• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರಾಹುಲ್‌ ಗಾಂಧಿ ಫಾಲೋವರ್ಸ್ ಸಂಖ್ಯೆ ಕಡಿಮೆ ಮಾಡಿದೆಯಾ ಟ್ವೀಟರ್?

ಶರಣು ಚಕ್ರಸಾಲಿ by ಶರಣು ಚಕ್ರಸಾಲಿ
January 27, 2022
in ದೇಶ, ರಾಜಕೀಯ
0
ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ರಾಹುಲ್‌ ಗಾಂಧಿ ಫಾಲೋವರ್ಸ್ ಸಂಖ್ಯೆ ಕಡಿಮೆ ಮಾಡಿದೆಯಾ ಟ್ವೀಟರ್?
Share on WhatsAppShare on FacebookShare on Telegram

ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ಸಾಮಾಜಿಕ ಮಾಧ್ಯಮ ಕಂಪನಿಯು ತನ್ನ ಅನುಯಾಯಿಗಳನ್ನು ಸೀಮಿತಗೊಳಿಸುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಟ್ವೀಟರ್ ಮುಖ್ಯ ಕಾರ್ಯನಿರ್ವಾಹಕ ಕಚೇರಿ ಪರಾಗ್ ಅಗರವಾಲ್ ಅವರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಎನ್‌ ಡಿ ಟಿವಿ ವರದಿ ಮಾಡಿದೆ.

ADVERTISEMENT

ಡಿಸೆಂಬರ್ 27 ರಂದು ಬರೆದ ಪತ್ರದಲ್ಲಿ, ರಾಹುಲ್ ಗಾಂಧಿ ಅವರು ಅತ್ಯಂತ ಸಕ್ರಿಯವಾಗಿರುವ ತಮ್ಮ ಖಾತೆಯು ಸುಮಾರು 20 ಮಿಲಿಯನ್ ಅಥವಾ 2 ಕೋಟಿ ಅನುಯಾಯಿಗಳನ್ನು ಹೊಂದಿತ್ತು. ಪ್ರತಿದಿನ ಸರಾಸರಿ 8,000 ರಿಂದ 10,000 ಅನುಯಾಯಿಗಳು ಸೇರುತ್ತಿದ್ದರು. ಒಂದು ಉದಾಹರಣೆ ಉಲ್ಲೇಖಿಸುತ್ತಾ ಮೇ ತಿಂಗಳಲ್ಲಿ ತಮ್ಮ ಖಾತೆಯು 6.4 ಲಕ್ಷ ಹೊಸ ಅನುಯಾಯಿಗಳನ್ನು ಗಳಿಸಿದೆ ಎಂದು ತಿಳಿಸಿದ್ದಾರೆ.

ಫಾಲೋವರ್ಸ್‌ ಸಂಖ್ಯೆ ಕುಸಿತ
ನಂತರದ ದಿನಗಳಲ್ಲಿ ಏನೋ ವಿಚಿತ್ರ ಸಂಭವಿಸಿದೆ. ಆಗಸ್ಟ್ 2021 ರಿಂದ ನನ್ನ ಟ್ವೀಟರ್ ಅನುಯಾಯಿಗಳ ಸರಾಸರಿ ಸಂಖ್ಯೆ ಶೂನ್ಯಕ್ಕೆ ಕುಸಿದಿದೆ. ನನ್ನ ಟ್ವೀಟ್ಟರ್ ಖಾತೆಗೆ ಲಕ್ವಾ ಹೊಡೆದಂತೆ ತೋರುತ್ತಿದೆ. ಇದೇ ಅವಧಿಯಲ್ಲಿ ಅವರು ದಲಿತ ಬಾಲಕಿಯ ಅತ್ಯಾಚಾರ, ರೈತರ ಪ್ರತಿಭಟನೆ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳು ಸೇರಿದಂತೆ ಹಲವಾರು ವಿಷಯಗಳನ್ನು ಪ್ರಸ್ತಾಪಿಸಿ ಟ್ವೀಟ್‌ ಮಾಡಿದ್ದಾಗಿ ರಾಹುಲ್‌ ಹೇಳಿದ್ದಾರೆ.

ನನ್ನ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನಗಳು ನಡೆಯುತ್ತಿವೆ. ಕೇಂದ್ರ ಸರ್ಕಾರವು ಒತ್ತಡ ಹೇರುತ್ತಿದೆ. ಟ್ವೀಟರ್ ಇಂಡಿಯಾದಲ್ಲಿ ಜನರು ವಿವೇಚನೆ ಅನುಗುಣವಾಗಿ ವಿಶ್ವಾಸಾರ್ಹತೆಯಿಂದ ಕೂಡದ ಮಾಹಿತಿಗಳನ್ನೇ ತಿಳಿಸಿದ್ದೇನೆ. ಆದರೂ ನನ್ನ ಟ್ವೀಟರ್ ಖಾತೆಯನ್ನು ಯಾವುದೇ ಕಾನೂನುಬದ್ಧ ಕಾರಣವಿಲ್ಲದೆ ನಿರ್ಬಂಧಿಸಲಾಗಿದೆ. ದೆಹಲಿಯ ಅತ್ಯಾಚಾರ, ಕೊಲೆ ಮತ್ತು ನಂತರ ಬಲವಂತವಾಗಿ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಹೇಳಲಾದ ಒಂಬತ್ತು ವರ್ಷದ ದಲಿತ ಬಾಲಕಿಯ ಕುಟುಂಬದ ಗುರುತನ್ನು ಬಹಿರಂಗಪಡಿಸುವ ಫೋಟೋವನ್ನು ಹಂಚಿಕೊಂಡಿದ್ದಕ್ಕಾಗಿ ಗಾಂಧಿಯವರ ಖಾತೆಯನ್ನು ಆಗಸ್ಟ್ ಆರಂಭದಲ್ಲಿ ಲಾಕ್ ಮಾಡಲಾಗಿದೆ. ಟ್ವೀಟರ್ ಒಂದು ವಾರದ ನಂತರ ಖಾತೆಯನ್ನು ಮತ್ತೆ ಸಕ್ರೀಯಗೊಳಿಸಲಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ಸರ್ಕಾರ ಸೇರಿದಂತೆ ಇತರ ಬೇರೆ ಬೇರೆ ಟ್ವೀಟರ್ ಹ್ಯಾಂಡಲ್‌ಗಳು ಅದೇ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. ಆದರೆ ಅವುಗಳನ್ನು ನಿರ್ಬಂಧಿಸಲಾಗಿಲ್ಲ ಎಂದು ಕಾಂಗ್ರೆಸ್ ನಾಯಕರು ತಮ್ಮ ಪತ್ರದಲ್ಲಿ ಆರೋಪಿಸಿದ್ದಾರೆ.

ಶತಕೋಟಿ ಭಾರತೀಯರ ಪರವಾಗಿ ಈ ಪತ್ರ

ಭಾರತದಲ್ಲಿ ಟ್ವೀಟರ್ ಒಂದು ನಗಣ್ಯವಾಗದಂತೆ ತಡೆಯಲು ನಾನು ಶತಕೋಟಿಗೂ ಹೆಚ್ಚು ಭಾರತೀಯರ ಪರವಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ ಎಂದು ಗಾಂಧಿ ತಿಳಿಸಿದ್ದಾರೆ.

ಟ್ವೀಟರ್ ಭಾರತದಲ್ಲಿ ನಿರಂಕುಶಾಧಿಕಾರದ ಬೆಳವಣಿಗೆಗೆ ಸಕ್ರಿಯವಾಗಿ ಸಹಾಯ ಮಾಡುವುದಿಲ್ಲ. ಅಗಾಧವಾದ ಜವಾಬ್ದಾರಿ ಟ್ವೀಟರ್‌ ಮೇಲಿದೆ. ಕೆಲವು ತಾಂತ್ರಿಕ ತೊಡಕುಗಳಿಂದ ಅನುಯಾಯಿಗಳ ಸಂಖ್ಯೆಯಲ್ಲಿ ಬದಲಾವಣೆಗಳಾಗುತ್ತವೆ ಎಂದು ಟ್ವೀಟರ್ ವಕ್ತಾರರು ʼದಿ ವಾಲ್ ಸ್ಟ್ರೀಟ್ ಜರ್ನಲ್‌ಗೆ ತಿಳಿಸಿದ್ದಾರೆ. Twitter ನ ನೀತಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರತಿ ವಾರ ಲಕ್ಷಾಂತರ ಖಾತೆಗಳನ್ನು ತೆಗೆದುಹಾಕಲಾಗುತ್ತದೆ ಎಂದು ವಿವರಿಸಿದ್ದಾರೆ.

ರಾಹುಲ್‌ ಗಾಂಧಿಯವರ ಕಚೇರಿಯ ಡಿಜಿಟಲ್ ಸಂವಹನವನ್ನು ನಿರ್ವಹಿಸುವ ಉಸ್ತುವಾರಿ ಶ್ರೀವತ್ಸ ವೈಬಿ ಅವರು ಈ ವಿವರಣೆಯನ್ನು ತಿರಸ್ಕರಿಸಿದ್ದು, “ಇದು ಸಂಪೂರ್ಣ ವಿವರಣಾತ್ಮಕ ಅಥವಾ ತೃಪ್ತಿದಾಯಕ ಪ್ರತಿಕ್ರಿಯೆಯಲ್ಲ” ಎಂದಿದ್ದಾರೆ.

Tags: BJPCongress PartyCovid 19ಟ್ವೀಟರ್ನರೇಂದ್ರ ಮೋದಿಬಿಜೆಪಿರಾಹುಲ್ ಗಾಂಧಿ
Previous Post

UKP ಪುನರ್ವಸತಿ | ಮೂಲ ಸಂತ್ರಸ್ತರಿಗೆ ಪರಿಹಾರ ದೊರಕದೆ ಅಕ್ರಮಗಳ ಮೂಲಕ ಬೇರೆಯವರು ಪಡೆದಿದ್ದಾರಾ?

Next Post

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ!

Related Posts

ಸಿದ್ದರಾಮಯ್ಯ ಬೆಂಕಿ ಇದ್ದಂತೆ, ಯಾರಿಂದಲೂ ಮುಟ್ಟೋಕಾಗೋಲ್ಲಾ ಮುಟ್ಟಿದ್ರೆ ಭಸ್ಮ ಆಗ್ತಾರೆ.
ರಾಜಕೀಯ

ದಾವಣಗೆರೆ ದಕ್ಷಿಣ ಉಪಚುನಾವಣೆ: ಕಾಂಗ್ರೆಸ್ ಒಳಜಗಳ ತೀವ್ರ, ಸಚಿವ ಜಮೀರ್ ವಿರುದ್ಧ ಗಂಭೀರ ಆರೋಪ

by ಪ್ರತಿಧ್ವನಿ
April 12, 2026
0

ದಾವಣಗೆರೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಪೈಪೋಟಿಯಷ್ಟೇ ಅಲ್ಲದೆ, ಕಾಂಗ್ರೆಸ್ ಪಕ್ಷದ ಒಳಜಗಳದ ವೇದಿಕೆಯಾಗಿಯೂ ಪರಿಣಮಿಸಿದೆ. ಸ್ವಪಕ್ಷದ ಅಭ್ಯರ್ಥಿಯನ್ನೇ ಸೋಲಿಸಲು ಸಂಚು ರೂಪಿಸಿದ ಆರೋಪದ...

Read moreDetails
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ!

ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ವರ್ಗಾವಣೆ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada