• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ʼಫ್ಯಾಸಿಸ್ಟ್ ಬಿಜೆಪಿʼ ಎಂಬ ಘೋಷಣೆ ಅಪರಾಧವಲ್ಲ: ಯುವತಿ ವಿರುದ್ಧದ FIR ರದ್ದುಪಡಿಸಿದ ಮದ್ರಾಸ್‌ ಹೈಕೋರ್ಟ್

ಪ್ರತಿಧ್ವನಿ by ಪ್ರತಿಧ್ವನಿ
August 25, 2023
in Top Story, ದೇಶ
0
ʼಫ್ಯಾಸಿಸ್ಟ್ ಬಿಜೆಪಿʼ ಎಂಬ ಘೋಷಣೆ ಅಪರಾಧವಲ್ಲ: ಯುವತಿ ವಿರುದ್ಧದ FIR ರದ್ದುಪಡಿಸಿದ ಮದ್ರಾಸ್‌ ಹೈಕೋರ್ಟ್
Share on WhatsAppShare on FacebookShare on Telegram

  2018 ರಲ್ಲಿ ತಮಿಳುನಾಡು ಬಿಜೆಪಿ ಮುಖ್ಯಸ್ಥೆ ತಮಿಳಿಸೈ ಸೌಂದರರಾಜನ್ ಅವರಿದ್ದ ವಿಮಾನದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಮಹಿಳೆಯ ವಿರುದ್ಧದ ದಾಖಲಾಗಿದ್ದ ಎಫ್‌ಐಆರ್‌ ಅನ್ನು ಮದ್ರಾಸ್ ಹೈಕೋರ್ಟ್ ರದ್ದುಗೊಳಿಸಿದೆ.

ADVERTISEMENT

ತಮಿಳಿಸೈ ಸಂಚರಿಸುತ್ತಿದ್ದ ವಿಮಾನದಲ್ಲಿದ್ದ ಮಹಿಳಾ ಪ್ರಯಾಣಿಕರೊಬ್ಬರು “ಫ್ಯಾಸಿಸ್ಟ್ ಬಿಜೆಪಿ, ಡೌನ್ ಡೌನ್” ಎಂಬ‌ ಘೋಷಣೆಗಳನ್ನು ಕೂಗಿದ್ದರು. ಈ ರೀತಿಯ ಘೋಷಣೆಯನ್ನು ಕೂಗುವುದು ಅಪರಾಧವಲ್ಲ ಎಂದು ಹೇಳಿದ ಹೈಕೋರ್ಟ್‌, ಅದನ್ನು ʼಕ್ಷುಲ್ಲಕ ವಿಷಯʼ ಪರಿಗಣಿಸಿದೆ.

 ಸಂಶೋಧನಾ ವಿದ್ಯಾರ್ಥಿನಿ ಲೋಯಿಸ್ ಸೋಫಿಯಾ ಅವರು ತೂತುಕುಡಿ ಈಗಿನ ತೆಲಂಗಾಣದ ಗವರ್ನರ್ ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಸೌಂದರರಾಜನ್ ಅವರಿದ್ದ ವಿಮಾನದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆಯನ್ನು ಕೂಗಿದ್ದರು. ಘಟನೆಯ ನಂತರ ಸೋಫಿಯಾ ಅವರನ್ನು ಬಂಧಿಸಲಾಗಿದ್ದು, ಮರುದಿನ ಅವರಿಗೆ ಜಾಮೀನು ನೀಡಲಾಯಿತು.

ತಮಿಳಿಸೈ ಸೌಂದರರಾಜನ್ Tamilisai Soundararajan.

ತೂತುಕುಡಿ ಪೊಲೀಸರು ತನ್ನ ವಿರುದ್ಧ ದಾಖಲಿಸಿದ ಎಫ್‌ಐಆರ್‌ ಅನ್ನು ರದ್ಧು ಪಡಿಸುವಂತೆ 2019 ರಲ್ಲಿ ಸೋಫಿಯಾ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ನಡೆಸುತ್ತಿದೆ.  

ಸೋಫಿಯಾ ವಿರುದ್ಧ ಮದ್ರಾಸ್ ಸಿಟಿ ಪೊಲೀಸ್ ಕಾಯಿದೆಯ ಸೆಕ್ಷನ್ 290 ಮತ್ತು 75 (1) (ಸಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಮಧುರೈ ಪೀಠದ ನ್ಯಾಯಮೂರ್ತಿ ಪಿ ಧನಬಾಲ್ ಅವರು, ಸೋಫಿಯಾ ಅವರ ನಡೆಯಲ್ಲಿ ಸಾರ್ವಜನಿಕ ಉಪದ್ರವವನ್ನು ಪ್ರಚೋದಿಸುವ ಯಾವುದೂ ಇಲ್ಲ ಎಂದು ಹೇಳಿದ್ದಾರೆ.

“ಪ್ರಥಮ ಮಾಹಿತಿ ವರದಿ ಮತ್ತು ಚಾರ್ಜ್ ಶೀಟ್ ನಲ್ಲಿ ಅರ್ಜಿದಾರರು ಕೇವಲ ‘ಫ್ಯಾಸಿಸ್ಟ್ ಬಿಜೆಪಿ’ ಎಂದು ಘೋಷಣೆಯನ್ನು ಎತ್ತಿದ್ದಾರೆ ಮತ್ತು ಆ ಪದಗಳು ಯಾವುದೇ ಅಪರಾಧವನ್ನು ಒಳಗೊಂಡಿಲ್ಲ ಮತ್ತು ಇದು ಕ್ಷುಲ್ಲಕ ಸ್ವಭಾವವನ್ನು ಬಹಿರಂಗಪಡಿಸುತ್ತದೆ ಆದ್ದರಿಂದ ತೂತುಕುಡಿ ಪೊಲೀಸರು ದಾಖಲಿಸಲಾದ ಪ್ರಕರಣವನ್ನು ರದ್ದುಗೊಳಿಸಲಾಗುವುದು” ಎಂದು ಹೈಕೋರ್ಟ್‌ ಆದೇಶಿಸಿದೆ.

Tags: BJPDownFascist ‌highcourtKarnataka HighcourtMadrasNot an Offenceslogantamilisai soundararajanಬಿಜೆಪಿ
Previous Post

ದೇಶದ ಒಂದಿಂಚೂ ಭೂಭಾಗವನ್ನು ಚೀನಾ ವಶಪಡಿಸಿಕೊಂಡಿಲ್ಲ ಎಂಬ ಪ್ರಧಾನಿ ಮಾತು ಸುಳ್ಳು: ರಾಹುಲ್‌ ಗಾಂಧಿ

Next Post

ಕಾವೇರಿ ವಿವಾದ | 24 ಕ್ಯೂಸೆಕ್ ನೀರಿಗೆ ತಮಿಳುನಾಡು ಸಲ್ಲಿಸಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Related Posts

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
0

ಬೆಂಗಳೂರು: ದೇಶದಲ್ಲೇ ಸಂಚಲನ ಮೂಡಿಸಿದ್ದ 400 ಕೋಟಿ ರೂಪಾಯಿ ಕಂಟೇನರ್ ದರೋಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಪ್ರಮುಖ ಆರೋಪಿ ಕಿಶೋರ್ ಸಾವ್ಲಾ ನಾಸಿಕ್ ಗ್ರಾಮೀಣ ಪೊಲೀಸರಿಗೆ...

Read moreDetails
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Next Post
ಸುಪ್ರೀಂ ಕೋರ್ಟ್‌

ಕಾವೇರಿ ವಿವಾದ | 24 ಕ್ಯೂಸೆಕ್ ನೀರಿಗೆ ತಮಿಳುನಾಡು ಸಲ್ಲಿಸಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

Please login to join discussion

Recent News

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?
Top Story

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

by ಪ್ರತಿಧ್ವನಿ
February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?
Top Story

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

by ಪ್ರತಿಧ್ವನಿ
February 1, 2026
Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ
Top Story

Union Budget 2026: ಇನ್ಮುಂದೆ ಬೈಕ್ ಅಪಘಾತ ಪರಿಹಾರ ವಿಮೆ ಹಣಕ್ಕೆ ತೆರಿಗೆ ಇಲ್ಲ

by ಪ್ರತಿಧ್ವನಿ
February 1, 2026
Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್
Top Story

Union Budget 2026: ಆದಾಯ ತೆರಿಗೆದಾರರಿಗೆ ಗುಡ್‌ನ್ಯೂಸ್‌: ಮಧ್ಯಮ ವರ್ಗಕ್ಕೆ ಬಿಗ್‌ ರಿಲೀಫ್

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

400 ಕೋಟಿ ದರೋಡೆ ಕೇಸ್‌: ದಿಢೀರ್‌ ಪೊಲೀಸರಿಗೆ ಶರಣಾದ ವ್ಯಕ್ತಿ ಯಾರು..?

February 1, 2026
ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

ಕೊಟ್ಟೂರು ನರಮೇ**: ಗರ್ಭಿಣಿ ತಂಗಿ ಮತ್ತು ಹೆತ್ತವರನ್ನು ಮುಗಿಸಿದ್ಯಾಕೆ ಅಣ್ಣ..?

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada