ಕಳೆದ ಎರಡು ವರ್ಷಗಳಿಂದ ಕರೋನಾ ಹಿನ್ನೆಲೆ ಆರಾಧನಾ ಮಹೋತ್ಸವ ಸ್ಥಗಿತಗೊಳಿಸಿದ್ದ ರಾಯರ ಆರಾಧನಾ ಮಹೋತ್ಸವನ್ನು ಮತ್ತೆ ಆರಂಭಿಸಲಾಗಿದೆ. ಇಂದಿನಿಂದ ಏಳು ದಿನಗಳ ಕಾಲ ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿಗಳ 351ನೇ ಆರಾಧನಾ ಮಹೋತ್ಸವ ನಡೆಯಲಿದೆ. ಇಂದಿನಿಂದ ಆಗಸ್ಟ್ 16 ವರೆಗೆ ಆರಾಧನಾ ಮಹೋತ್ಸವದ ಸಪ್ತರಾತ್ರೋತ್ಸವ ನಡೆಯಲಿದೆ.
ಕಳೆದ ಎರಡು ವರ್ಷಗಳಿಂದ ಕರೋನಾ ಹಿನ್ನೆಲೆ ಆರಾಧನಾ ಮಹೋತ್ಸವ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೆ ಅವಕಾಶವಿರಲಿಲ್ಲ. ಆದ್ರೆ ಈ ಬಾರಿ ಕರೋನಾ ಭೀತಿ ಇಲ್ಲದ ಹಿನ್ನೆಲೆ ಬಹಳ ಅದ್ಧೂರಿಯಾಗಿ ರಾಯರ ಆರಾಧನಾ ಮಹೋತ್ಸವ ನಡೆಸಲಾಗುತ್ತಿದೆ.
ತುಂಗಭದ್ರಾ ಡ್ಯಾಂನಿಂದ ಹೆಚ್ಚುವರಿ ನೀರನ್ನ ಬಿಡುಗಡೆ ಮಾಡಲಾಗ್ತಿರುವ ಹಿನ್ನೆಲೆ ಮಂತ್ರಾಲಯ ಮಠದ ಬಳಿ ಹರಿಯುವ ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದೆ. ಹೀಗಾಗಿ ಭಕ್ತರು ತುಂಗಭದ್ರಾ ನದಿಯಲ್ಲಿ ಪುಣ್ಯಸ್ನಾನವನ್ನ ಮಾಡುವುದನ್ನ ನಿಷೇಧಿಸಿ, ಮಠದ ಆಡಳಿತ ಮಂಡಳಿ ತಾತ್ಕಾಲಿಕ ಸ್ನಾನ ಘಟ್ಟಗಳನ್ನ ನಿರ್ಮಿಸಿದೆ.