• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಗನಂತಹ ತಮ್ಮನ ಅಗಲಿಕೆಯಲ್ಲೂ ಧೃತಿಗೆಡದೆ ಸಂಯಮ ತಂದುಕೊಂಡ ರಾಘಣ್ಣ.!

Any Mind by Any Mind
October 29, 2021
in ಕರ್ನಾಟಕ
0
ಮಗನಂತಹ ತಮ್ಮನ ಅಗಲಿಕೆಯಲ್ಲೂ ಧೃತಿಗೆಡದೆ ಸಂಯಮ ತಂದುಕೊಂಡ ರಾಘಣ್ಣ.!
Share on WhatsAppShare on FacebookShare on Telegram

ವರನಟ ರಾಜ್‌ಕುಮಾರ್‌ ಕಿರಿಯ ಪುತ್ರ, ಪವರ್‌ ಸ್ಟಾರ್‌ ಪುನೀತ್‌ ರಾಜ್‌ಕುಮಾರ್‌ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ಮಾತ್ರವಲ್ಲದೆ ದೇಶದಾದ್ಯಂತ ಗಣ್ಯರು, ಸಿನಿಮಾ ಬಳಗದವರು ಕಂಬನಿ ಮಿಡಿದಿದ್ದಾರೆ. ವಿಶ್ವಾದ್ಯಂತ ಇರುವ ಅಭಿಮಾನಿಗಳು ಕಣ್ಣೀರು ಸುರಿಸುತ್ತಿದ್ದಾರೆ.

ADVERTISEMENT

ಮನೆಮಗನನ್ನು ಕಳೆದುಕೊಂಡಂತೆ ಪ್ರತಿ ಮನೆಯ ಅಮ್ಮಂದಿರು ಶೋಕದಲ್ಲಿದ್ದಾರೆ. ಪಕ್ಕಾ ಫ್ಯಾಮಿಲಿ ಎಂಟರ್‌ಟೈನರ್‌ ಆಗಿದ್ದ ಪುನೀತ್‌ ರಾಜ್‌ಕುಮಾರ್‌ ಅವರ ನಿಧನ ಕನ್ನಡ ಚಿತ್ರರಂಗಕ್ಕೊಂದು ಬಹುದೊಡ್ಡ ಆಘಾತವೇ ಸರಿ.

ರಾಜ್ಯಕ್ಕೆ ರಾಜ್ಯವೇ ಶೋಕದಲ್ಲಿದ್ದರೂ, ಪುನೀತ್‌ ಎರಡನೆ ಅಣ್ಣ ರಾಘವೇಂದ್ರ ರಾಜ್‌ಕುಮಾರ್‌ ಅವರು ಧೃತಿಗೆಡದೆ ಮಾಧ್ಯಮದ ಮುಂದೆ ಮಾತನಾಡಿರುವ ಮಾತುಗಳು ದುಖದ ನಡುವೆಯೂ ಮೆಚ್ಚುಗೆಗೆ ಒಳಗಾಗಿದೆ. ದೊಡ್ಡಮನೆಯ ದೊಡ್ಡತನಕ್ಕೆ ಮತ್ತೊಂದು ನಿದರ್ಶನದಂತೆ ರಾಘಣ್ಣಾ ಮಾತಾಡಿದ್ದಾರೆ ಎಂದು ಅಭಿಮಾನಿಗಳು ಮಾತಾಡಿಕೊಳ್ಳುತ್ತಿದ್ದಾರೆ.

ಹೌದು, ರಾಜ್‌ಕುಮಾರ್‌ ಕುಟುಂಬದ ಕಡೆ ಕುಡಿ ಕುಟುಂಬದ ಎಲ್ಲರ ಮುದ್ದಿನ ಮಗನಾಗಿದ್ದದು ಸತ್ಯ. ರಾಘವೇಂದ್ರ ಹಾಗೂ ಶಿವರಾಜ್‌ಕುಮಾರ್‌ ಅವರು ಪುನೀತ್‌ ರನ್ನು ತಮ್ಮ ಸಹೋದರನಿಗಿಂತಲೂ ಮಗನಂತೆ ಕಂಡವರು. ಮಗನಂತಹ ತಮ್ಮನನ್ನು ಕಳೆದುಕೊಂಡೂ ರಾಘಣ್ಣಾ ಸಂಯಮದಿಂದ ವರ್ತಿಸುವಂತೆ ಕೋರಿಕೊಂಡ ಸಂದೇಶ ಎಲ್ಲರ ಕಣ್ಣಂಚಲ್ಲಿ ನೀರು ತರುವಂತೆ ಮಾಡಿದೆ.

ನಮ್ಮ ಅಪ್ಪಾಜಿಯವರನ್ನು ಕಳಿಸಿಕೊಡುವಾಗ ಸಾಕಷ್ಟು ತೊಂದರೆಯಾಗಿದೆ. ನಮ್ಮ ಕುಟುಂಬದಿಂದ ಇನ್ನೊಂದು ಆತ್ಮ ನೋವುಣ್ಣಬಾರದು. ದಯವಿಟ್ಟು ಅಪ್ಪುವನ್ನು ಚೆನ್ನಾಗಿ ಕಳಿಸಿಕೊಡಬೇಕು ಎಂದು ಅಭಿಮಾನಿಗಳ ಪ್ರೀತಿಯ ರಾಘಣ್ಣಾ ಮನವಿ ಮಾಡಿಕೊಂಡಿದ್ದಾರೆ.

ಅವನಿಗಿಂತ (ಪುನೀತ್‌) ಮೊದಲು ನಾನು ಹೋಗಬೇಕಾಗಿತ್ತು, ಅವನೇ ನನ್ನನ್ನು ಎರಡೆರಡು ಬಾರಿ ಆಸ್ಪತ್ರೆಗಳಿಂದ ಬಚಾವ್‌ ಮಾಡಿ ಕರೆ ತಂದಿದ್ದ. ಆದರೆ, ನನಗೆ ಅವನನ್ನು ಸುರಕ್ಷಿತವಾಗಿ ಕರೆದುಕೊಂಡು ಬರಲು ಸಾಧ್ಯವಾಗಲಿಲ್ಲ ಎಂದು ನಿರ್ಭಾವುಕರಾಗಿ ತಮ್ಮ ಅಸಹಾಯಕತೆ ತೋರಿಸಿಕೊಂಡರು.

ನನಗಿಂತ ಮೊದಲು ಅವನು ಹೋಗಿದ್ದಾನೆ, ಅಪ್ಪಾಜಿ ಹಾಗೂ ಅಮ್ಮನನ್ನು ನೋಡಿಕೊಳ್ಳಲು ನಾನು ಹೋಗುತ್ತೇನೆ, ನೀನು ನನ್ನ ಮಕ್ಕಳನ್ನು ನೋಡಿಕೊಂಡು ಇಲ್ಲೇ ಇರು ಎಂದು ಹೇಳಿ ಹೋಗಿದ್ದಾನೆ ಎಂದು ಹೇಳುವಾಗ ರಾಘವೇಂದ್ರ ಅವರ ನೋವು ಬಹಿರಂಗಪಡಿಸದಿದ್ದರೂ ಅವರಲ್ಲಿ ತುಂಬಿದ್ದ ಅಗಾಧ ನೋವು ಎದ್ದು ಕಾಣುತ್ತಿತ್ತು.

ತಮ್ಮನ ಮರಣದ ಸುದ್ದಿ ಆಘಾತದಂತೆ ಎರಗಿದರೂ, ಸಮಾಜಕ್ಕೆ ಏನೂ ತೊಂದರೆಯಾಗಕೂಡದು, ಅಭಿಮಾನಿಗಳು ಅತಿರೇಕದಿಂದ ವರ್ತಿಸಬಾರದು ಎಂದು ಸಂಯಮದಿಂದ ಬಂದು ಮಾತನಾಡಿದ ರಾಘವೇಂದ್ರ ಅವರ ಗಟ್ಟಿತನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವಿಶೇಷ ಮೆಚ್ಚುಗೆ ವ್ಯಕ್ತವಾಗಿದೆ.

https://m.facebook.com/story.php?story_fbid=6347883795284064&id=100001875187700

Tags: ಪುನೀತ್‌ ರಾಜ್‌ ಕುಮಾರ್ಮರಣರಾಘವೇಂದ್ರ ರಾಜ್‌ ಕುಮಾರ್ರಾಜ್‌ ಕುಮಾರ್ವರನಟ
Previous Post

ಪುನೀತ್‌ ರಾಜ್‌ಕುಮಾರ್‌ ಅಕಾಲಿಕ ನಿಧನ: ಬೆಂಗಳೂರಿನಲ್ಲಿ ಹೆಚ್ಚಿದ ಪೊಲೀಸ್‌ ಬಂದೋಬಸ್ತ್‌!

Next Post

ಅಪ್ಪನ ಹಾದಿಯಲ್ಲೇ ಸಾಗಿದ ಅಪ್ಪು; ಪುನೀತ್ ರಾಜ್‌ಕುಮಾರ್‌ರಿಂದ ನೇತ್ರದಾನ

Related Posts

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ
ಕರ್ನಾಟಕ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

by ಪ್ರತಿಧ್ವನಿ
April 9, 2026
0

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಕಾತರದಿಂದ ಕಾಯುತ್ತಿದ್ದ 2026ರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಇಂದು ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಈ ಬಾರಿ ರಾಜ್ಯವು...

Read moreDetails
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

ಕರ್ನಾಟಕದ 2026 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ ಕೆಇಎ..

April 9, 2026
Next Post
ಅಪ್ಪನ ಹಾದಿಯಲ್ಲೇ ಸಾಗಿದ ಅಪ್ಪು; ಪುನೀತ್ ರಾಜ್‌ಕುಮಾರ್‌ರಿಂದ ನೇತ್ರದಾನ

ಅಪ್ಪನ ಹಾದಿಯಲ್ಲೇ ಸಾಗಿದ ಅಪ್ಪು; ಪುನೀತ್ ರಾಜ್‌ಕುಮಾರ್‌ರಿಂದ ನೇತ್ರದಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada