ರಾಜ್ಯ ಕಾಂಗ್ರೆಸ್ನವರ ಒಳಜಗಳ ಬೀದಿಗೆ ಬಂದಿರುವ ಕಾರಣ ಜಗಳವನ್ನ ಮುಚ್ಚಿಹಾಕಲು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ದ ಇಲ್ಲಸಲ್ಲದ ಟೀಕೆ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಕಾಂಗ್ರೆಸ್ನವರು ಸಿಎಂ ಬದಲಾವಣೆಯಾಗುತ್ತದೆ ಎಂದು ಹೇಳುತ್ತಿದ್ದಾರೆ ಸಿದ್ದರಾಮಯ್ಯ ಅಥವಾ ಕಾಂಗ್ರೆಸ್ನವರಿಗೆ ಬಿಜೆಪಿ ನೇತೃತ್ವದ ಅಥವಾ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಮಾತನಾಡಲು ಯಾವ ರೀತಿಯ ಅಧಿಕಾರಿ ಇದೆ ಎಂದು ಪ್ರಶ್ನಿಸಿದ್ದಾರೆ.
ದೇಶದಲ್ಲಿ ಈಗಾಗಲೇ ಕಾಂಗ್ರೆಸ್ ಅನೇಕ ಕಡೆ ಮಣ್ಣು ಮುಕ್ಕುತ್ತಿದೆ ಕಾಂಗ್ರೆಸ್ಸಿಗೆ ತಳ ಅಥವಾ ಯಾವುದೇ ಅಧಿಕಾರವಿಲ್ಲ. ದಾವಣಗೆರೆಯ ಅಮೃತ ಮಹೋತ್ಸವ ಕಾರ್ಯಕ್ರಮದ ನಂತರ ಪಕ್ಷದಲ್ಲಿ ದೊಡ್ಡ ಬಿರುಕು ಕಾಣಿಸಿಕೊಂಡಿದೆ.
ಪಕ್ಷದಲ್ಲಿ ಸದ್ಯ ಸಿದ್ದರಾಮಯ್ಯ ವರ್ಸಸ್ ಡಿ.ಕೆ.ಶಿವಕುಮಾರ್ ವರ್ಸಸ್ ಮೂಲ ಕಾಂಗ್ರೆಸ್ಸಿಗರು ಎಂಬಂತಾಗಿದೆ. ಮೂಲ ಕಾಂಗ್ರೆಸ್ಸಿಗರೆಲ್ಲ ಸಭೆ ನಡೆಸಿ ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ ಎಂಬ ವಿಷಯ ನಮ್ಮ ಗಮನಕ್ಕು ಬಂದಿದೆ ಎಂದಿದ್ದಾರೆ.
ಸಿದ್ದರಾಮಯ್ಯ, ಖರ್ಗೆ, ಶಿವಕುಮಾರ್, ಎಂ.ಬಿ.ಪಾಟೀಲ್ ಪರಮೇಶ್ವರ್ ಇವರುಗಳ ಒಳಜಗಳ ಸಮಾವೇಶದ ನಂತರ ಹೊರಬಿದ್ದಿದೆ. ಇದೀಗ ಅಮೃತ ಮಹೋತ್ಸವ ಕಾರ್ಯಕ್ರಮಕ್ಕೆ ಟಕ್ಕರ್ ಕೊಡಲು ಸ್ವಾತಂತ್ರ್ಯ ನಡಿಗೆ ಹೆಸರಿನಲ್ಲಿ ಡಿ.ಕೆ.ಶಿವಕುಮಾರ್ ತಮ್ಮ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎಂದು ಟೀಕಿಸಿದ್ದಾರೆ.