿಂದ ಜನರಿಗೆ ದಿನಾಲು ತಿರುಗಾಡಲು ತೊಂದರೆ ಆಗುತ್ತದೆ ಎಂದು ಹೇಳಿದರು.

ಈ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಬೀದರ ಸಹಾಯಕ ಆಯುಕ್ತರಾದ ಲವೀಶ್ ಓರ್ಡಿಯಾ(Bidar Assistant Commissioner Lavish Ordia). ಅಪರ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ(Additional District Collector Shivakumar Seelavant), ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಚಂದ್ರಕಾಂತ ಪೂಜಾರ(Chandrakanta Pujara, Additional Superintendent of Police),ಡಿವೈಎಸ್ಪಿ ಶಿವನಗೌಡ ಪಾಟೀಲ(Dysp Shivanagowda Patil), ಬೀದರ ನಗರಸಭೆ ಆಯುಕ್ತರಾದ ಶಿವರಾಜ ರಾಠೋಡ(Municipal Commissioner Shivraj Rathoda) ಸೇರಿದಂತೆ ಜಿಲ್ಲೆಯ ವಿವಿಧ ತಾಲೂಕಿನ ತಹಶಿಲ್ದಾರರು(Taluk Tahsildar’s) ಹಾಗೂ ಇತರೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Tags: Bidar DistrictCongress PartyDistrict Collector Chandrasekhar NaikdyspDYSPBidarPoliceಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಕೃಷಿಕ ಸಮಾಜ ರೈತರ ಸಂಪರ್ಕ ಸೇತು: ಎನ್ ಚಲುವರಾಯಸ್ವಾಮಿ..!!

Next Post

ರಾಹುಲ್‌ ಗಾಂಧಿಯನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..!!

Related Posts

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?
ಇದೀಗ

“ನಮ್ಮ ಮೆಟ್ರೋ” ದರ ಏರಿಕೆ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

by ಪ್ರತಿಧ್ವನಿ
February 6, 2026
0

ಬೆಂಗಳೂರು: ಪ್ರಯಾಣಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನಮ್ಮ ಮೆಟ್ರೊ ದರ ಏರಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ‌ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ.‌ ಈ ಕುರಿತು ಹೇಳಿಕೆ ಬಿಡುಗಡೆ...

Read moreDetails
Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

Supreme Court: ಮಗುವಿನ ಹಕ್ಕಿಗಿಂತ ತಾಯಿ ಹಕ್ಕು ಮುಖ್ಯ: 30ನೇ ವಾರದಲ್ಲೂ ಗರ್ಭಪಾ**ಕ್ಕೆ ಸುಪ್ರೀಂ ಅನುಮತಿ

February 6, 2026
ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

ಉದ್ಯಮಿ ಎವಿಆರ್ ರೆಡ್ಡಿಗೆ ಬೆದರಿಕೆ- ನಟಿ ಸ್ನೇಹಿತನ ಬಂಧನ

February 6, 2026
U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

U19 World Cup: ಫೈನಲ್​ನಲ್ಲಿ ಅಬ್ಬರದ ಶತಕ ಬಾರಿಸಿ ವಿಶ್ವ ದಾಖಲೆ ಸೃಷ್ಟಿಸಿದ ವೈಭವ್ ಸೂರ್ಯವಂಶಿ..

February 6, 2026
Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

Lakshmi Hebbalkar: ಲಕ್ಷ್ಮೀ ಹೆಬ್ಬಾಳ್ಕರ್ ಬೌಲಿಂಗ್‌ಗೆ ಜಾರಕಿಹೊಳಿ ಕ್ಲೀನ್‌ ಬೋಲ್ಡ್‌…!

February 6, 2026
Next Post

ರಾಹುಲ್‌ ಗಾಂಧಿಯನ್ನು ಬೇಟಿ ಮಾಡಿದ ಸಿಎಂ ಸಿದ್ದರಾಮಯ್ಯ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada