ಲಿಂಗಸುಗೂರು: ದೇವರ ಕಾರ್ಯಕ್ಕೆ ಮಾಡಿದ್ದ ಮಾಂಸಾಹಾರ ಸೇವಿಸಿದ ಬಳಿಕ ವಾಂತಿ ಭೇದಿಯಾಗಿ 20ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಲಿಂಗಸುಗೂರು ತಾಲೂಕಿನ ಪರಂಪೂರ ತಾಂಡದಲ್ಲಿ ನಡೆದಿದೆ.
ದೇವರ ಕಾರ್ಯಕ್ಕಾಗಿ ತಾಂಡಾ ನಿವಾಸಿಗಳು ಸೇರಿಕೊಂಡು ಮಾಂಸದ ಅಡುಗೆ ಮಾಡಿಸಿದ್ದರು. ಮಧ್ಯಾಹ್ನ ಊಟ ಸೇವಿಸಿದ ಬಳಿಕ ಮಕ್ಕಳು, ಹಿರಿಯರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದೆ. ಕೂಡಲೇ ಅಸ್ವಸ್ಥರಾದವರನ್ನು ಲಿಂಗಸುಗೂರು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಲುಷಿತ ಆಹಾರ ಸೇವನೆಯೇ ತಾಲ್ಲೂಕಿನ ಗದ್ಲರತಾಂಡಾ ನಿವಾಸಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಳ್ಳಲು ಕಾರಣ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ, ಡಾ. ವಿಕ್ರಮ ಪಾಟೀಲ, ಡಾ. ಅಭಿಜಿತ್ ನಾಯಕ ಹಾಗೂ ಸಿಬ್ಬಂದಿ ಗ್ರಾಮಕ್ಕೆ ಭೇಟಿ ಪರಿಶೀಲಿಸಿದರು.ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಅಮರೇಶ ಪಾಟೀಲ ಮಾಕಾಪುರ ಮಾತನಾಡಿ, ‘ತಾಂಡಾಕ್ಕೆ ವೈದ್ಕಕೀಯ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಗ್ರಾಮಸ್ಥರ ಆರೋಗ್ಯ ತಪಾಸಣೆ ನಡೆಸಿ ಚಿಕಿತ್ಸೆ ನೀಡಿದೆ. ಕಲಷಿತ ಆಹಾರ ಸೇವನೆಯಿಂದಾಗಿ ವಾಂತಿ ಕಾಣಿಸಿಕೊಂಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಆಹಾರ ಮಾದರಿ ಪಡೆದು ಪರೀಕ್ಷೆಗೆ ಪ್ರಯೋಗಾಲಯಕ್ಕೆ ಕಳಿಸಲಾಗಿದೆ’ ಎಂದು ತಿಳಿಸಿದರು.