ಕಾಂಗ್ರೆಸ್ ವಿರುದ್ದ ತಮ್ಮ ವಾಗ್ದಾಳಿಯನ್ನು ಮುಂದುವರೆಸಿರುವ ಕಂದಾಯ ಸಚಿವ ಆರ್.ಅಶೋಕ್ ಕಾಂಗ್ರೆಸ್ ಈ ಸೂತಕದ ಮನೆಯಾಗಿದೆ ಎಂದು ಟೀಕಿಸಿದ್ದಾರೆ.
ಸಿದ್ದರಾಮಯ್ಯ ಅವರು ಅವರ ಪತ್ರಿಕಾ ಹೇಳಿಕೆಯಲ್ಲಿ PFI ನಿಷೇಧ ಬಗ್ಗೆ ಮೊದಲೇ ವರದಿ ನೀಡಿದ್ದೆ ಎಂದಿದ್ದಾರೆ. ನಾನು ಹೇಳಿದ ಬಳಿಕ ಬ್ಯಾನ್ ಮಾಡಿದ್ದಾರೆ ಅಂತ ಹೇಳಿದ್ದಾರೆ.
ಸಿದ್ದರಾಮಯ್ಯ ಇದೇ PFI, KFD ಬಗ್ಗೆ 1,600 ಕೇಸ್ ಹಾಕಿದ್ರು ಪೊಲೀಸರ ಮೇಲೆ, ಸಾರ್ವಜನಿಕರ ಮೇಲೆ ಹಲ್ಲೆ ಅಂತ ದಾಖಲಾಗಿತ್ತು.
10-12-2012 ರಲ್ಲಿ ತನ್ವೀರ್ ಸೇಠ್ ಪತ್ರ ಬರೆದು PFI ಅಮಾಯಕರು, ಅವರ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆ. ಕೇಸ್ ವಾಪಸ್ ಪಡೆಯಬೇಕು ಅಂತ ಮನವಿ ಮಾಡುತ್ತಾರೆ. ತಸ್ಲೀಮಾ ನಸ್ರೀನ್ ಪುಸ್ತಕದ ಬಗ್ಗೆ ಇರೋ ಕೇಸ್ ಅದು. ಕಾಂಗ್ರೆಸ್ ನವರು ಅದನ್ನು ಮಾನ್ಯ ಮಾಡಲು ಅಂದಿನ DG/IGP ಸರ್ಕಾರಕ್ಕೆ ಸಲಹೆ ಕೇಳುತ್ತಾರೆ.
ಯಾವುದೇ ಕಾರಣಕ್ಕೂ ಪ್ರಕರಣ ವಾಪಸ್ ಪಡೆಯಬಾರದು ಅಂತ ಪೊಲೀಸ್ ಇಲಾಖೆ ರಿಪೋರ್ಟ್ ಕೊಡುತ್ತದೆ. ಲಾ ಕಮಿಟಿ ಕೂಡ ವಾಪಸ್ ಪಡೆಯುವುದು ಸಮಾಜಕ್ಕೆ ಮಾರಕ ಎಂದು ವರದಿ ಕೊಡ್ತಾರೆ.
ಸಿದ್ದರಾಮಯ್ಯ ಈ ಎಲ್ಲಾ 1,600 ಜನ ವಿಧ್ವಂಸಕ ಕೃತ್ಯ ಎಸಗಿದವರ ಮೇಲಿನ ಪ್ರಕರಣ ವಾಪಸ್ ಪಡೆಯುವ ಕೆಲಸ ಮಾಡ್ತಾರೆ ಈಗ ಹೇಳಿ, ದೇಶದ್ರೋಹಿಗಳಿಗೆ ಬೆಂಬಲ ಕೊಟ್ಟಿಲ್ವಾ ಎಂದು ಪ್ರಶ್ನಿಸಿದ್ದಾರೆ.

ಅಂದಿನ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ ಹೇಳಿದ್ದರು. ಯಾವುದೇ ಕಾರಣಕ್ಕೂ ಕೇಸ್ ವಾಪಸ್ ಪಡೆಯೋ ಪ್ರಶ್ನೆಯೇ ಇಲ್ಲ ಅಂತ. ಈಗ ಸಿದ್ದರಾಮಯ್ಯ ನಾವೇ ಹೇಳಿದ್ದು ಬ್ಯಾನ್ ಮಾಡೋಕೆ ಅಂತಿದಾರೆ. ಇವರದ್ದು ಗೋಸುಂಬೆ ವರ್ತನೆ ಅಲ್ಲವೇ ಎಂದು ಕಿಡಿಕಾರಿದ್ದಾರೆ.
ಕುಟ್ಟಪ್ಪ, ರುದ್ರೇಶ್ ಮಡಿವಾಳ ಇವರ ಹತ್ಯೆ ಬಳಿಕ ಕೇಸ್ ಹಾಕಲು ಹಿಂಜರಿದರು. ಇದೆಲ್ಲವನ್ನೂ ನೋಡಿದ್ರೆ ಕಾಂಗ್ರೆಸ್ ಈಗ ಸೂತಕದ ಮನೆಯಾಗಿದೆ.
ಕೊಡಗು, ಮೈಸೂರು, ಮಂಗಳೂರಿನಲ್ಲಿ ಇವರಿಗೆ ವಿದೇಶಿ ಟ್ರೈನಿಂಗ್ ನೀಡಲಾಗಿದೆ ಎನ್ನುವ ಮಾಹಿತಿ ಅಧಿಕೃತವಾಗಿದೆ. ಬೈಕಲ್ಲಿ ಹೋಗುವಾಗ ಹೇಗೆ ಕತ್ತು ಕಡಿಯಬೇಕು, ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ ಗಲಭೆ ಹೇಗೆ ಮಾಡಬೇಕು. ಕೇರಳ ನಿವೃತ್ತ ಪೊಲೀಸರು ಬಂದು ಹೇಗೆ ಕೇಸ್ ಆಗದ ರೀತಿ ಹತ್ಯೆ ಮಾಡಬೇಕು ಅಂತ ಟ್ರೈನಿಂಗ್ ನೀಡಿರೋ ಬಗ್ಗೆ ವರದಿಯಾಗಿದೆ.
ಹೀಗಿರುವಾಗ ಸಿದ್ದರಾಮಯ್ಯ ನಾವೇ ಹೇಳಿದ್ದು, ಅದಕ್ಕೆ ಬ್ಯಾನ್ ಮಾಡಿದೆ ಅಂತ ಹೇಳಿಕೊಳ್ತಾರೆ. ಅವರಿಗೆ ನಾಚಿಕೆಯಾಗಬೇಕು. ಕೂಡಲೇ ಕ್ಷಮೆ ಕೇಳಬೇಕು ಅಂತ ಒತ್ತಾಯಿಸಿದ್ದಾರೆ.
PFI ವಿರುದ್ದ 175 ಕೇಸ್ ದಾಖಲಾಗಿದೆ. ಅವರಿಂದ ಪ್ರಾಯೋಜಿತರಾದ KFD ಭಾಗಿಯಾಗಿರೋ ಕೇಸ್ ಇದೆ. ಸಿದ್ದರಾಮಯ್ಯ ಹಲವು ಭಾಗ್ಯ ನೀಡಿದ್ದಾರೆ. PFI ಭಾಗ್ಯ ಸಹ ನೀಡಿದ್ದಾರೆ ಎನ್ನುವುದು ಈಗ ಅರ್ಥವಾಗುತ್ತಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ.






