• Home
  • About Us
  • ಕರ್ನಾಟಕ
Friday, June 27, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಅಗತ್ಯ ವಸ್ತುಗಳ ಬೆಲೆ ಏರಿಕೆ: ಮಹಿಳಾ ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ

Any Mind by Any Mind
September 7, 2021
in ಕರ್ನಾಟಕ
0
ಅಗತ್ಯ ವಸ್ತುಗಳ ಬೆಲೆ ಏರಿಕೆ: ಮಹಿಳಾ ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ
Share on WhatsAppShare on FacebookShare on Telegram

‘ಅಡುಗೆ ಅನಿಲ, ಅಡುಗೆ ಎಣ್ಣೆ, ದಿನಸಿ ಸಾಮಾಗ್ರಿಗಳ ಬೆಲೆ ಏರಿಕೆಯಿಂದ ಗೃಹಿಣಿಯರು ಹಾಗೂ ಜನ ಸಾಮಾನ್ಯರು ಸಂಕಷ್ಟಕ್ಕೆ ಸಿಲುಕಿದ್ದು, ಸರ್ಕಾರದ ಈ ಜನ ವಿರೋಧಿ ನೀತಿ ಖಂಡಿಸಿ ಬುಧವಾರ ರಾಜ್ಯಾದ್ಯಂತ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಗುವುದು ಹಾಗೂ ರಾಜಭವನ ಚಲೋ ನಡೆಸಿ ಸರ್ಕಾರದ ನೀತಿ ವಿರುದ್ಧ ರಾಜ್ಯಪಾಲರ ಸುಖಾಂತರ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗುವುದು’ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ತಿಳಿಸಿದ್ದಾರೆ.

ADVERTISEMENT

ಕೆಪಿಸಿಸಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಯುಪಿಎ ಸರ್ಕಾರದ ಅವಧಿಯಲ್ಲಿ ಸಣ್ಣ ಪುಟ್ಟ ಬೆಲೆ ಏರಿಕೆಗೂ ಬೀದಿಗಿಳಿದು ಪ್ರತಿಭಟನೆ ಮಾಡುತ್ತಿದ್ದ ಬಿಜೆಪಿ ನಾಯಕಿಯರಾದ ಶೋಭಾ ಕರಂದ್ಲಾಜೆ, ಸ್ಮೃತಿ ಇರಾನಿ ಅವರು ಈಗ ಯಾಕೆ ಮೌನವಾಗಿದ್ದಾರೆ?’ ಎಂದು ಪ್ರಶ್ನಿಸಿದ್ದಾರೆ.

‘ಬಿಜೆಪಿಯಲ್ಲಿರುವ ಶೋಭಕ್ಕ, ತಾರಕ್ಕ, ಮಾಳವಿಕಾ ಅಕ್ಕ, ಶಶಿಕಲಾ ಜೊಲ್ಲೆ ಅವರಿಗೆ ಈ ಬೆಲೆ ಏರಿಕೆ ಕಾಣಿಸುತ್ತಿಲ್ಲವೇ? ಮಧ್ಯಮ ವರ್ಗದ ಹೆಣ್ಣುಮಕ್ಕಳ ಕಣ್ಣೀರ ಕೂಗು ನಿಮಗೆ ಕೇಳಿಸುತ್ತಿಲ್ಲವೇ? ಅಧಿಕಾರ ಸಿಕ್ಕ ಮೇಲೆ ನೈತಿಕತೆಯೇ ಕಳೆದುಹೋಗಿದೆಯಾ? ಕೋವಿಡ್ ಸಮಯದಲ್ಲಿ ಜನರು ಈ ಬೆಲೆ ಏರಿಕೆ ನಿಭಾಯಿಸಲು ಸಾಧ್ಯವಾ? ಜನರ ಕಷ್ಟ ನಿಮಗೆ ಕಾಣುತ್ತಿಲ್ಲವೇ?. ನಾನು ಮೋದಿ ಅವರ ಬಗ್ಗೆ ಮಾತನಾಡುವುದಿಲ್ಲ, ಅವರಿಗೆ 56 ಇಂಚಿನ ಎದೆಯಲ್ಲಿ ಹೆಣ್ಣಿ ಹೃದಯವಿಲ್ಲ. ಹೀಗಾಗಿ ಬಿಜೆಪಿ ಮಹಿಳಾ ನಾಯಕಿಯರನ್ನು ಪ್ರಶ್ನೆ ಮಾಡುತ್ತಿದ್ದೇನೆ’ ಎಂದಿದ್ದಾರೆ.

‘ಯುಪಿಎ ಅವಧಿಯಲ್ಲಿ ಅಲ್ಪ ಪ್ರಮಾಣದಲ್ಲಿ ಬೆಲೆ ಏರಿಕೆಯಾಗುತ್ತಿತ್ತು, ಆದರೆ ಈಗ ಒಂದು ಬಾರಿಗೆ 25ರಿಂದ 50 ರೂಪಾಯಿವರೆಗೂ ಅಡುಗೆ ಅನಿಲದ ಬೆಲೆ ಏರಿಕೆಯಾಗುತ್ತಿದೆ. ಏಷ್ಟೇ ಬೆಲೆ ಹೆಚ್ಚಿಸಿದರೂ ಜನ ತೆಗೆದುಕೊಳ್ಳುತ್ತಾರೆ, ಯಾರೂ ಪ್ರಶ್ನೆ ಮಾಡುವುದಿಲ್ಲ ಎಂಬ ಮನಸ್ಥಿತಿಗೆ ಬಿಜೆಪಿ ನಾಯಕರು ಬಂದಿದ್ದಾರೆ. 2014ರಲ್ಲಿ 410 ರೂಪಾಯಿ ಇದ್ದ ಅಡುಗೆ ಅನಿಲ, ಕಳೆದ 7 ವರ್ಷಗಳಲ್ಲಿ 27 ಬಾರಿ ಏರಿಕೆ ಕಂಡು ಇಂದು 880 ರೂಪಾಯಿ ಆಗಿದೆ. ಸದ್ಯದಲ್ಲೇ ಸಾವಿರದ ಗಡಿ ಮುಟ್ಟಿದರೆ ಆಶ್ಚರ್ಯವಿಲ್ಲ’ ಎಂದಿದ್ದಾರೆ.

‘ಕೇವಲ ಅಡುಗೆ ಅನಿಲ ಮಾತ್ರವಲ್ಲ, ದಿನಸಿ ಸಾಮಾಗ್ರಿ, ದಿನಬಳಕೆ ವಸ್ತುಗಳ ಬೆಲೆಯೂ ಹೆಚ್ಚಾಗುತ್ತಿದೆ. ಈ ಮಧ್ಯೆ ಬಿಜೆಪಿ ನಾಯಕರೊಬ್ಬರು ಈ ಬೆಲೆ ಏರಿಕೆಗೆ ತಾಲಿಬಾನ್ ಸರ್ಕಾರ ಕಾರಣ ಎಂಬ ಬಾಲಿಷ ಹೇಳಿಕೆ ನೀಡುತ್ತಾರೆ. ಕಳೆದ 70 ವರ್ಷಗಳಲ್ಲಿ ಕಾಂಗ್ರೆಸ್ ದೇಶವನ್ನು ಕಟ್ಟದಿದ್ದರೆ ಇಂದು ನಾವ್ಯಾರೂ ಹೀಗೆ ಕೂರಲು ಸಾಧ್ಯವಾಗುತ್ತಿರಲಿಲ್ಲ’ ಎಂದಿದ್ದಾರೆ.

‘ಉಜ್ವಲ ಯೋಜನೆಯಲ್ಲಿ 8 ಕೋಟಿಗೂ ಹೆಚ್ಚು ಮಹಿಳೆಯರಿಗೆ ಉಚಿತ ಗ್ಯಾಸ್ ಕೊಟ್ಟಿದ್ದೇವೆ ಎಂದು ಹೇಳಿಕೊಳ್ಳುತ್ತೀರ. ಈ ಬೆಲೆ ಏರಿಕೆಯಿಂದ ಅವರಿಗೆ ಅನ್ಯಾಯವಾಗುತ್ತಿಲ್ಲವೇ? ಒಂದೂವರೆ ವರ್ಷದಿಂದ ಸಬ್ಸಿಡಿ ಸಿಗುತ್ತಿಲ್ಲ. ಅವೈಜ್ಞಾನಿಕ ತೆರಿಗೆ ಮೂಲಕ ಬೆಲೆ ಏರಿಕೆ ಮಾಡುತ್ತಿದ್ದಾರೆ’ ಎಂದಿದ್ದಾರೆ.

‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆದೇಶದ ಮೇರೆಗೆ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ, ರಾಮಲಿಂಗಾ ರೆಡ್ಡಿ ಅವರ ಮಾರ್ಗದರ್ಶನದ ಮೇರೆಗೆ ಬುಧವಾರ ಇಡೀ ರಾಜ್ಯದೆಲ್ಲೆಡೆ ಏಕ ಕಾಲಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಮಹಿಳಾ ಕಾಂಗ್ರೆಸ್ ಹೋರಾಟ ಮಾಡಲಿದೆ. ನಾಳೆ ರಾಜಭವನ ಮುತ್ತಿಗೆ ಹಾಕಲು ಮುಂದಾಗುತ್ತೇವೆ. ರಾಜ್ಯಪಾಲರು, ರಾಷ್ಟ್ರಪತಿಗಳು ಜವಾಬ್ದಾರಿಯುತ ಸ್ಥಾನದಲ್ಲಿದ್ದು ತಮ್ಮ ಜವಾಬ್ದಾರಿ ನಿಭಾಯಿಸುತ್ತಿದ್ದಾರಾ? ಅಥವಾ ನಿದ್ರೆ ಮಾಡುತ್ತಿದ್ದಾರಾ?’ ಎಂದು ಪ್ರಶ್ನಿಸಿದ್ದಾರೆ.

‘ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಮೂಲಕ, ತಾಲೂಕು ಕೇಂದ್ರಗಳಲ್ಲಿ ತಹಶೀಲ್ದಾರರ ಮೂಲಕ ರಾಷ್ಟ್ರಪತಿಗಳಿಗೆ ಪತ್ರ ಬರೆಯಲಾಗುವುದು’ ಎಂದು ತಿಳಿಸಿದ್ದಾರೆ.

Tags: BJPDK Shivakumarಅಡುಗೆ ಅನಿಲಅಡುಗೆ ಎಣ್ಣೆತಾರಕ್ಕದಿನಸಿ ಸಾಮಾಗ್ರಿಗಳ ಬೆಲೆ ಏರಿಕೆಬಿ ಎಸ್ ಯಡಿಯೂರಪ್ಪಮಾಳವಿಕಾ ಅಕ್ಕಶಶಿಕಲಾ ಜೊಲ್ಲೆಶೋಭಕ್ಕಸಿದ್ದರಾಮಯ್ಯ
Previous Post

ಕೇರಳದಲ್ಲಿ ನಿಫಾ ಸೋಂಕು ಹಿನ್ನೆಲೆ ರಾಜ್ಯ ಸರ್ಕಾರದಿಂದ ಸೋಂಕಿನ ಗುಣ ಲಕ್ಷಣಗಳ ಪಟ್ಟಿ ಬಿಡುಗಡೆ!

Next Post

ಮಾವೋವಾದಿ ನಾಯಕಿ ನರ್ಮದಾ ಅಕ್ಕ ಪ್ಯಾಲಿಯೇಟಿವ್ ಆರೈಕೆ ಕೋರಿ ಸಲ್ಲಿಸಿದ್ದ ಮನವಿ ಕಾಯ್ದಿರಿಸಿದ ಬಾಂಬೆ ಹೈಕೋರ್ಟ್

Related Posts

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
0

ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ ಎಂಬ ಸಚಿವ ಕೆ‌. ಎನ್. ರಾಜಣ್ಣ (KN Rajanna) ಹೇಳಿಕೆ ವಿಚಾರಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಡಿಸಿಎಂ ಡಿಕೆ ಶಿವಕುಮಾರ್ (Dcm Dk...

Read moreDetails
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

June 26, 2025
ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

ಪ್ರತಿಪಕ್ಷಗಳಿಗೆ ಬೇರೆ ಕೆಲಸವಿಲ್ಲದೆ ಸರ್ಕಾರದ ವಿರುದ್ಧ ಆರೋಪ: ಸಚಿವ ಎನ್.ಎಸ್.ಬೋಸರಾಜು

June 26, 2025
Next Post
ಮಾವೋವಾದಿ ನಾಯಕಿ ನರ್ಮದಾ ಅಕ್ಕ ಪ್ಯಾಲಿಯೇಟಿವ್ ಆರೈಕೆ ಕೋರಿ ಸಲ್ಲಿಸಿದ್ದ ಮನವಿ ಕಾಯ್ದಿರಿಸಿದ ಬಾಂಬೆ ಹೈಕೋರ್ಟ್

ಮಾವೋವಾದಿ ನಾಯಕಿ ನರ್ಮದಾ ಅಕ್ಕ ಪ್ಯಾಲಿಯೇಟಿವ್ ಆರೈಕೆ ಕೋರಿ ಸಲ್ಲಿಸಿದ್ದ ಮನವಿ ಕಾಯ್ದಿರಿಸಿದ ಬಾಂಬೆ ಹೈಕೋರ್ಟ್

Please login to join discussion

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 
Top Story

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

by Chetan
June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 
Top Story

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

by Chetan
June 27, 2025
ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 
Top Story

ಮಲೆ ಮಹದೇಶ್ವರ ಬೆಟ್ಟದ ವನ್ಯಧಾಮದಲ್ಲಿ 5 ಹುಲಿಗಳ ಕಳೇಬರ ಪತ್ತೆ – ವಿಷ ಹಾಕಿ ಹುಲಿ ಕೊಂದ್ರಾ..?! 

by Chetan
June 27, 2025
ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ
Top Story

ತಲೆಗೆ ಪೆಟ್ಟಾಗುವುದನ್ನು , ಮೆದುಳಿಗೆ ಹಾನಿಯುಂಟಾಗುವುದನ್ನು ತಪ್ಪಿಸುವ ಉದ್ದೇಶ

by ಪ್ರತಿಧ್ವನಿ
June 27, 2025
ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ
Top Story

ಉಕ್ಕು ಮತ್ತು ಕೈಗಾರಿಕೆ ಕ್ಷೇತ್ರದಲ್ಲಿ ಇಂಗಾಲ ಹೊರಸೂಸುವಿಕೆ ಶೂನ್ಯಕ್ಕೆ

by ಪ್ರತಿಧ್ವನಿ
June 26, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

ಕಾಂಗ್ರೆಸ್ ಒಳಗೆ ಸೆಪ್ಟೆಂಬರ್‌ನಲ್ಲಿ ಕ್ರಾಂತಿಯಾಗಲಿದೆ..?! – ಗೃಹ ಸಚಿವ ಪರಮೇಶ್ವರ್ ಏನಂದ್ರು ..?! 

June 27, 2025
ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

ಕಾಂಗ್ರೆಸ್ ಸರ್ಕಾರ ಗಂಧದ ಗುಡಿಯನ್ನು ಕಸಾಯಿಖಾನೆ ಮಾಡುತ್ತಿದೆ – ಹುಲಿಗಳ ಸಾವಿಗೆ ಆರ್.ಅಶೋಕ್ ಆಕ್ರೋಶ 

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada