![](https://pratidhvani.com/wp-content/uploads/2024/05/rain-2024-05-22t073605.322-1024x576.webp)
ಜೂನ್ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ಜುಲೈ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸುತ್ತದೆ. ಆದರೆ, ಈ ಬಾರಿ ಒಂದು ದಿನ ಮೊದಲೇ ಅಂದರೆ, ಮೇ 31ರಂದು ಮುಂಗಾರು ಪ್ರವೇಶಿಸುತ್ತದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿತ್ತು. ಬುಧವಾರ ಹವಾಮಾನ ಇಲಾಖೆ ನೀಡಿರುವ ಮಾಹಿತಿ ನೋಡಿದರೆ, ಮೇ 30ರಂದೇ ಮುಂಗಾರು ಪ್ರವೇಶಿಸಲಿದೆ.ದೇಶಾದ್ಯಂತ ಬಹುತೇಕ ಭಾಗಗಳಲ್ಲಿ ಮಳೆಯಾಗುತ್ತಿದೆ.
![](https://pratidhvani.com/wp-content/uploads/2024/05/Rain-2023-11-2b6e6e308b3aeda4577265fe5e68a8d9-3x2-2-1024x576.jpg)
ಕರ್ನಾಟಕದಲ್ಲೂ (Karnataka) ವರುಣ ಕೃಪೆ ತೋರಿದ ಕಾರಣ (Rain News) ಬಿಸಿಲಿನಿಂದ ಕಂಗೆಟ್ಟಿದ್ದ ಜನ ನಿಟ್ಟುಸಿರು ಬಿಟ್ಟಿದ್ದಾರೆ. ಜನ-ಜಾನುವಾರುಗಳಿಗೆ ನೀರು ಸಿಗುವಂತಾಗಿದೆ. ಇದರ ಬೆನ್ನಲ್ಲೇ, ಹವಾಮಾನ ಇಲಾಖೆಯು ಮಹತ್ವದ ಮಾಹಿತಿ ಹಂಚಿಕೊಂಡಿದೆ. ಮುಂದಿನ 24 ಗಂಟೆಗಳಲ್ಲಿಯೇ ಮುಂಗಾರು ಮಳೆಯು (Monsoon 2024) ಕೇರಳ ಪ್ರವೇಶಿಸಲಿದ್ದು, ದೇಶದ ಹಲವೆಡೆ ಮಳೆಯಾಗಲಿದೆ ಎಂಬುದಾಗಿ ಮಾಹಿತಿ ನೀಡಿದೆ.
ಜೂನ್ 1ರಂದು ಮುಂಗಾರು ಮಳೆಯು ಕೇರಳವನ್ನು ಪ್ರವೇಶಿಸಿ, ಜುಲೈ 15ರ ವೇಳೆಗೆ ದೇಶಾದ್ಯಂತ ವ್ಯಾಪಿಸುತ್ತದೆ. ಆದರೆ, ಈ ಬಾರಿ ಒಂದು ದಿನ ಮೊದಲೇ ಅಂದರೆ, ಮೇ 31ರಂದು ಮುಂಗಾರು ಪ್ರವೇಶಿಸುತ್ತದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿತ್ತು. ಬುಧವಾರ ಹವಾಮಾನ ಇಲಾಖೆ ನೀಡಿರುವ ಮಾಹಿತಿ ನೋಡಿದರೆ, ಮೇ 30ರಂದೇ ಮುಂಗಾರು ಪ್ರವೇಶಿಸಲಿದೆ. ಕೇರಳದಲ್ಲಿ ಮಳೆಯಾದರೆ, ದಕ್ಷಿಣ ಕನ್ನಡ, ಕೊಡಗು ಸೇರಿ ಹಲವೆಡೆ ಮಳೆಯಾಗುವುದು ನಿಶ್ಚಿತ ಎಂದೇ ಹೇಳಲಾಗುತ್ತಿದೆ. ಕೇರಳದಲ್ಲಿ ಈಗಾಗಲೇ ಒಂದು ವಾರದಿಂದ ಭಾರಿ ಮಳೆಯಾಗಿದೆ. ಮುಂಗಾರು ಪ್ರವೇಶದಿಂದ ಲಕ್ಷದ್ವೀಪ ಸೇರಿ ಹಲವು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ಹೇಳಲಾಗುತ್ತಿದೆ.