• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮಂಗಳೂರಿಗೆ ರೈಲ್ವೇ ಗುಡ್‌ನ್ಯೂಸ್: ಪಾಲಕ್ಕಾಡ್ ವಿಭಾಗದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆ

ಪ್ರತಿಧ್ವನಿ by ಪ್ರತಿಧ್ವನಿ
August 22, 2026
in ಕರ್ನಾಟಕ
0
ಮಂಗಳೂರಿಗೆ ರೈಲ್ವೇ ಗುಡ್‌ನ್ಯೂಸ್: ಪಾಲಕ್ಕಾಡ್ ವಿಭಾಗದಿಂದ ಮೈಸೂರು ವಿಭಾಗಕ್ಕೆ ಸೇರ್ಪಡೆ
Share on WhatsAppShare on FacebookShare on Telegram

ಕರಾವಳಿ ಕರ್ನಾಟಕದ ರೈಲು ಪ್ರಯಾಣಿಕರು ಹಾಗೂ ಸಾರ್ವಜನಿಕರ ದಶಕಗಳ ಬೇಡಿಕೆಗೆ ಕೊನೆಗೂ ಕೇಂದ್ರ ಸರ್ಕಾರ ಸ್ಪಂದಿಸಿದೆ. ಇದುವರೆಗೆ ಕೇರಳದ ಪಾಲಕ್ಕಾಡ್ ರೈಲ್ವೇ ವಿಭಾಗದ ವ್ಯಾಪ್ತಿಯಲ್ಲಿದ್ದ ಮಂಗಳೂರು ರೈಲ್ವೇ ಪ್ರದೇಶವನ್ನು ನೈಋತ್ಯ ರೈಲ್ವೆಯ (SWR) ಮೈಸೂರು ವಿಭಾಗಕ್ಕೆ ವರ್ಗಾಯಿಸಲು ರೈಲ್ವೇ ಮಂಡಳಿ ಆದೇಶ ಹೊರಡಿಸಿದೆ.ಈ ಮಹತ್ವದ ಬದಲಾವಣೆಯಿಂದ ದಕ್ಷಿಣ ಕನ್ನಡ ಸೇರಿದಂತೆ ಕರಾವಳಿ ಭಾಗದ ರೈಲ್ವೇ ಆಡಳಿತದಲ್ಲಿದ್ದ ಹಲವು ಗೊಂದಲಗಳಿಗೆ ತೆರೆ ಬೀಳಲಿದ್ದು, ರೈಲ್ವೇ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ವೇಗ ಸಿಗುವ ನಿರೀಕ್ಷೆಯಿದೆ.

ADVERTISEMENT
R Ashok On B Nagendra : ಒಬ್ಬ ನಾಗೇಂದ್ರನಿಗಾಗಿ Congressನಿಂದ ದಲಿತ ಸಮುದಾಯಕ್ಕೆ ಅನ್ಯಾಯವಾಗ್ತಿದೆ  | BJP |

ರೈಲ್ವೇ ಮಂಡಳಿಯ ಆದೇಶದಂತೆ ನೂತನ ಆಡಳಿತ ವ್ಯವಸ್ಥೆ 2026ರ ಅಕ್ಟೋಬರ್ 1ರಿಂದ ಜಾರಿಗೆ ಬರಲಿದೆ. ಮಂಗಳೂರು ಸೆಂಟ್ರಲ್, ಮಂಗಳೂರು ಜಂಕ್ಷನ್ ಸೇರಿದಂತೆ ಉಳ್ಳಾಲ ರೈಲ್ವೇ ನಿಲ್ದಾಣದವರೆಗಿನ ಪ್ರದೇಶ ಮೈಸೂರು ವಿಭಾಗದ ವ್ಯಾಪ್ತಿಗೆ ಬರಲಿದೆ.ಈ ಹಿಂದೆ ಪಾಲಕ್ಕಾಡ್ ಮತ್ತು ಮೈಸೂರು ವಿಭಾಗಗಳ ನಡುವಿನ ಗಡಿ ಹಾಗೂ ಇಂಟರ್‌ಚೇಂಜ್ ಪಾಯಿಂಟ್ ಆಗಿ ಪಡೀಲ್ ರೈಲ್ವೇ ನಿಲ್ದಾಣ ಕಾರ್ಯನಿರ್ವಹಿಸುತ್ತಿತ್ತು. ಇನ್ನು ಮುಂದೆ ಉಳ್ಳಾಲ ರೈಲ್ವೇ ನಿಲ್ದಾಣವು ನೂತನ ಇಂಟರ್‌ಚೇಂಜ್ ಪಾಯಿಂಟ್ ಆಗಿ ಕಾರ್ಯನಿರ್ವಹಿಸಲಿದೆ. ವಿಭಾಗೀಯ ಪ್ರಧಾನ ಕಚೇರಿ ಮೈಸೂರಿನಲ್ಲಿ ಹಾಗೂ ವಲಯ ಪ್ರಧಾನ ಕಚೇರಿ ಹುಬ್ಬಳ್ಳಿಯಲ್ಲಿ ಇರಲಿದೆ.

DK Shivakumar : ನಾಗೇಂದ್ರಗೆ ನಾನೇ ಹೇಳ್ತೀನಿ ರಾಜೀನಾಮೆ ಕೊಡೋಕೆ..!| #pratidhvani

ಮಂಗಳೂರು ರೈಲ್ವೇ ಪ್ರದೇಶವನ್ನು ಕರ್ನಾಟಕದ ವಲಯಕ್ಕೆ ಸೇರ್ಪಡೆಗೊಳಿಸಲು ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ ಅವರು ನಿರಂತರವಾಗಿ ಪ್ರಯತ್ನಿಸಿದ್ದರು. ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಅವರ ಗಮನಕ್ಕೆ ವಿಷಯ ತಂದಿದ್ದ ಅವರು, 2024ರ ಜುಲೈನಲ್ಲಿ ರೈಲ್ವೇ ರಾಜ್ಯ ಸಚಿವ ವಿ. ಸೋಮಣ್ಣ ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಕುರಿತು ಪ್ರತ್ಯೇಕ ಸಭೆ ನಡೆಸಿ ಒತ್ತಡ ಹೇರಿದ್ದರು.ಇದೀಗ ರೈಲ್ವೇ ಮಂಡಳಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ತಮ್ಮ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದೆ ಎಂದು ಸಂಸದ ಚೌಟ ತಿಳಿಸಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ರೂಪಿಸಲಾದ ಪ್ರಸ್ತಾವನೆಗೆ ತಕ್ಷಣ ಅನುಮೋದನೆ ನೀಡಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ಅವರು ಧನ್ಯವಾದ ಸಲ್ಲಿಸಿದ್ದಾರೆ.

B. Sriramulu : ನಾಗೇಂದ್ರ ರಾಜೀನಾಮೆ ಪಡೆದು ಬೇರೆಯವ್ರನ್ನ ಮಂತ್ರಿಮಾಡಲಿ..

ಮಂಗಳೂರು ರೈಲ್ವೇ ಪ್ರದೇಶವು ಈವರೆಗೆ ಪಾಲಕ್ಕಾಡ್ ವಿಭಾಗದ ವ್ಯಾಪ್ತಿಯಲ್ಲಿದ್ದ ಕಾರಣ ಹೊಸ ರೈಲುಗಳ ಆರಂಭ, ವೇಳಾಪಟ್ಟಿ ಬದಲಾವಣೆ ಹಾಗೂ ನಿಲ್ದಾಣಗಳ ಮೂಲಸೌಕರ್ಯ ಅಭಿವೃದ್ಧಿಯಂತಹ ವಿಷಯಗಳಲ್ಲಿ ಆಡಳಿತಾತ್ಮಕ ತೊಡಕುಗಳು ಎದುರಾಗುತ್ತಿದ್ದವು.ಇದೀಗ ಮೈಸೂರು ವಿಭಾಗಕ್ಕೆ ಸೇರ್ಪಡೆಯಾಗುವುದರಿಂದ ಸಾರ್ವಜನಿಕರ ಕುಂದುಕೊರತೆಗಳಿಗೆ ವೇಗವಾಗಿ ಸ್ಪಂದಿಸುವ ಅವಕಾಶ ಹೆಚ್ಚಲಿದೆ. ಕರಾವಳಿಯಿಂದ ಬೆಂಗಳೂರು, ಮೈಸೂರು ಹಾಗೂ ಉತ್ತರ ಕರ್ನಾಟಕ ಭಾಗಗಳಿಗೆ ಹೊಸ ರೈಲು ಸಂಪರ್ಕ ಕಲ್ಪಿಸುವುದು ಮತ್ತಷ್ಟು ಸುಲಭವಾಗುವ ನಿರೀಕ್ಷೆಯಿದೆ. ಜೊತೆಗೆ ಕರಾವಳಿ ರೈಲ್ವೇ ಮೂಲಸೌಕರ್ಯ ಯೋಜನೆಗಳ ಕಾಮಗಾರಿಗಳಿಗೂ ವೇಗ ಸಿಗುವ ಸಾಧ್ಯತೆಯಿದೆ.

 

ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಮಂಗಳೂರು ಸೇರಿದಂತೆ ಇಡೀ ಕರಾವಳಿ ಭಾಗದ ರೈಲು ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ಹರ್ಷ ವ್ಯಕ್ತವಾಗಿದೆ.

 

 

Tags: #AshwiniVaishnaw#BridgishChowta#CoastalKarnataka#IndianRailways#karnataka#mangalore#MangaloreCentral#MangaloreJunction#MysoreDivision#PalakkadDivision#RailwayDevelopment#RailwayNews#SouthWesternRailway#VSomanannadakshinakannadaMangaloreRailway
Previous Post

ತಮಿಳುನಾಡು ವಿಧಾನಸಭೆಯಲ್ಲಿ ವಾಕ್ಸಮರ: ಉದಯನಿಧಿಗೆ ‘ಬಾತ್ರೂಮ್ ಲೀಡರ್’ ತಿರುಗೇಟು ಏನು

Next Post

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

Related Posts

KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ
Top Story

KPSC ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ನಿಗೂಢ ನಾಪತ್ತೆ

by ಪ್ರತಿಧ್ವನಿ
August 22, 2026
0

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ಪರೀಕ್ಷಾ ಮೇಲ್ವಿಚಾರಕರಾಗಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಹಾಗೂ ಎಂಎಸ್‌ಎಂಇ ಇಲಾಖೆಯ ವ್ಯವಸ್ಥಾಪಕ ನಿರ್ದೇಶಕ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿರುವ ಘಟನೆ ಹಲವು ಅನುಮಾನಗಳಿಗೆ ಕಾರಣವಾಗಿದೆ....

Read moreDetails
ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!

ಕರ್ನಾಟಕದಲ್ಲಿ 1 ವರ್ಷ ‌ಕೃತಕ ಪನ್ನೀರ್ ಬ್ಯಾನ್: ಇಲ್ಲಿದೆ ಸಂಪೂರ್ಣ ಮಾಹಿತಿ..!

August 22, 2026
500 KPS ಶಾಲೆಗಳ ಅಭಿವೃದ್ಧಿಗೆ  1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

500 KPS ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ರೂ ಎಡಿಬಿ ನೆರವು: ಮಹತ್ವದ ಒಪ್ಪಂದಕ್ಕೆ ಸಹಿ

August 21, 2026
ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

ರೇಷನ್ ಕಾರ್ಡ್ ಇ-ಕೆವೈಸಿಗೆ ತಾತ್ಕಾಲಿಕ ಬ್ರೇಕ್: ಮತ್ತೆ ಯಾವಾಗ ಆರಂಭ?

August 21, 2026
ವಿರೋಧ ಪಕ್ಷದವರಿಗೆ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ- ಸಿಎಂ ಡಿ.ಕೆ ಶಿವಕುಮಾರ್

ವಿರೋಧ ಪಕ್ಷದವರಿಗೆ ನನ್ನ ಸರ್ಕಾರವನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ- ಸಿಎಂ ಡಿ.ಕೆ ಶಿವಕುಮಾರ್

August 21, 2026
Next Post
ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

ವಿಕಾಸದ ಹಾದಿಯ ಬಹುಮುಖಿ ಮಾಲಿನ್ಯಗಳು -4

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada