ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ರಾಜ್ಯಸಭಾ ಸದಸ್ಯರಾಗಿರುವ ಜಗ್ಗೇಶ್ ಮನೆಗೆ ನೀರು ನುಗ್ಗಿದೆ.
ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನವರಸನಾಯಕ ಎಂದೇ ಖ್ಯಾತರಾದ ಜಗ್ಗೇಶ್ ಅವರ ಮಾಯಸಂದ್ರದ ಮನೆಗೆ ನುಗ್ಗಿದ್ದು, ಸಂಪೂರ್ಣ ಜಲಾವೃತಗೊಂಡಿದೆ.
ಸ್ವತಃ ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ಈ ವಿಷಯ ಹಂಚಿಕೊಂಡಿದ್ದು, ಮಾಯಸಂದ್ರದ ನನ್ನ ಮನೆ ಸಂಪೂರ್ಣ ಜಲಾವೃತ. ಬಹುತೇಕರು ನೀರು ಹರಿವ ಸರ್ಕಾರದ ಜಾಗದಲ್ಲಿ ಮನೆಕಟ್ಟಿ ನೀರು ಹರಿಯುವ ಹೊಂಡಗಳ ಮುಚ್ಚಿದ್ದಾರೆ. ಮಾಯಸಂದ್ರ ತಳದಲ್ಲಿ ಇರುವ ಸುಮಾರು 20 ಆಸ್ತಿಗಳಿಗೆ ನಿರಂತರ ನೀರು ನುಗ್ಗುತ್ತದೆ ದಯಮಾಡಿ ನೀರಾವರಿನಿಗಮ ಗಮನ ಹರಿಸಿ ಎಂದು ನಟ ಜಗ್ಗೇಶ್ ವಿನಂತಿಸಿಕೊಂಡಿದ್ದಾರೆ. ಜೊತೆಗೆ ಸಿಎಂ ಬೊಮ್ಮಾಯಿ ಅವರಿಗೂ ಜಗ್ಗೇಶ್ ಮನವಿ ಮಾಡಿದ್ದಾರೆ.
ಸ್ಯಾಂಡಲ್ವುಡ್ನಲ್ಲಿ 150ಕ್ಕೂ ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಜಗ್ಗೇಶ್ ಈಗ ನಟನೆಯ ಜತೆ ರಾಜ್ಯಸಭಾ ಸದಸ್ಯರಾಗಿ ಕೂಡ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೀಗ ತಮ್ಮ ಮನೆ ಜಲಾವೃತವಾಗಿರೋದರ ಬಗ್ಗೆ ಟ್ವಿಟ್ಟರ್ ಮೂಲಕ ಹೇಳಿಕೊಂಡಿದ್ದಾರೆ. ನೀರಾವರಿ ನಿಗಮದವರಿಗೆ ಗಮನ ಹರಿಸಿ ಎಂದು ಮನವಿ ಮಾಡಿದ್ದಾರೆ.
ಈಗಾಗಲೇ ಜಲಾವೃತವಾಗಿರುವ ಮನೆಗಳ ಬಗ್ಗೆ ಮತ್ತು ನಟ ಜಗ್ಗೇಶ್ ಮನವಿಗೆ ನೀರಾವರಿ ನಿಗಮ ಯಾವ ರೀತಿಯಲ್ಲಿ ಸಾಥ್ ನೀಡಬಹುದು ಎಂಬುದನ್ನ ಕಾದುನೋಡಬೇಕಿದೆ.