ರಾಜ್ಯ ರಾಜಕಾರಣದಲ್ಲಿ ಮೀಸಲಾತಿ ರಾಜಕೀಯ ಹೆಚ್ಚು ಸದ್ದು ಮಾಡುತ್ತಿದ್ದು ಇದೀಗ ಒಕ್ಕಲಿಗ ಸಮುದಾಯ ತಮ್ಮಗೆ ಈಗಿರುವ ಶೇ.4ರಷ್ಟು ಮೀಸಲಾತಿಯನ್ನು ಶೇ.12ಕ್ಕೆ ಏರಿಸಬೇಕು ಎಂದು ಆಗ್ರಹಿಸಿ ಮುಖ್ಯಮಂತ್ರಿಗಳಿಗೆ ಶಾಸಕರು-ಸಚಿವರು ಮನವಿ ಪತ್ರ ಸಲ್ಲಿಸಿದ್ದಾರೆ.
ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್.ಅಶೋಕ್ ಒಕ್ಕಲಿಗ ಸಮುದಾಯದ ನ್ಯಾಯಯುತ ಬೇಡಿಕೆ ಇದಾಗಿದೆ ಜನಸಂಖ್ಯೆ ಆಧಾರದಲ್ಲಿ ನಾವೂ ರಾಜ್ಯದಲ್ಲಿ 16% ಇದ್ದೇವೆ ನಮ್ಮಲ್ಲೂ ತುಂಬಾ ಬಡವರಿದ್ದಾರೆ ಜಮೀನುಗಳನ್ನು ಕಳೆದುಕೊಂಡವರಿದ್ದಾರೆ. ನಮ್ಮ ಸಮುದಾಯದ ಮೀಸಲಾತಿಯನ್ನ 4 ರಿಂದ 16 ಪರ್ಸೆಂಟ್ ಗೆ ಹೆಚ್ಚಿಸಬೇಕು ಎಂಬುದು ನಮ್ಮ ನ್ಯಾಯಯುತವಾದ ಬೇಡಿಕೆ ಎಂದು ಹೇಳಿದ್ದಾರೆ.
ಒಕ್ಕಲಿಗ ಸಮುದಾಯವನ್ನ ಭಾಗ ಮಾಡಿ ಒಡೆದಿದ್ದಾರೆ ಹೀಗಾಗಿ ಭಂಟರು, ರೆಡ್ಡಿ, ಕುಂಚಿಟಗರು ಸೇರಿದಂತೆ ಕೇಂದ್ರ ಓಬಿಸಿ ರಿಸರ್ವೇಶನ್ ನಲ್ಲಿ ಸೇರಿಸಬೇಕು ಒಕ್ಕಲಿಗ ಸಮುದಾಯಕ್ಕೆ ಅಭದ್ರತೆ ಕಾಡಬಾರದು. ಇಡೀ ಒಕ್ಕಲಿಗ ಸಮುದಾಯವನ್ನ ಒಟ್ಟಿಗೆ ಸೇರಿಸಬೇಕು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದೆ, ಹೀಗಾಗಿ ನಮಗೆ ನಂಬಿಕೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನಮ್ಮ ಬೇಡಿಕೆಯನ್ನ ಗೌರವಿಸಿ ಪರಿಹಾರ ಕೊಡುವ ಪ್ರಾಮಾಣಿಕ ಪ್ರಯತ್ನ ಮಾಡ್ತೀನಿ ಎನ್ನುವುದಾಗಿ ಸರಳ ಮುಖ್ಯಮಂತ್ರಿ ಬೊಮ್ಮಾಯಿಯವರು ಹೇಳಿದ್ದಾರೆ. ನಾವೂ ಗಲಾಟೆ, ಧಮ್ಕಿ ಮಾಡಲ್ಲ. ಶಾಂತಿಯುತವಾಗಿ ಎಲ್ಲರೂ ಸೇರಿ ಮನವಿ ಮಾಡುತ್ತಿದ್ದೇವೆ. ಸಮುದಾಯದ ಸ್ವಾಮೀಜಿಗಳನ್ನು ಜನವರಿ ೪ ರಂದು ಭೇಟಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ನಾವೆಲ್ಲರೂ ಒಟ್ಟಿಗೆ ಹೆಜ್ಜೆ ಹಾಕಿ, ನಮ್ಮ ಸಮುದಾಯಕ್ಕೆ ನ್ಯಾಯ ಕೊಡಿಸುವ ಕೆಲಸ ಮಾಡುತ್ತೇವೆ ನಾವೂ ಯಾವುದೇ ಬೆದರಿಕೆ ಹಾಕಲ್ಲ ಒಕ್ಕಲಿಗ ಸಮಾಜದ ಜೊತೆ ಬೊಮ್ಮಾಯಿ, ಯಡಿಯೂರಪ್ಪ ಸದಾ ಇದ್ದಾರೆ. ವಿಧಾನ ಸೌಧದ ಮುಂದೆಯೂ ಕೆಂಪೇಗೌಡರ ಪ್ರತಿಮೆ ಮಾಡಲು ಹಣ ಬಿಡುಗಡೆ ಮಾಡಿದ್ದಾರೆ ಒಕ್ಕಲಿಗರ ನಿಗಮ ಮಾಡಿ 120 ಕೋಟಿ ಹಣವನ್ನು ಕೊಟ್ಟಿದ್ದಾರೆ ಹೀಗಾಗಿ ಮುಖ್ಯಮಂತ್ರಿಗಳ ಮಾತಿಗೆ ಮನ್ನಣೆ ಕೊಡ್ತೀವಿ ಎಂದು ಹೇಳಿದ್ದಾರೆ.
ಜೆಡಿಎಸ್, ಕಾಂಗ್ರೆಸ್ ಶಾಸಕರು ಅಧಿಕಾರ ಇದ್ದಾಗ ಏನೂ ಮಾಡಿಲ್ಲ ನಾವೂ ಈಗ ಏರ್ ಪೋರ್ಟ್ ನಲ್ಲಿ ಕೆಂಪೇಗೌಡರ ಪ್ರತಿಮೆ ಮಾಡಿದ್ದೀವಿ ಒಕ್ಕಲಿಗರಿಗೆ ನ್ಯಾಯ ಒದಗಿಸಲು ನಾವೆಲ್ಲ ಸಚಿವರು, ಶಾಸಕರು ಒಂದಾಗಿ ಕೆಲಸ ಮಾಡುತ್ತೇವೆ ಎಂದು ಪ್ರತಿಪಾದಿಸಿದ್ದಾರೆ.






