ಕಾಂಗ್ರೆಸ್ನಲ್ಲಿ ಹಿರಿಯ ಸ್ಥಾನಗಳನ್ನು ಹೊಂದಿರುವ ಗಾಂಧಿ ಕುಟುಂಬದ ಎಲ್ಲ ಮೂವರು ಸದಸ್ಯರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಾರ್ಚ್ 13 ರಂದು ನಡೆಯಲಿರುವ ಕಾಂಗ್ರೆಸ್ ಸಭೆಯಲ್ಲಿ ರಾಜೀನಾಮೆ ನೀಡಲು ಸಿದ್ಧರಾಗಿದ್ದಾರೆ ಎಂದು NDTV ವರದಿ ಮಾಡಿದೆ.
ಆದಾಗ್ಯೂ, ಗಾಂಧಿ ಪರಿವಾರ ನಾಳೆ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷ ನಿರಾಕರಿಸಿದೆ.
ಉತ್ತರ ಪ್ರದೇಶ, ಉತ್ತರಾಖಂಡ, ಮಣಿಪುರ, ಗೋವಾ ಮತ್ತು ಪಂಜಾಬ್ನಲ್ಲಿ ನಡೆದ ಚುನಾವಣಾ ಸೋಲಿನ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು(CWC) ದೆಹಲಿಯಲ್ಲಿ ಸಭೆ ನಡೆಸಲಿದೆ. CWC ಸಭೆಯಲ್ಲಿ, ಈ ವರ್ಷದ ಸೆಪ್ಟೆಂಬರ್ನಲ್ಲಿ ನಡೆಯಲಿರುವ ಆಂತರಿಕ ಚುನಾವಣೆಗಳನ್ನು ಮುಂದೂಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಇತ್ತೀಚೆಗಷ್ಟೇ ಐದು ರಾಜ್ಯಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ನೀಡಿದ ನೀರಸ ಪ್ರದರ್ಶನದ ನಂತರ ಈ ಬೆಳವಣಿಗೆ ನಡೆದಿದೆ. ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಸರ್ಕಾರ ರಚಿಸುವುದರೊಂದಿಗೆ, ಕಾಂಗ್ರೆಸ್ ಪಕ್ಷವು ತನ್ನ ಆಡಳಿತದಲ್ಲಿ ಉಳಿದಿರುವ ಕೊನೆಯ ಕೆಲವು ರಾಜ್ಯಗಳಲ್ಲಿ ಒಂದನ್ನು ಕಳೆದುಕೊಂಡಿತು.
NDTV ಯ ವರದಿಯ ಪ್ರಕಾರ, 2022 ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಕಳಪೆ ಪ್ರದರ್ಶನವು ಗಾಂಧಿ ಕುಟುಂಬದ ಸದಸ್ಯರ ವಿರುದ್ಧ ಟೀಕೆಗಳು ಮತ್ತೆ ಮುನ್ನೆಲೆಗೆ ಬಂದಿದೆ. ಪಕ್ಷದ ನಾಯಕತ್ವದ ಕೂಲಂಕುಷ ಪರೀಕ್ಷೆಯ ಅವಶ್ಯಕತೆಯಿದೆ ಎಂದು ವಿಶ್ಲೇಷಣೆಗಳು ಕೇಳಿ ಬಂದಿದೆ.
ಆದರೆ, ಗಾಂಧಿ ಕುಟುಂಬ ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷ ಪತನವಾಗಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಂಬಿದ್ದಾರೆ. ಗಾಂಧಿ ಕುಟುಂಬವಿಲ್ಲದೆ ಕಾಂಗ್ರೆಸ್ ಪಕ್ಷವು ಒಗ್ಗಟ್ಟಾಗಿ ಉಳಿಯಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಅವರು ಕಾಂಗ್ರೆಸ್ ಪಕ್ಷದ ಒಗ್ಗಟ್ಟಿಗೆ ಪ್ರಮುಖರು… ಗಾಂಧಿ ಕುಟುಂಬವಿಲ್ಲದೆ ಕಾಂಗ್ರೆಸ್ ಉಳಿಯುವುದು ಅಸಾಧ್ಯ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.